Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಾರಕೂರು ಚೌಳಿ ಕೆರೆಯ ಸಮೀಪದ ಶ್ರೀ ಗೌರೀಶ್ವರ ದೇವಸ್ಥಾನದ ಸ್ವಚ್ಛತಾ ಕಾರ್ಯ ಯುವಾ ಬ್ರಿಗೇಡ್ ಕುಂದಾಪುರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಭಾನುವಾರ ನಡೆಯಿತು. ಕ್ರಿ.ಶ.11ನೇ ಶತಮಾನದ್ದೆಂದು ಹೇಳಲಾಗುತ್ತಿರುವ ಶ್ರೀ ಗೌರೀಶ್ವರ ದೇವಸ್ಥಾನ ಹಿಂದೆ ವೈಭವದಿಂದ ಮೆರೆದ ದೇಗುಲವಾಗಿದೆ. ಇಲ್ಲಿಯ ಮಿಥುನ ನಾಗ ಶಿಲ್ಪ, ಅವಳೀ ನಾಗ ಶಿಲ್ಪ, ಬಿಳಿಯ ಶಿಲೆಯಿಂದ ಶ್ರೀ ಗೌರೀಶ್ವರ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ. ಶೈವ ಹಾಗೂ ವೈಷ್ಣವ ದೇವಾಲಯ ಇರುವ ಅಪರೂಪದ ಸಂಗಮ ಸ್ಥಳದಂತಿದೆ ಈ ದೇಗುಲ. ಶಾಸನ ಉಲ್ಲೇಖದಂತೆ ಬಾರಕನ್ಯಾಪುರವೆಂದು ಕರೆಯಲ್ಪಡುವ ಈ ಊರು ಪ್ರವಾಸಿಗರ ನೆಚ್ಚಿನ ಕೇಂದ್ರದ ಸ್ಥಳದಂತೆ ಕಾಣಲ್ಪಟ್ಟಿದೆ. ಹಾಗಾಗಿ ಈ ಸಂದಭ೯ದಲ್ಲಿ ಯುವಾ ಬ್ರಿಗೇಡ್ ನ ನಿರಂಜನ್ ಶೆಟ್ಟಿ ತಲ್ಲೂರು, ಪ್ರಮೋದ್, ಪ್ರದೀಪ, ಶಶಿ ,ಸುಬ್ರಹ್ಮಣ್ಯ, ಇತಿಹಾಸ ಉಪನ್ಯಾಸಕರು ಆಗಿರುವ ಅರುಣ್ ಕುಮಾರ್, ಸತೀಶ್ ಗುಂಡ್ಮಿ,ಭರತ್ ಗುಡಿಗಾರ್,ಪ್ರಶಾಂತ್ ಖಾವಿ೯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪತ್ರಿಕೋದ್ಯಮ ಎನ್ನುವುದು ಅಭೂತಪೂರ್ವ ಶಕ್ತಿ. ಮಾಧ್ಯಮದ ವಿದ್ಯಾರ್ಥಿಗಳು ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವುದರ ಜತೆಗೆ, ತಾವು ವಾಸಿಸುವ ಪರಿಸರದಲ್ಲಿ ನಡೆಯುವ ಕ್ರಿಯೆಗಳಿಗೆ ಪ್ರತಿಕ್ರಿಯಿಸುವ ಮನೋಭಾವವನ್ನು ಎಳವೆಯಲ್ಲಿಯೇ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಅಭಿವ್ಯಕ್ತಿ ವೇದಿಕೆಯ ವತಿಯಿಂದ ’ಆಳ್ವಾಸ್ ನ್ಯೂಸ್ ಇನ್ ಕ್ಯಾಪ್ಸೂಲ್’ ವ?ಚರಣೆ ಸಂಭ್ರಮವನ್ನು ನೆರವೇರಿಸಲಾಯಿತು. ಕಾಲೇಜಿನಲ್ಲಿ ಈಗಾಗಲೇ ಪತ್ರಿಕೋದ್ಯಮ ವಿಭಾಗ ಸಾಕಷ್ಟು ಹೆಗ್ಗಳಿಕೆಯನ್ನು ಪಡೆದಿದೆ. ನಿರಂತರ ಚಟುವಟಿಕೆಯಿಂದ ವಿದ್ಯಾರ್ಥಿಗಳು ಎಲ್ಲರ ಗಮನವನ್ನು ಸೆಳೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದು, ಅಭಿವ್ಯಕ್ತಿ ವೇದಿಕೆ ಮುಖಾಂತರ ಇನ್ನ? ಕಾರ‍್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿ.ಎಸ್ಸಿ. ಆನಿಮೇಶನ್ ವಿಭಾಗದ ಮುಖ್ಯಸ್ಥ ರವಿ ಮೂಡುಕೊಣಾಜೆ ಮಾತಾನಾಡಿ, “ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ, ಆಗ ಮಾತ್ರ ಹೊಸತನ ಮೂಡಲು ಸಾಧ್ಯ” ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ‍್ಯಕ್ರಮದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ರೂಟ್ ಮಾರ್ಚ್ ನಡೆಸಿದರು. ಗಂಗೊಳ್ಳಿ ಗ್ರಾಮದ ಮೇಲ್ ಗಂಗೊಳ್ಳಿ, ಜಾಮಿಯಾ ಮೊಹಲ್ಲಾ, ಸುಲ್ತಾನ್ ಮೊಹಲ್ಲಾ, ಚರ್ಚ್ ರೋಡ್, ಎಸ್. ವಿ ಕಾಲೇಜು ರಸ್ತೆ, ಬಂದರು ರಸ್ತೆಯಲ್ಲಿ ಶನಿವಾರ ಪೊಲೀಸ್ ಪಥ ಸಂಚಲನ ನಡೆಸಿದರು. ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್, ಬೈಂದೂರು ಠಾಣೆ ಪಿಎಸ್ಐ ಪವನ್ ನಾಯ್ಕ್, ಕೊಲ್ಲೂರು ಠಾಣೆ ಪಿಎಸ್ಐ ಹೀರಣ್ಣ ಶಿರಗುಂಟೆ, ಟ್ರಾಫಿಕ್ ಠಾಣೆ ಪಿಎಸ್ಐ ಸುಧಾಪ್ರಭು ಸೇರಿದಂತೆ ಪೊಲೀಸ್ ಸಹಾಯಕ ಉಪನಿರೀಕ್ಷಕರುಗಳು, ಸಿಬ್ಬಂದಿಗಳು, ಕೆ.ಎಸ್.ಆರ್.ಪಿ ಮಹಿಳಾ ವಿಭಾಗದ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ:► ಕುಂದಾಪುರ: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರಿಂದ ರೂಟ್ ಮಾರ್ಚ್ – https://kundapraa.com/?p=57377 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪ್ರಜಾಪಿತ ಬ್ರಹ್ಮಕುಮಾರೀ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಐವತ್ತೆರಡು ಅಡಿ ಎತ್ತರದ ಬಲೂನು ನಿರ್ಮಿತ ಶಿವಲಿಂಗ ಪ್ರದರ್ಶನ ಹಾಗೂ ಈಶ್ವರೀಯ ಸಂದೇಶ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಶ್ರೀ ಅಪ್ಪಣ್ಣ ಹೆಗ್ಡೆ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಿ.ಕೆ. ವಾದಿರಾಜ ಭಟ್ ಸ್ವಾಗತಿಸಿ, ಸಂಚಾಲಕಿ ಬಿ. ಕೆ. ಗೀತ ಈಶ್ವರೀಯ ಕಾಣಿಕೆ ನೀಡಿ ವಂದಿಸಿದರು. ಬಿ.ಕೆ .ಜಯಶ್ರೀ ಈಶ್ವರೀಯ ಸಂದೇಶ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಡಾ. ರಘು ನಾಯ್ಕ್ ಅವರನ್ನು ಆಯ್ಕೆಮಾಡಲಾಗಿದೆ. ಬೈಂದೂರು ತಾಲೂಕಿನ ಗೋಳಿಹೊಳೆಯವರಾದ ಡಾ. ರಘು ನಾಯ್ಕ್ ಅವರು ಪ್ರಸ್ತುತ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಂಸ್ಕೃತಿಕ, ಸಾಹಿತ್ಯ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಐಡಿಯಲ್ ಪ್ಲೇ ಅಬಾಕಸ ಇಂಡಿಯಾ ಪೈವೇಟ್ ಲಿಮಿಟೆಡ್ ಚೆನೈ ವತಿಯಿಂದ ಇತ್ತೀಚೆಗೆ ನಡೆದ 16ನೇ ರಾಜ್ಯಮಟ್ಟದ ಆನ್ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಬೈಂದೂರು ಸೆಂಟರ್ ಅಬಾಕಸ್ ವಿದ್ಯಾರ್ಥಿಗಳು ವಿಜೇತರಾಗಿ ಆಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ದ್ವಿತೀಯ ಸ್ಥಾನ ಪಡೆದ ಲಿಖಿತ್, ತೃತೀಯ ಸ್ಥಾನ ಪಡೆದ ರಿತ್ವೀಕಾ , ಐದನೇ ಸ್ಥಾನ ಪಡೆದ ಪ್ರಥ್ವಿ, ಹಾಗೂ ವರಪ್ರಸಾದ ಇತರೇ ಬಹುಮಾನ ಪಡೆದುಕೊಂಡರು. ಇವರಿಗೆ ಬೈಂದೂರು ಸೆಂಟರ್ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಛತ್ರಪತಿ ಶಿವಾಜಿ ಬಸ್ರೂರಿಗೆ ಮಾತ್ರ ಸ್ವಾತಂತ್ರ್ಯ ದೊರಕಿಸಿಕೊಟ್ಟಿಲ್ಲ. ಪೋರ್ಚುಗೀಸರು ತೊಲಗಲು ಅಡಿಗಲ್ಲು ಹಾಕಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾಪುರುಷ ಶಿವಾಜಿ ನೆನಪಿನಲ್ಲಿ ಬಸ್ರೂರಲ್ಲಿ ಕಳೆದ 9 ವರ್ಷಗಳಿಂದ ಕಾರ‍್ಯಕ್ರಮ ನಡೆಯುತ್ತಿರುವುದು ಗಮನಾರ್ಹ ವಿಷಯ. ಇತಿಹಾಸದಲ್ಲಿ ಬಸ್ರೂರಿಗೆ ಹೆಚ್ಚು ಪ್ರಾಮುಖ್ಯತೆಯಿದೆ ಎಂದು ಭಾರತೀಯ ಸಂತಸಭಾದ ಸಂಘಟನಾ ಪ್ರಧಾನ ಕಾರ‍್ಯದರ್ಶಿ ಡಾ. ಸಂದೀಪ್ ರಾಜ್ ಮಹದೇವ ರಾವ್ ಮಹಿಂದ್ ಪುಣೆ ಹೇಳಿದರು. ಛತ್ರಪತಿ ಶಿವಾಜಿ 1665ರ ಫೆ. 13 ಪೋರ್ಚುಗೀಸರ ವಿರುದ್ಧ ಪ್ರಥಮ ನೌಕಾಯಾನ ಕೈಗೊಂಡು, ಬಸ್ರೂರಲ್ಲಿ ವಿಜಯ ಪತಾಕೆ ಹಾರಿಸಿದ ದಿನವಾಗಿದ್ದು, ಬಸ್ರೂರು ಛತ್ರಪತಿ ಶಿವಾಜಿ ಅಭಿಮಾನಿ ಬಳಗ ಆಶ್ರಯದಲ್ಲಿ ಶ್ರೀ ದೇವಿ ದೇವಸ್ಥಾನದ ವಠಾರದಲ್ಲಿ ಭಾನುವಾರ ಅದರ ಸವಿನೆನಪಿಗಾಗಿ ಬಸ್ರೂರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು. ಭಾರತೀಯ ಇತಿಹಾಸ ಸಂಕಲನ ಸಮಿತಿ ಮಹಿಳಾ ಪ್ರಮುಖ್ ಡಾ. ಸೀಮಾ ಉಪಾಧ್ಯಾಯ,ಶಿವಾಜಿ ಕೇವಲ ಮಹಾರಾಷ್ಟ್ರಕ್ಕೆ ಸೀಮಿತರಲ್ಲ. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದರು. ದುರ್ಗಾವಾಹಿನಿಯ ಚೈತ್ರ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ, ಧಾರ್ಮಿಕ ಮುಂದಾಳು, ವಿವಿಧ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸುರೇಶ ಪಡುಕೋಣೆ (82) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಚಿಕ್ಕವಯಸ್ಸಿನಲ್ಲೇ ಬಾಂಬೆ ಸೇರಿದ ಸುರೇಶ ಪಡುಕೋಣೆ ಅವರು ಭಾರತ್ ಬೋರಿಂಗ್ ಕಂಪನಿಯಲ್ಲಿ ಗ್ರೈಂಡರ್ ಆಪರೇಟರಾಗಿ ವೃತ್ತಿ ಆರಂಭಿಸಿ, ನಂತರ ಅಪೋಲೋ ಬೋರಿಂಗ್ ಇಂಡಸ್ಟ್ರೀಸ್ ಮೂಲಕ ಸ್ವಂತ ಉದ್ಯಮ ಆರಂಭಿಸಿದರು. ಬಳಿಕ ಹೊಟೇಲ್ ಉದ್ಯಮಕ್ಕೂ ಕಾಲಿಟ್ಟರು. ಧಾರ್ಮಿಕ ಕ್ಚೇತ್ತದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡ ಸುರೇಶ್ ಪಡುಕೋಣೆ ಅವರು ಆಂಜನೇಯ ಸ್ವಾಮಿ ಪರಮ ಭಕ್ತರಾಗಿದ್ದು, ಕುಂದಾಪುರ ಹಂಗಳೂರಲ್ಲಿ 82 ಅಡಿ ಎತ್ತರ ಆಂಜನೇಯ ಸ್ವಾಮಿ ಪ್ರತಿಷ್ಠಾನೆ ಮಾಡಿ, ಪ್ರತೀ ವರ್ಷ ಪ್ರತಿಷ್ಠಾ ಮಹೋತ್ಸವ ನಡೆಸಿ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಸಿಕೊಂಡು ಬರುತ್ತಿದ್ದರು. ಆನೆಗುಡ್ಡೆ ಸ್ವಾಗತ ಗೋಪುರ, ಪಡುಕೋಣೆ ಶ್ರೀ ಮಹಾವಿಷ್ಣು ದೇವಸ್ಥಾನ, ಶ್ರೀ ಈಶ್ವರ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಕೆರೆ ನವೀಕರಿಸಿದ್ದರು. ಬಾರಕೂರು ಏಕನಾಥೇಶ್ವರಿ ದೇವಸ್ಥಾನದ ಟ್ರಸ್ಟೀ, ಕುಂದಾಪುರ ತಾಲೂಕು ದೇವಾಡಿಗ ಸಂಘದ ಮಹಾಪೋಷಕರಾಗಿಯೂ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ13: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಾರ್ಥಿಗಳ ಸಮವಸ್ತ್ರದ ವಿವಾದದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯಲ್ಲಿನ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ಫೆ.14ರ ಬೆಳಿಗ್ಗೆ 6 ರಿಂದ ಫೆ.19ರ ಸಂಜೆ 6 ಗಂಟೆಯ ವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶಿಸಿದ್ದಾರೆ. ಸಮವಸ್ತ್ರದ ವಿವಾದದ ಹಿನ್ನಲೆಯಲ್ಲಿ ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶವಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ/ ಕಾಲೇಜು ಆಡಳಿತ ಮಂಡಳಿ/ಕಾಲೇಜು ಶಿಸ್ತು ಸಮಿತಿ ಮತ್ತು ಶಿಕ್ಷಕರ/ ಪಾಲಕರ ಸಭೆಗಳನ್ನು ಕೂಡಲೇ ಕರೆದು ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶದಾದುದನ್ನು ಮನವರಿಕೆ ಮಾಡುವಂತೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶ್ರೀರಾಮ್ ಕ್ರಿಕೆಟರ್ಸ್ ಕೇವಲ ಕ್ರಿಕೆಟ್ ಆಡುವುದಕ್ಕೋಸ್ಕರ ಹುಟ್ಟಿದ ಸಂಸ್ಥೆಯಲ್ಲ. ಕೆಲ ಸಮಾಜಮುಖಿ ಕಾರ್ಯದ ಜೊತೆಗೆ ಈ ಭಾಗದ ಏಳಿಗೆಗಾಗಿ ಶ್ರಮಿಸುತ್ತಿದೆ. ಒಂದಿಲ್ಲೊಂದು ಹೊಸತನವನ್ನು ಮಾಡುತ್ತಾ ಬಂದಿರುವ ಈ ಸಂಸ್ಥೆ ಸಾಧಕರನ್ನು ಅದರಲ್ಲೂ ಮುಖ್ಯವಾಗಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವವರನ್ನು ಸಮ್ಮಾನಿಸುವಂತಹ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶ್ರೀರಾಮ್ ಕ್ರಿಕೆಟರ್ಸ್ ಆಶ್ರಯದಲ್ಲಿ ಜರುಗಿದ 3ನೇ ಬಾರಿಗೆ ಎರಡು ದಿನಗಳ 30 ಗಜಗಳ ಸಂಪತ್ ಟ್ರೋಫಿ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಮೈದಾನವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲ ರಂಗದಲ್ಲೂ ಮೀಸಲಾತಿಯಿದೆ. ಆದರೆ ಕ್ರಿಕೆಟ್ ಅಥವಾ ಕ್ರೀಡೆಯಲ್ಲಿ ಮಾತ್ರ ಮೀಸಲಾತಿ ಇಲ್ಲದೆಯೂ ಸಾಧನೆಯ ಮೂಲಕವೇ ಉನ್ನತ ಮಟ್ಟಕ್ಕೇರಬಹುದು. ಸಂಪತ್ ಅವರ ಸ್ಮರಣಾರ್ಥ ಆಯೋಜಿಸುತ್ತಿರುವ ಈ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಲಿ ಎಂದರು. ಈ ಸಂದರ್ಭದಲ್ಲಿ…

Read More