ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಶುಕ್ರವಾರ ಉಪ್ಪುಂದ ಮಾತೃಶ್ರೀ ಸಭಾಭವನಧಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ಮೀನುಗಾರಿಕಾ ಋತುವು ಸಂಪದ್ಭರಿತವಾಗಿರಲೆಂದು ಹಾರೈಸಿ ಸಂಘದ ಪ್ರತಿಯೊಬ್ಬ ಸದಸ್ಯರು ಸಂಘದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಿ, ಕಾಲಕಾಲಕ್ಕೆ ಸೂಕ್ತ ಸಲಹೆಗಳನ್ನು ನೀಡುವುದರ ಮುಖೇನ ಸಂಘದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ತಿಳಿಸಿದರು. ಇದೇ ಸಂಧರ್ಭ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಾದ ನಾಗರಾಜ ಮೊಗವೀರ, ಜಯರಾಮ ಖಾರ್ವಿ, ರಾಮ ಖಾರ್ವಿ, ಪುರುಷೋತ್ತಮ ಖಾರ್ವಿ ಇವರ ವಾರೀಸುದಾರರಿಗೆ ತಲಾ ರೂ.1,95,000/- ಮೀನುಗಾರಿಕೆ ಸಂಧರ್ಭ ಮೃತರಾದ ಸಂಘದ ಸದಸ್ಯರಾದ ರಾಮದಾಸ ಖಾರ್ವಿ, ಇವರ ವಾರೀಸುದಾರರಿಗೆ ರೂ.1,50,000/- ಮತ್ತು ಪಟ್ಟೆಬಲೆ ದೋಣಿ ಸದಸ್ಯರಾದ ಚರಣ್ ರಾಜ್ ಖಾರ್ವಿ ಮತ್ತು ಅಣ್ಣಪ್ಪ ಮೊಗವೀರ, ಇವರ ವಾರೀಸುದಾರರಿಗೆ ತಲಾ ರೂ.50,000/- ಮರಣೋತ್ತರ ನಿಧಿ ಚೆಕ್ ಹಾಗೂ ಅರೆಹಾಡಿ ಹಿಂದು ರುದ್ರಭೂಮಿ ನಿರ್ವಹಣಾ ಸಮಿತಿ ಅಭಿವೃದ್ದಿಗೆ ರೂ.50,000/-…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಾಗುರಿನ ಸಂದೀಪನ್ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವೇಶ್ವರ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಪಾಲನಾಧಿಕಾರಿ ಡಾ. ಸರೋಜ ಎಂ. ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್ ಘಟಕದ ವತಿಯಿಂದ “ಯಶಸ್ಸಿನಲ್ಲಿ ಗುರುವಿನ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈಯ ಇಸ್ಕಾನ್ ಸಂಸ್ಥೆಯ ಲೋಕಭವನ ಮಾತಾಜಿ ಆಗಮಿಸಿ ವ್ಯಕ್ತಿಯ ಜೀವನದಲ್ಲಿ ಒಬ್ಬ ಗುರುವಿನ ಪಾತ್ರ ಯಾವ ರೀತಿಯಲ್ಲಿ ಬಹುಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು.ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಾಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಉಡುಪಿಯಿಂದ ಕುಂದಾಪುರಕ್ಕೆ ಭಾನುವಾರ ಹೊರಟ ಖಾಸಗಿ ಬಸ್ಸಿನಲ್ಲಿ ಯುವತಿಯರಿಗೆ ಕಿರುಕುಳ ನೀಡಿದ ಯುವಕರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ನಿವಾಸಿ ಕೀರ್ತಿ, ಉಚ್ಚಿಲ ನಿವಾಸಿಗಳಾದ ನವೀತ ಮತ್ತು ಸಚೀತಾ ಬಂಧಿತರು. ಉಡುಪಿಯಿಂದ ಕುಂದಾಪುರಕ್ಕೆ ಹೊರಟ ಬಸ್ಸಿನಲ್ಲಿ ಮೂರ್ನಾಲ್ಕು ಯುವತಿಯರು ಏರಿ ಬ್ರಹ್ಮಾವರ ಕಡೆ ಹೊರಟಿದ್ದರು. ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಿದ್ದು, ಮೂವರು ಯುವಕರು ಉಡುಪಿಯಲ್ಲೇ ಹತ್ತಿದ್ದರು. ಬಸ್ ಉಡುಪಿ ಬಿಟ್ಟ ನಂತರ ಯುವಕರು ಪುಂಡಾಟ ಶುರು ಮಾಡಿ ಯುವತಿಯರ ಜಡೆ ಎಳೆದು, ಮೈ ಕೈ ಮುಟ್ಟಲು ಪ್ರಯತ್ನಿಸಿ ಕಿರುಕುಳ ನೀಡಲು ಶುರು ಮಾಡಿದ್ದರು. ಬಸ್ನಲ್ಲಿ ಅಷ್ಟೇನು ಪ್ರಯಾಣಿಕರು ಇಲ್ಲದ ಕಾರಣ ಭಯಗೊಂಡ ಯುವತಿಯ ಸಂತೆಕಟ್ಟೆಯಲ್ಲಿ ಬಸ್ ಇಳಿದಿದ್ದಾರೆ. ಸಂತೆಕಟ್ಟೆಯಲ್ಲಿ ಮತ್ತೊಂದು ಬಸ್ ಏರಿ ಯುವತಿಯರು ಪ್ರಯಾಣ ಮುಂದುವರಿಸಿದ್ದಾರೆ. ಬಸ್ ನಿರ್ವಾಹಕನಿಗೆ ತಮಗಾದ ಕಿರುಕುಳ ಬಗ್ಗೆ ಮಾಹಿತಿ ನೀಡಿದ್ದಾರೆ. ಯುವತಿಯರು ಪ್ರಯಾಣಿಸುತ್ತಿದ್ದ ಬಸ್ ಕಂಡಕ್ಟರ್ ಅಲ್ಲಿ ಕುಂದಾಪುರ ಬಸ್ ಏಜೆಂಟರಿಗೆ ವಿಷಯ ಮುಟ್ಟಿಸಿ ಕುಂದಾಪುರ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನಗಳ್ಳಿ ಗ್ರಾಮದ ನಿವಾಸಿ ಡಾ. ಸಂಗೀತಾ ಹೊಳ್ಳ ತಾಜ್ ಮಿಸ್ ಯುನಿವರ್ಸ್ 2022 ಸ್ವರ್ಧೆಯಲ್ಲಿ ವಿಜೇತರಾಗಿದ್ದಾರೆ. ಎನ್ಎಂಸಿ ಕಂಪನಿಯಲ್ಲಿ ಡಾಟಾ ಸೈಂಟಿಸ್ಟ್ ಆಗಿರುವ ಡಾ. ಸಂಗೀತಾ ಹೊಳ್ಳ, ಉತ್ತರಪ್ರದೇಶದ ಆಗ್ರಾ ಕ್ರಿಸ್ಟಲ್ ಸರೋವರ್ ಪ್ರೀಮಿಯರ್ ಹೋಟೆಲ್ನಲ್ಲಿ ಕಳೆದ ತಿಂಗಳು ನಡೆದ ತಾಜ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಶ್ವ ಸುಂದರಿ ವಿಭಾಗದಲ್ಲಿ 25 ಮಂದಿ ಭಾಗವಹಿಸಿದ್ದು, ಸಂಗೀತಾ ಅಂತಿಮ ಸುತ್ತುಗೆ ಆಯ್ಕೆಯಾಗಿದ್ದರು. ಅವರು ಮಿಸ್ ಯುನಿವರ್ಸ್ 2022 ಮತ್ತು ಮಿಸ್ ಯುನಿವರ್ಸ್ ಬ್ಯೂಟಿ ವಿತ್ ಬ್ರೈನ್ ಎಂಬ 2 ಪ್ರಶಸ್ತಿ ಗೆದ್ದಿದ್ದರು. ಈಕೆ ಕುಂದಾಪುರ ಆನಗಳ್ಳಿಯ ಕರ್ಣಾಟಕ ಬ್ಯಾಂಕ್ ಬೆಂಗಳೂರು ಉದ್ಯೋಗಿ ಲಕ್ಷ್ಮೀನಾರಾಯಣ ಹೊಳ್ಳ ಮತ್ತು ದಿ. ನಿರ್ಮಲಾ ಹೊಳ್ಳ ಅವರ ಪುತ್ರಿ. ಆಹಾರ, ವಸತಿ ಮತ್ತು ಮುಖ್ಯವಾಗಿ ಶಿಕ್ಷಣವಿಲ್ಲದೆ ಭಿಕ್ಷೆ ಬೇಡುವ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಬಯಕೆ ಇದೆ. ರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಬೇಕು. ಮೂಲಭೂತ ಶಿಕ್ಷಣ ಮುಖ್ಯವಾಗಿದ್ದು, ಅಜ್ಞಾನದ ಗೋಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಎನ್.ಹೆಚ್-66ರ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.ಆಂಧ್ರಪ್ರದೇಶ ಮೂಲದ ಆದಿತ್ಯ ರೆಡ್ಡಿ (18) ಹಾಗೂ ಕಲ್ಲೂರು ತರುಣ್ ಕುಮಾರ ರೆಡ್ಡಿ (19) ಮೃತ ದುರ್ದೈವಿಗಳು. ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಇವರು, ಮಣಿಪಾಲದಲ್ಲಿ ರೆಂಟ್ ಬೈಕ್ ಪಡೆದು ಮುರುಡೇಶ್ವರಕ್ಕೆ ತೆರಳುತ್ತಿದ್ದ ಸಂದರ್ಭ ಕಂಬದಕೋಣೆಯಲ್ಲಿ ಈ ಘಟನೆ ನಡೆದಿದೆ. ಗಂಗೊಳ್ಳಿಯ 24×7 ಆಪತ್ಭಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾದರು. ಇವರಿಗೆ ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ, ನದಿಮ್ ಸಹಕರಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆರೆಹಾವಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ಕಂಡಿಕೇರೆ, ನಾಡ ಗ್ರಾಮದ ಚಿಕ್ಕಳ್ಳಿ ಭಾಗಗಳಿಗೆ ಉದ್ಯಮಿ ಹಾಗೂ ಸಮಾಜ ಸೇವಕ ನಿತಿನ್ ನಾರಾಯಣ್ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಅವರು ದೂಣಿಯ ಮೂಲಕ ತೆರಳಿ 100ಕ್ಕೂ ಅಧಿಕ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಹಾಗೂ ನೆರೆಯ ಸಂದರ್ಭ ಸೇವೆಯಲ್ಲಿ ತೊಡಗಿಕೊಳ್ಳುವ ಸ್ಥಳೀಯ ಯುವಕರಿಗೆ ಸೇಫ್ ಜಾಕೆಟ್ಗಳನ್ನು ವಿತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಕ್ಕಿಂತ ಶ್ರೇಷ್ಠವಾದುದು ನಿಸ್ಚಾರ್ಥ ಸೇವೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಮಕ್ಷತ್ರಿಯ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶ್ರೀ ರಾಮ ವಿವಿಧೋದ್ಧೇಶ ಟ್ರಸ್ಟ್ ಜುಲೈ.24ರ ಭಾನುವಾರ ಹತ್ತನೇ ವರ್ಷದ ಟ್ರಸ್ಟ್ ದಿನಾಚರಣೆ ಆಚರಿಸಲಿದೆ ಎಂದು ಆಡಳಿತ ಟ್ರಸ್ಟೀ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು. ಬೈಂದೂರಿನಲ್ಲಿ ಶನಿವಾರ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬೈಂದೂರು ಪರಿಸರದ ರಾಮಕ್ಷತ್ರಿಯ ಸಮುದಾಯದ ವಿದ್ಯಾರ್ಥಿಗಳು, ವಿಧವೆಯರು, ವಸತಿ ರಹಿತರು, ಅಶಕ್ತರು, ಅನಾಥರು, ರೋಗಿಗಳ ಹಾಗೂ ಬಡವರ ಸಹಾಯಕ್ಕಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅಗತ್ಯ ಸಹಕಾರ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ಕಳೆದ ಹತ್ತು ವರ್ಷಗಳಿಂದ ಟ್ರಸ್ಟ್ ಕಾರ್ಯಪ್ರವೃತ್ತವಾಗಿದೆ ಎಂದರು. 2012 ರಿಂದ ಈ ವರೆಗೆ 20 ಮಂದಿ ಟ್ರಸ್ಟಿಗಳನ್ನು ಒಳಗೊಂಡು ಕಾರ್ಯಾಚರಿಸುತ್ತಿರುವ ಸಂಸ್ಥೆಯು ವಿವಿಧ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಶ್ರೀ ರಾಮ ಪ್ರತಿಭಾ ಪುರಸ್ಕಾರ ಯೋಜನೆಯ ಮೂಲಕ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಹಾಗೂ ಪದವಿ ತರಗತಿಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ವತಿಯಿಂದ ತನ್ನ ಸಾಮಾಜಿಕ ಜವಾಬ್ದಾರಿ ಚಟುವಟಿಕೆಯಡಿ ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಎರಡು ಐಸಿಯು ಬೆಡ್ಗಳನ್ನು ಕೊಡುಗೆಯಾಗಿ ನೀಡಿತು. ಹಾರಾಡಿಯಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ರೋಟರಿ ಕ್ಲಬ್ ಬ್ರಹ್ಮಾವರ ಅವರ ಸುವರ್ಣ ಮಹೋತ್ಸವ ಯೋಜನೆಯ ಸಂದರ್ಭದಲ್ಲಿ ಕೊಡುಗೆಯಾಗಿ ನೀಡಲಾಗಿದ್ದು ಇದನ್ನು ಡಾ. ಎ.ವಿ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ನಿರ್ವಹಿಸುತ್ತದೆ. ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ಸ್ ಸಂಸ್ಥೆಗಳ ಫಿಸಿಯೋಕೇರ್, ಫಿಸಿಯೋಥೆರಪಿ ಮತ್ತು ಪುನರ್ವಸತಿ ಕೇಂದ್ರದ ಉದ್ಘಾಟನೆಯ ಸಂದರ್ಭದಲ್ಲಿ ಎರಡು ಐಸಿಯು ಹಾಸಿಗೆಗಳನ್ನು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ ಶೆಟ್ಟಿ ಹಸ್ತಾಂತರಿಸಲಾಯಿತು. ಡಾ. ಪಿ. ವಿ. ಭಂಡಾರಿ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಸದಸ್ಯರು, ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ಸ್ ಸಂಸ್ಥೆಯ ಪಾಲುದಾರ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಘಟನೆ ಶನಿವಾರ ನಡೆದಿದೆ. ಮಳೆಯಿಂದಾಗಿ ಕುಂಭಾಸಿ ಕೊರಡಿ ಕ್ರಾಸ್ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದ್ದು ಮಳೆ ನಿಂತಿದ್ದರಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಅದೇ ಹೊಂಡಕ್ಕೆ ಇಳಿದಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರ 300 ಮೀಟರ್ ದೂರದ ತನಕ ಡಿವೈಡರ್ ಮೇಲೆ ಬಸ್ ಚಲಿಸಿದೆ. ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ.
