ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್ನ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ ವ್ಯಾಪಕವಾಗಿ ಹರಡಿದ್ದು, ವಿದೇಶಿ ಪ್ರಯಾಣಿಕರಿಂದ ರಾಜ್ಯದಲ್ಲಿ ಸಹ ಹರಡುವ ಸಾಧ್ಯತೆಗಳಿದ್ದು, ಹೊಸ ತಳಿಯು ಹರಡುವ ವೇಗವು ಹೆಚ್ಚಿರುವ ಹಿನ್ನಲೆ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅವಶ್ಯವಾಗಿದೆ ಎಂದರು. ಓಮಿಕ್ರಾನ್ ದೃಡಪಟ್ಟ ರಾಷ್ಟçಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪ್ಪದೇ ಪರೀಕ್ಷೆಗೆ ಒಳಪಡಿಸಬೇಕು. ಒಂದೊಮ್ಮೆ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಲ್ಲಿ ಅವರನ್ನು 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು. ಪಾಸಿಟಿವ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳು ಡಿಸೆಂಬರ್ 4 ರಂದು ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ, ಡಿಸೆಂಬರ್ 5 ರಂದು ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಡಿಸೆಂಬರ್ 19 ರಂದು ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಸದರಿ ಪರೀಕ್ಷಾ ಕೇಂದ್ರಗಳ ವಿವರ ಹೀಗಿದೆ: ಅಜ್ಜರಕಾಡು ಡಾ. ಜಿ.ಶಂಕರ ಸರಕಾರಿ ಮಹಿಳಾ ಫಸ್ಟ್ ಗ್ರೇಡ್ ಕಾಲೇಜು, ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಮಿಷನ್ ಕಂಪೌAಡ್ ಬಳಿಯ ಕ್ರಿಶ್ಚಿಯನ್ ಪ್ರೌಢಶಾಲೆ, ಕುಂಜಿಬೆಟ್ಟು ಎಂ.ಜಿ.ಎA ಕಾಲೇಜು, ನಗರದ ಸರ್ವೀಸ್ ಬಸ್ ಸ್ಟ್ಯಾಂಡ್ ಬಳಿಯ ಸರಕಾರಿ ಪದವಿ ಪೂರ್ವ ಕಾಲೇಜು, ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆ ಹಾಗೂ ಬ್ರಹ್ಮಗಿರಿಯ ಸೆಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸಪ್ರತಿಭೆಗಳು ಹೊರ ಹೊಮ್ಮಲು ಸಾದ್ಯವಿದ್ದು, ಕ್ರೀಡಾಪಟುಗಳು ಕ್ರೀಡಾ ಮನೋಭಾವ ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕುಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೆಳಿದರು. ಅವರು ಇಂದು ನಗರದ ಚಂದು ಮೈದಾನದಲ್ಲಿ ,ಉಡುಪಿ ಗೃಹರಕ್ಷಕದಳದ ವತಿಯಿಂದ ನಡೆದ ಪಶ್ಚಿಮವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ 2021 ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ದೈಹಿಕ ಚಟುವಟಿಕೆಗಳು ಆಗಲಿದ್ದು, ಇದು ಆರೊಗ್ಯದ ದೃಷ್ಠಿಯಿಂದ ಅತ್ಯಂತ ಉತ್ತಮವಾದುದು , ಕೋವಿಡ್ ನಿಂದ ರಕ್ಷಿಸಿಕೊಳ್ಳಲು ಉತ್ತಮ ಆರೋಗ್ಯ ಹೊಂದುವುದು ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಕೂರ್ಮಾರಾವ್ ಎಂ ಹೇಳಿದರು. ಕಾರ್ಯಕ್ರಮದಲ್ಲಿ ಎಎಸ್ಪಿ ಕುಮಾರಚಂದ್ರ, ಕೆಎಂಸಿ ಡೀನ್ ಡಾ. ಶರತ್ ಕೆ ರಾವ್, ಅಸೋಸಿಯೇಷನ್ ಆಫ್ ಕನ್ಸ್ಲ್ಟಿಂಗ್ ಸಿವಿಲ್ ಇಂಜಿನಿರ್ಸ್ ಮತ್ತು ಆರ್ಕಿಟೆಕ್ಟ÷್ರ್ಸ,ಉಡುಪಿಯ ಅಧ್ಯಕ್ಷ ಎಂ.ಗೋಪಾಲಭಟ್ ಮತ್ತಿತರರು ಉಪಸ್ಥಿತರಿದ್ದರು. ಗೃಹರಕ್ಷಕ ಸಿಬ್ಬಂದಿಯಿಂದ ಆಕರ್ಷಕ ಪೆರೇಡ್ ನಡೆಯಿತು. ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಯುವ ಬಂಟರ ವೇದಿಕೆ ವತಿಯಿಂದ ಇಂಡಿಯ ಬುಕ್ ಅಫ್ ರೆಕಾರ್ಡ್ ಸೇರ್ಪಡೆಯಾದ ಬಾಲಕಿ ಆಗಮ್ಯ ಎಂ. ಶೆಟ್ಟಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯುವ ಬಂಟರ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ ಗಂಟೆಹೊಳೆ ಕಂಬದಕೋಣೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹಳಗೇರಿ ಯುವ ಬಂಟರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರೀಕಟ್ಟೆ, ಬಾಲಕಿಯ ತಂದೆ ಗುರುದತ್ ಶೆಟ್ಟಿ ಮತ್ತು ತಾಯಿ ಮಮತಾ ಶೆಟ್ಟಿ ಯುವ ಬಂಟರ ವೇದಿಕೆಯ ಪದಾಧಿಕಾರಿ ಶಿವರಾಜ್ ಶೆಟ್ಟಿ ಹುಂಚನಿ, ಜೊತೆ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಹಳಗೇರಿ, ಕ್ರೀಡಾ ಕಾರ್ಯದರ್ಶಿ ಕೀರ್ತಿರಾಜ್ ಶೆಟ್ಟಿ ಖಜಾಂಜಿ ರವೀಂದ್ರ ಶೆಟ್ಟಿ ಉಪ್ಪುಂದ ಪದಾಧಿಕಾರಿಗಳಾದ ನವೀನ್ ಶೆಟ್ಟಿ ಶ್ರೀಕಾಂತ್ ಶೆಟ್ಟಿ ಪವನ್ ಶೆಟ್ಟಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಒಂದುವರೆ ವರ್ಷದ ಬಾಲಕಿ ಅಗಮ್ಯ ಎಂ. ಶೆಟ್ಟಿ ತನ್ನ ಅತಿ ಕಿರಿಯ ವಯಸ್ಸಿನಲ್ಲಿ ತನ್ನ ವಿಶೇಷ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿಯ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಜೇಸಿಐ ವತಿಯಿಂದ ಇಲ್ಲಿನ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ನಡೆದ ವಲಯಾಧ್ಯಕ್ಷರ ಭೇಟಿಯ ಕಾರ್ಯಕ್ರಮದಲ್ಲಿ 2017ನೇ ಸಾಲಿನಲ್ಲಿ ಜೆಸಿಐಗೆ ಪಾದಾರ್ಪಣೆ ಮಾಡಿ ಜೇಸಿಐ ಉಪ್ಪುಂದದ ಕಾರ್ಯದರ್ಶಿಯಾಗಿ ಅತೀ ಕಡಿಮೆ ಅವಧಿಯಲ್ಲಿ ಜೇಸಿಐನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2021ನೇ ಸಾಲಿನಲ್ಲಿ ಜೇಸಿಐ ಉಪ್ಪುಂದದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ರಾರಾಜಿಸುವಂತೆ ಮಾಡಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆಯವರಿಗೆ 2021ನೇ ಸಾಲಿನ ಯುವ ಪ್ರಶಸ್ತಿಯನ್ನು ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆಯವರು ಪ್ರದಾನಿಸಿದರು. ಈ ಸಂದರ್ಭದಲ್ಲಿ ಜೇಸಿಐ ಉಪ್ಪುಂದದ ಅಧ್ಯಕ್ಷರಾದ ಪುರುಷೋತ್ತಮದಾಸ್, ಕಾರ್ತಿಕೇಯ ಮದ್ಯಸ್ಥ, ದೀಪಕ್ ಗಂಗೂಲಿ ವಲಯಾಧಿಕಾರಿ, ಪ್ರೋಗ್ರಾಂ ಡೈರೆಕ್ಟರ್ ಅಬ್ದುಲ್ ಜಬ್ಬಾರ್ ಸಾಹೇಬ್, ಸುಬ್ರಮಣ್ಯ ಜಿ. ಪೂರ್ವಾದ್ಯಕ್ಷರಾದ ಸೆನೆಟರ್. ಯು. ಪ್ರಕಾಶ್ ಭಟ್, ಮಂಗೇಶ್ ಶ್ಯಾನ್ ಭಾಗ್, ಕಾರ್ಯಕ್ರಮದ ನಿರ್ದೇಶಕರಾದ ಪುರಂದರ ಖಾರ್ವಿ, ಕಾರ್ಯದರ್ಶಿ ಸಂದೀಪ್ ನಾಯಕ್, ಜೇಸಿರೇಟ್ ಅಧ್ಯಕ್ಷೆ ರಮಾದೇವಿ ಮೊದಲಾದವರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.1: ಕಾಡಿನೊಳಕ್ಕೆ ಎಸೆದಿದ್ದ ನವಜಾತ ಶಿಶುವನ್ನು, ಸ್ಥಳೀಯ ಮಹಿಳೆಯೂರ್ವರು ಗುರುತಿಸಿ ರಕ್ಷಿಸಿರುವ ಘಟನೆ ತಾಲೂಕಿನ ಮಚ್ಚಟ್ಟು ಗ್ರಾಮದಲ್ಲಿ ನಡೆದಿದೆ. ಪೋಷಕರು ಎಸೆದು ಹೋಗಿದ್ದ ಹಸುಳೆಯನ್ನು ಮಚ್ಚಟ್ಟು ಗ್ರಾಮದ ಮಡಿವಾಳಕಟ್ಟು ನಿವಾಸಿ ಗೀತಾ ಎಂಬುವವರು ರಕ್ಷಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬುಧವಾರ ಸಂಜೆ 4:30ರ ವೇಳೆಗೆ ಕುಂದಾಪುರ ತಾಲೂಕು ಮಚ್ಚಟ್ಟು ಗ್ರಾಮದ ಸೇತುವೆ ಸಮೀಪ ಹಾಲು ಡೈರಿಗೆ ತೆರಳುತ್ತಿದ್ದ ಗೀತಾ, ಕಾಡಿನ ಪೊದೆಯಲ್ಲಿ ಮಗು ಅಳುತ್ತಿರುವ ಧ್ವನಿ ಕೇಳಿ ಹತ್ತಿರ ಹೋಗಿ ನೋಡಿದಾಗ ಹೆಣ್ಣು ಮಗುವೊಂದು ಅನಾಥವಾಗಿ ಬಿದ್ದಿತ್ತು. ನಿರ್ಜನ ಪ್ರದೇಶದಲ್ಲಿದ್ದ ಮಗುವನ್ನು ಎತ್ತಿಕೊಂಡು ಬಂದ ಮಹಿಳೆ ಅಮಾಸೆಬೈಲು ಪೊಲೀಸ್ ಠಾಣೆಗೆ ತಂದು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗುವಿನ ತಂದೆ -ತಾಯಿ ಮಗುವಿನ ಪಾಲನೆ ಪೋಷಣೆ ಮಾಡದೆ ಅಪಾಯಕರ ಸ್ಥಿತಿಯಲ್ಲಿ ಎಸೆದು ಹೋಗಿದ್ದಾರೆಂದು ಮಗುವನ್ನು ರಕ್ಷಿಸಿದ ಮಹಿಳೆ ದೂರು ದಾಖಲಿಸಿ, ಅಮಾಸೆಬೈಲು ಠಾಣಾ ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳಿಗೆ ಮಗುವನ್ನು ಹಸ್ತಾಂತರಿಸಿದ್ದಾರೆ. ರಕ್ಷಿಸಲಾದ ಏಳು ದಿನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಕುಂದಾಪುರ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಆಶ್ರಯದಲ್ಲಿ 1488ನೇ ಮದ್ಯವರ್ಜನ ಶಿಬಿರ ಶಂಕರನಾರಾಯಣದ ಶ್ರೀ ಸುಬ್ರಹ್ಮಣ್ಯ ಜೋಯಿಶಿ ಸುವರ್ಣ ಸಭಾಭವನದಲ್ಲಿ ಬುಧವಾರ ಜರುಗಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಶಿಬಿರ ಉದ್ಘಾಟಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆದ 1487 ಶಿಬಿರಗಳಿಂದ ಈಗಾಗಲೇ 1.2 ಲಕ್ಷಕ್ಕೂ ಹೆಚ್ಚು ಜನರು ಮದ್ಯವ್ಯಸನದಿಂದ ಮುಕ್ತವಾಗಿದ್ದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ರೂಪುಗೊಂಡಿದೆ. ಪರಮಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀಯವರ ಆಶಯದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರದ ಪ್ರಯೋಜನ ಪಡೆದು ಶಿಬಿರಾರ್ಥಿಗಳು ವ್ಯಸನಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ಕರೆ ನೀಡಿದರು. 1488ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲ್ಗದ್ದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಉಡುಪಿ ಶ್ರೀ ಕೃಷ್ಣಮಠಕ್ಕೆ ತನ್ನದೇ ಆದ ಮಹತ್ವವಿದೆ. ಮಧ್ವಮತ ಪ್ರವರ್ತಕರಾದ ಶ್ರೀ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠ ಎಂಬುಂದು ಅತಿ ದೊಡ್ಡ ಶಕ್ತಿ ಪೀಠವಾಗಿದೆ. ಇತಂಹ ಪೀಠದಿಂದ ಪರ್ಯಾಯ ಮಹೋತ್ಸವವನ್ನು ಕೊಡುಗೆಯಾಗಿ ನೀಡಿದವರು ಮಧ್ವಾಚಾರ್ಯರು ಎಂದು ಬಸ್ರೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನವರಿಯಲ್ಲಿ ನಡೆಯಲಿರುವ ಶ್ರೀ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರಿಗೆ ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸುವ ಬಗ್ಗೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಶ್ರೀ ಮಧ್ವಾಚಾರ್ಯರು ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರದ ಮಹತ್ವವನ್ನು ಸಮಾಜಕ್ಕೆ ಅರ್ಪಿಸಿದ್ದಾರೆ. ನಮ್ಮೆಲ್ಲ ಸಂಸ್ಕೃತಿ ಸಂಸ್ಕಾರ ಉಳಿದು ಬೆಳಗಬೇಕಾದರೆ ನಾವೆಲ್ಲರೂ ಒಂದಾಗಿ ಪರ್ಯಾಯ ಮಹೋತ್ಸವದ ಯಶಸ್ಸಿನ ಹೊಣೆಯನ್ನು ಹೊರಬೇಕಾಗಿದೆ. ಕುಂದಾಪುರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟದಲ್ಲಿ ಅಂಪಾರು ರೋಟರಿ ಕ್ಲಬ್ ಸಹಯೋಗದಲ್ಲಿ ಸೈಬರ್ ಕ್ರೈಂ ಜಾಗ್ರತಿ ಶಿಬಿರ ಇತ್ತೀಚೆಗೆ ನಡೆಯಿತು. ಯುವಜನ ಸಬಲೀಕರಣದ ಕುರಿತು ನರಸಿಂಹ ಗಾಣಿಗ ಹೆಮ್ಮಾಡಿ ವಿದ್ಯಾರ್ಥಿಗಳುನ್ನುದ್ದೇಶಿಸಿ ಮಾತನಾಡಿದರು. ಹೊಸಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಂಜಿತ್ಕುಮಾರ್ ಶೆಟ್ಟಿ ಸೈಬರ್ಕ್ರೈಂಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ರೋಟರಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದರು. ವಿ.ಎಂ.ಕೆ ಪೋಷಕ ಸಂಘದ ಅಧ್ಯಕ್ಷರಾದ ಬಗ್ವಾಡಿ ಚಂದ್ರಶೆಟ್ಟಿ, ಇಂಟರ್ಯಾಕ್ಟ್ ಅಧ್ಯಕ್ಷೆ ದೀಕ್ಷಿತಾ ದೇವಾಡಿಗ, ಕಾರ್ಯದರ್ಶಿ ಸ್ವರ್ಣ ಉಪಸ್ಥಿತರಿದ್ದರು. ಸಂಸ್ಥೆಯ ಮುಖೋಪಾಧ್ಯಾಯಿನಿ ದೀಪಿಕಾ ಸುಭಾಸ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಟಿ.ಕೆ. ನಂದಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಆಶ್ರಿತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಜನರಿಂದ ಜನರಿಗಾಗಿ ಜನರಿಗೋಸ್ಕರ ಹುಟ್ಟಿದ ಸಾಹಿತ್ಯವೇ ಜನಪದ ಸಾಹಿತ್ಯ. ಜನವಾಣಿ ಬೇರು ಕವಿವಾಣಿ ಹೂವು ಜಾನಪದ ಸಾಹಿತ್ಯ ಸಂಪಾದನೆಯ ಪ್ರಥಮ ಘಟ್ಟದಲ್ಲಿ ಹಲಸಂಗಿ ಗೆಳೆಯರು ಪ್ರಕಟಿಸಿದ ಗರತಿಯ ಹಾಡು, ಜೀವನ ಸಂಗೀತ ಹಾಗೂ ಮಲ್ಲಿಗೆ ದಂಡೆ ಸಂಕಲನಗಳ ಹಲವಾರು ಹಾಡುಗಳೊಂದಿಗೆ ಹಲಸಂಗಿ ಗೆಳೆಯರ ಬಳಗ ಜನಪದ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕನ್ನಡ ನಾಡಿನ ಜಾನಪದ ಸಿರಿಯನ್ನು ಅನಾವರಣಗೊಳಿ ಕನ್ನಡಿಗರಿಗೆ ಉಣ ಬಡಿಸಿದ ಶ್ರೇಯಸ್ಸು ಕೀರ್ತಿ ಹಲಸಂಗಿ ಗೆಳೆಯರ ಬಳಗಕ್ಕೆ ಸಲ್ಲಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಪಾದ ಶೆಟ್ಟಿ ಹೇಳಿದರು. ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದೊಂದಿಗೆ ಕನ್ನಡ ಸಂಘ, ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಹಾಗೂ ಇವರ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಜರುಗಿದ ಹಲಸಂಗಿ ಗೆಳೆಯರು ಮತ್ತು ಜನಪದ ಸಾಹಿತ್ಯ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.…
