ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ ರಂಗಭೂಮಿಯ ಕಲಾವಿದರು ಜೊತೆ ಸೇರುವ ಬದುಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ಯೋಚಿಸುವ, ನಮ್ಮ ಹಾಗೂ ಜನರ ಸಮಸ್ಯೆಗಳನ್ನು ಹೇಳಿ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಲಾವಣ್ಯ ಬೈಂದೂರು ವತಿಯಿಂದ ಐದು ದಿನಗಳ ಕಾಲ ನಡೆಯುವ ರಂಗಪಂಚಮಿ-2022 ನಾಟಕೋತ್ಸವದ ಮೂರನೇ ದಿನದ ಸಭಾಧ್ಯಕ್ಷತೆವಹಿಸಿ ಮಾತನಾಡಿದರು. ಪ್ರಾದೇಶಿಕ ಭಾಷಾ ಸೊಗಡನ್ನು ರಂಗಭೂಮಿಯಲ್ಲಿ ಅಳವಡಿಸಿಕೊಂಡರೆ ಸುಲಭವಾಗಿ ಜನರ ಮನಸ್ಸನ್ನು ತಟ್ಟಲು ಸಾಧ್ಯವಿದೆ ಎನ್ನುವುದನ್ನು ಲಾವಣ್ಯ ತೋರಿಸಿಕೊಟ್ಟಿದೆ ಎಂದರು. ಬೈಂದೂರು ಕಸಾಪ ಅಧ್ಯಕ್ಷ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಮಾತನಾಡಿ ಕಲೆ ಮತ್ತು ಸಾಹಿತ್ಯವನ್ನು ಜೀವಂತವಾಗಿಡಲು ಇಂತಹ ಉತ್ಸವಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 25 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದಾರೆ. 16 ವರ್ಷ ಪ್ರಾಯದ ಬಾಲಕಿಯನ್ನು ಆಕೆಯ ಚಿಕ್ಕಪ್ಪ (ಸಂತ್ರಸ್ತೆ ತಾಯಿಯ ತಂಗಿ ಗಂಡ) ತನ್ನ ಮನೆಯಲ್ಲಿ ಆಕೆಯ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆಕೆ 7 ತಿಂಗಳ ಗರ್ಭವತಿಯಾದಾಗ ಘಟನೆ ಕುಟುಂಬಿಕರ ಗಮನಕ್ಕೆ ಬಂದಿದ್ದು ವಿಚಾರಿಸಿದಾಗ ಕೂಲಿ ಕೆಲಸ ಮಾಡಿಕೊಂಡಿದ್ದ ಚಿಕ್ಕಪ್ಪನೇ ಈ ಕೃತ್ಯ ಎಸಗಿರುವುದು ತಿಳಿದು ಬಂದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಕೈಕಾಲಿಗೆ ಬಿದ್ದು ಪ್ರಕರಣ ರಾಜಿ ಮೂಲಕ ಇತ್ಯರ್ಥ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.11: ಮುಂಬರುವ ದಿನಗಳಲ್ಲಿ ಬೀಚ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಲಿದೆ. ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಿಆರ್ಝಡ್ ನಿಯಮಾವಳಿಗಳು ಬದಲಾಯಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ನೂತನವಾಗಿ ನಿರ್ಮಿಸಿರುವ ಡಾ. ವಿ.ಎಸ್.ಆಚಾರ್ಯ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ:ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದೆ. 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. 200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತವಾದ ತಾಯಿ ಮಕ್ಕಳ ಆಸ್ಪತ್ರೆಯ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮೀನುಗಾರಿಕೆ, ಪ್ರವಾಸೋದ್ಯಮಕ್ಕೆ ಸದಾ ಪ್ರೋತ್ಸಾಹ ನೀಡಲಿದ್ದು, ಕರಾವಳಿ ಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಸದ್ಗುರು ನಿತ್ಯಾನಂದ ನಾಗರಾಜ ಟ್ರಸ್ಟ್’ನ 63ನೇ ವಾರ್ಷಿಕೋತ್ಸವ ಕಾರ್ಯಕ್ರಮಗಳು ಎಪ್ರಿಲ್ 16 ಹಾಗೂ 17ರಂದು ಶ್ರೀ ಸ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ ಜರುಗಲಿದೆ. ಎಪ್ರಿಲ್ 15ರ ಶುಕ್ರವಾರ ಬೆಳಿಗ್ಗೆ ಶ್ರೀ ನಿತ್ಯಾನಂದ ಗುರು ಸನ್ನಿಧಿಯಲ್ಲಿ ದ್ವಾದಶ ನಾರೀಕೇಳ ಗಣಯಾಗ ಮತ್ತು ನವಕುಂಭ ಸ್ವಪನಾಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಎಪ್ರಿಲ್ 16ರ ಶನಿವಾರ ಸಂಜೆ ಶ್ರೀ ಗುರು ನಿತ್ಯಾನಂದ ಸನ್ನಿಧಿಯಲ್ಲಿ ಕಲಶಸ್ಥಾಪನಕಲ್ಪೋಕ್ತ ಪೂಜೆ ಮತ್ತು ಶ್ರೀ ಗುರು ಮಿಮಲಾನಂದ ಸ್ವಾಮೀಜಿಯವರ ಅಭಿಷೇಕ ಪೂಜೆ ಹಾಗೂ ಎಪ್ರಿಲ್ 17ರ ಆದಿತ್ಯವಾರ ಶ್ರೀ ನಾಗದೇವರ ಸನ್ನಿಧಿಯಲ್ಲಿ ಪಂಚವಿಂಶತಿ ಕಲಶಸ್ಥಾಪನಾ ಸ್ಥಪನಾಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜಾ, ಆಶೀರ್ವಾದ, ಪ್ರಸಾದ ವಿತರಣೆ ವಿಶೇಷ ಪೂಜೆ:ಎಪ್ರಿಲ್ 16ರ ಶನಿವಾರ ಬೆಳಿಗ್ಗೆ ಶ್ರೀ ಸತ್ಯನಾರಾಯಣ ವೃತೋದ್ಯಾಪನಾಂಗ ದಶವಿಧಿಸ್ನಾನ, ಶ್ರೀ ಗುರುಗಣಪತಿ ದೇವತಾ ಪ್ರಾರ್ಥನಾಪೂರ್ವಕ ಪುಣ್ಯಹ, ನಾಂದಿ, ಯಮುನಾ ಪೂಜೆ, ಸೌಪರ್ಣಿಕಾ ನದಿಯಿಂದ ವಾದ್ಯಘೋಷಗಳೊಂದಿಗೆ ಗಂಗೆ ತರುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದಿನಾಂಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.11: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರವರ ಪುತ್ಥಳಿ ಅನಾವರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿಎಂ ಮಾರ್ಗದರ್ಶಿ ಯೋಜನೆಯ ಮೂಲಕ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು, ಪರೀಕ್ಷಾ ವಿಧಾನ, ಹಿಂದಿನ ಪ್ರಶ್ನೆ ಪತ್ರಿಕೆಗಳನ್ನು ಸಾಫ್ಟ್ವೇರ್ನಲ್ಲಿ ಅಳವಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಎ.11: ಕರ್ನಾಟಕ ಸಂಘ ಕತಾರ್ (ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿನ ಭಾರತೀಯ ಸಾಂಸ್ಕ್ರತಿಕ ಕೇಂದ್ರದ ಅಂಗಸಂಸ್ಥೆ) 2022-23ನೇ ಸಾಲಿಗೆ ತನ್ನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿತು. ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಕರ್ನಾಟಕ ಸಂಘ ಕತಾರ್ನ 13ನೇ ಅಧ್ಯಕ್ಷರಾಗಿ ಮಹೇಶ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು. ಮಹೇಶ್ ಗೌಡ ಅವರು ಮೂಲತಃ ಕರ್ನಾಟಕದ ಬೆಂಗಳೂರಿನವರು. ಕತಾರ್ನಲ್ಲಿರುವ ಭಾರತೀಯ ಸಮುದಾಯದ ಅತ್ಯಂತ ಸಕ್ರಿಯ ಸದಸ್ಯರಲ್ಲಿ ಒಬ್ಬರು. ವಿವಿಧ ಸಂಘಗಳ ಅಡಿಯಲ್ಲಿ ಕೆಲಸ ಮಾಡಿರುವ ಇವರು ಸಮುದಾಯ ಸೇವೆಯಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಅವರು ಭಾರತೀಯ ಸಮುದಾಯದ ಬೆನೊವಾಲೆಟ್ ಫ್ಯೂರೋಮ್ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದರು. ಕರ್ನಾಟಕ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿ ಸಹ ಸೇವೆ ಸಲ್ಲಿಸಿದ್ದಾರೆ. 2022-23ನೆ ಸಾಲಿನ ಸಮಿತಿಗೆ ಆಯ್ಕೆಯಾದ ಇತರ ಸದಸ್ಯರು: ಸಂದೀಪ್ ಡಿ ಎಸ್ -ಉಪಾಧ್ಯಕ್ಷರುಪ್ರದೀಪ್ ಕುಮಾರ್ ದಿಲೀಪ್- ಪ್ರಧಾನ ಕಾರ್ಯದರ್ಶಿರಮೇಶ ಕೆ.ಎಸ್-ಖಜಾಂಚಿಸುಶೀಲಾ ಸುನಿಲ್ -ಸಾಂಸ್ಕೃತಿಕ ಕಾರ್ಯದರ್ಶಿಮಂಜೋತ್ ಸುರೇಶ್- ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಸೇವಿಯಸ್ ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ಪ್ರಾಯೋಜಿತ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಇಲೆವೆನ್ ಅಪ್ ಕೋಟ ಮತ್ತು ಅಂಶು ಕೋಟೇಶ್ವರ ತಂಡ ಪ್ರಶಸ್ತಿ ಜಯಿಸಿದೆ. ಫೈನಲ್ ಪಂದ್ಯದಲ್ಲಿ ಅಭಿ ಕೋಟ ಸರ್ವಾಂಗೀಣ ಆಟದ ಫಲವಾಗಿ, ಪಾರಂಪಳ್ಳಿ ಕ್ರಿಕೆಟರ್ಸ್ ತಂಡ ಸೋಲಿಸಿ ಪ್ರಥಮ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಫೈನಲ್ ಪಂದ್ಯಶ್ರೇಷ್ಟ ಮತ್ತು ಸರಣಿ ಶ್ರೇಷ್ಠ ಅಭಿ ಕೋಟ, ಬೆಸ್ಟ್ ಬ್ಯಾಟ್ಸ್ಮನ್ ಪುಂಡಲೀಕ ಸಾಸ್ತಾನ ಮತ್ತು ಬೆಸ್ಟ್ ಬೌಲರ್ ಪ್ರಶಸ್ತಿ ಯೋಗೀಶ್ ಕೋಟ ತನ್ನದಾಗಿಸಿಕೊಂಡರು. ಪಂದ್ಯಶ್ರೇಷ್ಟ ಪ್ರಶಸ್ತಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಸಚಿನ್ ಕೋಟೇಶ್ವರ, ಬೆಸ್ಟ್ ಬ್ಯಾಟ್ಸ್ಮನ್ ಗಣೇಶ್ (ಬೀಜಾಡಿ) ಟೊರ್ಪೆಡೋಸ್, ಬೆಸ್ಟ್ ಬೌಲರ್ ಸಚಿನ್ ಶೆಟ್ಟಿ ಪಡೆದುಕೊಂಡರು. ಸಮಾರೋಪ:ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಮಾತನಡಿ, ಯುವ ಆಟಗಾರರ ಭಾಗವಹಿಸುವಿಕೆಯಿಂದ ಟಿ.ಸಿ.ಎ ೭ ತಾಲೂಕುಗಳಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.೧೦ ಓವರ್ ಗಳಲ್ಲಿ ಆಟಗಾರರ ಪರಿಪೂರ್ಣ ಪ್ರದರ್ಶನ ಹೊರಹೊಮ್ಮಿದೆ. ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ರಾಮ ನವಮಿ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮ ಭಾನುವಾರ ಕುಂದಾಪುರ ವ್ಯಾಸರಾಜ ಕಲಾ ಮಂದಿರದಲ್ಲಿ ಜರುಗಿತು. ಸಮಾಜದ 31 ವಟುಗಳಿಗೆ ಸಾಮೂಹಿಕವಾಗಿ ಬ್ರಹ್ಮೋಪದೇಶ ನೀಡಲಾಯಿತು. ಧಾರ್ಮಿಕ ವಿಧಿ ವಿಧಾನವನ್ನೂ ಮಠದ ಅರ್ಚಕ ವಿಜಯ ಪೇಜಾತ್ತಾಯ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಕೆ.ಎಂ. ಲಕ್ಷ್ಮಣ, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೊಡು,ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸೇವಾ ಸಂಘದ ಅಧ್ಯಕ್ಷ ಎಚ್.ಟಿ.ನರಸಿಂಹ ಮತ್ತು ಆಡಳಿತ ಮಂಡಳ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲ ಯುವಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಕುಂದಾಪುರ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಯುವಮೋರ್ಚಾ ಕುಂದಾಪುರ ಅಧ್ಯಕ್ಷ ಅವಿನಾಶ್ ಉಳ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಕಾರ್ಯಕ್ರಮದ ಕುರಿತು ಮಾತನಾಡಿದರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಯುವಮೋರ್ಚಾ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್ ಶಾಂತಿ ನಿಕೇತನ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಬಂಗೇರಾ,ಸುನಿಲ್ ಖಾರ್ವಿ,ಕುಂದಾಪುರ ನಗರ ಪ್ರಾಧಿಕಾರ ಅಧ್ಯಕ್ಷರಾದ ವಿಜಯ್ ಎಸ್ ಪೂಜಾರಿ, ಪುರಸಭೆ ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ್ ಅಂಕದ ಕಟ್ಟೆ,ಕಾರ್ಯದರ್ಶಿ ದೀಕ್ಷಿತ್ ಶೆಟ್ಟಿ,ಸಫಲ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಕೋಟಿ ಪೂಜಾರಿ ಆಶ್ರಯ್ ಶೆಟ್ಟಿ ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿಯಲ್ಲಿ ಗುರುಕುಲ ವಿದ್ಯಾಸಂಸ್ಥೆ ಆಯೋಜಿಸಿದ್ದ ಚಿಲಿಪಿಲಿ ಬೇಸಿಗೆ ಶಿಬಿರದ ಇತ್ತಿಚಿಗೆ ಉದ್ಘಾಟನೆಗೊಂಡಿತು. ಬೆಂಗಳೂರು ಕಪೆಲ್ಲಾ- ದ ಸೌಂಡ್ ಸಂಸ್ಥಾಪಕರು ಮೈಥಿಲಿ ಉದ್ಘಾಟಿಸಿ ಮಾತನಾಡಿ ಬೇಸಿಗೆ ಶಿಬಿರವು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಸಹಾಯವಾಗುವುದು, ಜೊತೆಗೆ ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಇದರಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಅವರ ಸ್ವತಂತ್ರ ಕಲಿಕೆಗೆ ಇದು ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟ ನ ಜಂಟಿ ಕಾರ್ಯನಿರ್ವಾಹಕಿ ಅನುಪಮ .ಎಸ್ ಶೆಟ್ಟಿ ಮಾತನಾಡಿ ಮಕ್ಕಳ ರಜಾಕ್ಕೊಂದು ಮಜಾ ನೀಡುವುದರ ಜೊತೆಗೆ ಹೊಸ ವಿಷಯಗಳ ಕಲಿಕೆಗೆ ಅವಕಾಶ ನೀಡುವ ಉದ್ದೇಶದಿಂದ ನಮ್ಮ ಸಂಸ್ಥೆಯಲ್ಲಿ ಈ ಶಿಬಿರವನ್ನು ಆಯೋಜಿಸಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮೋಹನ್. ಕೆ, ಕಾಲೇಜು ಪ್ರಾಂಶುಪಾಲರಾದ ಅರುಣ್ ಡಿಸಿಲ್ವಾ, ಶಿಬಿರದ ಇನ್ನೋರ್ವ ಮಾರ್ಗದರ್ಶಕಿ ಸಂಧ್ಯಾ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
