ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ತುಣುಕನ್ನು ಹರಿಯಬಿಟ್ಟಿರುವುದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ಪಷ್ಟನೆ ನೀಡಿದ್ದು, ಜ.5ರಿಂದ ಜಾರಿಯಾದ ಆದೇಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ. ಸರಕಾರದ ಆದೇಶದಂತೆ ದಿನಾಂಕ 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಮೊದಲ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಜ.19ರಿಂದ ಆರಂಭಗೊಳ್ಳಲಿದೆ. ಮೊದಲ ಹಂತದಲ್ಲಿ ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ ವಿದ್ಯುತ್ ಚಾಲಿತ ರೈಲು ಸಂಚಾರವಿರಲಿದೆ. ಈಗಾಗಲೇ ಇರುವ ಯಶವಂತಪುರ ಕಾರವಾರ (16515/16516) ಎಕ್ಸ್ಪ್ರೆಸ್ ಹಗಲು ರೈಲು ಇನ್ನು ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ ವಿದ್ಯುತ್ ಚಾಲಿತ ರೈಲಾಗಿ ಪರಿವರ್ತನೆಗೊಳ್ಳಲಿದೆ. ಮುಂದೆ ಡಿಸೆಲ್ ಇಂಜಿನ್ ಜೋಡಿಸಿಕೊಂಡು ಯಶವಂತಪುರದ ತನಕ ಸಂಚಾರ ಮುಂದುವರಿಲಿದೆ. ಕಾರವಾರ – ಮುರುಡೇಶ್ವರ – ಬೈಂದೂರು – ಕುಂದಾಪುರ – ಉಡುಪಿ – ಮಂಗಳೂರು ಜಂಕ್ಷನ್ – ಸುಬ್ರಹ್ಮಣ್ಯ ರೋಡ್ – ಸಕಲೇಶಪುರ – ಹಾಸನ – ಯಡಿಯೂರು ಮಾರ್ಗದಲ್ಲಿ ಯಶವಂತಪುರ ಕಾರವಾರ ಎಕ್ಸ್ಪ್ರೆಸ್ ಸಂಚರಿಸಲಿದೆ. ಕಾರವಾರದಿಂದ ಮಂಗಳೂರು ಜಂಕ್ಷನ್ ತನಕದ ವಿದ್ಯುತ್ ಮಾರ್ಗ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿ ವಿದ್ಯುತ್ ಚಾಲಿತ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಮಂಗಳೂರು ಜಂಕ್ಷನ್’ನಿಂದ ಯಶವಂತಪುರದ ತನಕ ಇ-ಲೋಕೋಮೋಟಿವ್ ಎಂಜಿನ್ ಬದಲಿಸಿ ಡೀಸೆಲ್ ಎಂಜಿನ್ ಜೋಡಿಸಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.11: ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರ ಸೇವೆಯು ಅತ್ಯಂತ ಅಗತ್ಯವಾಗಿದ್ದು, ಇವರಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಮತ್ತು 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಕೋವಿಡ್ನಿಂದ ಹೆಚ್ಚಿನ ಅಪಾಯವಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ನೀಡುವಲ್ಲಿ ಅತ್ಯಂತ ಹೆಚ್ಚಿನ ಪ್ರಗತಿ ಆಗಿದ್ದು, ಮುನ್ನೆಚ್ಚರಿಕಾ ಡೋಸ್ ನೀಡುವಲ್ಲಿ ಸಹ ಸಂಪೂರ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಘೋಷಣೆ ಮಾಡಿ ಈತನಕ ಸಂಪೂರ್ಣ ಸಾಲ ಮನ್ನಾ ಮಾಡದಿರುವುದರಿಂದ ಮರುಪಾವತಿಸುವಂತೆ ಬ್ಯಾಂಕುಗಳು ಒತ್ತಡ ಹೇರುತ್ತಿವೆ. ನಾಡದೋಣಿ ಮೀನುಗಾರಿಕೆಗೆ ಹೆಚ್ಚಿನ ಸೀಮೆಎಣ್ಣೆ ಒದಗಿಸುವ ಬಗ್ಗೆ ನೀಡದ ಭರವಸೆ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಸರಕಾರ ಘೋಷಿಸಿದಂತೆ ಮೀನುಗಾರ ಮಹಿಳೆಯರ ಸಂಪೂರ್ಣ ಮನ್ನಾ ಮಾಡಿ ಮೊದಲಿನಂತೆ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಒದಗಿಸಲು ಹಾಗೂ ನಾಡದೋಣಿ ಮೀನುಗಾರಿಕೆಗೆ ಭರವಸೆ ನೀಡಿದಂತೆ ಹೆಚ್ಚಿನ ಸೀಮೆಎಣ್ಣೆಯನ್ನು ನಿಗದಿತವಾಗಿ ನೀಡುವ ಬಗ್ಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರ ಸಮಿತಿ ಅಧ್ಯಕ್ಷ ಬಿ. ನಾಗೇಶ್ ಖಾರ್ವಿ ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಎಂದು ಘೋಷಣೆ ಮಾಡಿ ಸಂಪೂರ್ಣ ಸಾಲ ಮನ್ನಾ ಮಾಡದೇ ಇರುವುದರಿಂದ ಮೀನುಗಾರ ಮಹಿಳೆಯರಿಗೆ ಸಾಲ ಮರುಪಾವತಿಸುವಂತೆ ಬಾಂಕು ಹೇರುತ್ತಿದೆ ಆದ್ದರಿಂದ ಬಾಕಿ ಉಳಿಸಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮೊದಲಿನಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ ಪ್ರತಿಶತ 100 ರಷ್ಟು ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಎಸ್.ಸಿ.ಪಿ/ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ.ಜಾತಿ ಮತ್ತು ಪಂಗಡದವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಅವರುಗಳಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ತಲುಪಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲೆಯ ಪ.ಜಾತಿ, ಪಂಗಡದವರ ನಿಖರ ಮಾಹಿತಿ ಸಂಗ್ರಹಿಸುವುದರೊAದಿಗೆ ಅವರುಗಳಿಗೆ ಭೂ ಒಡೆತನ, ನಿವೇಶನ, ವಾಸಿಸುವ ಮನೆ, ವಿದ್ಯುಚ್ಛಕ್ತಿ ಸೌಲಭ್ಯ, ಸೇರಿದಂತೆ ಅವರ ಆರ್ಥಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಲ್ಲಿ ಅವರುಗಳ ಅವಶ್ಯಕತೆಗನುಗುಣವಾಗಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿವಾರೋಣಾಪಾಯ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ರೂಪಿಸಲು ಇ ಶ್ರಮ್ ಯೋಜನೆ ನೊಂದಣಿ ನಡೆಯುತ್ತಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರುಗಳು ತಪ್ಪದೇ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಇ-ಶ್ರಮ್ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿರ್ವಹಣೆ, ಸಾಮಾಜಿಕ ಭದ್ರತೆ, ಹಾಗೂ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಕ್ರೂಢೀಕರಿಸಿದ್ದಲ್ಲಿ ಉತ್ತವi ಯೋಜನೆಗಳನ್ನು ರೂಪಿಸಲು ಇ-ಶ್ರಮ್ ನೊಂದಣಿ ಸಹಾಯವಾಗಲಿದೆ ಎಂದರು. ನೊಂದಣಿ ದತ್ತಾಂಶದಿಂದ ಸರ್ಕಾರವು ಅಸಂಘಟಿತ ಕಾರ್ಮಿಕರ ವಿವಿಧ ವರ್ಗದವರಿಗೆ ವಿಶೇಷ ನೀತಿ ನಿಯಮ ಯೋಜನೆ ರೂಪಿಸಲು ಸಾಧ್ಯ, ಅಸಂಘಟಿತ ಕಾರ್ಮಿಕರು ನೊಂದಣಿ ಮಾಡಿಕೊಳ್ಳುವುದರಿಂದ ಶೀಘ್ರದಲ್ಲಿಯೇ ಸರ್ಕಾರದ ಹಲವು ಯೋಜನೆಗಳನ್ನು ಪಡೆಯಬಹುದಾಗಿದೆ ಅಲ್ಲದೇ ನೊಂದಾಯಿಸಿದವರಿಗೆ 1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಪಿ. ಗಣಪತಿ ಭಟ್ (61ವರ್ಷ) ಅವರು ಭಾನುವಾರ ನಿಧನರಾಗಿದ್ದಾರೆ. ದಕ್ಷಿಣಕನ್ನಡದ ಪುತ್ತೂರು ತಾಲೂಕಿನ ಪಾದೆಕಲ್ಲಿನವರಾದ ಪಿ. ಗಣಪತಿ ಭಟ್ ಉಡುಪಿಯ ಮಹಾತ್ಮಗಾಂಧಿ ಕಾಲೇಜು, ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಾಗಿ ನೇಮಕಗೊಂಡರು. ಬಳಿಕ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಎಂ.ಫಿಲ್ ಪದವಿಯನ್ನು ಮುಗಿಸಿದ್ದರು. ಅವರು ಪುತ್ರ ನವೀನ, ಮಗಳು ಶ್ರೀರಕ್ಷಾ, ಪತ್ನಿ ಮತ್ತು ಕುಟುಂಬವನ್ನು ಅಗಲಿದ್ದಾರೆ. ಅವರು ಪಾದೆಕಲ್ಲು ವಿಷ್ಣುಭಟ್ ಅವರ ಸಹೋದರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ೯ನೇ ವರ್ಷದ ಟ್ರಸ್ಟ್ ದಿನಾಚರಣೆ ಸಂದರ್ಭ ಬಿಜೂರು ಶೇಡಿಮಕ್ಕಿಮನೆ ಗಂಗಮ್ಮ ವೆಂಕಹಿತ್ಲು ಕುಟುಂಬಕ್ಕೆ ಶ್ರೀ ರಾಮ ಗೃಹ ನಿರ್ಮಾಣ ಯೋಜನೆಯಡಿ ಉಚಿತವಾಗಿ ನಿರ್ಮಿಸಿಕೊಡಲಾದ ಮನೆಯನ್ನು ಇತ್ತಿಚಿಗೆ ಹಸ್ತಾಂತರಿಸಲಾಯಿತು. ಬೆಂಗಳೂರು ರಾಮರಾಜ ಕ್ಷತ್ರಿಯ ಸಮಾಜದ ಮಾಜಿ ಅಧ್ಯಕ್ಷ ಡಿ. ಕೆ. ಮಂಜುನಾಥ ನೂತನ ಗೃಹವನ್ನು ಉದ್ಘಾಟಿಸಿದರು. ನಿವೃತ್ತ ಕರ್ನಲ್ ಡಿ. ಕೆ. ನರಸಿಂಹ ನಾಯಕ್ ಬೆಂಗಳೂರು, ಸ್ವರ್ಣವಲ್ಲಿ ರಾಮಕ್ಷತ್ರಿಯ ಸೀಮಾ ಪರಿಷತ್ನ ಅಧ್ಯಕ್ಷರಾದ ಸುರೇಶ್ ಕೃಷ್ಣ ನಾಯ್ಕ್ ಪುನಾ, ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್, ಟ್ರಸ್ಟಿಗಳಾದ ಬಿ. ಶ್ರೀನಿವಾಸ ಶೇರೆಗಾರ್, ಬಿ. ಶ್ರೀಧರ ಪಡುವರಿ, ಶ್ರೀನಿವಾಸ ಜಿ. ಶಿವಮೊಗ್ಗ, ವೆಂಕಟೇಶ ಕೆ.ಟಿ ಬಿಜೂರು, ಹೆಚ್. ಸುಬ್ರಾಯ ಶೇರೆಗಾರ್, ಜಯಾನಂದ ಹೋಬಳಿದಾರ್, ಜಯಂತಿ ನಾರಾಯಣ ರಾವ್,ಗೋಪಾಲಕೃಷ್ಣ ಕಲ್ಮಕ್ಕಿ, ಶ್ರೀಧರ ಪಿ. ಪಡುವರಿ, ಅಶೋಕ ಕುಮಾರ್ ಬಾಡ, ಚಂದ್ರಶೇಖರ ಕಲ್ಪತರು, ಕೃಷ್ಣಯ್ಯ ವಿ. ಮದ್ದೋಡಿ, ವೆಂಕಟರಮಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಕಾರ್ಡುದಾರರಿಗೆ ಇನ್ನುಮುಂದೆ ಪಡಿತರ ಕೇಂದ್ರಗಳಲ್ಲಿ ಇನ್ನುಮುಂದೆ ಕುಚ್ಚಿಲಕ್ಕಿ ದೊರೆಯಲಿದೆ. ಕೇಂದ್ರ ಸರಕಾರ ಅನುಮತಿ ನೀಡಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು ಪಡಿತರ ಕಾರ್ಡ್ ಮೂಲಕ ಬಡವರಿಗೆ ಕುಚ್ಚಿಲಕ್ಕಿ ವಿತರಣೆ ಮಾಡಲು ಕೇಂದ್ರ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಹೋರಾಟವನ್ನು ಮಾತುಕತೆಯನ್ನು ಮಾಡಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕುಚ್ಚಿಲಕ್ಕಿ ವಿತರಿಸಲು ಶಿಫಾರಸು ಮಾಡಿದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿಗೆ ಧನ್ಯವಾದ ಸಲ್ಲಿಕೆ ಮಾಡುತ್ತೇನೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ ಎಂದರು. ಈಗಾಗಲೇ ಕೆಲವೆಡೆಯಿಂದ ಭತ್ತ ಖರೀದಿಯಾಗಿದೆ. ಖರೀದಿ ಮಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕೋವಿಡ್ – ಓಮಿಕ್ರಾನ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿದ ವೀಕೆಂಡ್ ಕರ್ಪ್ಯೂಗೆ ಶನಿವಾರ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಬಹುಪಾಲು ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಜನಸಂಚಾರವೂ ವಿರಳವಾಗಿತ್ತು. ಗ್ರಾಮೀಣ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸಂಚಾರ ವಿರಳವಾಗಿದ್ದರೂ, ನಿಗದಿತ ಕಾರ್ಯಕ್ರಮಗಳು ನಡೆದವು. ಅಂಗಡಿಗಳನ್ನು ಅರ್ಧ ತೆರೆದು ವ್ಯವಹಾರ ನಡೆಸುತ್ತಿರುವುದು ಸಹಜವಾಗಿತ್ತು. ಕುಂದಾಪುರದ ನಗರದಲ್ಲಿ ವಿರಳ ಬಸ್ ಸಂಚಾರವಿದ್ದರೂ, ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರಲಿಲ್ಲ. ಅಂಗಡಿ ಮುಂಗಟ್ಟು ತರೆದಿದ್ದರೂ ಗ್ರಾಹಕರ ಇರಲಿಲ್ಲ. ಶನಿವಾರ ಸಂತೆ ರದ್ದಾಗಿದ್ದು, ಸಂಗಮ ಬಳಿ ಸಣ್ಣಪುಟ್ಟ ತರಕಾರಿ ಮೀನು ಮಾರಾಟ ನಡೆಯಿತು. ಹೂ, ಹಣ್ಣು ಹಂಪಲು, ತರಕಾರಿ ಅಂಗಡಿಗಳು ಕೂಡಾ ಬಿಕೋ ಎನ್ನುವಂತೆ ಇತ್ತು. ಶಿರೂರು ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿ ವಾಹನಗಳನ್ನು ಬಿಡಲಾಗುತ್ತಿತ್ತು. ಕುಂದಾಪುರ ನಗರದ ಶಾಸ್ತ್ರೀವೃತ್ತ ಸಹಿತ ಕೆಲವೆಡೆ ಪೊಲೀಸರು, ವಾಹನಗಳ…
