Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ತಾಲೂಕಿನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಗ್ರಾಮದಲ್ಲಿ ಸ್ಕೂಟರ್ ಸಹಿತ ಕೆರೆಗೆ ಬಿದ್ದು ಮೃತಪಟ್ಟ ದಿನಕರ ಶೆಟ್ಟಿ ಮಲ್ಯಾಡಿ ಅವರ ಮನೆಗೆ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು. ಈ ವೇಳೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಪರಿಹಾರ ಒದಗಿಸಿಕೊಡುವ ಬಗ್ಗೆಯೂ ಭರವಸೆ ನೀಡಿದರು. ಈ ಸಂದರ್ಭ ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಸ್ಥಳೀಯರಾದ ಪ್ರಭಾಕರ್ ಶೆಟ್ಟಿ ಮಲ್ಯಾಡಿ, ಗಣೇಶ್ ಶೆಟ್ಟಿ, ಸುಧೀರ್ ಶೆಟ್ಟಿ, ಪ್ರತಾಪ್ ಶೆಟ್ಟಿ ಉಳ್ತೂರು ಹಾಗೂ ಅಂಬರೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ:► ಮಲ್ಯಾಡಿ: ದ್ವಿಚಕ್ರ ವಾಹನ ಸಹಿತ ಕೆರೆಗೆ ಬಿದ್ದು ವ್ಯಕ್ತಿ ಸಾವು – https://kundapraa.com/?p=67497 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುದ್ಧಗೊಂಡು ತೀರ ಪ್ರದೇಶದ ಜನರಲ್ಲಿ ಆತಂಕ ಮನೆಮಾಡಿದೆ. ಕೋಡಿ ಕನ್ಯಾನ ಗ್ರಾಮದಲ್ಲಿ ಕಡಲ್ಕೋರೆತ ಈ ಭಾರಿಯೂ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶದ ರಸ್ತೆ, ಮರಗಳು ಹಾಗೂ ತಾತ್ಕಾಲಿಕ ತಡೆಗೋಡೆಗಳು ಕಡಲಪಾಲಾಗಿವೆ. ಕಡಲಕೊರೆತ ಹೀಗೆಯೇ ಮುಂದುವರಿದರೆ ತೀರ ಪ್ರದೇಶದ ಹಲವು ಮನೆಗಳು ಅಪಾಯ ಎದುರಾಗಲಿದೆ. ಹಲವು ವರ್ಷಗಳಿಮದ ಕೋಡಿ ಕನ್ಯಾನ ಕಡಲಕೊರೆತವಿದ್ದು, ಶಾಶ್ವತ ಪರಿಹಾರ ಒದಗಿಸಿಕೊಡುವಂತೆ ಜನಪ್ರತಿನಿಧಿಗಳಲ್ಲಿ ಮನವಿ ಮಾಡಲಾಗಿತ್ತು. ಅಲ್ಲಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು, ಅದೂ ಕೂಡ ಸಮುದ್ರದಲೆಗಳ ಹೊಡೆತಕ್ಕೆ ಸಿಕ್ಕು ಕುಸಿದುಹೋಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಶಾಶ್ವತ ಪರಿಹಾರ ಒದಗಿಸುವಂತೆ ಹಲವು ಭಾರಿ ಮನವಿ ಮಾಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. * ಈ ಭಾಗದಲ್ಲಿ ಹಲವಾರು ವರ್ಷದಿಂದ ಕಡಲ್ಕೋರೆತ ಸಮಸ್ಯೆ ಇದ್ದು, ರಾಜಕೀಯ ನಾಯಕರ ಇಚ್ಚಾಶಕ್ತಿಯ ಕೊರತೆಯಿಂದ ಯಾವುದೇ ಅಗತ್ಯ ಕೆಲಸಗಳು ಆಗದೇ ಭಾರಿ ಸಮಸ್ಯೆ ಎದುರಾಗಿದೆ. ಸಮುದ್ರ ತಟದಲ್ಲಿ ರೆಸಾರ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ ಮಳೆಹಾನಿ ಸಂಭವಿಸುತ್ತಿದೆ. ಕರಾವಳಿಯಲ್ಲಿ ಜೂ.05ರಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿಪರೀತ ಮಳೆ ಸುರಿಯುತ್ತಲೇ ಇದೆ. ಕುಂದಾಪುರದ ಪಂಚ ನದಿಗಳಾದ ಸೌರ್ಪಣಿಕ, ಖೇಟ, ಚಕ್ರ, ಕುಬ್ಜ, ವಾರಾಹಿ ನದಿಗಳು ತುಂಬಿ ಹರಿಯುತ್ತಿದೆ. ಕೋಡಿ, ಗಂಗೊಳ್ಳಿ, ಮರವಂತೆ, ಶಿರೂರು ಕರಾವಳಿಯ ಕೆಲ ಭಾಗಗಳಲ್ಲಿ ಸಮುದ್ರ ಕೊರೆತವೂ ಉಂಟಾಗಿದೆ. ಕರಾವಳಿಯಿಂದ ಮಲೆನಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗಾಳಿ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ಕೆಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ. ಕಾಲ್ತೋಡು ಭಾಗದಲ್ಲಿ ಮನೆ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದೆ. ಚರಂಡಿಯಲ್ಲಿ ಸುಗಮವಾಗಿ ನೀರು ಹರಿಯದ ಕಾರಣ ಅಲ್ಲಲ್ಲಿ ಕೃತ ನೆರೆ ಸೃಷ್ಟಿಯಾಗುತ್ತಿದೆ. ಜಿಲ್ಲೆಯಲ್ಲಿ 196 ಮಿ.ಮಿ ಮಳೆಯಾಗಿದ್ದು, ಉಡುಪಿ ತಾಲೂಕಿನಲ್ಲಿ 325.7 ಮಿ.ಮಿ, ಬ್ರಹ್ಮಾವರದಲ್ಲಿ 206.5 ಮಿ.ಮಿ, ಕಾಪುವಿನಲ್ಲಿ 242.5 ಮಿ.ಮಿ, ಕುಂದಾಪುರದಲ್ಲಿ 170.4…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.೦6: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 07ರಂದು ರಜೆ ಮುಂದುವರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 5 ಹಾಗೂ 6ರಂದು ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಹಾಗೂ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜುಲೈ 7ರಂದು ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಖಾಸಗಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸಹಿತ ಎಂಟು ಮಂದಿಗೆ ಗಂಭೀರ ಗಾಯಗೊಂಡ ಘಟನೆ ಆವರ್ಸೆ ಅಂಡರ್‌ಕಟ್ಟೆ ಎಂಬಲ್ಲಿ ನಡೆದಿದೆ. ಆವರ್ಸೆ ಗೋಳಿಯಂಗಡಿ ರಸ್ತೆಯಲ್ಲಿ ವಿಪರೀತ ಮಳೆಯಿಂದಾಗಿ ರಸ್ತೆ ಕಾಣಿಸುತ್ತಿರಲಿಲ್ಲ ಅಲ್ಲದೇ ಅಪಘಾತದ ಸ್ಥಳದಲ್ಲಿ ರಸ್ತೆಯ ಮೇಲೆಯೇ ವಿದ್ಯುತ್ ಕಂಬ ನೆಡಲಾಗಿರುವುದರಿಂದ ಕ್ಯಾಂಟರ್ ಚಾಲಕ ತೀರಾ ಎಡಗಡೆಗೆ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಸ್ತೆ ಮೇಲೆಯೇ ಹೈ ಟೆನ್ಷನ್ ವಯರ್ ಗಳಿರುವ ವಿದ್ಯುತ್ ಕಂಬವಿರುವ ಬಗ್ಗೆ ಹಲವಾರು ಬಾರಿ ಮೆಸ್ಕಾಂ ಗಮನಕ್ಕೆ ತರಲಾಗಿದ್ದರೂ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಸ್ಥಳೀಯರು ಅಪಘಾತದಲ್ಲಿ ಗಾಯಗೊಂಡವರಿಗೆ ಮೆಸ್ಕಾಂ ಇಲಾಖೆಯೇ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವರುಣನ ಅಬ್ಬರಕ್ಕೆ ಕುಂದಾಪುರ ತಾಲೂಕಿನಲ್ಲಿ ಎರಡು ಸಾವು ಸಂಭವಿಸಿದೆ. ಉಳ್ತೂರು ಮಲ್ಯಾಡಿಯಲ್ಲಿ ದಿನಕರ ಶೆಟ್ಟಿ [53] ಎಂಬುವವರು ದ್ವಿಚಕ್ರ ವಾಹನ ಸಹಿತ ಕೆರೆಗೆ ಬಿದ್ದು ಮೃತಪಟ್ಟರೆ, ಯಡಮೊಗೆಯಲ್ಲಿ ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಅರ್ಚಕ ಶೇಷಾದ್ರಿ ಐತಾಳ್ (71) ಎಂಬುವವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಮದ ತೊಪ್ಲು ನಿವಾಸಿ, ಕಮಲಶಿಲೆ ದೇಗುಲದ ಅರ್ಚಕ ಶೇಷಾದ್ರಿ ಐತಾಳ್ ಅವರು ಕುಬ್ಜಾ ನದಿಯ ಮಗ್ಗಲಲ್ಲಿ ಇರುವ ಅವರ ತೋಟಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ. ಅವರು ಮಂಗಳವಾರ ಸಂಜೆ ತೋಟಕ್ಕೆ ನಿರ್ಮಿಸಿಕೊಳ್ಳಲಾಗಿದ್ದ ತಾತ್ಕಾಲಿಕ ಮರದ ಕಾಲುಸಂಕದಿಂದ ನದಿಗೆ ಜಾರಿ ಬಿದ್ದು ಬಿದ್ದಿದ್ದಾರೆ. ಬುಧವಾರ ಮುಳುಗುತಜ್ಞರ ಸಹಾಯದಿಂದ ಶೋಧಕಾರ್ಯ ನಡೆಸಿದ್ದು, ಸುಮಾರು 8 ಅಡಿ ಅಳದ ಹರಿಯುವ ನೀರಿನ ಮುಂಡ್ಕನ ಓಲೆಯ ಪೊದೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಬಂಧುಗಳು ವಿಶ್ವದ ಸೇವೆಯ ಕೈಂಕರ್ಯವನ್ನು ನಡೆಸುತ್ತಿರುವುದು, ಸ್ವಂತ ದುಡಿಮೆಯ ಒಂದು ಭಾಗವನ್ನು ಸೇವೆಯ ರೂಪದಲ್ಲಿ ವಿನಿಯೋಗಿಸುತ್ತಿರುವುದು ಅಭಿನಂದನೀಯ ಕಾರ್ಯವಾಗಿದೆ ಮಾಜಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಬಿ ಹೇಳಿದರು. ಅವರು ಯಡ್ತರೆ ಬಂಟರ ಭವನದಲ್ಲಿ ಮಂಗಳವಾರ ಕ್ಲಬ್‌ನ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಪ್ರಸಾದ್ ಪ್ರಭು ಅವರಿಗೆ ರೋಟರ್ ಕಾಲರ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಮೂಲಕ ಕೈಗೊಳ್ಳುವ ಎಲ್ಲಾ ಚಟುವಟಿಕೆಗಳಲ್ಲಿ ಸದಸ್ಯರು ಸಕ್ರೀಯವಾಗಿ ಭಾಗವಹಿಸುವುದು ಮುಖ್ಯ. ಆ ನೆಲೆಯಲ್ಲಿ ರೋಟರಿ ಘನತೆಯನ್ನು ಪ್ರತಿ ಸದಸ್ಯರೂ ಅರಿತು ನಡೆಯಬೇಕು ಎಂದರು. ರೋಟರಿ ಝೋನ್ 1ರ ಸಹಾಯಕ ಗವರ್ನರ್ ಡಾ. ಸಂದೀಪ್ ಶೆಟ್ಟಿ, ವಲಯ ಸೇನಾನಿ ಕೆ. ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬೈಂದೂರು ರೋಟರಿ ಕ್ಲಬ್ ನೂತನ ಅಧ್ಯಕ್ಷ ಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಐವರು ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಹಸ್ತಾಂತರಿಸಲಾಯಿತು. ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.೦5: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 06ರಂದು ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 5ರಂದು ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಹಾಗೂ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜುಲೈ 6ರಂದು ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಮೇ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿನಾರ್ಡ್ ಡಿ’ಕೋಸ್ಟಾ ( 232), ಸಚಿನ್ ಮೊಗವೀರ (216), ಸಾತ್ವಿಕ್ ಶೆಟ್ಟಿ (206) ಸಿಎ ಅಂತಿಮ ಪರೀಕ್ಷೆಯ ದ್ವಿತೀಯ ಗ್ರೂಪ್ ಅನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಸೃಜನ್ ಎಸ್ 514 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಜೆಸ್ವಿಟಾ(262), ಸುಪ್ರೀತಾ(248), ಭೂಮಿಕಾ ಹತ್ವಾರ್ (238), ರಾಮನಾಥ್ ಶೆಣೈ (234), ಅಖಿಲಾ ಹೆಬ್ಬಾರ್(233), ಅರ್ಪಣ್ ಪೂಜಾರಿ(225), ಸ್ನೇಹಾ ದೇವಾಡಿಗ (220), ನಿಶಾ ಆಚಾರ್ಯ(220), ಕೇದಾರ್ ಭಟ್ (217), ಸುದರ್ಶನ್ ಅಡಿಗ(213), ಅಕ್ಷಿತಾ…

Read More