ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ಹದಿಹರೆಯದವರಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಪಾಶ್ರ್ವವಾಯುನಂತಹ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ನಮಗೆ ಬರುವ ವಿವಿಧ ಕಾಯಿಲೆಗಳು ಜೀವನ ಶೈಲಿಯೇ ಕಾರಣವಾಗಿದೆ. ಇದರಿಂದ ನಮ್ಮ ಜೀವನ ಹಾಗೂ ಜೀವಿತಾವಧಿ ಕುಂಠಿತವಾಗುತ್ತದೆ ಎಂದು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಉದಯ ಮಡಿವಾಳ ಎಂ ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಕೋಡಿ ಬ್ಯಾರಿಸ್ ಶಿಕ್ಷಣ ಸಂಸ್ಥೆಯ ಬಿ,ಎಡ್ ಪ್ರಶಿಕ್ಷಣಾರ್ಥಿಗಳ ಸೇವಾ ಪೂರ್ವ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತಿಮುಖ್ಯವಾಗಿದೆ ಎಂದರು. ಕಾರ್ಯಕ್ರಮವನ್ನು ಸಂಸ್ಥೆಯ ಉಪಪ್ರಯಾಂಶಪಾಲರಾದ ಕಿರಣ್ ಹೆಗ್ಡೆ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಮನೋಲ್ಲಾಸ ಕ್ರೀಡೆಗಳು ಹಾಗೆ ವಿವಿಧ ಪಠ್ಯ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಬಹುಮಾನ ವಿಜೇತರ ಪಟ್ಟಿಯನ್ನು ಮೇಘ ವಾಚಿಸಿದರು. ಸಂಸ್ಥೆಯಲ್ಲಿ ತಾವು ಕಳೆದ 50 ದಿನಗಳ ಅನುಭವವನ್ನು ಪ್ರಶಿಕ್ಷಣಾರ್ಥಿ ವಿನಿತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.20: ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿದೆ. ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡಲು ಉಳಿದ 6,723 ಕೆಎಲ್ ಸಿಮೇಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ.ರಾಘವೇಂದ್ರ ಅವರು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ವಿನಂತಿಸಿದರು. ಇದೇ ಸಂದರ್ಭ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆ.ಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದರು. ಕೇಂದ್ರ ಸಚಿವರು, ಸಂಸದರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾಗಿ ಸಂಸದರ ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.20: ಕರ್ನಾಟಕದ ಜನ ಬದಲಾವಣೆ ಬಯಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯುವ ಮನಸ್ಸಿನಲ್ಲಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಘಟನೆಯನ್ನು ಬಲಗೊಳಿಸಿ ಸಜ್ಜಾಗಬೇಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ರೋಝಿ ಜಾನ್ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಸಭೆಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಎದುರು ಕಠಿಣ ಸವಾಲುಳಿದ್ದು ಎಲ್ಲವನ್ನೂ ಚುನಾವಣೆಯಲ್ಲಿಯಲ್ಲಿ ಗೆಲುವು ಸಾಧಿಸುವ ಹೊಣೆಗಾರಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಎಂದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಉಡುಪಿ ಜಿಲ್ಲಾ ಉಸ್ತುವಾರಿ ಆರ್. ಧವನಾರಾಯಣ ಮಾತನಾಡಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಡಿ.20: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಳ್ಳತನ ಪ್ರಕರಣಗಳು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ 1 ಕಳವು ಪ್ರಕರಣದ ಆರೋಪಿ ವಿಜಯ ಕುಮಾರ್ ಶೆಟ್ಟಿ (28) ಎಂಬಾತನನ್ನು ಬ್ರಹ್ಮಾವರ ಸಿ.ಪಿ.ಐ ನೇತೃತ್ವದ ವಿಶೇಷ ತಂಡವು ನೀಲಾವರ ಕ್ರಾಸ್ ಬಳಿ ಬಂಧಿಸಿದೆ. ಆರೋಪಿ ವಿಜಯ ಕುಮಾರ್ ಶೆಟ್ಟಿಯ ಮೇಲೆ ಈ ಹಿಂದೆ ದ.ಕ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಠಾಣೆಯಲ್ಲಿ 1 ಪ್ರಕರಣ, ಹರಿಹರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಜಾಮೀನು ರಹಿತ ವಾರಂಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನಕ್ಕೆ ಹೊಂದಿಕೊಂಡು ನಿರ್ಮಾಣವಾಗುತ್ತಿರುವ ಪುರಭವನ ಕಾಮಗಾರಿಯನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಆಗ್ರಹಿಸಿ ಮಂಗಳವಾರ ಬೈಂದೂರು ಗಾಂಧಿ ಮೈದಾನ ಉಳಿಸಿ ಧರಣಿ ಮತ್ತು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಯಡ್ತರೆ ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜ ಶೆಟ್ಟಿ, ಕವಿ ಗೋಪಾಲಕೃಷ್ಣ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಪುರಭವನೆಕ್ಕೆ ನಮ್ಮ ವಿರೋಧವಿಲ್ಲ, ಆದರೆ ಅದಕ್ಕಾಗಿ ವಿಶಾಲವಾದ ಗಾಂಧಿ ಮೈದಾನದಲ್ಲಿ ನಿರ್ಮಿಸವುದು ಸಮಂಜಸವಲ್ಲ, ಹಾಗಾಗಿ ಅದನ್ನು ಹತ್ತಿರದಲ್ಲಿರುವ ಯಾವುದಾದರೂ ಸರ್ಕಾರಿ ಭೂಮಿಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದರು. ಇಲ್ಲಿನ ಗಾಂಧಿ ಮೈದಾನ 4.98 ಎಕ್ರೆ ವಿಸ್ತೀರ್ಣವನ್ನು ಹೊಂದಿದ್ದು, ಅದರಲ್ಲಿ 1.50 ಎಕ್ರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಯ ಹೆಸರಿನಲ್ಲಿ ಕಾಯ್ದಿರಿಸಿ ಅದರಲ್ಲಿ ಕವಿ ಮೊಗೇರಿ ಗೋಪಾಲಕೃಷ್ಣ ಹೆಸರಿನಲ್ಲಿ ಸ್ಮಾರಕ ಪುರಭವನ ನಿರ್ಮಿಸಲು ಉದ್ದೇಶಿಸಲಾಗಿದ್ದು ಉಳಿದ ಸುಮಾರು 3.48 ಎಕ್ರೆ ಜಾಗದಲ್ಲಿ ಹೊರಂಗಣ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ಇದರಿಂದಾಗಿ ಕ್ರೀಡಾಂಗಣ ತೀರಾ ಕಿರಿದಾಗಲಿದ್ದು, ಇಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ 2022ನೇ ಸಾಲಿನ ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ನ ದೃತಿ ಎಸ್, ಜಿ.ಎಂ. ವಿದ್ಯಾನಿಕೇತನ ಬ್ರಹ್ಮಾವರದ ವಿದ್ಯಾರ್ಥಿನಿ ಮಾನ್ವಿ ಆರ್, ಸ.ಹಿ.ಪ್ರಾ.ಶಾಲೆ ಮಣೂರು ಪಡುಕೆರೆ ವಿದ್ಯಾರ್ಥಿ ಲಕ್ಷ್ಮೀಶ ಟಿ ಶ್ರೀಯಾನ್ , ಕೆ.ಪಿ.ಎಸ್ ಬಿದ್ಕಲ್ಕಟ್ಟೆ ವಿದ್ಯಾರ್ಥಿನಿ ಶ್ರೀ ನಿತಾ ಎನ್, ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ.ಶಾಲೆ ಗಂಗೊಳ್ಳಿ ವಿದ್ಯಾರ್ಥಿ ಸಂಜಿತ್ ಎಂ, ಸ.ಹಿ.ಪ್ರಾ.ಶಾಲೆ ಮಣೂರು-ಪಡುಕೆರೆ ವಿದ್ಯಾರ್ಥಿನಿ ಲಿಖಿತಾ, ಶ್ರೀ ದು.ಪ.ಅ.ಹಿ.ಪ್ರಾ.ಶಾಲೆ ಮಂದಾರ್ತಿ ವಿದ್ಯಾರ್ಥಿನಿ ಸಿರಿ, ರೋಟರಿ ಕೇಂದ್ರೀಯ ಶಾಲೆ ವಿದ್ಯಾರ್ಥಿನಿ ಇಶಾ ಪ್ರದೀಪ್ ದೇವಾಡಿಗ, ಮಿಲಾಗ್ರೀಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ವಿದ್ಯಾರ್ಥಿನಿ ಪ್ರವಣ್ಯ ಯು ರಾವ್, ಸ.ಹಿ.ಪ್ರಾ.ಶಾಲೆ ಚಿತ್ರಪಾಡಿ ವಿದ್ಯಾರ್ಥಿನಿ ಅನ್ವಿತಾ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ಕಟ್ಟೆ ವಿದ್ಯಾರ್ಥಿ ಆದೀಶ ಪಿ.ಬಿ,ಶ್ರೀ ರವಿ ಶಂಕರ ವಿದ್ಯಾಮಂದಿರ ಕೊಂಚಾಡಿ ಶಾಲೆ ವಿದ್ಯಾರ್ಥಿನಿ ಪ್ರಾಪ್ತಿ ಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ರಾಣಿ ಬಲೆ ಮೀನುಗಾರರ ಒಕ್ಕೂಟದ ವತಿಯಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಧನುರ್ ಸಂಕ್ರಾಂತಿಯಿಂದ ವೃಷಭ ಸಂಕ್ರಾಂತಿ ವರೆಗಿನ ಉತ್ಸವದ ಅಂಗವಾಗಿ ಶುಕ್ರವಾರದಂದು ಶ್ರೀ ದೇವಿಗೆ ಬೆಳಿಗ್ಗೆ ಏಕದಶ ರುದ್ರಾಭಿಷೇಕ, ರಾತ್ರಿ ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿಯೊಂದಿಗೆ ಬೆಳ್ಳಿ ರಥೋತ್ಸವ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಪ್ರಕಾಶ್ ಉಡುಪ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಗಳು ಜರುಗಿದವು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಸಂಘದ ಪದಾಧಿಕಾರಿಗಳು ಹಾಗೂ ರಾಣಿ ಬಲೆ ಮೀನುಗಾರ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಾಭೈರವ ದೇವರ ಅಷ್ಟಬಂಧ ಸಹಿತ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಮೂಹೂರ್ತ ಕಾರ್ಯಕ್ರಮ ಜರುಗಿತು. ಇದನ್ನೂ ಓದಿ:► ಜೀರ್ಣೋದ್ಧಾರ ಕಾರ್ಯದಲ್ಲಿ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟುವಿನ ಶ್ರೀ ಕಾಲಭೈರವ ದೇವಸ್ಥಾನ – https://kundapraa.com/?p=63270 . ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿಗಳಾದ ರಘುರಾಮ ಮಧ್ಯಸ್ಥರ ಮಾರ್ಗದರ್ಶನದಂತೆ ಕ್ಷೇತ್ರ ಜೋಯಿಸರಾದ ರಾಮಚಂದ್ರ ನಾವುಡ ತೆಂಕಬೆಟ್ಟು ಇವರ ನೇತೃತ್ವದಲ್ಲಿ ನಡೆದವು. ಈ ಸಂದರ್ಭದಲ್ಲಿ ಕೆ. ಕೃಷ್ಣ ಪೂಜಾರಿ ಮುಂಬೈ, ದಯಾನಂದ ಜೋಗಿ ನಾವುಂದ, ನವೀನ್ ಚಂದ್ರ ಜೋಗಿ ಕಾಪು, ಸುಕೇಶ್ ಕುಮಾರ ಶೆಟ್ಟಿ ಹಳಗೇರಿ, ನಾಗೇಶ್ ಜೋಗಿ ಕೆಳಮನೆ, ನರಸಿಂಹ ಹಳಗೇರಿ ರಮೇಶ ದೇವಾಡಿಗ ನಾಗೂರು, ಸುಬ್ರಮಣ್ಯ ಜೋಗಿ ಕೆಳಮನೆ ಹಾಗೂ ನಂಬಿದ ಭಕ್ತಾಭಿಮಾನಿಗಳು, ಕುಟುಂಬಸ್ಥರು ಹಾಜರಿದ್ದರು. ಜನವರಿ 26ರಿಂದ ಮೊದಲ್ಗೊಂಡು 30ರ ಪರ್ಯಂತ ಶ್ರೀ ಕಾಲಾಭೈರವ ದೇವರ ಅಷ್ಟಬಂಧ ಸಹಿತ ಪುನರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ – ಕುಂದಾಪುರ ಟ್ರಸ್ಟ್ ಆಗಿ ಉನ್ನತೀಕರಣಗೊಂಡಿದ್ದು, ಕಲಾಕ್ಷೇತ್ರದ ನವೀಕೃತ ಕಛೇರಿಯಲ್ಲಿ ಟ್ರಸ್ಟ್ನ್ನು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಅವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ನಮ್ಮಲ್ಲಿ ಸಂಸ್ಕಾರ, ಸಂಸ್ಕೃತಿಗಳು ಉಳಿಯಬೇಕಾದರೆ ಕಲೆ ಉಳಿಯಬೇಕು, ಅಂತಹ ಕೆಲಸವನ್ನು ಹಲವು ವರ್ಷಗಳಿಂದ ಕಲಾಕ್ಷೇತ್ರ ಮಾಡುತ್ತಾ ಬಂದಿದೆ. ಸಂಗೀತದ ಆಕರ್ಷಣೆ ಯಾರನ್ನೂ ಖಿನ್ನತೆಗೆ ಒಳಗಾಗಲು ಬಿಡುವುದಿಲ್ಲ, ಆಕಸ್ಮಾತ್ ಖಿನ್ನತೆಗೆ ಒಳಗಾದವ ಸಂಗೀತ ಕೇಳುವ ಹವ್ಯಾಸವನ್ನು ಬೆಳೆಸಿಕೊಂಡರೆ ಅದರಿಂದ ಹೊರಬರಲು ಸಾಧ್ಯವಿದೆ ಹಾಗಾಗಿ ನಮ್ಮ ತೊಡಕುಗಳನ್ನು ಪರಿಹರಿಸಬಲ್ಲ ಏಕೈಕ ಸಾಧನವೆಂದರೆ ಅದು ಸಂಗೀತ ಎಂದರು. ಹಿರಿಯ ಚೇತನ ಪ್ರಕಾಶ್ ಯಡಿಯಾಳ್ ನೆನಪಿನಲ್ಲಿ ನಿರ್ಮಿಸಿದ ಪ್ರತಿಧ್ವನಿರಹಿತ ಹವಾನಿಯಂತ್ರಿತ ಕಿರುಸಭಾಂಗಣವಾದ ’ಪ್ರಕಾಶಾಂಗಣ’ ಮತ್ತು ಸಿತಾರ್ ಕಲಾವಿದ ವಿದ್ವಾನ್ ಅವಿನಾಶ ಹೆಬ್ಬಾರರ ನೆನಪಿನಲ್ಲಿ ನಿರ್ಮಿಸಿದ ’ಅವಿನಾಶೀ ರಂಗ’ ಎಂಬ ವೇದಿಕೆಯನ್ನು ಕ್ರಮವಾಗಿ ಜ್ಯೋತಿ ಪ್ರಕಾಶ್ ಯಡಿಯಾಳ್ ಮತ್ತು ಶಾರದಾಂಬಾ ಅವಿನಾಶ್ ಹೆಬ್ಬಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಎ.ಎಸ್.ಎನ್. ಹೆಬ್ಬಾರ್ ಮಿತ್ರತ್ವದ ಮಹತ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ 2022-23ನೇ ಸಾಲಿನ ರಾಷ್ತ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನೇರವೇರಿತು. ಬೈಂದೂರಿನ ವಲಯ ಅರಣ್ಯಾಧಿಕಾರಿಗಳಾದ ಸಿದ್ದೇಶ್ವರ ಕೆ. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ, ಪರಿಸರವನ್ನು ಉಳಿಸುವಲ್ಲಿ ಮತ್ತು ಉತ್ತಮ ಪರಿಸರವನ್ನು ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ, ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ನೆಡುವ ಸಂಕಲ್ಪ, ಬೇಸಿಗೆ ಅವಧಿಯಲ್ಲಿ ಪಕ್ಷಿಗಳಿಗೆ ನೀರನ್ನು ನೀಡುವುದು ಹೀಗೆ ಹಲವು ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಪ್ರಾಂಶುಪಾಲರಾದ ಡಾ. ರಘು ನಾಯ್ಕ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿದ್ದ ತಮ್ಮ ಹಿಂದಿನ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೧1ರ ಯೋಜನಾಧಿಕಾರಿ ನಾಗರಾಜ ಶೆಟ್ಟಿ, ಪ್ರಾಧ್ಯಾಪಕರಾದ ಮೋಹನಕುಮಾರ, ಶ್ರೀ ಹೆಚ್ ಜೆ, ಸವಿತಾ ಎಸ್, ಮಣಿಕಂಠ ಉಪಸ್ಥಿತರಿದ್ದರು. ಮನಿಷಾ ದ್ವಿತೀಯ ಬಿ ಬಿ ಎ ಕಾರ್ಯಕ್ರಮದ ನಿರೂಪಣೆ, x…
