Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ನಿರ್ಮಿಸಿದ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೊಂದು ಕೊಡುಗೆಯಾಗಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಅವರು ಇಲ್ಲಿನ ಸಂಗಮ್ ಬಳಿ ಸೋಮವಾರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ (ಟಿಎಪಿಸಿಎಂಎಸ್) ರೂ.14ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರು ನೂತನ ಮಾರುಕಟ್ಟೆಯ ಉಪಯೋಗ ಪಡೆದುಕೊಳ್ಳುವಂತಾಗಲಿ ಎಂದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್‍ಕುಮಾರ ದೀಪ ಬೆಳಗಿಸಿ ಶುಭಹಾರೈಸಿದರು. ಟಿಎಪಿಸಿಎಂಎಸ್ ಕುಂದಾಪುರದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮಾತನಾಡಿ ಸಂಸ್ಥೆಯ ವಜ್ರಮಹೋತ್ಸವ ವರ್ಷಾಚರಣೆಯ ಈ ಹೊತ್ತಿನಲ್ಲಿ ಸ್ವಂತ ನಿವೇಶನದಲ್ಲಿ ರೈತ ಮಾರುಕಟ್ಟೆ ಸ್ಥಾಪಿಸಿದೆ. ರೈತರು ನೇರವಾಗಿ ಮಾರುಕಟ್ಟೆಗೆ ಆಗಮಿಸಿ ವಹಿವಾಟು ನಡೆಸಬಹುದು ಎಂದರು. ಟಿಎಪಿಸಿಎಂಎಸ್ ಉಪಾಧ್ಯಕ್ಷ ಶರತ್‍ಕುಮಾರ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮೊಳಹಳ್ಳಿ ಮಹೇಶ್ ಹೆಗ್ಡೆ, ಎಸ್. ರಾಜು ಪೂಜಾರಿ, ಟಿಎಪಿಸಿಎಂಎಸ್ ನಿರ್ದೇಶಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಜನಪ್ರತಿನಿಧಿ ಕುಂದಾಪುರದ ಸಹಯೋಗದೊಂದಿಗೆ ನಡೆದ ತಿಂಗಳ ಓದು ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಓದು ಕಾರ್ಯಕ್ರಮವು ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ ಕುರಿತು ನಡೆಯಿತು. ಆರಂಭದಲ್ಲಿ ಸಮುದಾಯದ ಬಾಲಕೃಷ್ಣ ಕೆ ಎಂ, ವಾಸುದೇವ ಗಂಗೇರ, ವಿಕ್ರಮ ಕುಂದಾಪುರ, ಅವಂತಿ ಮತ್ತು ಲಂಕೇಶ್ ಇವರು ಕುವೆಂಪುರವರ “ಓ ನನ್ನ ಚೇತನ” ಮತ್ತು “ಹಾಲು ಹಳ್ಳ ಹರಿಯಲಿ” ಹಾಡುಗಳ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಸಮುದಾಯದ ಸದಸ್ಯರಾದ ರಮೇಶ್ ಗುಲ್ವಾಡಿ ಮತ್ತು ವಿಕ್ರಮ ಕುಂದಾಪುರ ಅವರು ಕುವೆಂಪು ಅವರ ಸಾವಿನ ಸಮತೆ ಮತ್ತು ರೈತ ದೃಷ್ಟಿ ಕವನಗಳನ್ನು ವಾಚಿಸಿದರು ಅಂದಿನ ಮುಖ್ಯ ಉಪನ್ಯಾಸಕಾರರಾಗಿ ಸಂತೋಷ್ ಕುಮಾರ್ ಶೆಟ್ಟಿ ಮೊಳಹಳ್ಳಿ ಅವರು ಕುವೆಂಪುರವರ ಕವಿತೆಗಳು, ಕಾದಂಬರಿಗಳು, ನಾಟಕ, ಬದುಕು ಮತ್ತು ಬರಹ ವಿಮರ್ಶೆ ಗಳ ಕುರಿತು ಮಾತನಾಡಿದರು. ಪ್ರತಿಕ್ರಿಯೆಯಾಗಿ ಭಂಡಾರ್ಕರ್ಸ್ ಕಾಲೇಜಿನ ಪ್ರಾಧ್ಯಾಪಕರಾದ ಹಯವದನ ಉಪಾಧ್ಯ ಅವರು ತಮ್ಮ ವಿಚಾರಗಳನ್ನು ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಶ್ರೀ ಶಾರದಾ ಕಾಲೇಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶಾಸ್ತ್ರೀ ವೃತ್ತವನ್ನು ನವೀಕರಣಗೊಳಿಸಲಾಗಿದ್ದು, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಅವರು ಲಾಲ್ ಬಹದ್ದೂರ್ ಶಾಸ್ತ್ರೀಯವರ ನೂತನ ಪುತ್ಥಳಿ ಅನಾವರಣಗೊಳಿಸಿ, ಮಾಲಾರ್ಪಣೆಗೈದು ಲೋಪಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಮಾತನಾಡಿ, ಶಾಸ್ತ್ರೀ ವೃತ್ತದ ಮರು ನಿರ್ಮಾಣ ಕಾರ್ಯ ಸುಂದರವಾಗಿ ಮೂಡಿಬಂದಿದೆ. ಇದು ಸುಂದರ ಕುಂದಾಪುರಕ್ಕೆ ನೂತನ ಕೊಡುಗೆಯಾಗಿದೆ ಎಂದರು. 1963ರಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಅವರ ಕುಟುಂಬ ಹೆದ್ದಾರಿ ನಿರ್ಮಾಣ ಸಂದರ್ಭ ಶಾಸ್ತ್ರೀ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿತ್ತು. ನವೀಕೃತ ಪ್ರತಿಮೆಯನ್ನೂ ಅವರದೇ ಕುಟುಂಬ ಕೊಡಮಾಡಿದೆ. ಪುರಸಭಾ ನಗರೋತ್ಥಾನ ನಿಧಿ ಹಾಗೂ ಚಾರ್ಮಕ್ಕಿ ನಾರಾಯಣ ಶೆಟ್ಟಿ ಟ್ರಸ್ಟ್ ಸಹಯೋಗದೊಂದಿಗೆ ಶಾಸ್ತ್ರೀವೃತ್ತ ನಿರ್ಮಿಸಲಾಗಿದೆ ಎಂದರು. ಈ ವೇಳೆ ಕುಂದಾಪುರ ಪುರಸಭೆಯ ನಿಕಟಪೂರ್ವ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಶಾಸ್ತ್ರೀ ಪ್ರತಿಮೆ ನಿರ್ಮಿಸಿದ ಶಿಲ್ಪಿ ಶ್ರೀತನ್ ಶೆಟ್ಟಿಗಾರ್, ಶಿಲಾಮಂಟಕ ಕಾರ್ಯ ನಿರ್ವಹಿಸಿದ ಅನಂತಕೃಷ್ಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಉಪಾಧ್ಯಕ್ಷ ಸಂದೀಪ್ ಖಾರ್ವಿ, ಹಿರಿಯ ಸದಸ್ಯರಾದ ಮೋಹನದಾಸ ಶೆಣೈ, ದೇವಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾ.ಹೆ- 66 ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಕೆ. ಗೋಪಾಲ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆ ಅವರನ್ನು ಅಂತಿಮಗೊಳಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ. ಗೋಪಾಲ ಪೂಜಾರಿ ಅವರ ಮಾತ್ರವೇ ಅರ್ಜಿ ಸಲ್ಲಿಸಿದ್ದರೇ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನೇಶ್ ಹೆಗ್ಡೆ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಪೂಜಾರಿ ಬಿಜಾಡಿ ಟಿಕೇಟ್ ರೇಸಿನಲ್ಲಿದ್ದರು.

Read More

ಕುಂದಾಪುರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಕಾರ್ಯಕ್ರಮ 2023ಮನಸ್ಮಿತ ಫೌಂಡೇಶನ್‌ನ ನೇತೃತ್ವದಲ್ಲಿ ಯುವ ಮೆರಿಡಿಯನ್‌ನಲ್ಲಿ ಆಯೋಜಿಸಿದ ’ಚಿತ್ರಗೀತೆ’ ಕಾರ್ಯಕ್ರಮಖ್ಯಾತ ಹಿನ್ನೆಲೆ ಗಾಯಕಿ ಕೆ.ಎಸ್. ಚಿತ್ರಾ ಅವರಿಗೆ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಪ್ರದಾನಖ್ಯಾತ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ್ ಅವರಿಗೆ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಪ್ರದಾನಮನಸ್ಮಿತ ಫೌಂಡೇಶನ್‌ನ ಡಾ. ಪ್ರಕಾಶ್ ಸಿ. ತೋಳಾರ್, ಡಾ. ಸತೀಶ್ ಪೂಜಾರಿ ನೇತೃತ್ವದ ಕಾರ್ಯಕ್ರಮಡಾ. ಜಿ. ಶಂಕರ್, ಆನಂದ ಸಿ. ಕುಂದರ್ ಹಾಗೂ ಯುವ ಮೆರಿಡಿಯನ್ ವಿನಯ ಕುಮಾರ್ ಶೆಟ್ಟಿ ಉಪಸ್ಥಿತಿಕೆ.ಎಸ್. ಚಿತ್ರಾ ಅವರ ಉಪಸ್ಥಿತಿಯಲ್ಲಿ ನಡೆದ ಸಂಗೀತ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಸಾವಿರಾರು ಪ್ರೇಕ್ಷಕರುಕುಂದಾಪುರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿ ಹಾಡಿದ ಖ್ಯಾತ ಗಾಯಕಿ ಕೆ.ಎಸ್. ಚಿತ್ರಾ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮ ಆಧಾರ್ ನಂಬರ್ ಜೊತೆ ಪ್ಯಾನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. 2017ರಿಂದಲೇ ಆಧಾರ್ – ಪ್ಯಾನ್ ಲಿಂಕ್ ಕಡ್ಡಾಯವೆಂಬ ನಿಯಮ ಜಾರಿಗೆ ಬಂದಿದ್ದು, ಹಲವು ಭಾರಿ ದಿನಾಂಕ ವಿಸ್ತರಣೆಗೊಳಿಸಲಾಗಿತ್ತು. ಇದೀಗ ಮಾರ್ಚ್ 31ರ ತನಕ ರೂ.1000 ದಂಡದೊಂದಿಗೆ ವಿಸ್ತರಣೆ ಮಾಡಲಾಗಿದೆ. ಇದರ ಬಳಿಕ ಮತ್ತೆ ಡೆಡ್‌ಲೈನ್‌ ವಿಸ್ತರಣೆ ಆಗುವ ಸಾಧ್ಯತೆ ಇಲ್ಲ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೇಳಿದೆ. ಇದನ್ನೂ ಓದಿ: ► ಪ್ಯಾನ್ – ಆಧಾರ್ ಲಿಂಕಿಂಗ್ ಗಡುವು ಜೂನ್ 30ಕ್ಕೆ ವಿಸ್ತರಣೆ – https://kundapraa.com/?p=65602 . 1,000 ರೂ. ದಂಡದೊಂದಿಗೆ ಮಾರ್ಚ್‌ 31ರ ತನಕ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಲು ಅವಕಾಶವಿದೆ. ಏಪ್ರಿಲ್‌ 1ರ ಬಳಿಕ ಪ್ಯಾನ್‌ ನಿಷ್ಕ್ರಿಯವಾಗಲಿದೆ. ಲಿಂಕ್‌ ಮಾಡಿಸದೇ ಅನೂರ್ಜಿತವಾಗುವ ಪ್ಯಾನ್ ಕಾರ್ಡ್‌ ಬಳಸಿ, ಆಫ್‌ಲೈನ್‌ನಲ್ಲಿ ನೀವು ವಹಿವಾಟು ಮಾಡಿದಾಗ, ಅದು ಆದಾಯ ತೆರಿಗೆ ಇಲಾಖೆಯ ಅಸೆಸಿಂಗ್‌ ಆಫೀಸರ್‌ ಕೈಗೆ ಸಿಕ್ಕರೆ ಆಗ 10,000 ರೂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಜ್ಜಾಡಿ ಗ್ರಾಮದ ಬೆಣ್ಗೆರೆಯ ಶ್ರೀ ನಾಗ ದೇವಸ್ಥಾನದಲ್ಲಿ ೪೭ನೇ ನಾಗಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಗುರುವಾರ ನಡೆಯಿತು. ಮಾ.೨೧ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಸಾರ್ವತ್ರಿಕ ಪವಮಾನ ಅಭಿಷೇಕ, ಮಹಾಮಂಗಳಾರತಿ, ರಾತ್ರಿ ನವೋತ್ತರ ಶತದ್ರವ್ಯಪೂರಿತ ಬ್ರಹ್ಮಕಲಶ ಸ್ಥಾಪನೆ ನಡೆಯಿತು. ಮಾ.23 ಬೆಳಿಗ್ಗೆ ಸಂಹಿತಾ ಕಲಶ ಸ್ಥಾಪನೆ, ಪಾರಾಯಣ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಮಂಗಳಾರತಿ, ನಾಗದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ದರ್ಶನ, ವೈ. ವಾಸುದೇವ ವೈದ್ಯ ಮತ್ತು ಬಳಗದವರಿಂದ ನಾಗ ಮಂಡಲ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಡಾ. ಶಿವರಾಮ ಕಾರಂತ ಮಹಿಳಾ ಸಾಧಕ ಪುರಸ್ಕಾರಕ್ಕೆ ರೇವತಿ ಶೆಟ್ಟಿ ಮಣೂರು ಪಡುಕೆರೆ, ಸುಧಾ ಕದ್ರಿಕಟ್ಟು, ತನುಜಾ ಕೋಟೇಶ್ವರ, ಸುಶ್ಮಿತಾ ಸಾಲಿಗ್ರಾಮ, ನಿಶಾ ಸಾಲಿಗ್ರಾಮ, ವೀಣಾ ನಾಯಕ್, ಮಾಲಿನಿ ರಮೇಶ್, ಸುಮನ ಹೇರ್ಳೆ, ಸುಶ್ಮಿತಾ ಪಾರಂಪಳ್ಳಿ, ಸ್ಪೂರ್ತಿ, ಲಲಿತಾ ನಾರಿ, ಶೋಭಾ ಗಾಣಿಗ, ಸುಪ್ರೀತಾ ಪುರಾಣಿಕ್, ಪ್ರತಿಮಾ ಯಡ್ತಾಡಿ, ಚೈತ್ರಾ ಆಚಾರ್ಯ ಕೋಟ, ಅವರನ್ನು ಆಯ್ಕೆ ಮಾಡಲಾಗಿದೆ. ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಮಾರ್ಚ್ 29 ರಂದು ಸಂಜೆ 6 ಗಂಟೆಗೆ ನಡೆಯುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದೆಂದು ಎಂದು ಡಾ. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದು. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ, ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಡೀಮ್ಡ್ ಅರಣ್ಯ ವಿನಾಯತಿಯ ನಂತರ ಕಂದಾಯ ಇಲಾಖೆಗೆ ನೀಡಿರುವ ಜಾಗವನ್ನು ಅರ್ಹರಿಗೆ 94 ಸಿ ಮತ್ತು 94 ಸಿಸಿ ಯಡಿಯಲ್ಲಿ ಆದ್ಯತೆಯ ಮೇಲೆ ಹಕ್ಕುಪತ್ರಗಳನ್ನು ನೀಡುವ ಕಾರ್ಯ…

Read More