ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿಗೆ ಸಮೀಪದ ಹಾಲ್ಕಲ್ನಲ್ಲಿರುವ ಅಂತರ್ವನಮ್ ಹೋಮ್ಸ್ಟೇನಲ್ಲಿ ಸದಾನಂದ ಕಾನ್ಫರೆನ್ಸ್ ಹಾಲ್ನ್ನು ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭ ಸಂಸದರು ಮಾತನಾಡಿ, ಸದಾ ಕ್ರೀಯಾಶೀಲವಾಗಿ ಊರಿನ ಅಭಿವೃದ್ಧಿಯ ಬಗ್ಗೆ ತೊಡಗಿಸಿಕೊಳ್ಳುವ ವೆಂಕಟೇಶ ಕಿಣಿ ಅವರು, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಯಾವಾಗಲೂ ಬೇಡಿಕೆ ಇರಿಸುತ್ತಾರೆ. ಇಂತಹ ಜನಪರ ಕಾಳಜಿ ಇರುವ ವ್ಯಕ್ತಿಗಳಿಂದ ಸಲಹೆ ನೀಡುವುದರಿಂದ ಒಂದಿಷ್ಟು ಉತ್ತಮ ಯೋಜನೆಗಳ ಅನುಷ್ಠಾನ ಸಾಧ್ಯವಾಗುತ್ತದೆ ಎಂದರು. ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ, ಸದಾಶಿವ ಡಿ. ಪಡುವರಿ, ಆರ್.ಎಸ್. ವೆಂಚರ್ಸ್ನ ರಾಜೀವ ಕುಮಾರ್, ಅಂತರ್ವನಮ್ ಮಾಲಕರಾದ ಕೆ. ವೆಂಕಟೇಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು : ಕೊಡಚಾದ್ರಿಗೆ ರೋಪ್ವೇ: ರಾಷ್ಟ್ರೀಯ ಪರ್ವತ್ ಮಾಲ್ ಯೋಜನೆಯಡಿಯಲ್ಲಿ ದೇಶದ ಪ್ರಮುಖ 10 ಪರ್ವತ ಪ್ರಧೇಶಗಳಿಗೆ ರೋಪ್ವೇ ನಿರ್ಮಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು. ಇದಕ್ಕಾಗಿ ಅರ್ಜಿ ಸಲ್ಲಿಸಿದ್ದ ರಾಜ್ಯದ 15 ಯೋಜನೆಗಳ ಪೈಕಿ ಅಂಜನಾದ್ರಿ ಬೆಟ್ಟ ಹಾಗೂ ಕೊಡಚಾದ್ರಿಗೆ ರೋಪ್ವೇ ನಿರ್ಮಾಣಕ್ಕೆ ಒಪ್ಪಿಗೆ ದೊರಕಿದ್ದು, ಶೀಘ್ರದಲ್ಲಿ ಆದೇಶ ಪತ್ರ ಸಿಗಲಿದೆ. ಇದರಿಂದ ಪ್ರವಾಸೋದ್ಯಮ ಅಭಿವೃಧ್ಧಿಯಾಗಲಿದೆ. ಕೊಡಚಾದ್ರಿಗೆ ಕ್ರಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಪ್ರಾಸ್ತಾಪವನ್ನು ಕೈಬಿಡಲಾಗಿದ್ದು, ಬೆಟ್ಟಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಕೊಲ್ಲೂರು ಸಮೀಪದ ಹಾಲ್ಕಲ್ನಲ್ಲಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಒಂದೇ ಸರ್ಕಾರದ ಅವಧಿಯಲ್ಲಿ ಸೌಕೂರು ನೀರಾವರಿ ಯೋಜನೆ ದಾಖಲೆಯ ಅವಧಿಯಲ್ಲಿ ಪೂರ್ಣಗೊಳ್ಳುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ 2.69 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲು 596 ಕೋಟಿ ರೂ. ವೆಚ್ಚದಲ್ಲಿ ರೂಪಿಸಿರುವ ಬಹುಗ್ರಾಮ ಯೋಜನೆಯ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿವಿಧೆಡೆ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೈಂದೂರು ಸಿಪಿಐ ನೇತೃತ್ವದ ಅಪರಾದ ಪತ್ತೆ ದಳದ ತಂಡ ಬಂಧಿಸಿ, ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ ವಾಸವಿರುವ, ಮೂಲತಃ ಮೂಡ್ಲಕಟ್ಟೆ ನಿವಾಸಿ ವಿಜಯ್ (48) ಬಂಧಿತ ಆರೋಪಿ. ಆರೋಪಿಯು ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೃತ್ಯಕ್ಕೆ ಬಳಸಿದ ಬೈಕಿನ ಚಲನವಲನಗಳ ಮೇಲೆ ನಿಗಾಯಿಟ್ಟ ಪೊಲೀಸರು ಸಿಸಿ ಟಿ.ವಿ ಪೂಟೇಜ್ ಹಾಗೂ ಆಧುನಿಕ ತಂತ್ರಜ್ಞಾನದ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡವು ಮುಂಬೈ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಮನ್ ಎಂಬಲ್ಲಿ ಬಂಧಿಸಿತ್ತು. ಈತನ ವಿರುದ್ಧ ಕೊಲ್ಲೂರು, ಕೋಟ ಠಾಣೆಯಲ್ಲಿ ಒಂದೊಂದು ಪ್ರಕರಣ, ಮುಂಬೈ ನವಾಗರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಮುಲುಂಡ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯಿಂದ 24.4 ಗ್ರಾಂ ತೂಕದ ಒಂದು…
ಕೊಲ್ಲೂರು – ಕೊಡಚಾದ್ರಿ ರೋಪ್ವೇ ನಿರ್ಮಾಣಕ್ಕೆ ಅನುಮೋದನೆ: ಸಂಸದ ಬಿ. ವೈ. ರಾಘವೇಂದ್ರ ಮಾಹಿತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ದಾಸನಾಡಿಯ ಶ್ರೀ ವೆಂಕಟರಮಣ ದೇವಸ್ಥಾನದ ತಾಮ್ರಚ್ಚಾದಿತ ನೂತನ ಶಿಖರ ಪ್ರತಿಷ್ಠೆ, ನೂತನ ಶಿಲಾಮಯ ಹೆಬ್ಬಾಗಿಲು, ಶಿಲಾಮಯ ಪೌಳಿ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸಂಸದ ಬಿ.ವೈ ರಾಘವೇಂದ್ರ ಅವರು ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದರ್ಶನವನ್ನು ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಸಂಸದ, ಶಾಸಕರನ್ನು ದೇವಳದ ವತಿಯಿಂದ ಗೌರವಿಸಲಾಯಿತು. ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ, ದೇವಳ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ, ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ ಹೊಸ್ಮನೆ, ಉತ್ಸವ ಸಮಿತಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ, ಕಾರ್ಯದರ್ಶಿ ಮಾದವ ಬಿಲ್ಲವ, ಅರ್ಚಕ ರವೀಂದ್ರ ಅಯ್ಯಂಗಾರ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಸಿದ್ಧಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಅತ್ಯಂತ ಅಪರೂಪದ ಶ್ರೀ ಅಯುತ ಚಂಡಿಕಾ ಮಹಾಯಾಗ ಯಶಸ್ವಿಯಾಗಿ ಸಂಪನ್ನಗೊಂಡಿತು.ಮೇ.8ರಂದು ಏಕಕಾಲದಲ್ಲಿ 100 ಯಾಗಕುಂಡಗಳಲ್ಲಿ ಯಾಗ ಆರಂಭಗೊಂಡಿತು. ಶ್ರೀ ಚಂಡಿಕಾ ಪಾರಾಯಣ ಮತ್ತು ಜಪ, ಸೋಮವಾರ ಶ್ರೀ ಚಂಡಿಕಾ ಪಾರಾಯಣ ಮತ್ತು ಜಪ, ಮೇ.10 ಮಂಗಳವಾರ ಶ್ರೀ ಅಯುತ ಮಹಾಯಾಗದ ಪೂರ್ಣಾಹುತಿಯೊಂದಿಗೆ ಸಂಪನ್ನ ಕಂಡಿತು. ಜ್ಯೋತಿಶಾಸ್ತ್ರ ವಿದ್ವಾನ್ ಶ್ರೀ ಟಿ.ವಾಸುದೇವ ಜೋಯಿಸರ ಧಾರ್ಮಿಕ ಮಾರ್ಗದರ್ಶನ ನೀಡಿದರು. ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಚಾತ್ರ, ಅನುವಂಶಿಕ ಧರ್ಮದರ್ಶಿ ಎ.ಚಂದ್ರಶೇಖರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮೂರು ದಿನಗಳ ಕಾಲ ಕಮಲಶಿಲೆಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಪೂರ್ಣಾಹುತಿಯ ಮಂಗಳವಾರ ಬೆಳಿಗ್ಗೆಯಿಂದ ಭಕ್ತಸಂದಣಿ ನೆರೆದಿತ್ತು. ಉಡುಪಿ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ಭಕ್ತರ ದಂಡು ಹರಿದು ಬಂತು. ಏಕಕಾಲದಲ್ಲಿ ನೂರು ಯಾಗ ಕುಂಡಗಳಲ್ಲಿ ಮೇಲೇದ್ದ ಹೊಗೆ ಗಗನಗಾಮಿಯಾಯಿತು. ಬೃಹತ್ ಯಾಗಶಾಲೆಯ ಯಜ್ಞಕುಂಡಗಳಿಂದ ಸುವಸ್ತುಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಶುಭಹಾರೈಸಿದರು. ಖ್ಯಾತ ಚಲನಚಿತ್ರ ನಿರ್ದೇಶಕ ಗುರದತ್ತ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಚಿತ್ರಕಲಾ ಸ್ವರ್ಧೆಯಲ್ಲಿ ವಿಜೇತರಾದ ಸುರಭಿಯ ವಿದ್ಯಾರ್ಥಿಗಳು ಹಾಗೂ ಸುರಭಿಯ ವಿದ್ಯಾರ್ಥಿ ಪೋಷಕರಿಗೆ ನಡೆಸಿದ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಐಸಿ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್., ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ನ ಮಣಿಕಂಠ ದೇವಾಡಿಗ, ರೋಟರಿ ಜಿಲ್ಲಾ ಲಿಟ್ರಸಿ ವೈಸ್ ಚೇರ್ಮನ್ ಐ ನಾರಾಯಣ, ಇಂಡಿಯನ್ ರೆಡ್ಕ್ರಾಸ್ ಸೊಸೈಟ್ ಬೈಂದೂರು ಘಟಕದ ಛೇರ್ಮನ್ ನಿತಿನ್ ಕುಮಾರ್ ಶೆಟ್ಟಿ, ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ನಿರ್ದೇಶಕ ಸುಧಾಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ವಿಶಿ? ಹಾಗೂ ಅಪರೂಪದ ಹಳೆ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ ಮತ್ತು ಶಾಶ್ವತ ನಿಧಿ ಸಂಗ್ರಹಣೆ ಅಭಿಯಾನ ಬೆಂಗಳೂರಿನ ಪೈವಿಸ್ತಾ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ನಡೆಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಶಾಲೆಗಳ ಹಳೆ ವಿದ್ಯಾರ್ಥಿಗಳಿಂದ ಆಯೋಜಿಸಲ್ಪಟ್ಟ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಆತ್ಮರಾಮ ಕಿಣಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಅವರು ಶಾಲೆಯ ಇತಿಹಾಸ, ನಡೆದು ಬಂದ ದಾರಿ, ಆಗಿರುವ ಅಭಿವೃದ್ಧಿ ಕಾರ್ಯಗಳು, ಶಾಲಾಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಸಹಕಾರ, ಕೊಡುಗೆಗಳನ್ನು ಸ್ಮರಿಸಿದರು. ಹಳೆ ವಿದ್ಯಾರ್ಥಿಗಳು ಶಾಲೆಯ ಮೇಲಿಟ್ಟಿರುವ ಪ್ರೀತಿ, ಅಭಿಮಾನವನ್ನು ಅವರು ಶ್ಲಾಘಿಸಿದರು. ಶಾಲೆ ಸಂಚಾಲಕ ಎನ್. ಸದಾಶಿವ ನಾಯಕ್ ಮಾತನಾಡಿ, ಶಾಲೆಗಳಲ್ಲಿ ಪ್ರಸ್ತುತ ಸಿಗುತ್ತಿರುವ ಸೌಲಭ್ಯಗಳು, ಮುಂದಿನ ಯೋಜನೆಗಳು, ಪ್ರಸಕ್ತ ಶಾಲಾ ಹಣಕಾಸಿನ ಪರಿಸ್ಥಿತಿ, ಕೋವಿಡ್-೧೯ ನಿಂದ ಶಾಲಾ ದೈನಂದಿನ ಚಟುವಟಿಕೆ ಹಾಗೂ ಆರ್ಥಿಕತೆಯ ಮೇಲಾದ ದುಷ್ಪರಿಣಾಮಗಳು ಮತ್ತು ಚೇತರಿಕೆಗಾಗಿ ಕೈಗೊಂಡಿರುವ ಪ್ರಯತ್ನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.10: ಸಮಾಜದಲ್ಲಿ ಕರುಣೆ ಮತ್ತು ಮಾನವೀಯ ವ್ಯಕ್ತಿತ್ವ ಹೆಚ್ಚು ಇರಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗಲಿದೆ. ಮಾನವರಲ್ಲಿ ಕರುಣೆ ಕಳೆದುಕೊಂಡಾಗ ಸ್ವಾರ್ಥ ಭಾವನೆ ಅಧಿಕವಾಗುತ್ತದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಇಂದು ನಗರದ ಭಾರತೀಯ ರೆಡ್ ಕ್ರಾಸ್ ಭವನದಲ್ಲಿ ನಡೆದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಹೆಚ್ಚಿನ ಮಾನವೀಯ ಮತ್ತು ಕರುಣೆಯ ಗುಣಗಳನ್ನು ಹೊಂದಿದ್ದು, ಹಲವು ಜನಪರ ಕಾರ್ಯಗಳು ಮಾಡಿ, ಸಮಾಜಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅವುಗಳನ್ನು ಮುಂದುವರೆಸುವುದು ನಮ್ಮ ಕರ್ತವ್ಯವಾಗಬೇಕು. ಮನುಷ್ಯ ಕರುಣೆ ಮತ್ತು ಮಾನವೀಯ ಗುಣಗಳನ್ನು ಕಳೆದುಕೊಂಡಾಗ ಸ್ವಾರ್ಥ ಮೂಡಿ, ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುತ್ತಾನೆ. ಆದ್ದರಿಂದ ಪ್ರತಿಯೊಂದು ಕ್ಷೇತ್ರದಲ್ಲೂ ಮಾನವೀಯ ಗುಣಗಳಿಂದ ಕಾರ್ಯನಿರ್ವಹಿಸಬೇಕು ಎಂದರು. ನಮ್ಮ ದೇಶದ ಮಣ್ಣಿನಲ್ಲಿ ಮಾನವೀಯ ಗುಣಗಳು ಇದ್ದು, ಜಗತ್ತಿನ ಎಲ್ಲಾ ಜಾತಿಗಳನ್ನು ನಾವು ಪ್ರೀತಿಸುತ್ತೇವೆ. ದೇಶದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಕಗಳನ್ನು ಪಡೆದು ಕೊಳ್ಳುದಕೋಸ್ಕರ ಮಕ್ಕಳನ್ನು ಶಾಲೆಗೆ ಕಳುಹಿಸ ಬಾರದು ಸಂಸ್ಕಾರಯುತ ಬದುಕಿನ ನಿರ್ಮಾಣಕ್ಕೆ ವಿದ್ಯೆ ಪೂರಕವಾಗಿರಬೇಕು ಹಣದಿಂದ ಜೀವನವನ್ನು ಸಫಲ ಮಾಡಿಕೊಳ್ಳಲು ಸಾಧ್ಯವಿಲ್ಲ ನಮ್ಮ ಸಂಸ್ಕೃತಿ ಸಂಸ್ಕಾರಯುತ ಬದುಕಿನಿಂದ ಅದು ಸಾಧ್ಯವಿದೆ ಶಂಕರಾಚಾರ್ಯರ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರ ಅನುಕರಣೀಯವಾಗಿದೆ ಎಂದು ಉಳ್ಳೂರು ಸ.ಹಿ.ಪ್ರಾ ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಅಡಿಗರು ಹೇಳಿದರು. ನಾವುಂದ ಬಡಾಕೆರೆ ವೈದಿಕ ಮಂದಿರದ ವಠಾರದಲ್ಲಿ ಭಾನುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ವಸಂತ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಶ್ರೀ ಶಾರದಾ ವಿದ್ಯಾ ಪೀಠಂ ಶೃಂಗೇರಿಯ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇ.ಮೂ.ಲೋಕೇಶ್ ಅಡಿಗ ಬಡಾಕೆರೆ ಅವರು ಮಾತನಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಬಿರಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಬಾಲ್ಯದ ನೆನಪುಗಳ ಜತೆಗೆ ಸಮಯ ಕಳೆದಿರುವುದು ಮಕ್ಕಳಿಗೂ ಸಂತೃಪ್ತಿಯನ್ನು ಕೊಟ್ಟಿದೆ ಮಕ್ಕಳು ಪ್ರತಿಭಾನ್ವಿತ ರಾಗಬೇಕು ಎನ್ನುವ ದೃಷ್ಟಿಯಿಂದ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದೆ ಎಂದರು. ಕಿರಿಮಂಜೇಶ್ವರ ದೇವಳದ…
