Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇವಸ್ಥಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತರು ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ವೇಳೆ  ತಾರೆಕೊಡ್ಲು ಬಳಿ ಕಡವೆಯೊಂದು ಚಲಿಸುವ ಬೈಕಿಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಶ್ರೇಯಸ್‌ ಮೊಗವೀರ (22) ಮೃತಪಟ್ಟ ಘಟನೆ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸಹಸವಾರ ವಿಘ್ನೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ ಕಾವ್ರಾಡಿಯ ಶ್ರೇಯಸ್‌ ಹಾಗೂ ವಿಘ್ನೇಶ್‌ ಇಬ್ಬರು ಬೈಕಿನಲ್ಲಿ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜಿ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಮಲೆಶಿಲೆ – ಸಿದ್ಧಾಪುರ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ತಾರೆಕೊಡ್ಲು ಎಂಬಲ್ಲಿ ಕಡವೆಯೊಂದು ಬೈಕ್‌ ಮೇಲೆ ಹಾರಿದ್ದು, ನಿಯಂತ್ರಣ ತಪ್ಪಿದ ಬೈಕ್‌ ರಸ್ತೆಯ ಪಕ್ಕದಲ್ಲಿ ಬಿದ್ದಿದೆ. ಸ್ಥಳೀಯರು ತಕ್ಷಣ ಇಬ್ಬರನ್ನೂ ಸಿದ್ಧಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶ್ರೇಯಸ್‌ʼನನ್ನು ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆಯೇ ಶ್ರೇಯಸ್‌ ಮೃತಪಟ್ಟಿದ್ದಾರೆ. ಬೈಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತೂದಳ್ಳಿ ಸಮೀಪದ ದೇವರುಗದ್ದೆಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಕುಡಿದ ಮತ್ತಿನಲ್ಲಿ ಇಬ್ಬರು ಕೆಲಸಗಾರರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೇರಳದ ಬಿನು ಪಿಲಿಫ್‌ (45) ಮೃತ ವ್ಯಕ್ತಿಯಾಗಿದ್ದು ಚೂರಿ ಇರಿತದಿಂದ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉದಯ ಕುಮಾರ್‌ (42) ಕೊಲೆ ಆರೋಪಿ. ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆಯಲ್ಲಿ ಕೇರಳದ ಬಿನು ಪಿಲಿಫ್‌ ಹಾಗೂ ಉದಯ ಕುಮಾರ್‌ ಇಬ್ಬರು ಕಳೆದ ಎರಡು ವರ್ಷಗಳಿಂದ ಥೋಮಸ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು ಕೂಲಿ ಹಣದ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಳ್ಳುತ್ತಿದ್ದರು. ಉದಯ ಎಂಬಾತ ತಾನೋಬ್ಬನೇ ಇಲ್ಲಿ ಕೆಲಸ ಮಾಡುತ್ತೇನೆ ನೀನು ಊರಿಗೆ ಹೋಗು ಎಂದು ಬಿನು ಪಿಲಿಫ್ ಬಳಿ ಹೇಳುತ್ತಲೇ ಬಂದಿದ್ದ. ತೋಟದ ಮಾಲೀಕ ಥೋಮಸ್ ಇಬ್ಬರನ್ನು ಹೊಂದಿಕೊಂಡು ಕೆಲಸ ಮಾಡಿಕೊಂಡಿರುವಂತೆ ಸೂಚಿಸಿದ್ದರು. ಶನಿವಾರ ರಾತ್ರಿ 12ಗಂಟೆಯ ವೇಳೆಗೆ ತೋಟದಲ್ಲಿರುವ ಶೆಡ್ಡಿನಲ್ಲಿ ಈ ಇಬ್ಬರು ಕೆಲಸಗಾರರು ಜಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸುದೀರ್ಘಕಾಲ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಈ ಸಾಲಿನಲ್ಲಿ ರೂ.1140 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ ರೂ.6.15 ಕೋಟಿ ಲಾಭಗಳಿಸಿದ್ದು, ಸದಸ್ಯರಿಗೆ ಶೇ.15 ಡೆವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ದುರ್ಗಾಪರಮೇಶ್ವರೀ ಸಭಾಂಗಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ 48ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಂಘವು ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆಗಳಿಸಿಗೊಂಡು ಸಹಕಾರಿ ರಂಗದಲ್ಲಿ ವಿಶಿಷ್ಟ ವಿನೂತನ ಸಾಧನೆಯಿಂದ ಜನಾನುರಾಗಿಯಾಗಿದೆ. ಕಳೆದ 23 ವರ್ಷಗಳಿಂದ ಸತತವಾಗಿ ’ಎ’ ವರ್ಗದ ಆಡಿಟ್ ವರ್ಗೀಕರಣ ಹೊಂದಿದ್ದು, ಸವಾಂಗೀಣ ನಿರ್ವಹಣೆಗೆ ಈ ವರ್ಷ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಕೊಡಮಾಡಿದ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ಅಲ್ಲದೇ ಸಂಘವು ಪ್ರಾಯೋಜಿಸಿರುವ ರೈತಸಿರಿ ರೈತಸೇವಾ ಒಕ್ಕೂಟಕ್ಕೆ ಜಿಲ್ಲಾಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಸೆ.14: ವಿಶ್ವ ರಾಮಕ್ಷತ್ರಿಯ ಮಹಾಸಂಘ ರಿ. ಕುಂದಾಪುರದ ಅಧ್ಯಕ್ಷರಾಗಿ ಎಚ್.‌ ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪಿ. ಎಸ್ ಅವರು ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಭಾನುವಾರ ಕುಂದಾಪುರ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಮಹಾಸಭೆಯ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯಾಧ್ಯಕ್ಷರಾಗಿ ಶ್ರೀನಿವಾಸ ಶೇರುಗಾರ್ ಹೆಬ್ರಿ, ಉಪಾಧ್ಯಕ್ಷರುಗಳಾಗಿ ನಾಗರಾಜ ಕಾಮಧೇನು, ಸೀತಾರಾಮ‌ ಹಳದಿಪುರ, ಮಂಜುನಾಥ ಕೆ.ಎನ್., ವಾಮನ ರಾವ್ ಬೇಕಲ್, ಬಿ.ಎಂ.‌ನಾಥ್, ಕಾರ್ಯದರ್ಶಿಗಳಾಗಿ ಷಣ್ಮುಕ, ಡಿ. ಸತೀಶ್, ಅಣ್ಣಪ್ಪ ನಾಯ್ಕ್, ಗಣಪತಿ ಹೋಬಳಿದಾರ್, ರಶ್ಮಿರಾಜ್ ಕುಂದಾಪುರ, ಕೋಶಾಧಿಕಾರಿಯಾಗಿ ಕರುಣಾಕರ ಯು, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪಿ. ನಾಯ್ಕ್, ಅನಿಲ್ ಹೊಸನಗರ, ಪದ್ಮನಾಭ ಕೊತ್ವಾಲ್, ಮಂಜುನಾಥ ಎನ್, ಲೆಕ್ಕ ಪರಿಶೋಧಕರಾಗಿ ಗಣಪತಿ ಎನ್. ಶೇರುಗಾರ್, ಕಾನೂನು‌ ಸಲಹೆಗಾರರಾಗಿ ಹೂವಯ್ಯ ಶೇರುಗಾರ್, ಸಂಪಾದಕರುಗಳಾಗಿ ರೇಖಾ‌ ಸುದೇಶ್ ಆಯ್ಕೆಯಾಗಿದ್ದಾರೆ. ಒಟ್ಟು 45 ಮಂದಿ ಕಾರ್ಯಕಾರಿ ಮಂಡಳಿಗೆ ನೇಮಕಗೊಂಡಿದ್ದು, ಎಲ್ಲಾ ಪಧಾಧಿಕಾರಿಗಳು ಅವಿರೋಧವಾಗಿ ಆಯ್ಕೆಗೊಂಡರು. /ಕುಂದಾಪ್ರ ಡಾಟ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವ ದಾಖಲೆ ಬರೆದ ಕಲಾವಿದೆ ದಿಕ್ಷಾ ಬ್ರಹ್ಮಾವರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಶನಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ ಹಾಗೂ ಗಣೇಶ್ ನೆಲ್ಲಿಬೆಟ್ಟು ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ಅರ್ಚಕರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಲಕ್ಷ್ಮಣ್ ಜೋಗಿ, ಅಶ್ವಥ್ ಜೋಗಿ, ಮಹಾಬಲ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುರಭಿ ರಿ. ಬೈಂದೂರು ಸಂಸ್ಥೆಯು ರಜತ ಸಂಭ್ರಮದ ಅಂಗವಾಗಿ ರಾಜ್ಯ ಮಟ್ಟದ ʼಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯದ ಕಥೆಗಾರರಿಂದ ಸ್ವತಂತ್ರ ರಚನೆಯ, ಪ್ರಕಟವಾಗಿರದ ಕಥೆಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದ್ದು, ವಿಜೇತರಿಗೆ ಪ್ರಥಮ ರೂ.10,000, ದ್ವೀತಿಯ ರೂ.8,000, ಹಾಗೂ ತೃತೀಯ ರೂ.5,000 ಸಮಾಧಾನಕರ ಬಹುಮಾನ ನೀಡಲಾಗುತ್ತಿದೆ. ನಿಮ್ಮ ಕಥೆಗಳನ್ನು 20 ಸೆಪ್ಟೆಂಬರ್ 2025ರ ಒಳಗೆ ಕಳಹಿಸಬಹುದಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ನಿಯಮಗಳು: ಹೆಚ್ಚಿನ ಮಾಹಿತಿಗಾಗಿ – 9945944269 ಕಥೆಗಳನ್ನು ಕಳುಹಿಸಬೇಕಾದ ವಿಳಾಸಸುಧಾಕರ ಪಿನಿರ್ದೇಶಕರುಸುರಭಿ ರಿ. ಬೈಂದೂರು,ಬೈಂದೂರು ತಾಲೂಕು, ಉಡುಪಿ ಜಿಲ್ಲೆ – 576214

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜೀವನದಲ್ಲಿ ಸಾಧನೆಗೆ ಗಳಿಸಬೇಕಾದೆರೆ ಗುರಿ ಇರಬೇಕು ಆಗ ಮಾತ್ರ ಯಶಸ್ಸು ತಮ್ಮತ್ತ ಮುಖ ಮಾಡಲು ಸಾಧ್ಯ ಎಂದು ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ಕಲಾವಿದೆ ವಿದೂಷಿ ದಿಕ್ಷಾ ಬ್ರಹ್ಮಾವರ ಹೇಳಿದರು. ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ವತಿಯಿಂದ ವಿಶ್ವಸಾಧಕಿ ದಿಕ್ಷಾ ಬ್ರಹ್ಮಾವರ ಇವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರತಿಯೊಬ್ಬರಲ್ಲೂ ಕಲೆ ಇರುತ್ತದೆ ಅದು ಹೊರಸೂಸಲು ಪೋಷಕರ ಪ್ರೋತ್ಸಾಹ ಅತ್ಯಗತ್ಯ ಈ ನಿಟ್ಟಿನಲ್ಲಿ ನನ್ನ ಈ ಸಾಧನೆಗೆ ಪತಿ ಹಾಗೂ ಕುಟುಂಬಿಕರು,ಗುರುಗಳ ಶ್ರೀ ರಕ್ಷೆ ಜತೆಗೆ ನನ್ನ ಪರಿಶ್ರಮ ಈ ಹಂತಕ್ಕೆ ತಲುಪಲು ಸಾಧ್ಯವಾಗಿದೆ ಎಂದು ಪರಿಸರಸ್ನೇಹಿ ಪಂಚವರ್ಣ ಸಂಘಟನೆಯಿಂದ ಸ್ವೀಕರಿಸುವ ಭಾಗ್ಯ ಧನ್ಯತೆಯನ್ನು ಕಾಣುವಂತ್ತಾಗಿದೆ ಎಂದರು. ಈ ಸಂದರ್ಭದಲ್ಲಿ ಕೋಟದ ಅಮೃತೇಶ್ವರೀ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ ಮತ್ತು ಗಣೇಶ್ ನೆಲ್ಲಿಬೆಟ್ಟು ಇವರು ದಿಕ್ಷಾ ಬ್ರಹ್ಮಾವರ ಇವರನ್ನು ಸನ್ಮಾನಿಸಿದರು. ದಿಕ್ಷಾ ಇವರ ಪತಿ ರಾಹುಲ್,ಪಂಚವರ್ಣದ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಎಲ್.ಕೆ.ಜಿ., ಯು. ಕೆ. ಜಿ.ಹಾಗೂ ದ್ವಿಭಾಷಾ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಹುತೇಕ ಪದವೀಧರ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ನೀಡಿದ ಕೊಡುಗೆಗಳನ್ನು ಮಕ್ಕಳಿಗೆ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಅಡಿಗ, ಎಸ್‌ಡಿಎಂಸಿ ಸಮನ್ವಯ ವೇದಿಕೆ ಬ್ರಹ್ಮಾವರ ತಾಲೂಕಿನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉದ್ಯಮಿ ಸುರೇಶ್ ಕುಂದರ್ ಐರೋಡಿ, ಪಟ್ಟಣ ಪಂಚಾಯತ್ ಸಾಲಿಗ್ರಾಮದ ಸದಸ್ಯೆ ಸುಲತಾ ಹೆಗ್ಡೆ, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ್. ಜಿ.,ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮೀನಾರಾಯಣ, ದಾನಿಗಳಾದ ಪ್ರತಾಪ್ ಖಾರ್ವಿ ಹಾಗೂ ಅಮಿತ್ ಕುಮಾರ್. ಸಾಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ,  ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್  ಗಂಗೊಳ್ಳಿ,  ರೋಟರಿ ಕ್ಲಬ್ ಗಂಗೊಳ್ಳಿ,  ಮತ್ತು ಎಸ್. ವಿ. ಹಳೆ ವಿದ್ಯಾರ್ಥಿಗಳ ಸಂಘ  ಟ್ರಸ್ಟ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ  ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್  ಮತ್ತು ಟೆನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ನಾಲ್ಕು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಬಾಲಕರ ಬಾಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಟೆನ್ನಿಕಾಯ್ಟ್ ವಿಭಾಗದಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕರ ಟೆನಿಕಾಯ್ಟ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ   ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು ಎಂದು  ಕಾಲ್ತೋಡು ಸ.ಆ.ಚಿ ವೈದ್ಯಾಧಿಕಾರಿ  ಡಾ. ವೀಣಾ ಕಾರಂತ್ ಹೇಳಿದರು. ಅವರು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – ಅಂಗನವಾಡಿ ಕೇಂದ್ರ ಹೇರಂಜಾಲು, ಆರೋಗ್ಯ ಇಲಾಖೆ – ಉಪಕೇಂದ್ರ ಹೇರಂಜಾಲು ಇವರ ಸಂಯುಕ್ತ ಆಶ್ರಯದಲ್ಲಿಅಂಗನವಾಡಿ ಕೇಂದ್ರ ಹೇರಂಜಾಲಿನಲ್ಲಿ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು. ಪೌಷ್ಟಿಕ ಆಹಾರ ಹೇಗಿರಬೇಕು ಎಂದು ತಿಳಿಸುತ್ತಾ ಅನೇಕ ಔಷಧೀಯ ಸಸ್ಯಗಳನ್ನು ಪರಿಚಯಿಸಿ, ಆಹಾರವಾಗಿ ಹಾಗೂ ಔಷಧವಾಗಿ ಹೇಗೆ ಬಳಸಬೇಕು, ಜೊತೆಯಲ್ಲಿ ನಮ್ಮ ಸಾಂಪ್ರದಾಯಿಕ ತಿನಿಸುಗಳ ಮಹತ್ವವನ್ನ…

Read More