ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿಂದೂ ಸಂಗಮ ಆಯೋಜನಾ ಸಮಿತಿ ಸಾಲಿಗ್ರಾಮ ತಾಲೂಕು ನೇತೃತ್ವದಲ್ಲಿ ಇದೇ ಜ.25ರಂದು ಸಾಸ್ತಾನದಲ್ಲಿ ಬೃಹತ್ ಹಿಂದೂ ಸಂಗಮ ಏರ್ಪಡಿದ್ದು ಈ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಹಾಗೂ ಪೋಸ್ಟರ್ ಅನಾವರಣ ಕಾರ್ಯಕ್ರಮವು ಭಾನುವಾರ ಪಾಂಡೇಶ್ವರ ನಂದಿಕೇಶ್ವರ ದೇಗುಲದಲ್ಲಿ ಜರಗಿತು. ಈ ಕುರಿತು ಮಾತನಾಡಿದ ಸಮಿತಿಯ ಪ್ರಮುಖರಾದ ಸುರೇಂದ್ರ ಕೋಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹಿಂದೂ ಸಮುದಾಯದಲ್ಲಿ ಸಾಮರಸ್ಯದ ಜೀವನ ಒಂದೇ ಐಕ್ಯ ಮಂತ್ರ ಉದ್ದೇಶದಿಂದ ಹಿಂದೂ ಜಾಗೃತಿ ಸಂಗಮವನ್ನು ಪಕ್ಷಭೇದ ಮರೆತು ಎಲ್ಲೆಡೆ ಆಯೋಜಿಸಲಾಗುತ್ತಿದೆ. ಈ ಹಿನ್ನಲ್ಲೆಯಲ್ಲಿ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಿಂದ ಬೃಹತ್ ಶೋಭಯಾತ್ರೆ ಕೈಗೊಂಡು ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ನಲ್ಲಿ ಹಿಂದೂ ಸಂಗಮ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನೊರ್ವ ಪ್ರಮುಖರಾದ ಪಂಜು ಪೂಜಾರಿ ಯಡಬೆಟ್ಟು ಮಾತನಾಡಿ, ರಾಜಕೀಯ ಹಿತಾಸಕ್ತಿ ಬದಿಗಿರಿಸಿ ಹಿಂದೂ ಸಮುದಾಯಯವನ್ನು ಒಗ್ಗೂಡಿಸುವ ಜತೆಗೆ ಜಾಗೃತ ಸಮಾಜಕ್ಕೆ ಮುನ್ನುಡಿ ಇಡಲಿದೆ ಎಂದು ಎಲ್ಲರೂ ಏಕ ಮನಸ್ಸಿನಿಂದ ಭಾಗಿಯಾಗಲು ಕರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ–ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Merger and Acquisition of Commercial Banks: A Study with Special Reference to the Merger of SBI and its Associates” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಲಕ/ಪೋಷಕ-ಶಿಕ್ಷಕರ ಸಮಾಲೋಚನಾ ಸಭೆಯನ್ನು ನಡೆಸಲಾಗಿತ್ತು. ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಪಾಲಕ/ಪೋಷಕರಿಗೆ ಮಾಹಿತಿ ನೀಡಲು ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಚರ್ಚಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಆರಂಭಿಸಲಾಗಿರುವ ದೈಹಿಕ ಮತ್ತು ಮಾನಸಿಕ ದೃಡತೆಯನ್ನು ಹೆಚ್ಚಿಸುವ ಚಟುವಟಿಕೆಗಳ ಕುರಿತು ಪಾಲಕ-ಪೋಷಕರಿಗೆ ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಲಾಗಿತ್ತು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಾದ ಗಣೇಶ್ ನಾಯಕ್ ಅವರು ದೈಹಿಕ ಕ್ಷಮತೆಯನ್ನು ಶಾಲೆಯಲ್ಲಿ ಪರೀಕ್ಷಿಸುವ ಕ್ರಮವನ್ನು ಆರಂಭಿಸಿದ ಕುರಿತು ತಿಳಿಸಿದರು. ನಂತರ ಎಸ್.ಜಿ.ಎಫ್.ಐ (ಭಾರತದ ಶಾಲಾ ಕ್ರೀಡಾ ಫೆಡರೇಶನ್)ಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳನ್ನು ವಿವರಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಹಲವು ಪಾಲಕರು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಮುಕ್ತವಾಗಿ ತಮ್ಮ ಅನಿಸಿಕೆ ಹಾಗೂ ಸಲಹೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಸುಜಾತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಗ್ರಾಮೋತ್ಸವಗಳನ್ನು ಆಯೋಜಿಸಬೇಕೆಂಬ ಕಲ್ಪನೆ ಸಾಕಾರಗೊಂಡಿದ್ದು, ಪ್ರತೀ ಗ್ರಾಮಗಳಲ್ಲಿಯೂ ಇದು ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲಾ ಇಲಾಖೆಗಳು ಗ್ರಾಮಮಟ್ಟಕ್ಕೆ ಬಂದು ಜನರನ್ನು ಸ್ಪಂದಿಸುತ್ತಿದ್ದು, ಗ್ರಾಮದ ಜನರು ಎಲ್ಲವನ್ನೂ ಒಂದೇ ಸೂರಿನಡಿ ನೋಡುವಂತಹ ಸಾರ್ಥಕತೆ ಕಾಣುತ್ತಿದ್ದಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಕೊಲ್ಲೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಬುಧವಾರ ಇಲ್ಲಿನ ಸ.ಹಿ.ಪ್ರಾ ಶಾಲಾ ಆವರಣದಲ್ಲಿ ನಡೆದ ಕೊಲ್ಲೂರು ಗ್ರಾಮೋತ್ಸವದಲ್ಲಿ ಮಾತನಾಡಿದರು. ಸಂಜೀವಿನಿ ಸಂಘ ಎನ್ನುವುದು ಮುಂದಿನ ದಿನಗಳಲ್ಲಿ ಒಂದು ಹೊಸ ಕ್ರಾಂತಿಯನ್ನು ಸೃಷ್ಠಿಸಲಿದೆ. ರಾಮ್ಜೀ ಯೋಜನೆಯಲ್ಲಿ ಬರುವ ಅತೀ ಹೆಚ್ಚು ವ್ಯವಸ್ಥೆಗಳನ್ನು ಸಂಜೀವಿನಿ ಹೆಸರಿನಲ್ಲಿ ನೀಡಲಾಗುತ್ತಿದೆ. ಸಂಜೀವಿನಿ ಕೇವಲ ಹಣಕಾಸಿನ ವ್ಯವಹಾರ ಎಂದು ಕೆಲವರು ತಿಳಿದುಕೊಂಡಿರಬಹುದು ಆದರೆ ಇದೊಂದು ಇತರೇ ಆದಾಯದ ಸ್ವರೂಪವಾಗಿದ್ದು, ಗ್ರಾಮೀಣ ಜೀವನೋಪಾಯ ಇಲಾಖೆಯಾಗಿದೆ. ಮುಂದಿನ ದಿನಗಳಲ್ಲಿ ಸಂಜೀವಿನಿ ಸಂಘದವರೇ ಗ್ರಾಮೋತ್ಸವವನ್ನು ಆಯೋಜಿಸಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಪ್ರಸನ್ನಾ ಶರ್ಮಾ ಉದ್ಘಾಟಿಸಿದರು. ಇಬ್ಬರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಜನ ಸ್ಥಿತಪ್ರಜ್ಞರು, ಕಲಾಪ್ರಿಯರು ಎಂಬುದಕ್ಕೆ ಇಂದಿನ ಇನಿದನಿ ಸಂಗೀತ ಸಂಜೆ ಸಾಕ್ಷಿಯಾಗಿದೆ. ವರ್ಷದಿಂದ ವರ್ಷಕ್ಕೆ ಸಂಗೀತ ಪ್ರೇಮಿಗಳನ್ನು ಸಾಗರೋಪಾದಿಯಲ್ಲಿ ಸೆಳೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಈ ವರ್ಷ ಮೈದಾನ ತುಂಬಿದೆ. ಇನಿದನಿ ಕುಂದಾಪುರದ ಹೆಮ್ಮೆ ಎಂದು ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ನುಡಿದರು. ಅವರು ಇಲ್ಲಿನ ಬೋರ್ಡ್ ಹೈಸ್ಕೂಲು ಮೈದಾನದಲ್ಲಿ ಕಲಾಕ್ಷೇತ್ರ ಟ್ರಸ್ಟ್ ಭಾನುವಾರ ಹಮ್ಮಿಕೊಂಡ 14ನೇ ವರ್ಷದ ಇನಿದನಿ ಸಂಗೀತ ರಸಮಂಜರಿ ಹಳೆಯ ಚಲನಚಿತ್ರಗಳ ಗೀತಗಾಯನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ಣಾಟಕ ಬ್ಯಾಂಕ್ನ ಎಜಿಎಂ ರಮೇಶ್ ವೈದ್ಯ ಮಾತನಾಡಿ, ಇಡೀ ಇನಿದನಿ ರಾಜ್ಯದಲ್ಲೇ ಅತ್ಯಂತ ಗುಣಮಟ್ಟದ ಕಾರ್ಯಕ್ರಮವಿದು. ಮನತುಂಬಿ ಬಂದಿದೆ. ಜೀವನದ ಎಲ್ಲಾ ನೋವು ಮರೆಸುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಅತೀವ ಸಂತಸ ನೀಡಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಕಲಾಕ್ಷೇತ್ರದ ಜತೆಗಿರುತ್ತದೆ ಎಂದರು. ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಶುಭಹಾರೈಸಿ, ಒಮ್ಮೆ ಇನಿದನಿಯಲ್ಲಿ ಭಾಗವಹಿಸಿದವರು ರಸ ಘಳಿಗೆಯನ್ನು ಜೀವನದಲ್ಲಿ ಎಂದಿಗೂ ಮರೆಯಲಾರರು ಎಂದರು. ಪುಣೆ ಉದ್ಯಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಆಗಬೇಕು. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮಕ್ಕಳಿಲ್ಲದೆ ಅನೇಕ ಸರಕಾರಿ ಶಾಲೆಗಳನ್ನು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದೊದಗುತ್ತಿದೆ. ಸರಕಾರ ಇಂದು ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ ಆದರೂ ಸಹ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು ಅವರು ಇಲ್ಲಿನ ಕರ್ಕುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ 2025-26 ಹೊಂಗಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ ಗ್ರಾಮಸ್ಥರು. ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಇಂದು ಆಂಗ್ಲ ಮಾಧ್ಯಮ ಶಾಲೆಗಳಿಗೆ ನಾವೇ ಹಣವನ್ನು ಕೊಟ್ಟು, ಶಿಕ್ಷಕರಿಗೆ ಸಂಬಳವನ್ನು ಕೊಟ್ಟು ಶಾಲೆಗಳನ್ನು ನಡೆಸುವಂತೆ ಮಾಡಿ ನಮ್ಮ ಮಕ್ಕಳನ್ನು ಅವರ ಶಾಲೆಗೆ ಕಳುಸುತ್ತೇವೆ, ಆದರೆ ಇಂದು ಸರಕಾರಿ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ ಬಹಳಷ್ಟು ಮೆರಿಟ್ನ ಶಿಕ್ಷಕರು ಬರುತ್ತಿದ್ದಾರೆ. ಆದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಇತಿಹಾಸ ಪ್ರಸಿದ್ಧ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಹಾಲು ಹಬ್ಬ ಗೆಂಡೋತ್ಸವ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು. ದೇಗುಲದಲ್ಲಿ ನೆರದಿದ್ದ ಸಾವಿರಾರು ಭಕ್ತಾಧಿಗಳು ಹರಕೆ ರೂಪದಲ್ಲಿ ಗೆಂಡೋತ್ಸವ ಕಾರ್ಯದಲ್ಲಿ ಭಾಗಿಯಾದರು. ದೇವಿ ಅಮೃತೇಶ್ವರೀಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ರೂಪದಲ್ಲಿ ತಾಯಿಯನ್ನು ಸಂದರ್ಶಿಸಿ ಶ್ರೀನಾಗದೇವರಿಗೆ ಹಾಲಿಟ್ಟು ಸೇವೆ ಸಮರ್ಪಿಸಿ ಪಾತ್ರಿವರ್ಗ ಗೆಂಡವನ್ನು ಸ್ಪರ್ಶಿಸಿ ನಂತರ ಭಕ್ತಾಧಿಗಳು ಹರಕೆ ಸಂದಾಯಗೊಳಿಸಿಕೊಂಡರು. ದೇಗುಲದ ಅರ್ಚಕ ವರ್ಗ ಜೋಗಿ ಸಮುದಾಯ ಈ ಕೈಂಕರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಮಂಡಳಿಯ ಸದಸ್ಯರಾದ ರತನ್ ಐತಾಳ್, ಸುಭಾಶ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಶಿವ ಪೂಜಾರಿ, ಜ್ಯೋತಿ ಡಿ. ಕಾಂಚನ್, ಸುಧಾ ಎ. ಪೂಜಾರಿ, ಚಂದ್ರ ಆಚಾರ್, ಸುಬ್ರಾಯ ಜೋಗಿ ಮತ್ತು ಮಾಜಿ ಟ್ರಸ್ಟಿಗಳು, ಗ್ರಾಮದ ಪ್ರಮುಖರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ವಿದ್ಯುಕ್ತವಾಗಿ ಸಂಪನ್ನಗೊಂಡಿತು. ರಾತ್ರಿ ಮಹಾಅನ್ನಸಂತರ್ಪಣೆ ಸಾವಿರಾರು ಭಕ್ತಾಧಿಗಳು ಪ್ರಸಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ಯಾದ ಕುವೈಟ್ನ ನೇರಂಬಳ್ಳಿ ಸುರೇಶ್ ರಾವ್ ಅವರಿಗೆ ಕನ್ನಡ ಭವನದ ಗೌರವಾನ್ವಿತ “ಸಮಾಜ ಸೇವಾ ರತ್ನ ಪ್ರಶಸ್ತಿ – 2026” ಲಭಿಸಿದೆ. ಗಲ್ಫ್ ರಾಷ್ಟ್ರ ಕುವೈಟ್ನಲ್ಲಿ ಕರ್ನಾಟಕ ಮೂಲದ ಹಲವಾರು ಸಂಘ-ಸಂಸ್ಥೆ ಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಗಲ್ಫ್ ಕನ್ನಡಿಗರ ಒಕ್ಕೂಟ (GKO) ಕುವೈತ್ ಉಪಾಧ್ಯಕ್ಷರು ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ (KPCC) ಕುವೈತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಾಖಲೆಯ ಸ್ವಯಂ ರಕ್ತದಾನಕ್ಕಾಗಿ ಹಾಗೂ ಕ್ವಿಜ್ ವಿಜೇತನಾಗಿ ಭಾರತೀಯ ರಾಯಭಾರಿ ಕಚೇರಿ ಕುವೈಟ್ನಿಂದ ಪ್ರಸಂಶಾ ಪತ್ರಗಳು, ಕರ್ನಾಟಕ ರಾಜ್ಯ ಸರಕಾರದಿಂದ “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2020”, ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿ ಅವರು ಭಾಗವಹಿಸಿದ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭ – 2023ರಲ್ಲಿ ಸನ್ಮಾನ ಸ್ವೀಕಾರ, ಕನ್ನಡ ಸಂಘ ಮಸ್ಕತ್ ಹಾಗೂ ಕೆಪಿಸಿಸಿ ಯಿಂದ “ವಿಶ್ವಮಾನ್ಯ ಪ್ರಶಸ್ತಿ –…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಕ್ರೀಡಾ ಪತ್ರಕರ್ತ ಸೋಮಶೇಖರ ಪಡುಕೆರೆ ಅವರು 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೋಮಶೇಖರ್ ಅವರು ಪತ್ರಿಕೋದ್ಯಮದಲ್ಲಿ ಸುಮಾರು ಮೂರು ದಶಕಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ಇವರು ಕನ್ನಡದ ಮೊದಲ ಕ್ರೀಡಾ ವೆಬ್ಸೈಟ್ sportsmail.net ನ ಸಂಸ್ಥಾಪಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಎ ಪದವೀಧರರಾದ ಅವರು ಈ ಹಿಂದೆ ಅವರು ಮುಂಬೈ ಹಾಗೂ ಕರ್ನಾಟಕದಲ್ಲಿ ‘ಟೈಮ್ಸ್ ಆಫ್ ಇಂಡಿಯಾ’ ಮತ್ತು ‘ಕನ್ನಡ ಪ್ರಭ’ ಸೇರಿದಂತೆ ವಿವಿಧ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಕಬಡ್ಡಿ, ಫುಟ್ಬಾಲ್, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು, ತಮ್ಮ ವರದಿಗಳ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ► ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರಿಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ – https://kundapraa.com/?p=94758 .
