ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಕುಂದಾಪುರ ಪುರಸಭೆ ಸಾಮಾನ್ಯ ಸಭೆ ಜರುಗಿತು. ಸಾಮಾನ್ಯ ಸಭೆಯಲ್ಲಿ ಪುರಸಭೆ ಅಭಿವೃದ್ಧಿ ಚರ್ಚೆ – ಸಮಸ್ಯೆಗಳ ಪರಿಹಾರಕ್ಕಿಂತ, ಗಲಾಟೆಯಲ್ಲಿ ಕಾಲಹರಣವಾಗಿದೆ. ವಿರೋಧ ಪಕ್ಷದ ಸದಸ್ಯೆ ದೇವಕಿ ಪಿ. ಸಣ್ಣಯ್ಯ ಮಾತನಾಡಿ ಸ್ಥಾಯಿ ಸಮಿತಿ ಆಯ್ಕೆ, ಟೆಂಡರ್ ಕರೆಯದೆ ಕಾಮಗಾರಿ ನಡೆಸಿರುವ ಬಗ್ಗೆ ಡಿಸಿಗೆ ದೂರು ನೀಡಲಾಗಿದ್ದು, ನಗರಾಭಿವೃದ್ಧಿ ಕೋಶದ ಪಿಡಿ ತನಿಖೆ ಮಾಡಿ ನೀಡಿದ ವರದಿ ಪ್ರತಿಗೆ ಒತ್ತಾಯಿಸಿದ್ದು, ಆಡಳಿತ ವಿರೋಧಿ ಸದಸ್ಯರ ನಡುವೆ ಗಲಾಟಿಗೆ ಕಾರಣವಾಯಿತು. ಸ್ಥಾಯಿ ಸಮಿತಿ ಆಯ್ಕೆ ಹಿನ್ನೆಲೆಯಲ್ಲಿ ಸಣ್ಣಪುಟ್ಟ ದೋಷಗಳಿದ್ದು, ಸರಿಪಡಿಸಿಕೊಂಡು ಹೋಗುವ ನಿರ್ಣಯ ಕೂಡಾ ಆಗಿದ್ದು, ಅದನ್ನು ದೊಡ್ಡ ಸಂಗತಿ ಮಾಡದೆ ಪುರಸಭೆ ಅಭಿವೃದ್ಧಿಗೆ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮನವಿ ಮಾಡಿದರೂ ಸದಸ್ಯರ ಗಲಾಟೆ ಶಾಂತವಾಗಲಿಲ್ಲ. ವಿರೋಧ ಸದಸ್ಯ ಚಂದ್ರಶೇಖರ್ ಖಾರ್ವಿ ಪ್ರತಿಕ್ರಿಯಿಸಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ನಮ್ಮ ವಿರೋಧವಿಲ್ಲ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಕನ್ನಡ ಕಲಾವಿದರಾದ ಓಂಗುರು ಬಸ್ರೂರು – ಚಂದ್ರಶೇಖರ ಬಸ್ರೂರು ಅವರೊಂದಿಗೆ ಕುಂದಾಪ್ರ ಡಾಟ್ ಕಾಂ ಸಂದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವೃತ್ತ ನಿರೀಕ್ಷಕರ ಕಛೇರಿ ಹಾಗೂ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿಗಳ ನೇತೃತ್ವದಲ್ಲಿ ಪೊಲೀಸ್ ಠಾಣೆಯ ಆವರಣದಲ್ಲಿನ ನಾಗಬನದ 16ನೇ ವರ್ಧಂತ್ಸೋತ್ಸವ ಬುಧವಾರ ಜರುಗಿತು. ಅರ್ಚಕರು ನಾಗ ದೇವರಿಗೆ ಪಂಚವಿಂಶತಿ ಕಲಶ, ಸ್ನಪನಾಧೀವಾಸ ಹೋಮ, ನಾಗಯಕ್ಷೆಗೆ ಕಲಶಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಕುಟುಂಬಿಕರು, ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ಕುಟುಂಬಿಕರು, ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಸದಾ ಚೈತನ್ಯದಿಂದ ಬದುಕಲು ಸಹಕಾರಿಯಾಗುತ್ತದೆ. ದೈನಂದಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯಾವುದಾದರೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಮಕ್ಕಳು ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡಿದ ಸಾಕಷ್ಟು ಉದಾಹರಣೆಗಳಿವೆ. ರಂಗಚಟುಕೆಗಳ ಮೂಲಕ ಸಮಾಜವನ್ನು ಸಮಚಿತ್ತದಿಂದ ನೋಡಲು ಸಾಧ್ಯವಿದೆ ಎಂದರು. ನಟ, ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಲಾವಣ್ಯ ಬೈಂದೂರು ಅಧ್ಯಕ್ಷ ಉದಯ ಆಚಾರ್, ಕರ್ಣಾಟಕ ಬ್ಯಾಂಕ್ ಬೈಂದೂರು ಶಾಖಾಧಿಕಾರಿ ಪರಮೇಶ್ವರ ಪೂಜಾರಿ, ಸುರಭಿ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ನಿರ್ದೇಶಕ ಸುಧಾಕರ ಪಿ. ಸ್ವಾಗತಿಸಿ, ಸದಸ್ಯ ಲಕ್ಷ್ಮಣ ಕೊರಗ ವಂದಿಸಿದರು.…
ಸಕಲ ಜೀವ ರಾಶಿಗಳಲ್ಲಿ ಮನುಷ್ಯನ ಜನ್ಮ ಶೇಷ್ಠವಾದದ್ದು, ಮನುಷ್ಯನ ಜೀವನದಲ್ಲಿ ಸಂಬಂಧಗಳು ಬೆಸೆದುಕೊಳ್ಳುತ್ತಾ ಹೋಗುತ್ತದೆ. ಅದರಲ್ಲೂ ಗಂಡು ಹೆಣ್ಣಿನ ನಡುವಿನ ಪ್ರೀತಿ-ದಾಂಪತ್ಯ ಎಂಬ ಸಂಬಂಧ ಬಹಳ ಸೂಕ್ಷ್ಮವಾಗಿರುವಂತದ್ದು. ಕೊನೆತನಕ ಮನಷ್ಯನ ಜೀವನದಲ್ಲಿ ಇರುವ ಸಂಬಂಧವೆಂದರೆ ಸಂಗಾತಿ ಸಂಬಂಧ ಜೀವನದ ಪ್ರಯಣದಲ್ಲಿ ಎಳುಬೀಳುಗಳಲ್ಲಿ ಜೊತೆಯಾಗಿ ನಿಲ್ಲುವುದೇ ಸಂಗಾತಿಯ ಸಂಬಂಧ ಕೇವಲ ಕುಟುಂಬದ ಕಡೆಯಿಂದಷ್ಟೆ ಅಲ್ಲ, ಪ್ರೇಮಿಗಳ ನಡುವಿನ ಭಿನ್ನಾಭಿಪ್ರಾಯಗಳು ಸಹ ಸಂಬಂಧ ಮುರಿದು ಹೋಗುವವರೆಗೂ ಮುಂದುವರೆಯಬಹುದು. ಸಮಯ ಸಾಗಿದಂತೆ ಸಂಬಂಧಗಳಿಗೆ ನೀಡುವ ಪ್ರಾಮುಖ್ಯತೆಯು ಬೇರೊಂದು ಸಂಬಂಧಕ್ಕೆ ಬದಲಾಗಬಹುದು. ಆದರೆ ಕೆಲವೊಂದು ಸಲ ಸಂಗಾತಿಯೊಂದಿಗಿನ ಸಂಬಂಧಕ್ಕೆ ಹೆಚ್ಚು ಪ್ರಾಮುಖ್ಯ ಕೊಡದೇ ಮುರಿದು ಹೋಗಬಹುದು. ಪರಸ್ಪರ ಪ್ರೀತಿ, ಗೌರವ ನಂಬಿಕೆ ಇವೇ ಸಂಗಾತಿಯೊಂದಿಗಿನ ಬಂಧ ಚಿರಕಾಲ ಉಳಿಯಲು ಸಹಾಯ ಮಾಡುತ್ತದೆ. ಮನಸ್ಸು ಬಿಚ್ಚಿ ಮಾತನಾಡಿ:ಹೌದು, ನೀವು ನಿಮ್ಮ ಸಂಗಾತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿದರೆ ನಿಮ್ಮ ಸಂಬಂಧ ಮುರಿದು ಬಿಳುವ ಸಾಧ್ಯತೆಗಳೇ ಇರುವುದಿಲ್ಲ ಯಾಕೆಂದರೆ ಇಂದಿನ ದಿನಗಳಲ್ಲಿ ಮೊಬೈಲ್ ಕೈಯಲ್ಲಿ ಹಿಡಿದುಕೊಂಡರೆ ನಮಗೆ ಸುತ್ತಲಿನ ಜಗತ್ತಿನ ಅರಿವೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧ ಬಣ್ಣದ ರಂಗೋಲಿಗಳಿಂದ ರಚಿಸಲಾದ ಭಾರತದ ಭೂಪಟದ ಜತೆಯಲ್ಲಿ ಭಾರತ ಮಾತೆಯ ರಂಗವಲ್ಲಿ ಚಿತ್ರಕ್ಕೆ ಕೋಟೇಶ್ವರ ಪಬ್ಲಿಕ್ ಸ್ಕೂಲ್ನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಹಣತೆ ಹಚ್ಚಿ ದೀಪ ಬೆಳಗಿಸಿ ಬೀಳ್ಕೋಡುಗೆ ಪಡೆದುಕೊಂಡ ವಿನೂತನ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕ ಡಾ. ಉಪಾಧ್ಯಾಯ ಮೂಡುಬೆಳ್ಳೆ ಇವರ ನೇತೃತ್ವದಲ್ಲಿ ೮ ಅಡಿ ಎತ್ತರದ ೭ ಅಡಿ ಅಗಲದ ಭಾರತ ದೇಶದ ಭೂಪಟದ ಜತೆ ಮಧ್ಯದಲ್ಲಿ ಭಾರತ ಮಾತೆಯ ಚಿತ್ರಣವನ್ನು ರಚಿಸಲಾಗಿತ್ತು. ಶಾಲೆಯ 2022ನೇ ಸಾಲಿನ 126 ಮಂದಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ವೇದಿಕೆಗೆ ಬಂದು ತಮ್ಮ ಭಾವೈಕ್ಯತೆಯ ಸಂದೇಶದೊಂದಿಗೆ ಸರ್ವಧರ್ಮಗಳ ಮಾನವೀಯತೆಯ ಪ್ರತಿಬಿಂಬವನ್ನು ಸಾರುವ ಹಣತೆಗಳ ಮೂಲಕ ಭಾರತ ಮಾತೆ ಹಾಗೂ ಭಾರತ ಭೂಪಟದ ಸುತ್ತ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಜಾತಿ ಮತ ಭೇದವೆನ್ನದೆ ಹಣತೆಗಳನ್ನು ಹಚ್ಚಿ ಭಾವೈಕ್ಯತೆಯ ಸಂದೇಶದ ಪ್ರತಿಜ್ಞೆ ಸ್ವೀಕರಿಸಿ ಭಾರತ ಮಾತೆಯ ಆಶೀರ್ವಾದವನ್ನು ಪಡೆದುಕೊಂಡು ಪುಳಕೀತರಾದರು. ಕೆಪಿಎಸ್ ಉಪಪ್ರಾಂಶುಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ, ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಕೆ.ಜಿ ಸುಬ್ಬಣ್ಣ (೭೪) ಅವರು ಅಲ್ವಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯನ ವಿಕಾಸದೊಂದಿಗೆ ಜನಪದ, ಜನಪದ ಪ್ರಕಾರಗಳಿಂದ ನಾಟಕ ಬೆಳೆದುಬಂದಿದೆ. ವಿಶ್ವ ರಂಗಭೂಮಿಯನ್ನು ಪರಿಣಾಮಕಾರಿ ಶಿಕ್ಷಣದ ಪ್ರಾಕಾರವೆಂದು ಒಪ್ಪಿಕೊಳ್ಳಲಾಗಿದೆ ಎಂದು ಹೆಗ್ಗೋಡು ಕೆ. ವಿ. ಸುಬ್ಬಣ್ಣ ರಂಗಸಮೂಹದ ಪ್ರಸನ್ನ ಹುಣಸೆಕೊಪ್ಪ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ 22ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ಹಾಗೂ ವಿಶ್ವ ಅರಂಗಭೂಮಿ ದಿನಾಚರಣೆ ಉದ್ದೇಶಿಸಿ ಮಾತನಾಡಿ ಜನಸಾಮಾನ್ಯರಿಗೆ ಹತ್ತಿರವಾಗಲು ರಂಗಭೂಮಿ ಪರಿಣಾಮಕಾರಿ ಮಾಧ್ಯಮವೆಂಬುದನ್ನು ಪ್ರಭುತ್ವವೂ ಅರಿತಿದೆ. ಹಾಗಾಗಿಯೇ ರಂಗಭೂಮಿಯ ವಿವಿಧ ಪ್ರಾಕಾರಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂದರು. ನಟ, ಕಂಠದಾನ ಕಲಾವಿದ ಚಂದ್ರಕಾಂತ ಕೊಡಪಾಡಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ಟಿ. ಶ್ರೀಧರ ಭಟ್, ಬೈಂದೂರು ರೋಟರಿ ಅದ್ಯಕ್ಷ ಡಾ. ಪ್ರವೀಣ ಶೆಟ್ಟಿ, ಬೈಂದೂರು ಜೆಸಿಐ ಅಧ್ಯಕ್ಷೆ ಸವಿತಾ ದಿನೇಶ್ ಉಪಸ್ಥಿತರಿದ್ದರು. ಸುರಭಿ ಸದಸ್ಯ ರಾಘವೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸತ್ಯ – ಸುಳ್ಳುಗಳ ದರ್ಶನ ಮಾಡಿಸುವ ಆಧುನಿಕ ರಂಗಭೂಮಿ ನಮ್ಮ ವಿವೇಚನೆ, ಸಂವೇದನೆಯನ್ನು ಇನ್ನಷ್ಟು ಹರಿತಗೊಳಿಸುತ್ತಿದೆ. ನಮ್ಮೊಳಗೆ ಸಹಬಾಳ್ವೆಯ ತುಡಿತ ಹೆಚ್ಚಿದಾಗಲೇ ರಂಗಭೂಮಿಯ ನೈಜ ಆಶಯ ಈಡೇರಿದಂತಾಗುವುದು. ಹಾಗಾಗಿ ರಂಗಭೂಮಿಯ ನಂಟು ಮನುಷ್ಯನಿಗೆ ಒಳ್ಳೆಯದು ಎಂದು ಬ್ರಹ್ಮಾವರ ಎಸ್ಎಂಎಸ್ ಶಾಲೆಯ ಪ್ರಾಂಶುಪಾಲರಾದ ಅಭಿಲಾಷ ಹಂದೆ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ 22ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ಎರಡನೇ ದಿನದ ಸಮಾರಂಭದಲ್ಲಿ ಅವರು ಮಾತನಾಡಿ ಜೀವಿಗಳು ವಿಕಾಸವಾದಂತೆ ರಂಗಭೂಮಿಯೂ ಸಾಕಷ್ಟು ಬದಲಾಗುತ್ತಾ ಬೆಳೆಯುತ್ತಾ ಬಂದಿದೆ. ನಾಟಕವು ವಿವಿಧ ರಸಗಳ ಮೂಲಕ ಹೃದಯ ಮಟ್ಟುವುದರಿಂದ ನಮ್ಮೊಳಗಿನ ಭಾವಕ್ಕುಂಟಾಗುವ ಉಲ್ಲಾಸದ ಪರಿಣಾಮವೇ ಬೇರೆ ರೀತಿಯದು. ಯಾವುದೇ ಭೇದವಿಲ್ಲದೇ ಬದುಕುವ ರೀತಿಯನ್ನು ಕಲಿಸುವುದು ರಂಗಭೂಮಿಯಿಂದ ಸಾಧ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಅಧ್ಯಕ್ಷರಾದ ಬಿ. ರಾಮಕೃಷ್ಣ ಶೇರುಗಾರ ಅವರು ಮಾತನಾಡಿ ಬೈಂದೂರಿನಂತಹ ಗ್ರಾಮೀಣ…
ಸುರಭಿ ಬೈಂದೂರು – ರಾಜ್ಯ ಮಟ್ಟದ ನಾಟಕೋತ್ಸವ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರವತ್ನಾಲ್ಕು ವಿದ್ಯೆಗಳಲ್ಲಿ ನಾಟಕವೂ ಒಂದು. ಅದು ನಮ್ಮ ಬದುಕಿನ ಪಾತ್ರಗಳನ್ನೇ ರಂಗದ ಮೇಲೆ ತಂದು ವಿಮರ್ಷಿಸುವ, ಒರೆಗೆ ಹಚ್ಚುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲದು ಎಂದು ನಡೂರು ರತ್ನಶೀಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ, ಹಾಸ್ಯ ಕಲಾವಿದ ಮನು ಹಂದಾಡಿ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ’ರಂಗಸುರಭಿ – 2022’ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ ಮೊಬೈಲ್ನಲ್ಲಿಯೇ ಮುಳುಗಿ ಹೋಗಿರುವ ಜನರು ಸಾಂಸ್ಕೃತಿಕ ಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ಅವರನ್ನು ಮತ್ತೆ ನೈಜತೆಯತ್ತ ಸೆಳೆಯಲು ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಮಗು ಮುಂದೆ ಉತ್ತಮ ಕಾರ್ಯಗಳಲ್ಲಿಯೇ ಮುಂದುವರಿಯುತ್ತದೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾದಾಗ ಮುಂದಿನ ಪೀಳಿಗೆಗೆ ಉತ್ತಮವಾದುದನ್ನು ಕೊಡಲು…
