Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಉಪನ್ಯಾಸಕ ಡಾ. ಎಂ. ಬಿ. ನಟರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಲಲಿತಾದೇವಿ ಉಪಸ್ಥಿತರಿದ್ದರು. ಉಪನ್ಯಾಸಕಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.

Read More

ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ, ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ “ದಿಶಾ ಭಾರತ್” ಎಂಬ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿ ಸ್ನೇಹಾ ದಾಮ್ಲೆ ಮಾತನಾಡಿ ಜಗತ್ತಿಗೆ ಜೀವನ ಪಾಠವನ್ನು ತಿಳಿಸಿದ ದೇಶ ನಮ್ಮ ಭಾರತ. ನಮ್ಮ ದೇಶವನ್ನು ನಾವು ಅರಿಯಬೇಕು. ಪ್ರತಿಯೊಂದು ವಸ್ತುವಿನ ಯಾರಲ್ಲಿ ದೈವಿಕತೆಯನ್ನು ಕಾಣುವುದು ಭಾರತದ ಸಂಸ್ಕೃತಿ. ಹಾಗಾಗಿ ನಮ್ಮ ದೇಶವನ್ನು ಅರಿಯುವ ಪ್ರಯತ್ನ ಮಾಡಬೇಕು. ದೇಶವನ್ನು ಅರಿಯಬೇಕಾದರೆ ಮೊದಲು ನಮ್ಮ ಬಗ್ಗೆ ನಾವೇ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಇಂದಿನ ಶಿಕ್ಷಣ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬದುಕಿನ ಶಿಕ್ಷಣವನ್ನು ಕಲಿಸುವ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಹೇಳಿದರು ಇನ್ನೊಬ್ಬ ಅತಿಥಿ ಮಾನ್ವಿತಾ ಡಿ. ಮಾಸ್ಗೊಡೆ ಮಾತನಾಡಿ ಬದುಕಿನಲ್ಲಿ ಬರುವಂತಹ ಸವಾಲುಗಳನ್ನು ಎದುರಿಸುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗುರುರಾಜ್ ರಾವ್, ಪ್ರಭೋಧನ ಸಂಚಾಲಕರು, ಮಂಗಳೂರು ವಿಭಾಗ, ಆಪ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಹೊರವಲಯದಲ್ಲಿನ ಸಂಗಮ್ ಚೆಕ್ ಪೋಸ್ಟ್ ಬಳಿ ಬುಧವಾರ ವ್ಯಕ್ತಿಯೋರ್ವರ ಬಳಿ ದಾಖಲೆ ಇಲ್ಲದ 13 ಲಕ್ಷ ರೂ. ಪತ್ತೆಯಾಗಿದೆ. ಚೆಕ್ ಪೋಸ್ಟ್ ಬಳಿಯಲ್ಲಿ ಎಸ್.ಐ ಪ್ರಸಾದ್ ಕುಮಾರ್ ನೇತೃತ್ವದ ಪೊಲೀಸರ ತಂಡ ವಾಹನದ ತಪಾಸಣೆ ನಡೆಸುತ್ತಿದ್ದಾಗ ದಿಲೀಪ್ ಗೋಡ್ಸೆ (47) ಎನ್ನುವವರು ಹೀರೊ ಕಂಪೆನಿಯ ಯೂನಿಕಾರ್ನ್ ಮಾದರಿಯ ಕೆಎ 20 ಇಜೆ 5252 ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಈ ವೇಳೆ ಬೈಕ್ ಗೆ ಅಳವಡಿಸಿದ್ದ ಬಾಕ್ಸ್ ನಲ್ಲಿನ ಚೀಲದಲ್ಲಿ ದಾಖಲೆಯಿಲ್ಲದ 500 ರೂ ಮುಖ ಬೆಲೆಯ 13 ಲಕ್ಷ ರೂ. ಪತ್ತೆಯಾಗಿದೆ. ವಿಚಾರಣೆ ವೇಳೆ ಈ ಹಣಕ್ಕೆ ಯಾವುದೇ ದಾಖಲೆಗಳಿಲ್ಲದೆ ಇರುವುದು ತಿಳಿದು ಬಂದಿದ್ದು, ಹಣವನ್ನು ವಶಕ್ಕೆ ಪಡೆದು ಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಆಯೋಜಿಸಿದ ರೋಟರಿ ನರ್ಸರಿ ಸ್ಕೂಲ್ ಡೇ ಸೆಲೆಬ್ರೇಶನ್ ಚಿನ್ನರ ಚಿಲಿಪಿಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಆಶಾ ಪ್ರಶಾಂತ್ ತೋಳಾರ್ ಮಕ್ಕಳಿಗೆ ಉತ್ತಮವಾದ ಮಾಹಿತಿಯನ್ನು ನೀಡಿದರು ಹಾಗೆ ಶಾಲಾ ಮುಖ್ಯ ಶಿಕ್ಷಕಿ ಪುಷ್ಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಕಮಿಟಿಯ ವ್ಯವಸ್ಥಾಪಕರಾದ ರಾಘವೇಂದ್ರ ಚರಣ್ ನಾವಡ ಶಾಲೆಯ ಬಗ್ಗೆ ವಿವರಣೆಯನ್ನು ನೀಡಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ವೆಂಕಟೇಶ್ ನಾವಂದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಪ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಪಾರ್ವತಿ ಪ್ರಾರ್ಥನೆಯನ್ನು ಮಾಡಿ ಸ್ವಾಗತಿಸಿದರು. ಜೋಯ್ನಾ ನಿರೂಪಣೆಯನ್ನು ಮಾಡಿದರು. ರೋಟರಿ ಕುಂದಾಪುರದ ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಧನ್ಯವಾದಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಮಾ 29: ಕೊಲ್ಲೂರು ಹಾಲ್ಕಲ್ ಜಂಕ್ಷನ್ ಇಳಿಜಾರಿನ ಬಳಿ ಬುಧವಾರ ಮುಂಜಾನೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಒಬ್ಬ ಸಾವನ್ನಪ್ಪಿ ಎಂಟು ಜನ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಪ್ರಯಾಣಿಕನನ್ನು ಗದಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಶಿರಹಟ್ಟಿ ನಿವಾಸಿ ರುದ್ರಪ್ಪ ಎಂಬುವರ ಪುತ್ರ ಬಸವರಾಜ್(22) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡವರನ್ನು ಬಸ್ಸಿನಲ್ಲಿದ್ದ ರಂಗಪ್ಪ, ಗೀರೀಶ್, ಮನೋಜ್ ಕುಮಾರ್, ಮಲ್ಲೇಶ್, ದೇವೇಂದ್ರ, ಹಾಲಸ್ವಾಮಿ, ಗುರುನಾಥ, ಮಾಸ್ಟರ್ ಅಭಿಜಿತ್ ಎಂದು ಗುರುತಿಸಲಾಗಿದೆ. ಸುಮಾರು 35ರಿಂದ 40 ಪ್ರಯಾಣಿಕರಿದ್ದ ದುರ್ಗಾಂಬಾ ಬಸ್ ಚಳ್ಳಕೆರೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿತ್ತು. ಬುಧವಾರ ಬೆಳಿಗ್ಗೆ ನಸುಕಿನಲ್ಲಿ ಸುಮಾರು 2.30 ಗಂಟೆಗೆ ಕೊಲ್ಲೂರು ಹಾಲ್ಕಲ್ ಜಂಕ್ಷನ್ ಇಳಿಜಾರಿನ ಬಳಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಬಸವರಾಜ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಯಲ್ಲಿ ಮೃತಪಟ್ಟಿದ್ದು, ಮೃತ ದೇಹವನ್ನು ಕುಂದಾಪುರ ತಾಲೂಕು ಸರ್ಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್ ಗಳಾದ ರವಿಶಾಸ್ತ್ರಿ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಗೌರವಿಸಿದರು. ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದಿದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಘೋಷಿಸಿದ್ದು, ಮೇ. 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ.13ರಂದು ಮತ ಎಣಿಕೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಎ.13 ಅಧಿಸೂಚನೆ ಹೊರಡಿಸಲಾಗುತ್ತದೆ. ಎ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎ.21 ನಾಮಪತ್ರ ಪರಿಶೀಲಿಸಲು ಕೊನೆಯ ದಿನ,  ಎ.24 ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿದ್ದು, ಮೇ.10ರಂದು ಚುನಾವಣೆ ನಡೆಯಲಿದೆ. ಮೇ.13ರಂದು ಮತಎಣಿಕೆ ನಡೆಯಲಿದೆ ಎಂದರು. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ಹೇಳಿದರು. ಮೊದಲ ಬಾರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಈಗಾಗಲೇ ಸಿದ್ಧಗೊಂಡಿದ್ದು, ಈ ಭಾರಿ ಹೊಸದಾಗಿ ಹೊಸದಾಗಿ 16,827 ಮತದಾರರ ಸೇರ್ಪಡೆಯಾಗಿದೆ. ಇದರಲ್ಲಿ 13,816 ಯುವ ಮತದಾರರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಹಿಂದಿನ ಜನಗಣತಿಯಂತೆ ಒಟ್ಟು 1,177,361 ಜನಸಂಖ್ಯೆ ಇದ್ದು, ಈ ಪೈಕಿ ಒಟ್ಟು 10,16,245 ಮತದಾರರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರ:ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರ:ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರ:ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರ:ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions. (1/2) pic.twitter.com/EE9VEamJKh— Income Tax India (@IncomeTaxIndia) March 28, 2023 1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ…

Read More