Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ನೇತಾಜಿ ಸರ್ಕಾರಿ  ಪ್ರೌಢಶಾಲೆ ಕಾಳಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ  ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14ರ ವಯೋಮಿತಿಯ ವಿಭಾಗದಲ್ಲಿ ಎಸ್ ವಿ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಯುವಕ ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ Elevate (Minorities) -2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://eitbt.karnataka.gov.in/en ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 080-2223100 ಅಥವಾ ಇ-ಮೇಲ್ elevate.ktech@ka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೊ. ಆಪರೇಟಿವ್ ಕಲ್ಯಾಣಪುರ ಶಾಖೆ ವತಿಯಿಂದ ಸೋಲಾಪುರ ಚಾದರ ಹಾಗೂ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಉದ್ಘಾಟಿಸಿ, ಮಾತನಾಡಿ, ಸಹಕಾರಿ ಸಂಘವೊಂದು ಸಾಮಾಜಿಕವಾಗಿ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ. ಸಮಾಜದಲ್ಲಿ ಸರಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಬೇಕೆಂಬ ಮಹದಾಸೆ ನಾವೆಲ್ಲರೂ ಕಾಣುತ್ತದೆ ಆದರೆ ಪ್ರಸ್ತುತ ದಿನಗಳಲ್ಲಿ ಅದು ಶ್ರೀಮಂತರ ಪಾಲಾಗುತ್ತಿದೆ. ಈ ನಿಟ್ಟಿನಲ್ಲಿ ಬಡ ಹಾಗೂ ಮಧ್ಯಮವರ್ಗ ಜನಸಾಮಾನ್ಯರು ಸಮಾಜದಲ್ಲಿ ಸೇವಾಮನೋಭಾವನೆಯಲ್ಲಿ ಕಾರ್ಯನಿರ್ವಹಿಸುವುದನ್ನು ಕಾಣುತ್ತಿದ್ದೇವೆ,ತುಳಿತ್ತಕ್ಕೊಳಗಾದವರಿಗೆ ನೆರವು ಹಾಗೂ ಆಶ್ರಮಗಳಿಗೆ ಧ್ಯೆರ್ಯ ತುಂಬಿ ಸಮಾಜದ ಉನ್ನತಿಯಲ್ಲಿ ತೊಡಗಿಕೊಳ್ಳೋಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಕಳಿಬೈಲುನ ಆಡಳಿತ ಮೊಕ್ತೇಸರರಾದ ಎಂ. ಸಿ. ಚಂದ್ರಶೇಖರ ವಹಿಸಿದ್ದರು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಕ್ರೆಡಿಟ್ ಕೊ. ಸೊಸೈಟಿ ಕಲ್ಯಾಣಪುರ ಶಾಖೆ ವತಿಯಿಂದ ಪರಿಕರಗಳನ್ನು ಹಸ್ತಾಂತರಿಸಲಾಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮ ಜಗತ್ತನ್ನು ಸೃಷ್ಟಿಸುತ್ತಾನೆ. ನಂತರ, ಗುರುವೆಂಬ ಪರಬ್ರಹ್ಮ ಮಕ್ಕಳ ಬದುಕಿಗೆ ದೀವಿಗೆಯಾಗುತ್ತಾನೆ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ  ಡಾ. ಮಾಧವಿ ಎಸ್. ಭಂಡಾರಿ ನುಡಿದರು. ಅವರು ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಹೆತ್ತ ತಾಯಿ ಮೊದಲ ಗುರು. ಸತ್ಯ, ಧರ್ಮ, ನ್ಯಾಯ ನೀತಿಯ ಬಗ್ಗೆ ಮನೆಯಲ್ಲಿ ಮಕ್ಕಳಿಗೆ ತಿಳಿಸಿಕೊಡುವವಳು ತಾಯಿ. ತದನಂತರ ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಗುರುವು ತ್ರಿಮೂರ್ತಿಗಳ ಸ್ವರೂಪ ಎಂದು ವಿವರಿಸಿದರು.ಇನ್ನು ಶಿಕ್ಷಕರು ಕೂಡ ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಬೇಕು. ಮಕ್ಕಳಿಗೆ ಜೀವನದ ಮೌಲ್ಯ ಕಲಿಸಿಕೊಡಬೇಕು ಎಂದು ಕಿವಿಮಾತು ನುಡಿದರು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಶಿಕ್ಷಕರನ್ನು ಶಿಲ್ಪಿಗಳೆಂದು ಕರೆಯುತ್ತಾರೆ. ಸಮಾಜವನ್ನು ತಿದ್ದುವವರು ಶಿಕ್ಷಕರು. ತಾವು ಕಲಿಸಿದ ವಿದಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಮನೆಯೊಂದರಲ್ಲಿ ಹಣವನ್ನು ಪಣವನ್ನಾಗಿರಿಸಿ ಅಂದರ್‌ ಬಾಹರ್‌ ಇಸ್ವೀಟ್‌ ಜುಗಾರಿ ಆಟುತ್ತಿದ್ದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿ ಜುಗಾರಿಕೋರರನ್ನು ಬಂಧಿಸಿದ ಘಟನೆ ಇತ್ತಿಚಿಗೆ ನಡೆದಿದೆ. ನೀಲಾವರ ಗ್ರಾಮದ ಮನೆಯಲ್ಲಿ ಹಣವನ್ನು ಪಣವನ್ನಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿರು ಮಾಹಿತಿ ಆಧರಿಸಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಾಬಗಿ ಮತ್ತು ಸಿಬ್ಬಂದಿಗಳು ಶುಕ್ರವಾರ ರಾತ್ರಿ7:30ರ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳಾದ ನೀಲಾವರದ ಸದಾಶಿವ ದೇವಾಡಿಗ (48), 52 ಹೇರೂರಿನ ಪ್ರಸನ್ನ(43) ರಜಾಕ್(55), ಚೇರ್ಕಾಡಿಯ ಭಾಸ್ಕರ(48), ಕೊಡವೂರಿನ ಅಶೋಕ(47), ಉದ್ದಿನಹಿತ್ಲು ಕೊಡವೂರು ಗ್ರಾಮ, ತೆಂಕನಿಡಿಯೂರಿನ ಹರೀಶ್‌ ನಾಯ್ಕ(35), ಪುತ್ತೂರು ಗ್ರಾಮದ ಚಂದ್ರಹಾಸ (40), ಬೇಳೂರು ಗ್ರಾಮದ ರವಿಕುಮಾರ(57), ಚೇರ್ಕಾಡಿಯ ಶಶಿಕಾಂತ (36), ಕುಕ್ಕುಂಜೆಯ ಆನಂದ ಕೋಟ್ಯಾನ (63), ಚೇರ್ಕಾಡಿಯ ಸಂಪತ್ (37) ಎಂಬರುಗಳನ್ನು ವಶಕ್ಕೆ ಪಡೆದಿದ್ದಾರೆ, ಆರೋಪಿಗಳು ಅಂದರ್‌ ಬಾಹರ್‌ ಇಸ್ಫಿಟ್ ಜುಗಾರಿ ಆಡುತ್ತಿರುವ ಬಗ್ಗೆ ತಮ್ಮ ತಪ್ಪನ್ನು ಒಪ್ಪಿಕೊಂಡಿರುತ್ತಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಸೆ.07: ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಓರ್ವನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಭಾಸಿಯ ಲಾಡ್ಜಿನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ನಾಲ್ವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾದ್ದರು. ಅಲೆಯಲ್ಲಿ ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಗಂಭೀರ ಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನೂರಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದಾಗ ಪೊಲೀಸರ ಹತ್ಯೆಗೆ ಯತ್ನಿಸಲಾಗಿತ್ತು. ಕಳೆದ ತಿಂಗಳು ಆ.5 ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ಖಚಿತ ವರ್ತಮಾನದಂತೆ ವಾಹನ ತಪಾಸಣೆಯಲ್ಲಿದ್ದಾಗ ಫಾರ್ಚುನ‌ರ್ ಕಾರು ಬಂದಿದ್ದು ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಡಾ. ಸರ್ವಪಲ್ಲಿ ರಾಧಾ ಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ ಅವರು ಮಾತನಾಡಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪ್ರಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಶಿಕ್ಷಕಿಯರಾದ ನಂದಿನಿ, ರಜನಿ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿಗಳಾದ ನವಮಿ ಸ್ವಾಗತಿಸಿ, ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿ, ಮಿರ್ಥುಲಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಮುಖ್ಯ. ಇಲ್ಲಿ ಅಂಕಗಳಿಗಿಂತಲೂ ಕೌಶಲ್ಯಗಳಿಗೆ ಹೆಚ್ಚು ಪ್ರಾಧ್ಯಾನತೆಯಿದ್ದು, ವಿದ್ಯಾರ್ಥಿಗಳಿಗೆ ನಾಯಕತ್ವ, ಕ್ರಿಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಹಲವಾರು ಅವಕಾಶಗಳಿದ್ದು, ಅಂತಹ ಅವಕಾಶಗಳ ಸದುಪಯೋಗ ಪಡೆದುಕೊಳ್ಳಿ ಹಾಗೂ ಜೀವನಾನುಭವ ಬದುಕಿನ ಬಹುದೊಡ್ಡ ಪಾಠ ಎಂದು ವಂಡ್ಸೆ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್‌ ಡೇ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳ ಪದವಿ ಜೀವನಕ್ಕೆ ಶುಭ ಹಾರೈಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ರಿ ಮತ್ತು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಅಬ್ಬಕ್ಕ @500 ಪ್ರೇರಣದಾಯಿ 100 ಉಪನ್ಯಾಸಗಳ ಸರಣಿ –ಎಸಳು 42 ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಇದರ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಬ್ಬಕ್ಕನವರ ಶೌರ್ಯ, ಧೈರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವಳು ಜೀವನವೇ ಇಂದಿನ ಯುವ ಮನಸ್ಸುಗಳಿಗೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ರಾಣಿ ಅಬ್ಬಕ್ಕ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ವೃತ್ತಿ ಮಾರ್ಗದರ್ಶಕರಾದ ಸತ್ಯಶ್ರೀ ಗೌತಮ್ ಅವರು ರಾಣಿ ಅಬ್ಬಕ್ಕ ಅವರು ಜೀವನ ಮತ್ತು ಧೈರ್ಯ ಸಾಹಸಗಳು ಎಂದಿಗೂ ಆದರ್ಶ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಕನ್ನಡ…

Read More