ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಪೂರ್ವಜರು ನಮಗಾಗಿ ಕಟ್ಟಿದ ಇತಂಹ ಕೆರೆಗಳ ಸಂರಕ್ಷಣೆ ನಮ್ಮಿಂದಲೇ ಆಗಬೇಕು. ಇತಂಹ ಆನೇಕ ಕೆರೆಗಳಲ್ಲಿ ನೀರು ಸಂಗ್ರಹದ ಸಾಮರ್ಥ್ಯ ಕಳೆದುಕೊಂಡು ವಿನಾಶದ ಅಂಚಿಗೆ ಕೆರೆಗಳು ತಲುಪುತ್ತಿದೆ. ಈಗಾಲಾದರೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನದಲ್ಲಿ ನೀರಿಗಾಗಿ ನಾನಾ ರೀತಿಯ ಹೋರಾಟಗಳನ್ನು ನಾವುಗಳು ಎದುರಿಸ ಬೇಕಾಗುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ, ಕನ್ನುಕೆರೆ ಕೆರೆಯ ಅಭಿವೃದ್ಧಿ ಮಂಡಳಿ ಕನ್ನುಕೆರೆ ಸಂಯುಕ್ತ ಆಶ್ರಯದಲ್ಲಿ ತೆಕ್ಕಟ್ಟೆ ಗ್ರಾ.ಪಂ., ಕನ್ನುಕೆರೆ ಫ್ರೆಂಡ್ಸ್ ಕನ್ನುಕೆರೆ, ರೋಟರಿ ಕ್ಲಬ್ ತೆಕ್ಕಟ್ಟೆ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕನ್ನುಕೆರೆ ಇವರ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮಕೆರೆ ಅಭಿವೃದ್ಧಿ ಯೋಜನೆ ಅಡಿ ಕನ್ನುಕೆರೆ ಕೆರೆಯ ಪುನಶ್ಚೇತನ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಸಮಾಜ ಸೇವಕ ಮಲ್ಯಾಡಿ ಶಿವರಾಮ್ ಶೆಟ್ಟಿ, ಧ.ಗ್ರಾ ಯೋಜನೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್ನ 2021-22ನೇ ಸಾಲಿನ ದ್ವೀತಿಯ ಹಂತದ ಗ್ರಾಮಸಭೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಸಭಾಭವನದಲ್ಲಿ ಜರುಗಿತು. ಮೀನುಗಾರಿಕಾ ಸಹಾಯಕ ನಿರ್ದೇಶಕಿ ಸುಮಲತ ಗ್ರಾಮಸಭೆಯ ನೋಡೆಲ್ ಅಧಿಕಾರಿಯಾಗಿ ಗ್ರಾಮಸಭೆ ನಡೆಸಿದರು. ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮಾ, ಕಂದಾಯ ಇಲಾಖೆ ವಿಎ ಆನಂದ, ಗೋಪಾಡಿ ಮೆಸ್ಕಾಂ ಇಲಾಖೆ ಮಂಜುನಾಥ್, ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ ಶೆಟ್ಟಿ, ಶಿಕ್ಷಣ ಇಲಾಖೆಯ ಹೊಸ ಬಡಾಕೆರೆ ಶಾಲಾ ಮುಖ್ಯೋಪಾಧ್ಯಾಯ ಪದ್ಮಾವತಿ ಕೆ, ಕೋಟೇಶ್ವರ ಕೆಪಿಎಸ್ ಮುಖ್ಯ ಶಿಕ್ಷಕ ಯೋಗಿ ನಾಯ್ಕ್ ಇಲಾಖಾವರೂ ಮಾಹಿತಿ ನೀಡಿದರು. ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಗೊಲ್ಲ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ಜಯಲಕ್ಷ್ಮೀ, ಲೋಲಾಕ್ಷಿ ಎನ್ ಕೋತ್ವಾಲ್, ಲೋಕೇಶ್, ಚಂದ್ರಮೋಹನ್, ಪುಟ್ಟಿ, ನೇತ್ರಾವತಿ, ರಾಜಶೇಖರ ಶೆಟ್ಟಿ, ವಿಶಾಲಾಕ್ಷಿ ಶೆಟ್ಟಿಗಾರ್, ಸುರೇಶ್ ದೇವಾಡಿಗ, ರೊಯ್ಸಿನ್ ಡಿ ಮೆಲ್ಲೋ, ಲತಾ ಶೇಖರ ಮೊಗವೀರ, ಶೋಭಾ ಶೆಟ್ಟಿ, ರಾಘವೇಂದ್ರ ಪೂಜಾರಿ, ನಾಗರಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಮೂಡುವಾರಣಾಸಿ ಚೇರ್ಕಾಡಿಯಲ್ಲಿ ಪ್ರೇರಣ ಸಾಂಸ್ಕೃತಿಕ ಕಲಾ ಟ್ರಸ್ಟ್ ವಾರ್ಷಿಕೋತ್ಸವ, ಪ್ರೇರಣ ಪ್ರಶಸ್ತಿ ಸೋಮವಾರ ಜರುಗಿತು. ಬ್ರಹ್ಮಾವರ ತಾಲೂಕು ತಹಶಿಲ್ದಾರ್ ರಾಜಶೇಖರ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮಲ್ಲಿ ಸಮೂಹ ನಾಯಕತ್ವದ ಕೊರತೆ ಇದೆ. ಅದು ಸಂಘ ಸಂಸ್ಥೆಯಾಗಿರಬಹುದು ಅಥವಾ ವ್ಯಕ್ತಿಯಲ್ಲಿ ಕೂಡಾ ಇರಬಹುದು ಸಾಮೂಹಿಕ ನಾಯಕತ್ವಕ್ಕೆ ಗ್ರಾಮೀಣ ಭಾಗದ ಇಂತಹ ಕಲಾ ಸಂಘಟನೆಯಿಂದ ಆರಂಭಗೊಂಡು ಊರಿಗೆ ದೇಶಕ್ಕೆ ಮಾದರಿಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ವಾಸ್ತು ಮತ್ತು ಜಲ ತಜ್ಞ ಡಾ ಅನಂತ ನಾಯ್ಕ್ ಮತ್ತು ಬ್ರಹ್ಮಾವರದಿಂದ ಕಾಲು ನಡಿಗೆಯಿಂದ ಜಮ್ಮು ಕಾಶ್ಮಿರಕ್ಕೆ ಹೋಗಿ ಇಲ್ಲಿನ ಜನಪದ ಕಲೆ ಹುಲಿ ಕುಣಿತವನ್ನು ನೀಡಿದ ಹರ್ಷೆಂದ್ರ ಆಚಾರ್ಯ ರನ್ನು ಪ್ರೇರಣ ಪ್ರಶಸ್ತಿ ೨೦೨೧ ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಅರುಣ್ ಕುಮಾರ್ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚೇರ್ಕಾಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಸದಸ್ಯರಾದ ಕಮಲಾಕ್ಷ ಹೆಬ್ಬಾರ, ಮಧುರ ನಾಯ್ಕ್, ಗೋಪಿ ಕೆ ನಾಯ್ಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ಅವರು ನೇಮಕಗೊಂಡಿದ್ದಾರೆ. ರಾಗಿಣಿ ಅವರು ಜೀವಶಾಸ್ತ್ರ ವಿಭಾಗದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದು, ಸಿಇಟಿ/ನೀಟ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಕುಂದಾಪುರ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಅವರ ಸಮ್ಮುಖದಲ್ಲಿ ಪ್ರಭಾರ ಪ್ರಾಂಶುಪಾಲರಾದ ಮಮತಾ ರೈ ಇವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಏಳನೇ ವಾರ್ಷಿಕೋತ್ಸವ ಹಾಗೂ ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ರವರ ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಕುಂದಾಪುರದ ಮಹಿಳಾ ತಂಡದವರು ವಿಷ್ಣು ಸಹಸ್ರನಾಮ ಪಠಿಸಿದರು. ಇದೇ ಸಂದರ್ಭದಲ್ಲಿ ಸುಜೀರ್ ಲಕ್ಷ್ಮೀನಾರಾಯಣ ನಾಯಕ್, ಉಪಾಧ್ಯಕ್ಷರು, ಟಾಟಾ ಮೋಟರ್ ಫೈನಾನ್ಸ್, ಮುಂಬಯಿ ಇವರು ಅಕಾಡೆಮಿಗೆ ದೇಣಿಗೆಯಾಗಿ ನೀಡಿದ ಸೋಲಾರ್ ಲೈಟ್ ನ್ನು ರಘುನಾಥ್ ನಾಯಕ್, ಮಾಜಿ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಕೊಂಕಣ್ ರೈಲ್ವೆ ಇವರು ಉದ್ಘಾಟಿಸಿರು. ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಕಲಾವಿದರ ಪ್ರಾರ್ಥನೆಯೊಂದಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರುರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಪ್ರಾರಂಭವಾಯಿತು. ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ. ವರದೇಶ್ ಹಿರೇಗಂಗೆ, ಮುಖ್ಯಸ್ಥರು, ಗಾಂಧಿಯನ್ ಸೆಂಟರ್ ಫಾರ್ ಫಿಲೋಸೊಫಿಕಲ್ ಆಟ್ಸ್ ಆಂಡ್ ಸೈನ್ಸ್, ಮಾಹೆ, ಮಣಿಪಾಲ್ ಇವರು ದೀಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.23: ಆಟಿಸಂ ಎಂಬುವುದು ಒಂದು ಖಾಯಿಲೆಯಲ್ಲ ಇದೊಂದು ಸ್ವಭಾವ. ಇಂತಹ ಹಠ ಸ್ವಭಾವದ ಮಕ್ಕಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಪ್ರಸ್ತುತ ಸಮಾಜದಲ್ಲಿ ಬಹಳ ಅನಿವಾರ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್ಟ್ ವೈ. ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಟಿಸಂ ಸೊಸೈಟಿ ಆಫ್ ಉಡುಪಿ ಇದರ ಸಂಯುಕ್ತ ಆಶ್ರಯದೊಂದಿಗೆ ಅಂಗನವಾಡಿ ವೇಲ್ವಿಚಾರಕರಿಗೆ ಮತ್ತು ಆಶಾ ಕಾರ್ಯಕರ್ತ ಮೇಲ್ವಿಚಾರಕರಿಗೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ನಡೆದ ಸ್ವಲೀನತೆ ಜಾಗೃತಿ ಕಾರ್ಯಗಾರ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 58 ಮಕ್ಕಳಿಗೆ ಆಟಿಸಂ ಇರುವ ಪಟ್ಟಿ ಸಿಕ್ಕಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಸರ್ವೆ ಮಾಡುವ ಮೂಲಕ ಮುಂದೆ ಆ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬಹುದು ಎಂಬ ಯೋಜನೆ ಕೈಗೊಳ್ಳಬಹುದು , ಆಟಿಸಂ ಎಂಬುವುದು ಮಕ್ಕಳ ಮೇಲೆ ಪರಿಣಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.23: ಭಾರತದ ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶಗಳಿದ್ದು, ಪ್ರತಿ ವರ್ಷ 10000 ದಿಂದ 20000 ದ ವರೆಗೆ ಚಲನಚಿತ್ರ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಅಶೋಕ್ ಕಶ್ಯಪ್ ಹೇಳಿದರು. ಅವರು ಇಂದು ಮಣಿಪಾಲದ ಎಮ್.ಐ.ಸಿ ಆಡಿಟೋರಿಯಂನಲ್ಲಿ, ಕರ್ನಾಟಕ ಚಲಚಿತ್ರ ಅಕಾಡೆಮಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ನಡೆದ 5 ದಿನಗಳ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಹಿಂದೆ ಚಲನಚಿತ್ರ ಉದ್ಯಮದಲ್ಲಿ ಪರಿಣಿತರನ್ನು ತಯಾರುಮಾಡಲು ಹಲವು ವರ್ಷಗಳೇ ಬೇಕಿದ್ದವು ಆದರೆ ಇಂದು ತಾಂತ್ರಿಕತೆ ಮತ್ತು ಈ ಕ್ಷೇತ್ರದಲ್ಲಿ ಅನುಭವ ಹೊಂದಿದ ಪರಿಣಿತರಿಂದ ತರಬೇತಿಗಳು ದೊರೆಯುತ್ತಿರುವುದರಿಂದ ಉತ್ತಮ ಪರಿಣಿತರು ಸೃಷ್ಟಿಯಾಗುತ್ತಿದ್ದಾರೆ ಅಲ್ಲದೆ ಹಲವು ಕಾಲೇಜುಗಳು ಮತ್ತು ವಿಶ್ವ ವಿದ್ಯಾಲಯಗಳು ಇದನ್ನು ಒಂದು ಕೋರ್ಸ್ ಆಗಿ ಭೋಧಿಸುತ್ತಿವೆ ಎಂದರು. ಚಲನಚಿತ್ರ ನಿರ್ಮಾಣದಲ್ಲಿ ಅನಿಮೇಶನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 1982ರಲ್ಲಿ ಸ್ಥಾಪನೆಯಾದ ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆಯು ನಲವತ್ತು ವರ್ಷಗಳುದ್ದಕ್ಕೆ ಸೇವೆ, ಸಂಸ್ಕೃತಿ ಮನೋಲ್ಲಾಸ ಸಂಬಂಧಿ ಚಟುವಟಿಕೆಗಳನ್ನು ನಡೆಸುತ್ತ ನಿರಂತರ ಕ್ರಿಯಾಶೀಲವಾಗಿ ಮುಂದುವರಿಯುತ್ತಿದೆ. ಎಲ್ಲಕ್ಕಿಂತ ಮಿಗಿಲಾಗಿ ಅದರ ಸದಸ್ಯರು ಗುರಿಸಾಧನೆಯ ಕಡೆಗೆ ದೃಷ್ಟಿ ಇರಿಸಿಕೊಂಡು ಒಂದಾಗಿ ಉಳಿದುಕೊಂಡಿದ್ದಾರೆ ಎಂದು ಅದರ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಸೋಮವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಸಂಸ್ಥೆಯ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮರವಂತೆ ಗ್ರಾಮ ಪಂಚಾಯಿತಿಯಲ್ಲಿ 25 ವರ್ಷ ದಕ್ಷತೆಯಿಂದ ಕರ ಸಂಗ್ರಾಹಕ ಆಗಿ ದುಡಿದು ಈಗ ಸರಕಾರ ಅಧೀನದ ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿಹೊಂದಿ, ಕೋಟ ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಳ್ಳುವ ಮೂಲಕ ಈ ಅವಕಾಶ ಗಿಟ್ಟಿಸಿಕೊಂಡ ಜಿಲ್ಲೆಯ ಮೊದಲ ಕೊರಗ ಸಮುದಾಯದ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾದ ಶೇಖರ ಮರವಂತೆ ಅವರನ್ನು ಸನ್ಮಾನಿಸಲಾಯಿತು. ಬೈಂದೂರಿನ ಲಾವಣ್ಯ ಕಲಾವಿದರು ರಂಗ ಸಂಗೀತ ಪ್ರಸ್ತುತಪಡಿಸಿದರು. ಸಾಧನಾ ಸದಸ್ಯರು ಕುಟುಂಬದೊಂದಿಗೆ ಭಾಗಿಯಾಗಿದ್ದರು. ಜಿಲ್ಲಾ ಪಂಚಾಯಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿ ಅರಮ ದೇವಸ್ಥಾನದ ಬಳಿ ಹಾಗೂ ಮೊವಾಡಿ ಬ್ರಿಡ್ಜ್ ಸಮೀಪ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆಗೆ ನಡೆಸುತ್ತಿದ್ದ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 6 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವ ದೂರಿನ ಮೇರೆಗೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಸ್ವತಃ ದೋಣಿಯ ಮೂಲಕ ತೆರಳಿ ದಾಳಿ ನಡೆಸಿದ್ದಾರೆ. ತ್ರಾಸಿ, ಮೊವಾಡಿ, ಗುಡ್ಡೆಯಂಗಡಿಯ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಂದರ್ಭದಲ್ಲಿ ನಾಡ ಬಡಾಕೆರೆ ವ್ಯಾಪ್ತಿಯ ಕೆಲವೆಡೆ ಅನಧಿಕೃತ ಮರಳು ದಂಧೆ ನಡೆಸುವವರು ಮರಳು ಗಣಿಗಾರಿಕೆಗೆ ಬಳಸುವ ದೋಣಿಗಳನ್ನು ಹಾಗೂ ಇನ್ನಿತರ ಪರಿಕರಗಳನ್ನು ನೀರಿನಲ್ಲಿ ಮುಳುಗಿಸಿ ಪರಾರಿಯಾಗಿದ್ದಾರೆ. ಅನಧಿಕೃತ ಮರಳುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಸೋಮವಾರ ಮೊವಾಡಿ ಸಮೀಪದಲ್ಲಿ ಯಾಂತ್ರೀಕೃತ ಮರಳುಗಾರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಯಾಂತ್ರೀಕೃತ ಮರಳುಗಾರಿಕೆಯಿಂದ ತಮ್ಮ ಅಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಕಲಾ ಸಂಸ್ಥೆ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ‘4 ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ – ರಂಗ ಸುರಭಿ 2022’ ಮಾರ್ಚ್ 25 ರಿಂದ 28 ರವರೆಗೆ ಪ್ರತಿದಿನ ಸಂಜೆ ಗಂಟೆ 6ಕ್ಕೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ನಾಟಕೋತ್ಸವದಲ್ಲಿ ಮಾರ್ಚ್ 25ರ ಶುಕ್ರವಾರ ಥಿಯೇಟರ್ ಕಲೆಕ್ಟಿವ್ ಬೆಂಗಳೂರು ಅಭಿನಯದ, ಸ್ಲಾವೋಮಿರ್ ಮ್ರೋಜೆಕ್ರ ಚಾರ್ಲಿ ಆಧಾರಿತ ನಾಟಕ ’ಕೋವಿಗೊಂದು ಕನ್ನಡಕ’ ನಾಟಕ (ರೂಪಾಂತರ ಮತ್ತು ನಿರ್ದೇಶನ: ವೆಂಕಟೇಶ್ ಪ್ರಸಾದ್) ಪ್ರದರ್ಶನಗೊಳ್ಳಲಿದೆ. ಮಾರ್ಚ್ 26ರ ಶನಿವಾರ ನಂದಗೋಕುಲ ಮಂಗಳೂರು ಅಭಿನಯದ ನಾಟಕ ‘ಉಡಿಯೊಳಗಣ ಕಿಚ್ಚು’ (ರಂಗಪಠ್ಯ ಮತ್ತು ನಿರ್ದೇಶನ : ಪ್ರಶಾಂತ್ ಉದ್ಯಾವರ) ಪ್ರದರ್ಶನ, ಮಾರ್ಚ್ 27ರ ಭಾನುವಾರ ಕೆ.ವಿ. ಸುಬ್ಬಣ್ಣ ರಂಗಸಮೂಹ ಹೆಗ್ಗೋಡು ಅಭಿನಯದ ಕಂಪೆನಿ ನಾಟಕ ‘ದೇವದಾಸಿ’ (ರಚನೆ: ಕೆ. ಹಿರಿಯಣ್ಣಯ್ಯ, ವಿನ್ಯಾಸ/ಸಂಗೀತ/ನಿರ್ದೇಶನ: ಡಾ| ಪಂಡಿತ ಕವಿ ಗವಾಯಿಗಳ ಶಿಷ್ಯ ಪರಶುರಾಮ ವಿ. ಗುಡ್ಡಳ್ಳಿ) ಪ್ರದರ್ಶನಗೊಳ್ಳಲಿದ್ದು, ಮಾರ್ಚ್ 28ರ ಸೋಮವಾರ ಸಂಗಮ ಕಲಾವಿದೆರ್…
