Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಶ್ರೀ ರಾಜಶೇಖರ ದೇವಸ್ಥಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ, ಉಡುಪಿ ಜಿಲ್ಲಾ ಸಮಿತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಸೂರ್ಯ ನಮಸ್ಕಾರ, ದುರ್ಗಾ ನಮಸ್ಕಾರ ಕಾರ್ಯಕ್ರಮ ನಡೆಯಿತು. ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರ ಆಚಾರ್ ದೀಪ ಪ್ರಜ್ವಲಿಸಿ, ಉದ್ಘಾಟಿಸಿ, ಕ್ಷೇತ್ರದ ಕುರಿತು ವಿವರಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೋಟ ಶಾಖೆಯ ಪ್ರಮುಖರಾದ ರಮೇಶ್ ಪ್ರಭು, ಗೋಪಾಲ್ ಭಟ್, ವಿನಯ್ ಗಾಣಿಗ, ಉಡುಪಿ ಜಿಲ್ಲಾ ಶಿಕ್ಷಕ ಪ್ರಮುಖ ಬಿರಾದರ್ ಹಲವರು ಭಾಗಿಯಾದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾರಿಯಾದ ಬಳಿಕ ದೇಶದಲ್ಲಿ, ರಾಜ್ಯದಲ್ಲಿ ಒಂದು ದೊಡ್ಡ ಕ್ರಾಂತಿಯಾಗಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ಬರಲು ಸಹಕಾರಿಯಾಗಿದೆ ಎಂದು ಯೋಜನೆಯ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕ ಮಹೇಶ ಎಂ.ಡಿ. ಹೇಳಿದರು. ಅವರು ನಾವುಂದದ ಸ್ಕಂದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರ ಸಭೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ಮೂಲಕ ಸಹಸ್ರಾರು ಜನರನ್ನು ಮದ್ಯಪಾನದಂತಹ ದುಶ್ಚಟಗಳಿಂದ ದೂರ ಮಾಡಿ ನೆಮ್ಮದಿಯ ಜೀವನ ಬದುಕಲು ಅವಕಾಶ ಮಾಡಿಕೊಟ್ಟಿದೆ. ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಜನರಿಗೆ ಇನ್ನಷ್ಟು ಹತ್ತಿರವಾಗಲು, ಜನರು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವಲ್ಲಿ ಜನಜಾಗೃತಿ ವೇದಿಕೆ ಸದಸ್ಯರ ಪಾತ್ರ ಮಹತ್ತರವಾಗಿದೆ ಎಂದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವಾ ಪಾಕ್ಷಿಕದ ಅಂಗವಾಗಿ ದೇಶಾದ್ಯಂತ ಬಿಜೆಪಿ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿಸಿದ್ದು, ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿಯೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾಗಿದೆ. ರಕ್ತದಾನದಂತಹ ಮಹತ್ತರ ಕಾರ್ಯಕ್ಕೆ ನೇತೃತ್ವ ವಹಿಸುವ ಮೂಲಕ ಬೈಂದೂರು ಬಿಜೆಪಿ ಯುವಮೋರ್ಚಾ ಸ್ಮರಣೀಯ ಕಾರ್ಯಕ್ರಮವನ್ನು ಮಾಡಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಯುವಮೋರ್ಚಾ ಬೈಂದೂರು ನೇತೃತ್ವದಲ್ಲಿ ಸೇವಾ ಪಾಕ್ಷಿಕ – ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕುಂದಾಪುರದ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಗೋಪಾಲ ವಸ್ರೆ, ಮುಖಂಡ ಜಯಾನಂದ ಹೋಬಳಿದಾರ್, ಕಾರ್ಯದರ್ಶಿ ವೇಣುಗೋಪಾಲ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ಪೀಳಿಗೆಯು ಸಮಾಜದಲ್ಲಿ ಆರೋಗ್ಯ ಪೂರ್ಣವಾಗಿ ಬೆಳೆಯಲು ಅಗತ್ಯವಾದ ಆರೋಗ್ಯದ ಅರಿವು ಹೊಂದಿರಬೇಕು ಎಂದು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಎಚ್‌ಐವಿ / ಏಡ್ಸ್ ಕುರಿತ ಅರಿವು ಕಾರ್ಯಕ್ರಮದಲ್ಲಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಂದಾಪುರ ಸರಕಾರಿ ತಾಲೂಕು ಆಸ್ಪತ್ರೆಯ ಆರೋಗ್ಯ ಸಲಹೆಗಾರರಾದ ನಳಿನಾಕ್ಷಿ, ಎಚ್.ಐ.ವಿ./ಏಡ್ಸ್ ಕುರಿತು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯುವ ರೆಡ್‌ಕ್ರಾಸ್ ಘಟಕ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಸ್ವಯಂ ಸೇವಕಿ ಸನ್ಮಿತ ಕಾರ್ಯಕ್ರಮ ನಿರೂಪಿಸಿ, ಮಾಲತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಕೃಷ್ಣ ಕಾಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ವಿದ್ಯಾರ್ಥಿಗಳು ಹಾಗೂ ಅವರ ಮುಂದಿನ ವೃತ್ತಿ ಬದುಕಿನಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ ಎಂಬುದನ್ನು ಅರಿತುಕೊಂಡು ಆ ಸವಾಲುಗಳನ್ನು ಎದುರಿಸಲು ಬೇಕಾದ ಮಾನಸಿಕ ಧೈರ್ಯ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ನಾತಕೋತರ ಪದವಿಯ ಹಂತದಲ್ಲಿ ಜ್ಞಾನ ಸಂಪಾದನೆಯ ಎಲ್ಲಾ ಮಾರ್ಗಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸ ಮುಗಿಸಿಕೊಂಡು ಹೊರ ಬಂದಾಗ ಜೀವನ ಯಶಸ್ವಿಯಾಗುತ್ತದೆ” ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಧ್ಯಾಪಕ ರವಿಪ್ರಸಾದ್ ಅವರು ಮಾತನಾಡಿ, ಉನ್ನತ ಶಿಕ್ಷಣದ ಅವಕಾಶ ಕೆಲವರಿಗೆ ಮಾತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಯಾವುದೇ ವಿಪತ್ತು ಎದುರಾದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರು ಸ್ವಯಂ ಸ್ಪೂರ್ತಿಯಿಂದ ನಿಷ್ಪಕ್ಷಪಾತದಿಂದ ತಾರತಮ್ಯವಿಲ್ಲದೇ ಪ್ರಪಂಚದಾದ್ಯಂತ ಅಗತ್ಯವಿರುವ ಸೇವೆ ನೀಡುತ್ತಾರೆ ಎಂದು ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೇ ಸಹವರ್ತಿಗಳ ಆರೋಗ್ಯ ಕಾಪಾಡುವ ಜವಾಬ್ದಾರಿಯನ್ನು ಕಲಿಯಬೇಕು ಎಂದರು. ಕುಂದಾಪುರ ತಾಲೂಕು ವಲಯದ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಯೋಜಕರಾದ ದಿನಕರ್ ಆರ್. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಪ್ರತಿಜ್ಞಾ ವಿಧಿ ಬೋಧಿಸಿ, ವಿದ್ಯಾರ್ಥಿಗಳು ಸಮಾಜದ ಋಣವನ್ನು ತೀರಿಸುವಲ್ಲಿ ತಮ್ಮಿಂದಾದ ಪ್ರಯತ್ನವನ್ನು ಮಾಡಬೇಕೆಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ವಿದ್ಯಾರ್ಥಿಗಳು ಇತರರಿಗೆ ಸಕಾಲದಲ್ಲಿ ನೆರವು ನೀಡುವ ನಿಸ್ವಾರ್ಥ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು. ಇಂಡಿಯನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬ್ರಹ್ಮಾವರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪಾಂಡೇಶ್ವರ ವಲಯದ ಪಡುಬೈಲು ಕಾರ್ಕಡ ಕಾರ್ಯಕ್ಷೇತ್ರದ ಶ್ರೀ ಗುರು ನರಸಿಂಹ ಜ್ಞಾನ ವಿಕಾಸ ಕೇಂದ್ರದಲ್ಲಿ ಸ್ವಉದ್ಯೋಗ ಪ್ರೇರಣ ಶಿಬಿರ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಂಡಿತು. ಕಾರ್ಯಕ್ರಮವನ್ನು ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇಲ್ಲಿಯ ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ್ ಕಾಮತ್ ಉದ್ಘಾಟಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ರುಡಸೆಟ್ ಸಂಸ್ಥೆಯ ಉಪನ್ಯಾಸಕಿ ಚೈತ್ರ ಸಂಸ್ಥೆಯಲ್ಲಿ ಯಾವ ಯಾವ ತರಬೇತಿಗಳಿವೆ ಹಾಗೂ ತರಬೇತಿಗಳು ಎಷ್ಟು ದಿನ ನಡೆಯುತ್ತವೆ, ಇದರ ಪ್ರಯೋಜನ, ಸ್ವ ಉದ್ಯೋಗ ಆಸಕ್ತರಿಗೆ ಸಾಲ ಸೌಲಭ್ಯಗಳ ,ತರಬೇತಿಗೆ ಬರುವಾಗ ಏನು ದಾಖಲತೆಗಳನ್ನು ತರಬೇಕು ಎನುವ ಕುರಿತುಮಾಹಿತಿ ತಿಳಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಾ ಶೇಖರ್ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಸಂಜೀವ ದೇವಾಡಿಗ, ಪಾಂಡೇಶ್ವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬರವಣಿಗೆ ಉತ್ತಮವಾಗಿರಬೇಕಾದರೆ ಒಳ್ಳೆಯ ಓದುಗರಾಗಿರಬೇಕು ಎಂದು ಉದಯವಾಣಿ ಪತ್ರಿಕೆಯ ಕುಂದಾಪುರದ ಉಪ ಮುಖ್ಯ ವರದಿಗಾರರಾದ ಲಕ್ಮೀ ಮಚ್ಚಿನ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗವು ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪ್ರ 89.6 ಎಫ್. ಎಮ್ ಇವರ ಸಹಯೋಗದಲ್ಲಿ ನಡೆಸಿದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಪತ್ರಿಕಾ ಬರವಣಿಗೆಯ ತಂತ್ರಗಳು ಕುರಿತು ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು. ಬರವಣಿಗೆ ಎನ್ನುವುದು ಎಲ್ಲರಿಗೂ ಅವಶ್ಯಕ. ಮುಖ್ಯವಾಗಿ ಪತ್ರಿಕೆಯ ಬರವಣಿಗೆಯಲ್ಲಿ ಶೀರ್ಷಿಕೆ, ಪ್ರಸ್ತಾವನೆ ಮತ್ತು ವಿಸ್ತ್ರತ ಮಾಹಿತಿಗಳು ಮುಖ್ಯವಾಗಿರುತ್ತದೆ. ಬರಹಗಳನ್ನು ಬರೆಯುವುದಕ್ಕೆ ಆಸಕ್ತಿಯ ಜೊತೆಗೆ ಉತ್ತಮ ಓದು ವಿಷಯದ ಕುರಿತ ತಿಳುವಳಿಕೆ ಬೇಕಾಗುತ್ತದೆ. ಕೆಲವು ನುಡಿಚಿತ್ರ ಮತ್ತು ಲೇಖನಗಳ ಉದಾಹರಣೆ ತೋರಿಸಿ ಅದರ ಸ್ವಾರಸ್ಯಕರ ಶಿರ್ಷಿಕೆಗಳು, ವಿಷಯವನ್ನು ಹೇಳಿರುವ ಬಗೆಯನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಪತ್ರಿಕಾ ರಂಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾʼ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು’ ಪರಿಸರ ಸಂರಕ್ಷಣೆ’ ವಿಷಯ ಆಧರಿಸಿ ನೃತ್ಯ ಪ್ರದರ್ಶನ ನೀಡಿ, ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು ಕಾಲೇಜಿಗೆ ಮತ್ತು ಕುಂದಾಪುರಕ್ಕೆ ಹೆಮ್ಮೆಯ ವಿಷಯವಾಗಿದೆ. ಸುಜ್ಞಾನ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೆ.14ರಂದು ಯುವ ಸಂಭ್ರಮದಲ್ಲಿ ಮೊದಲು ನೃತ್ಯ ಪ್ರದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿ, ಆಯ್ಕೆಯಾದ ನಂತರ ಸೆ. 24ರಂದು ಯುವ ದಸರದ ಮುಖ್ಯ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದರು. ಈ ನೃತ್ಯ ಪ್ರದರ್ಶನಕ್ಕೆ Zee ಕನ್ನಡ ವಾಹಿನಿಯ ʼಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼನ ರವಿ ಮಾಸ್ಟರ್ ಪರಿಕಲ್ಪನೆ ನೀಡಿದ್ದು, ʼಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಆರ್ಥಿಕ ಸ್ಥಿತಿಯು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಸಮೀಕ್ಷೆ ಅನ್ವಯ ಸುಮಾರು 7 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಇಂತಹ ಅನುಮಾಸ್ಪದ ಪಡಿತರ ಚೀಟಿಗಳನ್ನು ಪರಿಷ್ಕರಣಾ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇಂತಹ ಪಡಿತರ ಚೀಟಿಗಳನ್ನು ಶೀಘ್ರದಲ್ಲಿ ಎಪಿಎಲ್ ಕಾರ್ಡ್‌ಗೆ ಪರಿವರ್ತಿಸುವಂತೆ ತಿಳಿಸಿದ ಅವರು, ಒಂದು ವೇಳೆ ಅರ್ಹ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಎಂದು ಪರಿವರ್ತನೆ ಹೊಂದಿದ್ದಲ್ಲಿ ಅಂಥವರು…

Read More