Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಅವರು ಪುನರಾಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಯು. ಚಂದ್ರಶೇಖರ ಹೊಳ್ಳ, ಉಪಾಧ್ಯಕ್ಷರಾಗಿ ಆನಂದ ಮದ್ದೋಡಿ ಹಾಗೂ ಅಬ್ದುಲ್ ರವೂಫ್, ಜೊತೆ ಕಾರ್ಯದರ್ಶಿಗಳಾಗಿ ನಿಶ್ಚಿತಾ, ಗಣೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗಾಣಿಗ, ರಾಮಕೃಷ್ಣ ದೇವಾಡಿಗ ಉಪ್ಪುಂದ, ಖಜಾಂಚಿಯಾಗಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲಕೃಷ್ಣ ಜೋಶಿ, ನಾಗರಾಜ ಬೆಳ್ಳಿ, ರಾಘವೇಂದ್ರ ಕೆ., ಉದಯ ಗಾಣಿಗ, ಗಿರೀಶ್ ಮೇಸ್ತ, ರವಿರಾಜ ಮಯ್ಯಾಡಿ, ಲಕ್ಷ್ಮಣ ಕೊರಗ, ಸುನಿಲ್ ಹೆಚ್. ಜಿ., ಗಣೇಶ್ ಟೈಲರ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ನಿರ್ದೇಶಕರಾಗಿ ಸುಧಾಕರ ಪಿ., ಗಣಪತಿ ಹೋಬಳಿದಾರ್ ಹಾಗೂ ವ್ಯವಸ್ಥಾಪಕರಾಗಿ ಕೃಷ್ಣಮೂರ್ತಿ ಉಡುಪ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಪರಿಕಲ್ಪನೆಯೊಂದಿಗೆ ಕನಸನ್ನು ಕಂಡವರು ಡಾ ಬಾಬಾಸಾಹೇಬ್ ಅಂಬೇಡ್ಕರ್ ರವರು. ಮೀಸಲಾತಿ ಮಾತ್ರವಲ್ಲದೆ ಅನೇಕ ಸೌಲಭ್ಯಗಳಿಗೆ ಕಾರಣಿಭೂತವಾದ ಕಾನೂನುಗಳು ಜಾರಿಯಾಗಲು ಕಾರಣ ಮತ್ತು ಅದರ ಹಿನ್ನೆಲೆಗಳು ಆರ್ಥಿಕ ಅಭಿವೃದ್ಧಿ ನೀರಾವರಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಸಕಾರಾತ್ಮಕ ಬದಲಾವಣೆಗಳಿಗೆ ಅಂಬೇಡ್ಕರ್ ರವರು ಶ್ರಮಿಸಿದ ಬಗೆಯನ್ನು ದೃಷ್ಟಾಂತಗಳ ಮೂಲಕ ಸಾಮಾಜಿಕ ಚಿಂತಕರಾದ ನಾರಾಯಣ ಮಣೂರು ಅವರು ವಿವರಿಸಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲ್ಲೂಕು ಘಟಕ ಸಹಯೋಗದೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ನಡೆದ “ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು” ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಘಟಕದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನುಡಿಗಳನ್ನು ಆಡಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿನ್ಶಿಪ್ 2022’ ರ ಜೂನಿಯರ್ ವಿಭಾಗದಲ್ಲಿ ಬೈಂದೂರು ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಈ ಮೊದಲು ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಇದನ್ನೂ ಓದಿ:► ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಕಂಚು – https://kundapraa.com/?p=59975 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್, ದ.ಕ ಮತ್ತು ಉಡುಪಿ ಜಿಲ್ಲೆ ಹಾಗೂ ಕುಂದಾಪುರ – ಬೈಂದೂರು ವಲಯ ಇವರ ನೇತೃತ್ವದಲ್ಲಿ  ಬೀಜಾಡಿಯ ಐಶ್ವರ್ಯ ಮೀಡಿಯಾ ಮತ್ತು ಸ್ಟುಡಿಯೋ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆ, ಅಗ್ನಿಶಾಮಕ ಠಾಣೆ ಕುಂದಾಪುರ, ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ ಕಾರ್ಯಕ್ರಮ ಜರುಗಿತು. ಕುಂದಾಪುರದ ಡಿ.ವೈ.ಎಸ್.ಪಿ ಕೆ. ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳು ಜಾಸ್ತಿಯಾಗುತ್ತಿವೆ. ಮನುಷ್ಯ ಮತ್ತು ಪ್ರಕೃತಿಯ ಒಡನಾಟದಲ್ಲಿ ಸಾಮರಸ್ಯ ತಪ್ಪಿರುವುದೇ ಇದಕ್ಕೆ ಕಾರಣ. ಅತಿವೃಷ್ಟಿ, ನೆರೆ ಹಾವಳಿ, ಭೂ ಕುಸಿತ, ಮೇಘ ಸ್ಪೋಟ ಇತ್ಯಾದಿಗಳು ಒಂದಿಲ್ಲೊಂಡೆದೆ ದಿನನಿತ್ಯ ಎಂಬಂತಾಗಿದೆ. ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಅಸಾಧ್ಯವಾದರೂ, ಅವುಗಳ ಬಗ್ಗೆ ಅರಿವು ಹೊಂದಿದ್ದರೆ, ಜೀವ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸದ್ಯಕ್ಕಂತೂ ಸಿನಿಮಾ ಅಂದ್ರೆ ಕಾಂತಾರ ಎಂಬಂತಾಗಿದೆ. ಎರಡನೇ ವಾರದ ಅಂತ್ಯದ ವೇಳೆಗೆ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಹೊಸ ಪ್ರೇಕ್ಷಕ ವರ್ಗವನ್ನೂ ಟಾಕೀಸುಗಳತ್ತ ಸೆಳೆಯುತ್ತಿದೆ. ಹಿಂದಿ ಹಾಗೂ ಇನ್ನಿತರ ಭಾಷೆಯಲ್ಲಿಯೂ ಬಿಡುಗಡೆಗೆ ತಯಾರಾಗಿ ಮುನ್ನಡೆಯುತ್ತಿದೆ. ಕರಾವಳಿ ಸಂಸ್ಕೃತಿ, ಸಂಪ್ರದಾಯವನ್ನು ಬೆಳ್ಳಿತೆರೆಯ ಮೇಲೆ ತೋರಿಸುತ್ತಾ, ಅಭಿನಯ, ಸಂಗೀತ, ಮೇಕಿಂಗ್ ಎಲ್ಲದರ ಬಗ್ಗೆಯೂ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸುತ್ತಾ ಗೆದ್ದಿರುವ ಕಾಂತಾರ ಸಿನಿಮಾ, ಉತ್ತರ ಕರ್ನಾಟಕದಲ್ಲಿಯೂ ಸಖತ್ ಕ್ರೇಜ್ ಹುಟ್ಟುಹಾಕಿದೆ. ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಉದ್ಯಮಿ, ಹೋಟೆಲ್ ಶಾಂತಿ ಗ್ರ್ಯಾಂಡ್ ಮಾಲಿಕ ಗುಣಕರ ಶೇಖರ ಶೆಟ್ಟಿ ಅವರು ಗುರುವಾರ ಒಂದು ದಿನ ಲೋಕಾಪುರದ ಟಾಕೀಸ್ ಸಂಪೂರ್ಣ ಬುಕ್ ಮಾಡಿ ಅಲ್ಲಿನ ಜನತೆಗೆ ಕಾಂತಾರ ಸಿನಿಮಾ ಸಂಪೂರ್ಣ ಉಚಿತ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದರು. ಕನ್ನಡದ ಸ್ಟಾರ್ ನಟರ ಸಿನಿಮಾಗಳಷ್ಟೇ ಓಡುತ್ತಿದ್ದ ಲೋಕಾಪುರದ ಟಾಕೀಸಿನಲ್ಲಿ ಕಾಂತಾರದ ಕ್ರೇಜ್ ಮಾತ್ರ ಜೋರಾಗಿಯೇ ಇದೆ. ಗುರುವಾರ ಆಯೋಜಿಸಲಾಗಿದ್ದ ಒಟ್ಟು 5 ಉಚಿತ ಪ್ರದರ್ಶನಗಳು ಹೌಸ್ ಪುಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆತಿಥ್ಯ ಉದ್ಯಮ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಂಡಿರುವ ಕೋಟೇಶ್ವರದ ಯುವ ಮೆರಿಡಿಯನ್ ಗ್ರೂಪ್ಸ್, ಪ್ರಸಕ್ತ ಸಾಲಿನಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ. ದಿ ಟೈಮ್ಸ್ ಗ್ರೂಪ್‌ನಿಂದ ಇಟಿ ಅಜೀವರ್ಸ್ ಅವಾರ್ಡ್ ಹಾಗೂ ಎಐಸಿ ನಿಟ್ಟೆ – ಕೆಬಿಎಲ್ ವತಿಯಿಂದ ಬೆಸ್ಟ್ ಇನೋವೇಟಿವ್ ಎಂಟರ್ಪ್ರೈಸಸ್ ಅವಾರ್ಡ್‌ಗೆ ಭಾಜನರಾಗಿದ್ದು, ಯುವ ಮೆರಿಡಿಯನ್ ಹಿರಿಮೆಗೊಂದು ಗರಿ ಮೂಡಿದಂತಾಗಿದೆ. ಈ ಬಗ್ಗೆ ಯುವ ಮೆರಿಡಿಯನ್‌ನಲ್ಲಿ ಬುಧವಾರ ಆಯೋಜಿಸಲಾದ ಮಾಧ್ಯಮಗೋಷ್ಠಿಯಲ್ಲಿ ಯುವ ಮೆರಿಡಿಯನ್ ಗ್ರೂಪ್ ಆಡಳಿತ ಪಾಲುದಾರರಾದ ಬಿ. ಉದಯ ಕುಮಾರ್ ಹಾಗೂ ಬಿ. ವಿನಯ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಪ್ರಶಸ್ತಿ ಲಭಿಸಿರುವ ಬಗ್ಗೆ ಸಂತಸ ಹಂಚಿಕೊಂಡ ಸಹೋದರರು, ಗ್ರಾಮೀಣ ಪ್ರದೇಶದಲ್ಲಿ ದಶಕದಿಂದ ಅಂತರಾಷ್ಟ್ರೀಯ ಗುಣಮಟ್ಟದ ಸೇವೆ ನೀಡುತ್ತಿರುವ ಯುವ ಮೆರಿಡಿಯ ನ್‌ನ ಯುವ ಮೆರಿಡಿಯನ್ ಬೇ ರೆಸಾರ್ಟ್ & ಸ್ಪಾ ವಿಭಾಗವು ಅಂತರಾಷ್ಟ್ರೀಯ ಮನ್ನಣೆ, ಗೌರವಕ್ಕೆ ಪಾತ್ರವಾಗಿದ್ದಲ್ಲದೆ ರಾಜ್ಯದ ಪ್ರತಿಷ್ಠಿತ ಹಾಗೂ ಮುಂಚೂಣಿಯ ಹೋಟೆಲ್‌ಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಹೊಂದಿಕೊಂಡಿದ್ದ ಅನುಪಯುಕ್ತ ನೀರಿನ ಟ್ಯಾಂಕ್‌ನ್ನು ಗ್ರಾಪಂ ಕೆಡವಿಹಾಕಿದೆ. ರಾಷ್ಟ್ರೀಯ ಹೆದ್ದಾರಿಗೆ ತಾಕಿಕೊಂಡಿದ್ದ 30 ವರ್ಷಗಳಷ್ಟು ಹಳೆಯದಾದ 10 ವರ್ಷಗಳಿಂದ ಅನುಪಯುಕ್ತವಾಗಿದ್ದ ನೀರಿನ ಟ್ಯಾಂಕನ್ನು ಜೆಸಿಬಿ ಬಳಸಿ ಕೆಡವಲಾಯಿತು. ಈ ಸಂದರ್ಭ ಸರ್ವಿಸ್ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಪ್ಲೈಓವರ್ ಒಂದು ಬದಿಯಲ್ಲಿ ಬಂದ್ ಮಾಡಿ, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಮುಂಜಾಗೃತೆ ಕೈಗೊಳ್ಳಲಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮಾಜವು ಎಲ್ಲ ವಿಧದ ದುಷ್ಚಟಗಳಿಂದ ಮುಕ್ತವಾದಾಗ ಗಾಂಧೀಜಿಯವರ ಕನಸಿನ ರಾಮರಾಜ್ಯ ಉದಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಕಾರ್ಯವನ್ನು ಎಲ್ಲ ಪ್ರಜ್ಞಾವಂತ ನಾಗರಿಕರು ಬೆಂಬಲಿಸಬೇಕು ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಉಡುಪಿ ಜಿಲ್ಲಾ ಹಾಗೂ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ, ನವಜೀವನ ಸಮಿತಿಗಳು, ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ನಡೆದ ಜನಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಭವಿಷ್ಯದಲ್ಲಿ ಸಮಾಜದ ಎಲ್ಲರೊಂದಿಗೆ ಬೆರೆತು ಬಾಳಲು ಸಹಕಾರಿಯಾಗುವುದರ ಜತೆಗೆ ಸಂಸ್ಕಾರಯುತ ಜೀವನಕ್ಕೆ ನಾಂದಿಯಾಗುವ ಮೂಲಕ ವ್ಯಸನ ಮುಕ್ತ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತವು ಸಂಸ್ಕಾರದಿಂದ ಒಲಿಯುವ ಕಲೆ. ಯಾವುದೇ ಪ್ರಕಾರದ ಸಂಗೀತವೇ ಆದರೂ ಅದರ ಮೇಲೆ ಪ್ರಭುತ್ವ ಸಾಧಿಸಲು ಅದನ್ನು ಶ್ರದ್ಧೆಯಿಂದ ಕಲಿಯಬೇಕು ಮತ್ತು ಆರಾಧಿಸಬೇಕು ಎಂದು ಸಂಗೀತ ಗುರು, ವಿದ್ವಾನ್ ಅನಂತ ಹೆಬ್ಬಾರ್ ಭಟ್ಕಳ ಹೇಳಿದರು. ನಾವುಂದ-ಮಸ್ಕಿ ಶ್ರೀದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಯ ಆಶ್ರಯದಲ್ಲಿ ಇಲ್ಲಿನ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆದ ರಾಜ್ಯ ಮಟ್ಟದ ’ಗಾನ ಸ್ವರ-೨೦೨೨’ ಕರೋಕೆ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಸ್ಥಾನಿ ಸಂಗೀತ ಗುರು ವಿದ್ವಾನ್ ಶರತ್ ನಾಡ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಮೊಗವೀರ, ಬಡಾಕೆರೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಹಾಬಲ. ಕೆ, ಹಿಂದು ಅಭ್ಯುದಯ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ, ಗಾಯಕ ಮಂಜುನಾಥ ಸಾಲಿಯಾನ್ ತ್ರಾಸಿ ಅತಿಥಿಗಳಾಗಿದ್ದರು. ದಿನೇಶ್ ನಾಯಕವಾಡಿ ವಂದಿಸಿದರು. ನಾಗರಾಜ ದೇವಳಿ ನಿರೂಪಿಸಿದರು. ಶಂಭು ಗುಡ್ಡಮ್ಮಾಡಿ ಸಹಕರಿಸಿದರು ರಾಜ್ಯದ ವಿವಿಧೆಡೆಯ ಹಾಡುಗಾರರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 18,000ಕ್ಕೂ ಮಿಕ್ಕಿ ಸದಸ್ಯರು, 1,000 ಕೋಟಿ ರೂ. ವ್ಯವಹಾರ ಹೊಂದಿರುವ ಪಾರದರ್ಶಕ ಸಹಕಾರಿ ಸಂಸ್ಥೆಯಾಗಿದೆ. ಸಂಸ್ಥೆಯಿಂದ ಸಾಲಪಡೆದ ವ್ಯಕ್ತಿಯೂರ್ವರು ಮರುಪಾವತಿಯಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕ ವಲಯದಲ್ಲಿ ಸಂಸ್ಥೆಯ ಬಗ್ಗೆಯೇ ಗೊಂದಲ ಸೃಷ್ಟಿಸುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ. ಅವರು ಸಂಸ್ಥೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹರಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡಿ, 6 ವರ್ಷಗಳ ಹಿಂದೆ ನಾಗರಾಜ ಪೂಜಾರಿ ಎಂಬ ವ್ಯಕ್ತಿ ತನ್ನ ಕುಟುಂಬದ ಆಸ್ತಿಯನ್ನು ಅಡಮಾನವಿರಿಸಿ 25 ಲಕ್ಷ ರೂ. ಸಾಲ ಪಡೆದು ಸ್ಪಲ್ಪ ಹಣವನ್ನಷ್ಟೇ ಮರುಪಾವತಿಯನ್ನೂ ಮಾಡಿದ್ದಾರೆ. ಸಾಲ ಮರುಪಾವತಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದಾಗ್ಯೂ ಮರುಪಾವತಿಯಿಂದ ತಪ್ಪಿಸಿಕೊಳ್ಳಲು ಸಂಸ್ಥೆಯ ವಿರುದ್ಧವೇ ಇಲಾಖೆಗಳಿಗೆ ದೂರು ನೀಡಿದ್ದರು. ಸಹಕಾರಿ ಇಲಾಖೆಯ ಎಲ್ಲಾ ಹಂತದ ತನಿಕೆಯಲ್ಲಿಯೂ ತನಿಕೆ…

Read More