Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಚಿಟ್ ಫಂಡ್ ನಲ್ಲಿ ‘ಸಾವಿರ ಪಾವತಿಸಿದರೆ ಲಕ್ಷ ಸಾಲ ನೀಡುವುದಾಗಿ ಹೇಳಿದ್ದನ್ನು ನಂಬಿದ್ದ ನಾಡ ಪಡುಕೋಣೆಯ ಒಂಬತ್ತು ಮಹಿಳೆಯರನ್ನು ಯಾಮಾರಿಸಿದ ಘಟನೆ ನಡೆದಿದೆ. ಗಂಗೊಳ್ಳಿ ಪೊಲೀಸರ ಕ್ಷೀಪ್ರ ಕಾರ್ಯಚರಣೆಯಿಂದಾಗಿ ಮೂರು ತಿಂಗಳಿಂದ ಕಾಯುತ್ತಿದ್ದ ಚಿಟ್ ಫಂಡ್ ಹಣ 10 ಗಂಟೆಯಲ್ಲಿ ಮರಳಿ ಪಡೆಯುವಂತಾಗಿದೆ. ಆಗಿದ್ದೇನು? ಪಡುಕೋಣೆಯ ಮಹಿಳೆಯರು ತಮ್ಮ ಪರಿಚಯದ ಮಹಿಳೆ ಮೂಲಕ ಯಾವುದೋ ಅನಾಮಧೇಯನನ್ನು ಚಿಟ್ ಫಂಡ್ ಸಂಸ್ಥೆಯೊಂದರ ಉಡುಪಿ ಜಿಲ್ಲಾ ಮೆನೆಜರ್ ಎಂದು ನಂಬಿ ಚಿಟ್ ಫಂಡ್‌ಗೆ ಹಣ ನೀಡಿದ್ದರು. ಕೆಲವು ಸಮಯದ ಬಳಿಕ ಸಂಪರ್ಕಕ್ಕೆ ಸಿಗದ ಆತ ಊರು ಬಿಟ್ಟಿದ್ದ ಮೋಸ ಹೋಗುತ್ತಿದ್ದೇವೆ ಎಂದು ಅಂದಾಜಾಗಿ ಕಟ್ಟಿದ ಹಣ ಮರಳಿ ಕೇಳಿದರು. ಸತತ ಮೂರು ತಿಂಗಳಿನಿಂದ ಹಣ ವಾಪಸು ನೀಡುವಂತೆ ದುಂಬಾಲು ಬಿದ್ದರೂ ಕಟ್ಟಿಸಿಕೊಂಡಾತ ಹಣ ನೀಡಿಲ್ಲ. ಹಾಗಾದರೆ ಒಪ್ಪಂದದಂತೆ ಸಾಲ ಕೊಡಿ ಎಂದಾಗ, ಸರಕಾರಿ ನೌಕರರ ಭದ್ರತೆ ಬೇಕು ಎಂದು ಕೇಳಿದ. ಇತ್ತ ಸಾಲವೂ ಇಲ್ಲ ಅತ್ತ ಹಣವೂ ವಾಪಸ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಚಾಮರಾಜನಗರ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಿತು. ಬಾಲಕರ ವಿಭಾಗದಲ್ಲಿ 24 ಮತ್ತು ಬಾಲಕಿಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಎರಡು ಬಾಲಕರ ಹಾಗೂ ಎರಡು ಬಾಲಕಿಯರ ತಂಡಗಳು ಸೇರಿದಂತೆ ಒಟ್ಟು 4 ತಂಡಗಳು ಪಾಲ್ಗೊಂಡಿದ್ದವು. ಲೀಗ್ ಹಾಗು ನಾಕೌಟ್ ಮಾದರಿ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ‘ಎ’ ತಂಡವು ಚಾಂಪಿಯನ್ಸ್ ಪಟ್ಟ  ಅಲಂಕರಿಸಿದರೆ, ಆಳ್ವಾಸ್‌ನ ಬಾಲಕ ಹಾಗೂ ಬಾಲಕಿಯರ ‘ಬಿ’ ತಂಡಗಳು ರನ್ನರ್ಸ್‌ ಆಪ್ ಪ್ರಶಸ್ತಿಯನ್ನು ಪಡೆದು ಪ್ರಾಬಲ್ಯ ಮೆರೆದವು. ಸೆಮಿಫೈನಲ್ಸ್ನಲ್ಲಿ ಆಳ್ವಾಸ್ ಬಾಲಕರ ‘ಎ’ ತಂಡವು ಚಾಮರಾಜನಗರದ ಜಿಲ್ಲಾ ತಂಡವನ್ನು ಹಾಗೂ ಆಳ್ವಾಸ್ ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ಸೋಲಿಸಿತ್ತು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ‘ಎ’ ತಂಡವು ಮೂಡಿಗೆರೆ ತಂಡವನ್ನು ಹಾಗೂ ಆಳ್ವಾಸ್ ‘ಬಿ’ ತಂಡವು ರಾಜರಾಜೇಶ್ವರಿ ನಗರ ತಂಡವನ್ನು ನೇರ ಸೆಟ್ ನಿಂದ ಸೋಲಿಸಿ ಫೈನಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮ ಮುಖ್ಯ ಪೇಟೆಯಲ್ಲಿ ಗುರುವಾರ ಸಂಭ್ರಮದ ರಾಮೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಸಾಲಿಗ್ರಾಮದ ವಾಹನ ಚಾಲಕ ಹಾಗೂ ಮಾಲಕರ ಸಂಘದ ವತಿಯಿಂದ ಏರ್ಪಡಿಸಿದ ಅಯೋಧ್ಯ ಶ್ರೀ ರಾಮ ಮಂದಿರ ಮೂರನೆ ವರ್ಷದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ವೈಭವದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಕ್ಕೆ ವೇದಿಕೆ ಸಾಕ್ಷಿಯಾಯಿತು. ಸಂಜೆ 7ಗಂಟೆಗೆ ಶ್ರೀ ಭಗವತ್ ಭಜನಾ ಮಂಡಳಿ ಕೋಟತಟ್ಟು ಪಡುಕರೆ ಅಲ್ಲಿ ಪುಟಾಣಿಗಳಿಂದ ಕುಣಿತ ಭಜನೆ, ನಂತರ ಶ್ರೀರಾಮ ಪ್ರಸಾದ ವಿತರಣೆ, 8.ಗಂಟೆಯಿಂದ ಯಕ್ಷ ಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾ ರಂಗ ಇವರಿಂದ ಯಕ್ಷಗಾನ ಪಂಚವಟಿ ಪ್ರದರ್ಶನಗೊಂಡಿತು. ನೂರಾರು ಶ್ರೀ ರಾಮ ಭಕ್ತರು ಬಸ್ ನಿಲ್ದಾಣದ ಆಸುಪಾಸು ನಿಂತು ರಾಮೋತ್ಸವವನ್ನು ಸಂಭ್ರಮಿಸಿಕೊಂಡರು. ಕಾರ್ಯಕ್ರಮವನ್ನು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಉದ್ಘಾಟಿಸಿ ಶುಭಹಾರೈಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಶಿವರಾಮ ಉಡುಪ, ರಾಮೋತ್ಸವದ ಸಂಚಾಲಕ ಸಂತೋಷ್ ಮೆಂಡನ್ ಕೋಡಿ, ಸಮಿತಿಯ ಪ್ರಮುಖರಾದ ಸುರೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ತೃತೀಯ ವರ್ಷದ ವರ್ಧಂತ್ಯುತ್ಸವ, ಚಿತ್ರಕೂಟ ಸಹಿತ ಶ್ರೀ ನಾಗದೇವರ ಹಾಗೂ ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠಾ- ವರ್ಧಂತ್ಯುತ್ಸವ -ಕಲಶೋತ್ಸವ, ಶ್ರೀ ಕಾಲಬೈರವ ಸೇವಾ ಸಂಘದ 12ನೇ ವಾರ್ಷಿಕೋತ್ಸವ, ಶ್ರೀ ಶಿವಗೋರಕ್ಷನಾಥ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವು ಜ.26 ರಿಂದ ಜ.27ರ ತನಕ ನಡೆಯಲಿದೆ. ಜ. 26ರ ಬೆಳಿಗ್ಗೆ 9.30ರಿಂದ ಚಿತ್ರಕೂಟ ಸಹಿತ ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ, ಶ್ರೀ ಮಾರಿಕಾಂಬಾ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ, ನವಕ ಪ್ರಧಾನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಸಂಜೆ 6.00ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕಿರ್ತನೆ ನಡೆಯಲಿದೆ. ಜ.27ರ ಬೆಳಿಗ್ಗೆ 9.30ರಿಂದ ಶ್ರೀ ಕಾಲಭೈರವ ದೇವರಿಗೆ ತೃತೀಯ ವರ್ಧಂತ್ಯುತ್ಸವದ ಪ್ರಯುಕ್ತ ಅಷ್ಠೋತ್ತರ ಕಲಶ, ತತ್ವ ಹೋಮ, ಅಧಿವಾಸ ಹೋಮ, ವಿಶೇಷ ಪಂಚಾಮೃತಾಭಿಷೇಕ, ಕಲಾಶಭಿಷೇಕ,  ರೂಟ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ 45 ದಿನಗಳ ಉಚಿತ ಜಿಮ್ ತರಬೇತಿ ಶಿಬಿರವನ್ನು ಫೆಬ್ರವರಿ 1 ರಿಂದ ಮಾರ್ಚ್ 17 ರ ವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅರ್ಹ ಯುವಕರು ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 155265 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನದಿ ದಂಡೆಯ ಸಂರಕ್ಷಣೆ ಮತ್ತು ತೋಡು ಬದಿಕಟ್ಟು ಕಾಮಗಾರಿಗಳಿಗೆ ಅನುದಾನದ ಮಂಜೂರಾತಿಗೆ ಅದರಲ್ಲೂ ಮುಖ್ಯವಾಗಿ ಕುಂಭಾಶಿ ಪರಿಶಿಷ್ಟ ಜಾತಿಯವರ ಕಾಲೋನಿಯ ತೋಡಿನ ಬದಿಕಟ್ಟು ಕಾಮಗಾರಿಗೆ ಅನುದಾನ ಮಂಜೂರಾತಿ ಮಾಡಲು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವರಾದ ಎನ್.ಎಸ್ ಬೋಸರಾಜು ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಪ್ರಸ್ತಾವನೆ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ಇವರ ನೇತೃತ್ವದಲ್ಲಿ ಫೆಬ್ರವರಿ 01 ರಂದು ಕುಂದಾಪುರ ನಗರದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಪೂರ್ವಭಾವಿ ಸಭೆಯು ಕುಂದಾಪುರದ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ನೆರವೇರಿತು. ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಹಿಂದೂ ಜಾಗೃತಿ ಸಂಗಮ ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜ ಬಾಂಧವರನ್ನು ಒಗ್ಗೂಡಿಸುವ ಜೊತೆಗೆ ಜಾಗ್ರತ ಸಮಾಜಕ್ಕೆ ಮುನ್ನಡಿ ಇಡುವ ದೃಷ್ಟಿಯಿಂದ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಹಾಗೂ ಅನನ್ಯ ಜವಾಬ್ದಾರಿಯ ಪ್ರಮುಖರು ಮತ್ತು ಕಾರ್ಯಕರ್ತರು ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ. ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ತಾಲೂಕು ಸಂಯೋಜಿಕಿ ಸ್ವರ್ಣ ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಬ್ರಹ್ಮಾವರ, ರೋಟರ್ಯಾಕ್ಟ್ ಕ್ಲಬ್ ಬ್ರಹ್ಮಾವರ, ಇಂಟರ್ಯಾಕ್ಟ್ ಕ್ಲಬ್, ಸರಕಾರಿ ಪ್ರೌಢ ಶಾಲೆ ಕರ್ಜೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷೆ ಎದುರಿಸುವುದು ಹೇಗೆ? ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕರ್ಜೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷಾಧಿನಿ ಉದ್ಘಾಟಿಸಿ, ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ವಹಿಸಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಜೇಸಿ ತರಬೇತುದಾರ ನರೇಂದ್ರ ಕುಮಾರ್ ಕೋಟರವರು ಪರೀಕ್ಷೆ ಎದುರಿಸುವುದು ಹೇಗೆ? ತರಬೇತಿಯನ್ನು ನಡೆಸಿಕೊಟ್ಟರು. ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಶ್ರೀಮತಿ ಪ್ರೇಮಾರವರು ವಿದ್ಯಾರ್ಥಿಗಳಲ್ಲಿ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್‌ನ ಅಧ್ಯಕ್ಷ ಶಿವಾನಂದ ಶೆಟ್ಟಿಗಾರ್, ಜೇಸಿಐ ಕಲ್ಯಾಣಪುರದ ಅಧ್ಯಕ್ಷ ವಿರೇನ್ ವಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ತಾಯಂದಿರು ಸ್ವಯಂ ಅಡುಗೆಯನ್ನು ತಯಾರಿಸಿ  ತಮ್ಮ ಮಕ್ಕಳಿಗೆ ಶಾಲೆಯಲ್ಲಿ ಬಂದು ಕೈತುತ್ತು ನೀಡಿ ಉಣಿಸುವ “ಅಮೃತ ” ಕೈತುತ್ತಿನ ಮಾಧುರ್ಯ ಎನ್ನುವ ವಿಶಿಷ್ಟವಾದ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ನಿವೃತ್ತ ಮುಖ್ಯೋಪಾಧ್ಯಾಯನಿ ಸುಮನ ಪಡಿಯಾರ್ ಮಾತನಾಡಿ, ಶಾಲೆಗಳಲ್ಲಿ ಇಂಥ ಕಾರ್ಯಕ್ರಮಗಳ ಮೂಲಕ ಕೌಟುಂಬಿಕ ಮತ್ತು ಸಾಮಾಜಿಕ ಬಾಂಧವ್ಯದ ಮೌಲ್ಯ ಮಕ್ಕಳಿಗೆ ಅರ್ಥವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷರಾಗಿರುವ ಅಜಿತ್ ಭಟ್ ಮತ್ತು  ಶಿಕ್ಷಕ-ರಕ್ಷಕ ಸಮಿತಿಯ ಕಾರ್ಯದರ್ಶಿಯಾಗಿರುವ ಅಶೋಕ್ ಎನ್‌ಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಕೋಶಾಧಿಕಾರಿಯಾಗಿರುವ ಜಿ. ವೆಂಕಟೇಶ್ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಶಿಕ್ಷಕಿಯರಾದ ಲಕ್ಷ್ಮಿ ಖಾರ್ವಿ ನಿರೂಪಿಸಿ, ರೇಖಾ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಸಂಘಟಿತ ವಲಯದ ಕಾರ್ಮಿಕರುಗಳು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್.ಪಿ.ಎಸ್ ಟ್ರೇಡರ್ಸ್ ಎಂಬ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರುಗಳು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳನ್ನು…

Read More