ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.16: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈವರೆಗೆ ಜಿಲ್ಲೆಯ ಎಸ್ಪಿಯಾಗಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧಿಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿಯಾಗಿದ್ದರು. 2020ರಲ್ಲಿ ಅವರನ್ನು ಜಿಲ್ಲೆಯ ಎಸ್ಪಿಯಾಗಿ ಆದೇಶ ಹೊರಡಿಸಲಾಗಿತ್ತಾದರೂ ಕೊನೆಗೆ ಅದು ರದ್ದಾಗಿ ವಿಷ್ಣುವರ್ಧನ್ ಅವರು ಎಸ್ಪಿಯಾಗಿ ಬಂದಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆ ನೇತೃತ್ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಜರುಗಿತು. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರು ಧ್ವಜಾರೋರಣೆ ನೆರವೇರಿಸಿದ ಬಳಿಕ ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಶ್ರದ್ದೆ, ತ್ಯಾಗದ ಸ್ಮರಣೆ ಮತ್ತು ರಾಷ್ಟ್ರಜಾಗೃತಿಯ ಸಂದರ್ಭ ಸ್ವಾತಂತ್ರ್ಯದ 75 ವರ್ಷಗಳ ಅಧ್ಯಾಯ ಪ್ರಸ್ತುತ ತಲೆಮಾರಿನ ಮುನ್ನಡೆಗೆ ನಿರಂತರ ಪ್ರೇರಣೆಗೆ, ಅನ್ವೇಷಣೆಗೆ ಖಚಿತ ಭರವಸೆ ದಿಕ್ಕಿನತ್ತ ಸಾಗಲು ಹೊಸ ಹುರುಪು ನೀಡುವ ಮಹಾದಿನ ಎಂದರು. ಅಸಂಖ್ಯಾತ ಜನರ ಹೋರಾಟ, ತ್ಯಾಗವನ್ನು ಸ್ಮರಿಸಿದರೆ ಅಮೃತ ಮಹೋತ್ಸವದ ಮಹತ್ವ ಅರಿವಾಗುತ್ತದೆ. ಸುಭಾಷ್ಚಂದ್ರ ಬೋಸ್ ಭಾರತದ ಸ್ವಾತಂತ್ರ್ಯ ಹೋರಾಟ ಬ್ರಿಟಿಷರ ಸಾಮ್ರಾಜ್ಯ ಶಾಹಿ ವಿರುದ್ಧ ಮಾತ್ರವೇ ಅಲ್ಲ, ಅದು ಜಗತ್ತಿನ ಸಾಮ್ರಾಜ್ಯಶಾಹಿ ವಿರುದ್ಧ ಕೂಡಾ ಹೌದು ಎಂದಿದ್ದರು ಎಂಬ ಮಾಹಿತಿ ನೀಡಿದರು. ಉಡುಪಿ ಜಿಲ್ಲೆ ಉದಯವಾಗಿ ರಜತ ಮಹೋತ್ಸವ ಸಂಭ್ರಮದಲ್ಲಿದೆ. ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ, ಧಾರ್ಮಿಕ ಹಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಹಾಗೂ ಶ್ರೀ.ವಿ.ವಿ.ವಿ ಮಂಡಳಿ (ರಿ) ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸ್ವಾತಂತ್ರ್ಯದ ಈ ಸಂಭ್ರಮದಲ್ಲಿ ಶಿಕ್ಷಣ ಕ್ಷೇತ್ರದ ಪಾತ್ರದ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಶ್ರೀ ವಿ.ವಿ.ವಿ ಮಂಡಳಿಯ ಸದಸ್ಯರಾಗಿರುವ ಶೀನ ಪೂಜಾರಿ, ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಂದಿ ದೇವಾಡಿಗ, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ರಾಘವೇಂದ್ರ ಕುಲಾಲ್, ಸಮರ್ಪಣಾ ಎಜುಕೇಶನಲ್ ಟ್ರಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಇಂದು ಉಪ್ಪುಂದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಕ ಚಾಲನೆ ನೀಡಲಾಯಿತು. ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರಾದ ಅಮ್ಮನವರ ತೊಪ್ಲುವಿನ ದಿ. ಗೋವಿಂದ ಖಾರ್ವಿ ಸಂಕದ ಬಾಗಿಲು ಮನೆ ಅವರು ನಿವಾಸದ ತನಕ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ದಿವಾಕರ ಶೆಟ್ಟಿ ಅವರು ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ, ಶಿಕ್ಷಕಿಯವರು ಹಾಗೂ ಎಸ್ ಡಿ ಎಮ್ ಸಿ ಸದಸ್ಯರು, ಸಾರ್ವಜನಿಕ ರು ಭಾಗವಹಿಸಿದರು. ಸ್ವಾತಂತ್ರ್ಯ ಹೋರಾಟಗಾರ ಗೋವಿಂದ ಖಾರ್ವಿ ಯವರ ಮನೆಗೆ ಮೆರವಣಿಗೆ ತೆರಳಿ ಧ್ವಜರೋಹಣ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು. ನಂತರ ಅವರ ಭಾವಚಿತ್ರವನ್ನು ಶಾಲೆಗೆ ತರಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉದಯ್ ಪಡಿಯಾರ್, ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಶೆಟ್ಟಿ, ಮುಖ್ಯೋಪಧ್ಯಾಯ ವೆಂಕಪ್ಪ ಉಪ್ಪಾರ, ಗೋವಿಂದ ಖಾರ್ವಿ ಯವರ ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಊರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳುತ್ತಾ ಸಾಧಕ ವಿದ್ಯಾರ್ಥಿಗಳಾಗಿ ದೇಶಕ್ಕೆ ಮಾದರಿ ಪ್ರಜೆಯಾಗುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ,ಕಾಲೇಜಿನ ಉಪಪ್ರಾಂಶುಪಾಲರಾಗಿರುವ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿಯಾಗಿರುವ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಅಭಿಜಿತ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಮತ್ಸ್ಯ ಸಂಪತ್ತು ವೃದ್ಧಿ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಯಾವುದೇ ಅವಘಡಗಳು ಜರುಗದಂತೆ ಕೋಡಿಯ ಕಿನಾರೆಯಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಸಾಂಗವಾಗಿ ನೆರವೇರಿಸಿದರು. ಈ ವೇಳೆಯಲ್ಲಿ ದೇವಳದ ಅಧ್ಯಕ್ಷರಾದ ಜಯನಂದ ಖಾರ್ವಿ, ಉಪಾಧ್ಯಕ್ಷ ರಾದ ಪೀತಾಂಬರ ಗಣಪತಿ ಖಾರ್ವಿ, ಮೊಕ್ತೇಸರರಾದ ಪಾಂಡು ಸಾರಂಗ್, ಕಾರ್ಯಕ್ರಮದ ಉಸ್ತುವಾರಿ ಸುನೀಲ್ ಖಾರ್ವಿ ತಲ್ಲೂರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಖಾರ್ವಿ ಮದ್ದುಗುಡ್ಡೆ, ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ, ನವರಾತ್ರಿ ಸಮಿತಿಯ ಅಧ್ಯಕ್ಷೆ ಸಾವಿತ್ರಿ ಡಿ ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ವಸಂತಿ ಸಾರಂಗ, ಹಾಗೂ ಸಂಘದ ಸದಸ್ಯೆಯರ ಸಹಿತ ಸಮಾಜ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ವಲಯ ಶಿರೂರು ಕಾರ್ಯಕ್ಷೇತ್ರದ ಅಳ್ವೆಗೆದ್ದೆ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಶ್ರೀ ವಿನಾಯಕ ಹಾಗೂ ಪ್ರಿಯದರ್ಶಿನಿ ಜ್ಞಾನವಿಕಾಸ ಕೇಂದ್ರದಲ್ಲಿ ವರಲಕ್ಷ್ಮಿ ಪೂಜೆ ಮತ್ತು ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರಘುರಾಮ್ ಕೆ. ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದರು. ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ಕೆ ವಿನಾಯಕ್ ಪೈ, ಸಿ.ಎಸ್.ಸಿ ಸೆಂಟರಿನಲ್ಲಿ ಸಿಗುವಂತಹ ಸೌಲಭ್ಯವನ್ನು ತಿಳಿಸಿ, ಅದನ್ನು ಉಪಯೋಗಿಸಿಕೊಳ್ಳಿ ಎಂದರು. ಭೀಮಾ ಜ್ಯೋತಿ ಇನ್ಶೂರೆನ್ಸ್ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ವಲಯದ ಮೇಲ್ವಿಚಾರಕರು, ಕೇಂದ್ರದ ಸಂಯೋಕಿಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿನಿಧಿ ರೇವತಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೃಹ ರಕ್ಷಕ ದಳ ಬೈಂದೂರು ಘಟಕದ ವತಿಯಿಂದ ಬೈಂದೂರು ತಾಲೂಕು ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೈಂದೂರು ತಾಲ್ಲೂಕು ಜೆ ಎಮ್ ಎಫ್ ಸಿ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಜ್ಞಾನೇಶ್ ಮುಗುಳಿ ಮಾತನಾಡಿ ಗೃಹ ರಕ್ಷಕರಿಗೆ ರಾಷ್ಟ್ರ ಧ್ವಜ ನೀಡಿ ರಾಷ್ಟ್ರ ಪ್ರೇಮದೊಂದಿಗೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಗೃಹ ರಕ್ಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಎಪಿಪಿ ವರ್ಷಾ ಆರ್ ಶೆಟ್ಟಿ, ಸರ್ಕಾರಿ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳು, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕಿ ಜಯಶ್ರೀ, ಹೆಡ್ ಕಾನ್ಸ್ ಟೇಬಲ್ ರಾಮಚಂದ್ರ ಎಸ್, ಶ್ರೀ ಮಂಜುನಾಥ ಎ ಕೊಲ್ಲೂರು, ಮೌನೇಶ್ ಗಂಗೊಳ್ಳಿ, ಬೈಂದೂರು ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿ ವಸಂತಿ ಹಾಗೂ ಬೈಂದೂರು ಗೃಹ ರಕ್ಷಕ ದಳ ಘಟಕದ ಗೃಹ ರಕ್ಷಕರು ಹಾಗೂ ಗೃಹ ರಕ್ಷಕಿಯರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್ ಹಿಂಬದಿ ಸೀಟಿನಲ್ಲಿ ಕುಳಿತು ಶಾಲೆಗೆ ತೆರಳುತ್ತಿದ್ದಾಗ ದನ ಅಡ್ಡಬಂದು ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯೊಂಡಿದ್ದ ಶಿಕ್ಷಕ ಗುರುವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ (32) ಮೃತ ದುರ್ದೈವಿ. ಗುರುವಾರ ಬೆಳಿಗ್ಗೆ ಎಂದಿನಂತೆ ಮುದೂರು ಸೆಳ್ಕೋಡು ನಿವಾಸಿ, ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಪತಿ ಶ್ರೀಕಾಂತ್ ಅವರೊಂದಿಗೆ ಬೈಕಿನಲ್ಲಿ ಮನೆಯಿಂದ ಹೊರಟಿದ್ದರು. ವಂಡ್ಸೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನ ಅಡ್ಡಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ಸ್ಕಿಡ್ ಆಗಿ ಬಿದ್ದಿದ್ದಾರೆ. ಶ್ರೀಕಾಂತ್ ಅವರಿಗೆ ಸಣ್ಣಪಟ್ಟು ಗಾಯಗಳಾಗಿದ್ದರೇ, ಹಿಂಬದಿಯಲ್ಲಿ ಕುಳಿತಿದ್ದ ಅಂಬಿಕಾ ಅವರಿಗೆ ತಲೆ ಭಾಗಕ್ಕೆ ಪೆಟ್ಟು ಬಿದ್ದತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 2018ರಲ್ಲಿ ಹೆಮ್ಮಾಡಿ ಸರಕಾರಿ ಮಾದರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಅವರಿಗೆ ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಅವರು ರಾಖಿ ಕಟ್ಟಿ ಶುಭಕೋರಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಮೊಗವೀರ ಸೇರಿದಂತೆ ಬೈಂದೂರು ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಭಾಗವಹಿಸಿದ್ದರು. ಬಳಿಕ ಬೈಂದೂರು ಪೊಲೀಸ್ ಠಾಣೆ ಸೇರಿದಂತೆ ಇನ್ನಿತರ ಕಛೇರಿಗೆ ತೆರಳಿ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಕೋರಲಾಯಿತು.
