ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾರುದ್ರಯಾಗದ ಅಂಗವಾಗಿ ಯುವಜನ ಸಭಾ ಹಾಗೂ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಪುತ್ತೂರು ಜಗದೀಶ ಆಚಾರ್ಯ ಮತ್ತು ಅವರ ಬಳಗದ ಸಂಗೀತ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ದೇವಸ್ಥಾನದ ಅಭಿವೃದ್ಧಿಯಲ್ಲಿ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಚಿನ್ ನಕ್ಕತ್ತಾಯ, ಉಪಾಧ್ಯಕ್ಷರಾದ ಗಣೇಶ್ ಕುಂದೇಶ್ವರ ಕೋಶಾಧಿಕಾರಿ ಗಣೇಶ ಸಲಹೆಗಾರರಾದ ಹೃದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿ.ಎಸ್ಇ ಸ್ಕೂಲ್ ವಿದ್ಯಾರ್ಥಿ ಶ್ಲಾಘಾ ಸಾಲಿಗ್ರಾಮ ಅವರ ಕಟಕ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗದು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ರಾಘವೇಂದ್ರ ಆಚಾರ್ ಮಾಲಾ ದಂಪತಿಗಳ ಪುತ್ರಿಯಾದ ಶ್ಲಾಘಾ, ಪ್ರಸ್ತುತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ನಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕಟಕ, ಗಿರ್ಮಿಟ್ ಮೊದಲಾದ ಸಿನಿಮಾದಲ್ಲಿ ನಟಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯು 22ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಬೈಂದೂರಿನ ಶಾರದಾ ವೇದಿಕೆಯಲ್ಲಿ ಮೇ 7ರಿಂದ ಮೇ 10ರ ತನಕ ನಾಲ್ಕು ದಿನಗಳ ಕಾಲ ಸಂಜೆ 6:30ಕ್ಕೆ ಜರುಗಲಿದೆ. ಮೇ.7ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸುರಭಿ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಅಂದು ಚಿತ್ರಕಲಾ ಶಿಕ್ಷಕ ನರಸಿಂಹ ಪೂಜಾರಿ ಅವರನ್ನು ಸನ್ಮಾನಿಸಲಾಗುತ್ತದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಸುರಭಿ ವಿದ್ಯಾರ್ಥಿಗಳಿಂದ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ನಿರ್ದೇಶನದಲ್ಲಿ ಗಾನ ಲಹರಿ, ಸುರಭಿ ವಿದ್ಯಾರ್ಥಿಗಳಿಂದ ವಿದೂಷಿ ಮಾನಸ ರಾಘವೇಂದ್ರ ಅವರ ನಿರ್ದೇಶನದಲ್ಲಿ ‘ನೃತ್ಯ ವೈವಿಧ್ಯ’ ಸುರಭಿ ವಿದ್ಯಾರ್ಥಿಗಳಿಂದ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ನಿರ್ದೇಶನದಲ್ಲಿ ’ನಾದ ಕುಂಚ ಸಂಭ್ರಮ’ ಜರುಗಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೈತನೇ ಈ ದೇಶದ ಬೆನ್ನೆಲುಬು ಎನ್ನುವುದು ಬರಿ ಘೋಷಣೆಗೆ ಸೀಮಿತಗೊಂಡಿದೆ ಅವರ ಬಗ್ಗೆ ಸರಕಾರದ ಜನಪ್ರತಿನಿಧಿಗಳಿಗೆ ಕಾಳಜಿ ಶೂನ್ಯ ಎಂದು ಪಾಂಡೇಶ್ವರದ ರಕ್ತೇಶ್ವರಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಪಾಂಡೇಶ್ವರ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಮಣೂರು ಫ್ರೆಂಡ್ಸ್, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ೧೫ನೇ ಮಾಲಿಕೆ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಅಂಗವಾಗಿ ಪಾಂಡೇಶ್ವರದ ಸಾಧಕ ಹಿರಿಯ ಕೃಷಿಕ ಜೂಲಿಸ್ರ್ವಾಚ್ ಇವರನ್ನು ಸನ್ಮಾನಿಸಿ ಮಾತನಾಡಿ ಇತ್ತೀಚಿಗಿನ ದಿನಗಳಲ್ಲಿ ಹಡಿಲು ಭೂಮಿ ಕಷಿ ಮಾಡುವುದನ್ನು ಕೇಳುತ್ತಿದ್ದೇವೆ ಆ ಹಡಿಲು ಭೂಮಿಯಾಗಲು ಕಾರಣ ಯಾರು ಸರಕಾರಿ ನೌಕರರಿಗಿದ್ದ. ಸವಲತ್ತು ರೈತರಿಗೆ ಉಂಟೇ ಹಾಗಾದರೆ ರೈತ ಸಮಯದಾಯದ ಗೋಳು ಕೇಳುವರಿಲ್ಲದೆ ಹಡಿಲು ಬೀಳುವ ಸ್ಥಿತಿ ಉಂಟಾಗಿದೆ ಇದನ್ನೆ ಬಂಡವಾಳವಾಗಿಸಿಕೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿವೈಡರ್’ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರವಾರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ನಾಯ್ಕ್ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಜರುಗಿದೆ. ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಕಾರು ನಾಗೂರಿನ ವೀರಾಂಜನೇಯ ದೇವಸ್ಥಾನದ ಎದುರು ಡಿವೈಡರ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದುದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಕಾರು ಚಾಲಕನ ಕೈ ಬೆರಳುಗಳು ತುಂಡಾಗಿ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಾಳುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬರಿಗೂ ಗಾಯಗಳಾಗಿದೆ. ಘಟನೆ ನಡೆದ ಸ್ಥಳದಿಂದ ಒಂದು ಕಿಲೋಮೀಟರ್ ದೂರಕ್ಕೆ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳೀಯರು ಅಂಬುಲೆನ್ಸ್ ಮೂಲಕ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಕಾರ ನೀಡಿದ್ದಾರೆ. ವಿಕಲಚೇತನರಾಗಿರುವ ಜಮಾತ್ ಮಾಜಿ ಅಧ್ಯಕ್ಷ ಉಬೈದುಲ್ಲಾ ಎಂ.ಏಚ್ ಅವರು ಹಾದು ಹೋಗುತ್ತಿದ್ದ ಆಂಬ್ಯುಲೆನ್ಸ್ ನಿಲ್ಲಿಸಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸ್ವತಃ ತಾನು ಜೊತೆಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧುನಿಕ ಬದುಕಿನ ಧಾವಂತಗಳ ನಡುವೆ ಪರಸ್ಪರ ಬೆರೆಯುವ, ಮಾತನಾಡುವ ಹಾಗೂ ಬದುಕಿನ ಪ್ರತಿಕ್ಷಣವನ್ನು ಅನುಭವಿಸುವ ಸಂದರ್ಭಗಳೇ ಮರೆಯಾಗುತ್ತಿರುವ ಹೊತ್ತಿನಲ್ಲಿ ಕಲೆ ಸಾಂಸ್ಕೃತಿಕ ಚಟುವಟಿಕೆಗಳು ಮತ್ತೆ ನಮ್ಮತನವನ್ನು ನೆನಪಿಸುವ ಕಾರ್ಯವನ್ನು ಮಾಡುತ್ತವೆ ಎಂದು ಶಿರೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ ಅವರು ಹೇಳಿದರು. ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಮೇ 07ರಿಂದ ಮೇ 10ರ ತನಕ ಜರುಗಲಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ, ಉಪಾಧ್ಯಕ್ಷರಾದ ಅಬ್ದುಲ್ ರವೂಫ್, ನಿರ್ದೇಶಕರಾದ ಸುಧಾಕರ ಪಿ. ಬೈಂದೂರು, ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಪ್ರಥಮ ಭಾರಿಗೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ರೈತಸಿರಿ ಅಗ್ರಿ ಮಾಲ್ ಎಂ.ಎಸ್.ಸಿ ಯೋಜನೆಯ ಶಿಲಾನ್ಯಾಸ ಹಾಗೂ ರೈತಸಿರಿ ಸಮಾವೇಶ ಮೇ.3ರ ಮಂಗಳವಾರ ಪೂರ್ವಾಹ್ನ 10ರಿಂದ ಕಂಬದಕೋಣೆ ಪಿಯು ಕಾಲೇಜು ಮೈದಾನದಲ್ಲಿ ಜರುಗಲಿದೆ. ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಡಿ ಆರಂಭಗೊಳ್ಳಲಿರುವ ಅಗ್ರಿಮಾಲ್ನಲ್ಲಿ ನಿತ್ಯ ಕೃಷಿ ಸಂತೆ, ಕೃಷಿ ಮತ್ತು ಕೃಷಿಕರ ಅಭ್ಯುದಯಕ್ಕಾಗಿ ಕೃಷಿ ಉತ್ಪನ್ನ ಖರೀದಿ, ಮಾರುಕಟ್ಟೆ ಮತ್ತು ಕೊಲ್ಡ್ ಸ್ಟೊರೇಜ್ ವ್ಯವಸ್ಥೆಯನ್ನು ಒಳಗೊಂಡಿರುವ ಬೃಹತ್ ಗೋದಾಮು ಹಾಗೂ ದಾಸ್ತಾನು ಮೊದಲಾದ ಯೋಜನೆಯನ್ನು ರೂಪಿಸಲಾಗಿದೆ. ಸಂಘದ ಕಾರ್ಯವ್ಯಾಪ್ತಿಯಲ್ಲಿನ ಅಡಿಕೆ, ತೆಂಗು, ಭತ್ತ, ನೆಲಗಡಲೆ ಹಾಗೂ ಕಾಡುತ್ಪತ್ತಿ ಮೊದಲಾದ ಬೆಳೆಗಳನ್ನು ಖರೀದಿಸಿ, ದಾಸ್ತಾನು ಮಾಡಿ, ಉತ್ತಮ ದರ ಹಾಗೂ ಮಾರುಕಟ್ಟೆ ಸಂಘದಿಂದ ಒದಗಿಸುವ ದೂರದೃಷ್ಠಿಯನ್ನು ಹೊಂದಲಾಗಿದೆ. ರೈತಸಿರಿಯಿಂದಾಗಿ ಸಂಘದ ಕಾರ್ಯವ್ಯಾಪ್ತಿಯ ನೂರಾರು ಯುವಕ, ಯುವತಿಯರಿಗೆ ಉದ್ಯೋಗಾವಕಾಶ ದೊರೆಯಲಿದೆ. ಅಂದಾಜು ರೂ. 7.65ಕೋಟಿ ವೆಚ್ಚದಲ್ಲಿ ರೈತರಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳ ನಿಯಮಾವಳಿಯನ್ನು ಉಲ್ಲಂಘಿಸಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಗೋದಾಮು ಹಾಗೂ ಸರ್ವ ಸರಕಿನ ಬಹುಮಹಡಿ ಕಟ್ಟಡ (ಮಳಿಗೆ) ನಿರ್ಮಿಸಲಾಗುತ್ತಿದ್ದು, ಇದಕ್ಕೆ ಆರ್ಸಿಎಸ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕರಾದ ಬಿ. ಎಸ್. ಸುರೇಶ್ ಶೆಟ್ಟಿ ಹೇಳಿದರು. ಉಪ್ಪುಂದದಲ್ಲಿ ಸಂಘದ ನಿರ್ದೇಶಕರಾದ ಬಿ. ಎಸ್. ಸುರೇಶ್ ಶೆಟ್ಟಿ ಹಾಗೂ ಬಿ. ರಘುರಾಮ ಶೆಟ್ಟಿ ಅವರು ಶನಿವಾರ ಸಂಜೆ ಜಂಟಿಯಾಗಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಸಂಘವು ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿಯಲ್ಲಿ ಗೋದಾಮು ಹಾಗೂ ಸರ್ವ ಸರಕಿನ ಬಹುಮಹಡಿ ಕಟ್ಟಡ (ಮಳಿಗೆ) ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿಯಲ್ಲಿ ಸಾಲ ಮಂಜೂರಾತಿ ಪಡೆಯಲಾಗಿದೆ. ಅಲ್ಲದೇ ನಬಾರ್ಡ್ ಹಾಗೂ ಸಂಘದ ಹಣವನ್ನು ಬಳಸಿ ಸುಮಾರು 7ಕೋಟಿ 65ಲಕ್ಷದ ಮೊತ್ತದಲ್ಲಿ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರ ಕಚೇರಿಯಿಂದ ಆಡಳಿತಾತ್ಮಕ ಅನುಮತಿಯನ್ನು ಲಿಖಿತರೂಪದಲ್ಲಿ ಪಡೆದುಕೊಳ್ಳಲಾಗಿದೆ. ಈ ಅನುಮತಿ ಪತ್ರದಲ್ಲಿ ತಿಳಿಸಿರುವಂತೆ ಕಟ್ಟಡದ ನಿರ್ಮಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಮಹಾರುದ್ರಯಾಗವನ್ನು ಎ.29ರಿಂದ ಮೇ.2ರ ತನಕ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಸಂಜೆಯಿಂದ ವಿವಿಧ ಧಾರ್ಮಿಕ ಕಾರ್ಯಗಳಿಗೆ ಚಾಲನೆ ದೊರೆತಿದೆ. ಶುಕ್ರವಾರ ಸಂಜೆ 6ರಿಂದ ಮಂಟಪ ಸಂಸ್ಕಾರ, ರಾಠೋಘ್ನ ಹೋಮ, ವಾಸ್ತು ಪೂಜೆ ನಡೆಯಿತು. ಶನಿವಾರ ಬೆಳಿಗ್ಗೆ 7ಗಂಟೆಯಿಂದ ಗಣಪತಿ ಪೂಜೆ, ಪುಣ್ಯಾಹ ನಾಂದಿ, ಋತ್ವಿಕ್ಟರಣೆ, ರುದ್ರ ಕಲಶ ಸ್ಥಾಪನೆ, ಗಣಹೋಮ ರುದ್ರ ಪುರಶ್ಚರಣೆ ಪ್ರಾರಂಭ, ದೇವರಿಗೆ ಕಲಶಾಭಿಷೇಕ, ಮಹಾಮಂಗಳಾರತಿ ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ, ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್, ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಕಲ್ಪತರು, ಕಾರ್ಯದರ್ಶಿ ಸುಬ್ರಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ ಪೂಜಾರಿ, ನಾಗರಾಜ ರಾಯಪ್ಪನಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್. ಸವಿತಾ ಜಗದೀಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
