Author: ನ್ಯೂಸ್ ಬ್ಯೂರೋ

ರಾಜ್ಯದಲ್ಲಿ ವರ್ಗಾವಣೆ ದಂದೆ ಆರಂಭವಾಗಿದೆ. ಬಿಜೆಪಿ ಸರಕಾರದ ಮೇಲೆ ಗೂಬೆ ಕೂರಿಸೋದು ಬೇಡ – ಯಾವುದೇ ತನಿಕೆ ಎದುರಿಸಲು ಸಿದ್ದರಿದ್ದೇವೆ – ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿಗೆ ಸಮೀಪದ ನಾಗೋಡಿಯ ಕಂಚಿಕೆರೆ ಎಂಬಲ್ಲಿ ಸ್ಥಳೀಯ ನಿವಾಸಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕಂಚಿಕೆರೆಯ ಗಣೇಶ್ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಗಣೇಶ್ ಅವರ ಮನೆ ಅಂಗಳಕ್ಕೆ ಚಿರತೆ ಬಂದ ವೇಳೆ ನಾಯಿಗಳು ಏಕಾಏಕಿ ಬೊಗಳಲಾರಂಭಿಸಿವೆ. ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಆಕ್ರೋಶಗೊಂಡ ಚಿರತೆ ಗಣೇಶ್ ಮೇಲೆಯೇ ಎಗರಿದೆ.ಗಾಯಗೊಂಡ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯವರ ಕೂಗಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಾಗ ಚಿರತೆ ಗಣೇಶ್ ಅವರನ್ನು ಬಿಟ್ಟು ಓಡಿ ಹೋಗಿದ್ದು ಇದುವರೆಗೆ ನಾಯಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಮನುಷ್ಯರ ಮೇಲೂ ಎರಗಲು ಆರಂಭಿಸಿದ್ದು ಜನತೆ ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳು ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿದ್ದು, ಈ ಪೈಕಿ ಚಿರತೆ ಹೆಚ್ಚಿಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಕುಂದಾಪುರ ಶಾಸಕರರಾದ ಎ. ಕಿರಣ್ ಕುಮಾರ್ ಕೊಡ್ಗಿ ಯವರ ಅಧಿಕೃತ ಕಛೇರಿ ಇಂದು ಕುಂದಾಪುರ ತಾಲ್ಲೂಕು ಪಂಚಾಯತ್ ಕಟ್ಟದದಲ್ಲಿ ಆರಂಭಗೊಂಡಿತು. ಮಾಜಿ ಶಾಸಕ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ ಅಪ್ಪಣ ಹೆಗ್ಗಡೆಯವರು ಕಛೇರಿಯನ್ನು ಉದ್ಘಾಟಿಸಿದರು. ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಂದಾಪುರ ಹೃದಯ ಭಾಗ ಶಾಸ್ತ್ರೀ ವೃತ್ತದಲ್ಲಿ ಶಾಸಕರ ಕಚೇರಿ ಉದ್ಘಾಟನೆಗೊಂಡಿದ್ದು ಕ್ಷೇತ್ರದ ಜನರಿಗೆ ಇಲ್ಲಿ ಭೇಟಿ ನೀಡಿ ಅಹವಾಲು ನೀಡಲು ಸುಲಭವಾಗುತ್ತದೆ. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಅಭಿವೃದ್ಧಿ ಹಾದಿಯಲ್ಲಿ ಹಾಲಿ ಶಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಸಕರ ಕಚೇರಿಯ ಮೂಲಕ ಜನರ ಕಡತಗಳ ಸುಲಭ ವಿಲೇವಾರಿಯಾಗಿ ಸರಕಾರಿ ಕೆಲಸಗಳು ಶೀಘ್ರವಾಗಿ ನಡೆಯಬೇಕು. ಇದೊಂದು ಅಭಿವೃದ್ಧಿ ಕೇಂದ್ರವಾಗಿ ಸಾಮಾನ್ಯ ಜನರ ಕಾರ್ಯಾಲಯವಾಗಲಿ ಎಂದು ಆಶಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಯವರು ಮಾತನಾಡಿ, ಇದು ಸರಕಾರಿ ಕಚೇರಿಯಾಗಿದ್ದು ಜನ ಸಾಮಾನ್ಯರಿಗೆ ಆಗಬೇಕಾದ ಕೆಲಸ ಕಾರ್ಯಗಳು ಶೀಘ್ರವಾಗಿ ಪೂರೈಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು (ಈದುಲ್ ಅಝಾ) ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಕುಂದಾಪುರ ಬೈಂದೂರು, ಹೆಬ್ರಿ, ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿ ರಸ್ತೆಗೆ ಅಡ್ಡಲಾಗಿ ಬಿದ್ದದ್ದ ಮರವೊಂದನ್ನು ತೆರಳವುಗೊಳಿಸುತ್ತಿದ್ದ ಸಂದರ್ಭ, ಇನ್ನೊಂದು ಮರ ಉರುಳಿ ಬಿದ್ದಿದ್ದು ಬೈಂದೂರು ಶಾಸಕರು ಹಾಗೂ ಬೆಂಬಲಿಗರು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಕಾರ್ಯ ನಿಮಿತ್ತ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ತಮ್ಮ ಬೆಂಬಲಿಗರೊಂದಿಗೆ ಮರ ತೆರವು ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ಮತ್ತೊಂದು ಮರ ಅಲ್ಲಿಯೇ ಉರುಳಿ ಬಿದ್ದಿದೆ. ಮರ ಬೀಳುವುದನ್ನು ಕಂಡ ಶಾಸಕರು ಮತ್ತು ಬೆಂಬಲಿಗರು ಪಕ್ಕಕ್ಕೆ ಓಡಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ಎರಡೂ ಮರವನ್ನು ತೆರವುಗೊಳಿಸಿ ಮುಂದೆ ಸಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಮನುಷ್ಯನನ್ನು ಮನುಷ್ಯನಾಗಿ ಬದುಕಲು ಕಲಿಸದ ಧರ್ಮ ಯಾಕೆ? ಎಂಬುದು ’ಘಾಂದ್ರುಕ್’ ಕೃತಿಯ ಒಳನೋಟವೂ ಹೌದು’ ಎಂದು ಕಾದಂಬರಿಕಾರ ಸತೀಶ್ ಚಪ್ಪರಿಕೆ ಹೇಳಿದರು. ಅವರು ಮುಂದುವರಿದ ಮಾತನಾಡಿ ಧರ್ಮ ಇಂದು ವ್ಯಾಪಾರಿ ಸರಕಾಗುತ್ತಿದೆ. ಮನುಕುಲದ ಉದ್ಧಾರಕ್ಕಾಗಿ ಬಳಕೆಯಾಗುತ್ತಿಲ್ಲ. ಒಕ್ಕಲೆಬ್ಬಿಸುವುದೂ ಹಿಂಸೆ. ಜಾಗತಿಕ ಮಟ್ಟದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ತಮ್ಮ ’ಘಾಂದ್ರುಕ್’ ಕಾದಂಬರಿ ಅವಲೋಕನ – ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರತಿಕ್ರಿಯಿಸಿದರು. ಕೃತಿಕಾರನ ಬದುಕು ಆತನ ಬರಹದಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬಿಂಬಿತವಾಗಿರುತ್ತದೆ. ’ಇಲ್ಲ’ ಎನ್ನುವುದಾದದರೆ, ಆತ ಸುಳ್ಳು ಹೇಳುತ್ತಿರಬಹುದು ಅಥವಾ ಬರಹ ಕದ್ದಿರಬಹುದು ಎಂದರು. ಪುಸ್ತಕದ? ದೊಡ್ಡ ಆಸ್ತಿ ಬೇರೆ ಇಲ್ಲ. ಪುಸ್ತಕ ಓದಿ. ಬರಹ ತೃಪ್ತಿ ನೀಡುತ್ತದೆ. ಬರೆಯಿರಿ, ಓದಿ. ನಿಮ್ಮ ಪರಿಸರ ನಿಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಒಡನಾಡಿ ಯು. ಬಿ. ಶೆಟ್ಟಿ ಅವರ ಶ್ರಮ ವಿಶೇಷವಾದದ್ದು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ಪಕ್ಷ ಸಂಘಟನೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯು.ಬಿ. ಶೆಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಮೂಲಕ ಆಗ್ರಹಿಸಿದ್ದಾರೆ. ಹಲವಾರು ವರ್ಷಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ತೆರೆಮರೆಯಲ್ಲೇ ಪಕ್ಷ ಸಂಘಟನೆ ಮಾಡುತ್ತಿರುವ ಯು.ಬಿ ಶೆಟ್ಟಿ ಅವರು, ಸಾಮಾಜಿಕ ಕಾರ್ಯಗಳಲ್ಲಿಯೂ ಅವಿರತವಾಗಿ ತೊಡಗಿಸಿಕೊಂಡವರು. ತನ್ನ ದುಡಿಮೆಯ ಒಂದು ಭಾಗವನ್ನು ಶಿಕ್ಷಣ, ಆರೋಗ್ಯ, ವಸತಿ, ಧಾರ್ಮಿಕ ಇನ್ನಿತರ ಸಮಾಜಮುಖಿ ಕಾರ್ಯಗಳಿಗೆ ಯಾವುದೇ ಪ್ರಚಾರ ಬಯಸದೆ ನೀಡುತ್ತಿದ್ದಾರೆ. ಪ್ರಸಕ್ತ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಯಾವುದೇ ವಿಧಾನ ಪರಿಷತ್ ಸದಸ್ಯರುಗಳು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲದ ಕಾರಣ ಸರ್ಕಾರ ಮಟ್ಟದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ವಾಷಿಂಗ್ಟನ್ ಡಿಸಿ: ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ವಾಷಿಂಗ್ಟನ್ನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸೆನೆಟರ್ ಡಾ||ದೆರೀಕ್ ಟ್ರಸ್ಫರ್ಡ್ ಮಾತನಾಡಿ, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಅಮೇರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೇರಿಕಾದ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು. ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಅತ್ತಾವರ ನಿವಾಸಿ, ಮೂಲತಃ ರಾಜಸ್ಥಾನದವರಾದ ರಮೇಶ್ ಕುಮಾರ್ (26) ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಜುವೆಲ್ಲರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜೂ.10 ರಂದು 421.380 ಮಿಲಿ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಶಾಪ್ನಿಂದ ಮಾರಾಟ ಮಾಡಲು ಹೊರಟಿದ್ದರು. ಈ ವೇಳೆ ಮಧ್ಯಾಹ್ನ 12:00 ಗಂಟೆಗೆ ತನ್ನ ಸ್ನೇಹಿತರಾದ ರಾಜಸ್ಥಾನದ ಪಾಲಿ ಜಿಲ್ಲೆಯ ರಾಮ್ ಎಂಬಾತ ಮಂಗಳೂರಿನ ಪಂಪ್ವೇಲ್ ಬಳಿ ಸಿಕ್ಕಿದ್ದು ಇಬ್ಬರೂ ಕೂಡ ಜೊತೆಯಲ್ಲಿ ಬಸ್ಸಿನಲ್ಲಿ ಹೊರಟು ಸಂಜೆ 04-30 ಗಂಟೆಗೆ ಉಪ್ಪುಂದದ ಅಶೋಕ್ ಜ್ಯುವೆಲ್ಲರಿಗೆ ಹೋಗಿ 14 ಗ್ರಾಂ ಚಿನ್ನಾಭರಣ ಮಾರಾಟ ಮಾಡಿ ಅಲ್ಲಿಂದ 14 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ವಾಪಸು ಮಂಗಳೂರಿಗೆ ಹೊರಟಿದ್ದರು. ಕುಂದಾಪುರ ತಲುಪುವಾಗ ಸಂಜೆ 07-00 ಗಂಟೆ ಆದ್ದರಿಂದ ರಮೇಶ್ ಕುಮಾರ್ ಹಾಗೂ ಅವರ ಸ್ನೇಹಿತ ರಾಮ್ ಕುಂದಾಪುರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 84ನೇ ತಿಂಗಳ ಕಾರ್ಯಕ್ರಮವು ಇತ್ತೀಚೆಗೆ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷ , ನಿವೃತ್ತ ಪ್ರಾಂಶುಪಾಲರಾದ ಎಮ್. ರತ್ನಾಕರ ಪೈ ರವರು ಭಜನೆಯ ಮಹತ್ವವನ್ನು ವಿವರಿಸಿದರು. ಮಹಾಮಾಯಾ ಭಜನಾ ಮಂಡಳಿ, ಈಶ್ವರ ನಗರ, ಮಣಿಪಾಲದ ಮಾಯಾ ಕಾಮತ್ ರವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ 2022-23 ನೇ ಸಾಲಿನ ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ (604/625) ಪಡೆದ ಮಹಿಮಾ ಅವರನ್ನೂ ಗೌರವಿಸಲಾಯಿತು. ವೇದಿಕೆಯಲ್ಲಿ ಸುಗುಣಾ ಶೆಟ್ಟಿ, ವಸಂತಿ ಆರ್. ಪಂಡಿತ್, ರಮ್ಯಾ ಮಲ್ಯ ಹಾಗೂ ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಕೊನೆಯಲ್ಲಿ ಮಹಾಮಾಯಾ ಭಜನಾ ಮಂಡಳಿ, ಮಣಿಪಾಲದ ಸದಸ್ಯರು ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿ ಕೊಟ್ಟರು. ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.

Read More