Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.23: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬAಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಮೇ.29 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ. ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧದಿಸಿದಂತೆ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಅಗಷ್ಟ್ 22ರವರೆಗೆ ಇರುವುದಾಗ್ಯೂ ಪ್ರಸ್ತುತ ಮಾನ್ಯ ಹಸಿರು ಪೀಠ ನ್ಯಾಯಾಲಯ, ದಕ್ಷಿಣ ವಲಯ ಚೆನೈ ನ ಆದೇಶದನುಸಾರ ಉಡುಪಿ ಜಿಲ್ಲಾ 07 ಸದಸ್ಯರ ಸಮಿತಿಯು ಜಿಲ್ಲಾ ವ್ಯಾಪ್ತಿಯಲ್ಲಿ ಮಾನ್ಯ ನ್ಯಾಯಾಲಯದ ಆದೇಶದನ್ವಯ ಕ್ರಮ ಕೈಗೊಂಡಿದ್ದು, ಕರಾವಳಿ ನಿಯಂತ್ರಣ…

Read More

ಪ್ರಕೃತಿ ವಿಕೋಪ ಸಂತೃಸ್ತರ ನೆರವಿಗೆ ನಿಂತಿದ್ದ ಬಾಲಕಿ ಈಗ ಅಸಹಾಯಕಿ ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲೂಕು ಹಕ್ಲಾಡಿ ಗ್ರಾಮದ ಬಗ್ವಾಡಿಯ ಈ ಯುವತಿ ಅನಾರೋಗ್ಯದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿ ಇದೀಗ ಪ್ರಥಮ ಶೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ಜುಲೈಯಿಂದ ಮೂರು ತಿಂಗಳು ಹಾಗೂ ಆಕ್ಟೋಬರ್‌ನಿಂದ ಮೂರು ತಿಂಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಗ್ವಾಡಿಯ ರಾಜು ಪೂಜಾರಿ ಮತ್ತು ಸುಜಾತಾ ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಆರ್. (15), ಶಾಲೆಗೆ ತೆರಳದೇ ನೋಟ್ಸ್ ಜೆರಾಕ್ಸ್ ಪ್ರತಿಯನ್ನು ಮಲಗಿಕೊಂಡೇ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.92.64 ಅಂಕಗಳಿಸಿ ಸಾಧನೆಗೈದಿದ್ದಾಳೆ. ಶ್ರಾವ್ಯ ತಂದೆ ತಾಯಿ ಹೆಮ್ಮಾಡಿಯಲ್ಲಿ ಚಿಕ್ಕ ಫಾಸ್ಟ್ ಫುಟ್ ಅಂಗಡಿ ನಡೆಸುತ್ತಿದ್ದಾರೆ. ಅತ್ರಾಡಿ ಮಕ್ಕಳ ಕೂಟ ಶಾಲೆಗೆ ದಾಖಲಾಗಿ ಎಸ್‌ಎಸ್‌ಎಲ್‌ಸಿ ಪೂರೈಸಿದ್ದಾಳೆ. ಎಲ್ಲರಂತೆ ಚೂಟಿಯಾಗಿದ್ದ ಶ್ರಾವ್ಯ ಕರಳು ಸಂಬಂಧಿ ಅನಾರೋಗ್ಯದಿಂದ (ಐಬಿಡಿ ಕ್ರೋಮ್ಸ್) ದೇಹದ ತೂಕ ಕಳೆದುಕೊಂಡಿದ್ದಾಳೆ. ಅತ್ರಾಡಿ ಮಕ್ಕಳ ಕೂಟ ಶಾಲಾ ಸಂಚಾಲಕ ಸುಭಾಸ್ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳ ಸಾರ್ವಜನಿಕರಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು,ಆಶಾ ಕಾರ್ಯಕರ್ತೆಯರು ಸೇರಿದಂತೆ ಅರೋಗ್ಯ ಇಲಾಖೆಯ ಅವಿರತವಾಗಿ ಶ್ರಮಿಸುತ್ತಿದ್ದಾರೆ. 2022ರ ಮಾರ್ಚ್ ನಿಂದ ಈ ಭಾಗದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಅಧಿಕವಾಗುತಿದ್ದು, ಜನವರಿಯಿಂದ ಇದುವರೆಗೂ ಜಿಲ್ಲೆಯಲ್ಲಿ 160 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 120ಕ್ಕೂ ಹೆಚ್ಚು ಈ ವ್ಯಾಪ್ತಿಯಲ್ಲಿಯೇ ಇದೆ. ಈಗಾಗಲೇ ಡೆಂಗ್ಯೂ ಪೀಡಿತರಿಗಾಗಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ಹಾಸಿಗೆಗಳ ವಿಸೇಷ ವಾರ್ಡ್ ಸಿದ್ದಪಡಿಸಿದ್ದು, ಇವುಗಳಲ್ಲಿ 25 ಪುರುಷ,25 ಮಹಿಳೆ ಮತ್ತು 10 ಬೆಡ್ ಗಳನ್ನು ಮಕ್ಕಳಿಗೆ ಮೀಸಲಿಟ್ಟಿದೆ. ಹೆಚ್ಚಿನ ಪ್ರಕರಣಗಳು ವರಿಯಾಗುತ್ತಿರುವ ಮುದೂರು ಮತ್ತು ಜಡ್ಕಲ್ ನಲ್ಲಿ ನಿರಂತರ ನಿಗಾವಹಿಸಲು ಆರೋಗ್ಯಾಧಿಕಾರಿಗಳನ್ನು ಒಳಗೊಂಡ 13 ತಂಡಗಳನ್ನು ರಚಿಸಿದ್ದು, ಈ ತಂಡದ ಸದಸ್ಯರು ಪ್ರತಿದಿನ ಮನೆಮನೆಗೆ ತೆರಳಿ ಡೆಂಗ್ಯೂ ಕುರಿತು ಅರಿವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯ ಭಕ್ತಿಗೆ ಪ್ರಾಧಾನ್ಯತೆ ನೀಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಲ್ಲ ಕಡೆಯೂ ದೇವರ ದೃಷ್ಟಿ ಸಿಸಿ ಕ್ಯಾಮಾರದಂತೆ ಇರುತ್ತದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉದ್ಯಮಿ ಯು. ಬಿ. ಶೆಟ್ಟಿ ಅವರು ನಿರ್ಮಿಸಿಕೊಟ್ಟಿರುವ ನೂತನ ರಾಜಗೋಪುರವನ್ನು ಉದ್ಘಾಟಿಸಿ, ಆಶಿರ್ವಚನ ನೀಡಿ, ದೇವಸ್ಥಾನದಲ್ಲಿ ಸಾನಿಧ್ಯ ಮುಖ್ಯ. ನಿತ್ಯ ಪೂಜೆ, ಅನುಷ್ಟಾನದಿಂದ ಶಕ್ತಿ ಸಂಚಯನವಾಗುತ್ತದೆ. ಆ ಮೂಲಕ ಅನುಗ್ರಹಕಾರಕ ಶಕ್ತಿ ಉಂಟಾಗುತ್ತದೆ. ದೇವಸ್ಥಾನಗಳು ದೋಷ ನಿವಾರಣ ಕೇಂದ್ರಗಳು. ದೋಷವನ್ನು ಸ್ವೀಕರಿಸುವ ಶಕ್ತಿ ದೇವಸ್ಥಾನಗಳಿಗೆ ಇದ್ದಾಗ ಅನುಗ್ರಹವಾಗುತ್ತದೆ ಎಂದರು. ಭಕ್ತರು ಶ್ರೀಮಂತರಾದಾಗ ದೇವಸ್ಥಾನಗಳು ಅಭಿವೃದ್ದಿ ಹೊಂದುತ್ತದೆ. ಅದಕ್ಕೆ ಸಾಕ್ಷಿಯಾಗಿ ಯು.ಬಿ ಶೆಟ್ಟರು ಭಕ್ತಿಯಿಂದ ದುರ್ಗಾಪರಮೇಶ್ವರಿಗೆ ರಾಜಗೋಪುರವನ್ನು ಸಮರ್ಪಿಸಿದ್ದಾರೆ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಹಿಸಿ, ಯು.ಬಿ ಶೆಟ್ಟರ ಈ ಕೊಡುಗೆ ಶಾಶ್ವತವಾಗಿ ಉಳಿಯುತ್ತದೆ. ಈ ದೇವಸ್ಥಾನದ ಅಭಿವೃದ್ದಿಗೆ ಇನ್ನೂ ದಾನಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.22: ಹಣ್ಣುಗಳ ರಾಜನೆಂದೇ ಪ್ರಖ್ಯಾತವಾದ, ಹಿರಿಯರಿಂದ ಕಿರಿಯರಿಂದ ಹಿಡಿದು ಹಿರಿಯರವರೆಗೂ ಬಾಯಯಲ್ಲಿ ನಿರೂರಿಸುವ ವಿವಿಧ ಬಗೆಯ ಮಾವಿನ ಹಣ್ಣಿನ ಮೇಳವನ್ನು ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಗ್ರಾಹಕರಿಗೆ ನೇರವಾಗಿ ರೈತರಿಂದಲೇ ನೈಸರ್ಗಿಕ ತಾಜಾ ಹಾಗೂ ಸ್ವಾದಿಷ್ಟ ಮಾವಿನ ಹಣ್ಣು ಒದಗಿಸುವುದು, ಸಾರ್ವಜನಿಕರಿಗೆ ವಿವಿಧ ಮಾವಿನ ತಳಿಗಳನ್ನು ಪರಿಚಯಿಸುವುದು, ಹವಾಮಾನ ವೈಪರೀತ್ಯದಿಂದಾಗಿ ಮಾವು ಇಳುವರಿ ನಷ್ಟದಲ್ಲಿರುವ ಬೆಳೆಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿ. ಪಂ ಹಾಗೂ ತೋಟಗಾರಿಕೆ ಇಲಾಖೆಯಿಂದ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ಆಶ್ರಯದಲ್ಲಿ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 21ರಿಂದ 23ರವರೆಗೆ ಆಯೋಜಿಸಿದೆ. ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್ ಸಹಿತ ನಾನ ತಳಿಯ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ 21: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಜನಾ ವಿ ಶೆಟ್ಟಿ ಮತ್ತು ಸನ್ನಿಧಿ ಕುಲಾಲ್ 625 ಕ್ಕೆ 624 ಅಂಕ ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ 32 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಈ ಪೈಕಿ 13 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. 10 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಬೋಧಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ.20: ತಾಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜಗೋಪುರ ಸಮರ್ಪಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಶತಚಂಡಿಕಾ ಯಾಗದ ಪೂರ್ಣಾಹುತಿ ಶುಕ್ರವಾರ ದೇವಳದ ಆವರಣದಲ್ಲಿ ಜರುಗಿತು. ಪೂರ್ಣಾಹುತಿಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಿ ಎಲ್ಲರ ಕಷ್ಟಗಳನ್ನು ದೂರಮಾಡಿ ಸು:ಖ ಶಾಂತಿಯನ್ನು ನೀಡಲಿ. ಯು.ಬಿ. ಶೆಟ್ಟಿ ಅವರು ಯಾವುದೇ ಅಪೇಕ್ಷೆ ಇಲ್ಲದೇ ದೇವಿಯ ಸೇವೆಯನ್ನು ಮಾಡುತ್ತಿದ್ದಾರೆ. ಈ ಪವಿತ್ರ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷ ತಂದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲರಿಗೂ ದೇವಿ ಒಳ್ಳೆಯದನ್ನು ಮಾಡಲಿ ಎಂದರು. ಕಾರ್ಯಕ್ರಮಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಯು.ಬಿ. ಶೆಟ್ಟಿ ದಂಪತಿಗಳು ಹಾಗೂ ದೇವಳದ ಅರ್ಚಕರು ಸನ್ಮಾನಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಶಾಲೆಯ ವಿದ್ಯಾರ್ಥಿ ಧವನ್ ಟಿ. ಪೂಜಾರಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 (92.8%) ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಸಂಸ್ಕತದಲ್ಲಿ 125, ಇಂಗ್ಲಿಷ್ 98, ಕನ್ನಡ 100, ಗಣಿತ 86, ವಿಜ್ಞಾನ 75, ಸಮಾಜ ವಿಜ್ಞಾನದಲ್ಲಿ 76 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತ ಯಡ್ತರೆಯ ದುರ್ಗಾಂಬಾ ಪ್ರಿಂಟರ್ಸ್ ಮಾಲಿಕ ತಿಮ್ಮಪ್ಪ ಪೂಜಾರಿ ಹಾಗೂ ಅಂಬಿಕಾ ದಂಪತಿಗಳ ಪುತ್ರನಾಗಿದ್ದಾನೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.19: ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿ ಬಸ್ಸು ತಂಗುದಾಣದ ಸಮೀಪದಲ್ಲಿರುವ ಉಪಾಧ್ಯಾಯ ಕಾಂಪ್ಲೆಕ್ಸ್‌ನಲ್ಲಿನ ಶ್ರೀ ದುರ್ಗಾ ಜ್ಯುವೆಲ್ಲರ‍್ಸ್‌ನ ಶೆಟರ್ ಮುರಿದು ಚಿನ್ನ-ಬೆಳ್ಳಿ ದೋಚಲು ಯತ್ನಿಸಿದ ಕಳ್ಳರ ಕೃತ್ಯ ಹಾಗೂ ಮನೆ ಮನೆಗೆ ಪತ್ರಿಕೆ ಹಾಕುವ ಹುಡುಗನ ಸಮಯ ಪ್ರಜ್ಞೆಯಿಂದ ಲಕ್ಷಾಂತರ ಮೌಲ್ಯದ ಭಾರೀ ಕಳ್ಳತನ ತಪ್ಪಿದಂತಾಗಿದೆ. ಬುಧವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಕುಂಭಾಸಿ ಕಡೆಯಿಂದ ಶೀಪ್ಟ್ ಕಾರಿನಲ್ಲಿ ಬಂದ ದರೋಡೆಕೋರರ ತಂಡ ಬೀಜಾಡಿ ಐಸಿರಿ ಮೊಬೈಲ್ ಶಾಪ್‌ನ ಶೆಟರ್ ಮುರಿದು 15 ಸಾವಿರ ನಗದು, ಸುಮಾರು 25 ಸಾವಿರ ಬೆಲೆ ಬಾಳುವ ಮೊಬೈಲ್, 30 ಸಾವಿರ ಮೌಲ್ಯದ ಮೊಬೈಲ್ ಬಿಡಿಭಾಗಗಳನ್ನು ಕಳವು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಬೀಜಾಡಿ ಅಜಯ ದಿನ ನಿತ್ಯ ತನ್ನ ಕಾಯಕದಂತೆ ಮನೆ ಮನೆಗೆ ಪೇಪರ್ ಹಾಕಲು ಬೈಸಿಕಲ್‌ನಲ್ಲಿ ಹೋಗುವಾಗ ಮನೆಯಿಂದ ಕೆಲವೇ ದೂರದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಮಾರಕಾಯುಧಗಳನ್ನು ಹಿಡಿದು ನಿಂತ ವ್ಯಕ್ತಿ ಹಾಗೂ ಮೊಬೈಲ್ ಶಾಪ್…

Read More