Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಏ03: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ ಸೋಜಾ ಹೇಳಿದರು. ಅವರು ಶನಿವಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ನಿವೃತ್ತ ಪೊಲೀಸರಿಗೆ ಒದಗಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ನಿರ್ದಿಷ್ಟ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಜಾರಿಗೊಳಿಸಿದ್ದು, ಚಿಕಿತ್ಸೆ ನೀಡುವ ಅಸ್ಪತ್ರೆಗಳ ಸಂಖ್ಯೆಯನ್ನು ವಿಸ್ತರಿಸಬೇಕು ಅಲ್ಲದೇ ಚಿಕಿತ್ಸಾ ವೆಚ್ಚವನ್ನು 1 ಲಕ್ಷ ರೂಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಇದನ್ನು ಹೆಚ್ಚುಗೊಳಿಸಬೇಕು , ಪೊಲೀಸ್ ಅಧಿಕಾರಿ ಮತ್ತುಸಿಬ್ಬಂದಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಂಚ ರಾಜ್ಯ ಚುನಾವಣೆ ಬಳಿಕ 12 ದಿನಗಳಲ್ಲಿ ಸತತ 10 ಬಾರಿ ಪೆಟೋಲ್ ಮತ್ತು ಡೀಸೆಲ್ ಬೆಲೆ ಎರಿಸಿರುವುದರಿಂದ ತೈಲ ಬೆಲೆ ಲೀಟರ್ ಗೆ 7 ರೂಪಾಯಿ ಹೆಚ್ಚಳವಾಗಿದ್ದು ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ದಾರೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 250 ರೂಪಾಯಿ ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಮತ್ತು ವಾಣಿಜ್ಯ ಮಾಲಿಕರಿಗೆ ತೀವ್ರ ಹೊಡೆತ ಬಿದ್ದಿದ್ದು,ಇದರಿಂದ ನೇರ ಗ್ರಾಹಕರ ಮೇಲೆ ಬೆಲೆ ಏರಿಕೆ ಬಿಸಿ ಪ್ರಾರಂಭವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕುಗಳ ಬೆಲೆ ಪುನಃ ಹೆಚ್ಚಳವಾಗಲು ಪ್ರಾರಂಭವಾಗಿದ್ದು ಇದರಿಂದ ಶ್ರೀ ಸಾಮಾನ್ಯನಿಗೆ ಬಾರಿ ಹೊಡೆತ ಬೀಳಲಿದೆ . ಹಿಂದೆ ಯುಪಿಎ ಸರಕಾರವಿದ್ದಾಗ ತೈಲ ಬೆಲೆ 10 ರಿಂದ 20 ಪೈಸ ಎರಿದಾಗ ಗ್ಯಾಸ್ ಸೆಲೆಂಡರ್ ದರ 5 ರೂಪಾಯಿ ಹೆಚ್ಚಳವಾದಾಗ ರಸ್ತೆಗಿಳಿದು ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು…

Read More

ಕುಂದಾಪ್ರ ಡಾಟ್ ಕಾಂ | ಕಾಲೇಜು ಪ್ರಕಟಣೆಯುವ ಪೀಳಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನ ವೇಗದೊಂದಿಗೆ ಹೆಜ್ಜೆಯಿರಿಸಲು, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಬಹುಮುಖ್ಯ. ಕಾಲದ ಅವಶ್ಯಕತೆಯನ್ನು ಅರಿತು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿಯೊಂದಿಗೆ, ರೂಪುಗೊಂಡ ದಕ್ಷ ತಂಡ ವರ್ಷದಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಎಂಬ ಸಂಸ್ಥೆಯ ಮೂಲಕ ಜೊತೆಸೇರಿದೆ. ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ ನೇತೃತ್ವಲ್ಲಿ ಮುನ್ನಡೆಯುತ್ತಿದ್ದು; ದಕ್ಷ ಆಡಳಿತ ಮಂಡಳಿ, ಅನುಭವಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮುನ್ನುಡಿ ಬರೆಯಲು ಸಜ್ಜಾಗಿದೆ. ಆಡಳಿತ ಮಂಡಳಿ:ಅನುಭವಿ ಹಾಗೂ ಬೋಧನೆಯಲ್ಲಿ ಪ್ರಸಿದ್ಧಿ ಪಡೆದಿರುವ ನಾಲ್ವರು ಉಪನ್ಯಾಸಕರು ಸೇರಿ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಸದಾಶಯದೊಂದಿಗೆ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ರಚಿಸಿ ಆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಪಣತೊಟ್ಟಿದ್ದಾರೆ. ಅದರಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವತಿಯಿಂದ ಪರೀಕ್ಷಾ ಭಯ ಹೋಗಲಾಡಿಸುವುದು ಕುರಿತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ನಡೆಯಿತು. ಕುಂದಾಪುರದ ಶ್ರೀ ಮಾತಾ ಅಸ್ಪತ್ರೆಯ ಮನಃಶಾಸ್ತ್ರಜ್ಞರಾದ ಡಾ. ಪ್ರಕಾಶ್ ತೋಳಾರ್ ಮಾತನಾಡಿ ಮೊದಲು ಓದುವುದರ ಮೂಲಕ ಪ್ರಯತ್ನ ಪಡಬೇಕು. ಎಂದಿಗೂ ಫಲಿತಾಂಶದ ಬಗ್ಗೆ ಯೋಚಿಸಬೇಡಿ. ನಿಮ್ಮ ಕೈಯ್ಯಲ್ಲಿರುವುದು ಕೇವಲ ಸತತ ಪ್ರಯತ್ನ ಮಾತ್ರ. ನಿಮ್ಮ ಉತ್ತಮ ಪ್ರಯತ್ನದಿಂದ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ. ನಕಾರಾತ್ಮಕ ಆಲೋಚನೆಗಳಿಗೆ ಎಂದಿಗೂ ಅವಕಾಶವನ್ನು ಕೊಡಬೇಡಿ. ಸಕಾರಾತ್ಮಕ ಆಲೋಚನೆಗಳು ನಿಮ್ಮದಾಗಿರಲಿ ಎಂದು ಆಶಿಸಿದರು. ಪರೀಕ್ಷಾ ಭಯ ಮತ್ತು ಆತಂಕವನ್ನು ಹೋಗಲಾಡಿಸುವಲ್ಲಿ ಕೆಲವು ಸೂಕ್ತ ಸಲಹೆಗಳನ್ನು ಅವರು ವಿದ್ಯಾರ್ಥಿಗಳಿಗೆ ನೀಡಿದರು ಎಸ್.ಕ್ಯೂ ಆರ.ಆರ್.ಆರ್ ಎಂಬ ಸರಳ ಸೂತ್ರವನ್ನು ಓದಿನಲ್ಲಿ ಅಳವಡಿಸಿಕೊಳ್ಳಬೇಕು. ಮೊದಲು ಓದುವಾಗ ಮೇಲ್ನೋಟ ಮಾಡಿಕೊಳ್ಳಿ, ನಂತರ ಆ ವಿಷಯಕ್ಕೆ ಕುರಿತ ಪ್ರಶ್ನೆಗಳನ್ನು ತಯಾರಿಸಿ ಉತ್ತರ ಪಡೆದುಕೊಳ್ಳಿ. ನಂತರ ಚೆನ್ನಾಗಿ ಓದಿ ಮತ್ತು ಕೊನೆಯಲ್ಲಿ ಪುನರಾರ್ವರ್ತನೆ ಮಾಡಿ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮುಳುಗಡೆಯಾಗುತ್ತಿದ್ದ ಬೋಟಿನಲ್ಲಿದ್ದ ತಾಂಡೇಲಾ ನಾಗಪ್ಪ ರಾಮ ಅಂಬಿಗ, ಕಲಾಸಿಯವರಾದ ಸಚಿನ್ ಉಲ್ಲಾಸ, ದೀಪಕ್ ಖಾರ್ವಿ, ಸುಭಾಷ್ ಗಾಂಗೇಶ್ವರ, ಸೂರಜ್ ಕುಮಾರ್ ಭಗತ್ ಅವರನ್ನು ಇನ್ನೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಘಟನೆ ವಿವರ:ಉದ್ಯಾವರ ಸಂಪಿಗೆನಗರದ ಮುಹಮ್ಮದ್ ಹನೀಫ್ ಮಾಲೀಕತ್ವದ ಮನಾಲ್ ಹೆಸರಿನ ಬೋಟು ಮಲ್ಪೆಯಿಂದ ಆಳಸಮುದ್ರದ ಮೀನುಗಾರಿಕೆಗೆ ತೆರಳಿತ್ತು. ಮಧ್ಯರಾತ್ರಿ ಗಂಗೊಳ್ಳಿಯಿಂದ ನೇರ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಗಾಳಿಯ ಅಬ್ಬರಕ್ಕೆ ಸಮುದ್ರದ ಅಲೆಗಳ ಒತ್ತಡಕ್ಕೆ ಇಂಜಿನ್ ಕೆಳಭಾಗದ ಪೈಬಲ್ ಶೀಟ್ ಒಡೆದಿದೆ ಎನ್ನಲಾಗಿದೆ. ಬಳಿಕ ನೀರು ಬೋಟಿನೊಳಗೆ ನುಗ್ಗಲು ಪ್ರಾರಂಭವಾಗಿದ್ದು, ಕೂಡಲೇ ಹತ್ತಿರದಲ್ಲಿದ್ದ ರಾಜರಕ್ಷಾ ಬೋಟಿನವರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ರಾಜರಕ್ಷಾ ಬೋಟಿನವರು ಐವರು ಮೀನುಗಾರರನ್ನು ರಕ್ಷಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಘಟನೆ ವೇಳೆ ಬೋಟು ಸಮುದ್ರಪಾಲಾಗಿದ್ದು, ಸುಮಾರು 45ಲಕ್ಷ ರೂ. ನಷ್ಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ನಿರಂತರ ಚಟುವಟಿಕೆಗಳನ್ನು ಕಂಡು ಬೆಂಗಳೂರಿನ ಉದ್ಯಮಿ ನಾರಾಯಣ ಹರಿದಾಸ್ ಕಾಮತ್ ರವರು ಸಿ.ಸಿ.ಕ್ಯಾಮೆರಾ ಹಾಗೂ ಟಾಟಾ ಮೋಟರ್ ಫೈನಾನ್ಸ್ ಉಪಾಧ್ಯಕ್ಷರಾದ ಸುಜೀರ್ ಲಕ್ಷ್ಮೀನಾರಾಯಣ ನಾಯಕ್ ಸೋಲಾರ್ ಲೈಟ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರಿಬ್ಬರನ್ನೂ ಇತ್ತೀಚೆಗೆ ಗೊಂಬೆಯಾಟ ಅಕಾಡೆಮಿಯ ವತಿಯಿಂದ ಗೊಂಬೆ ಮನೆಯಲ್ಲಿ ಹರಿಕೃಷ್ಣ ಪುನರೂರು, ಮಾಜಿ ಅಧ್ಯಕ್ಷರು ,ಕನ್ನಡ ಸಾಹಿತ್ಯ ಪರಿಷತ್ತು ,ರಘುನಾಥ್ ನಾಯಕ್, ಮಾಜಿ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಕೊಂಕಣ್ ರೈಲ್ವೆ , ಪ್ರೊ. ವರದೇಶ್ ಹಿರೇಗಂಗೆ, ಮುಖ್ಯಸ್ಥರು, ಗಾಂಧಿಯನ್ ಸೆಂಟರ್ ಫಾರ್ ಫಿಲೋಸೊಫಿಕಲ್ ಆಟ್ಸ್ ಆಂಡ್ ಸೈನ್ಸ್, ಮಾಹೆ, ಮಣಿಪಾಲ, ನಿವೃತ್ತ ಉಪನ್ಯಾಸಕ ಪ್ರೊ. ವೆಂಕಟೇಶ್ ಪೈ, ಪತ್ರಿಕೆ ವರದಿಗಾರರಾದ ಜಾನ್ ಡಿ’ಸೋಜಾ, ಕಾಸರಗೋಡಿನ ಉದ್ಯಮಿ ಸದಾಶಿವ ಭಟ್, ಮಣಿಪಾಲದ ಪನವಾರ ಕೊಂಕಣಿ ಮಾಸ ಪತ್ರಿಕೆಯ ಸಂಪಾದಕ ಜ್ಞಾನದೇವ ಮಲ್ಯ ಮುಂತಾದ ಗಣ್ಯರ ಸಮ್ಮಖದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್‌ರು ಸನ್ಮಾನಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಹಾಗೂ ಮಾರಿಕಾಂಬಾ ಮಹಿಳಾ ಸಂಘ ಕೊಡಪಾಡಿ ಗುಜ್ಜಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದ್ದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಮಾತನಾಡಿ, ಮಹಿಳೆಯರ ಸಬಲೀಕರಣ ಆಗಬೇಕು ಪ್ರತಿಯೊಬ್ಬ ಮಹಿಳೆ ಸ್ವಂತ ದುಡಿಮೆಯಿಂದ ಬದುಕು ಕಟ್ಟಿಕೊಳ್ಳಬೇಕು. ಮಹಿಳೆ ಕೇವಲ ನಾಲ್ಕು ಗೋಡೆಗಳ ನಡುವೆ ಇರದೇ ತನ್ನದೇ ಪರಿಶ್ರಮದಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆಬರಬೇಕು ಹಾಗೂ ಇಲ್ಲಿ ತರಬೇತಿ ಪಡೆದ ಎಲ್ಲಾ ಮಹಿಳೆಯರು ಒಳ್ಳೆಯ ಅಭಿವೃದ್ದಿಯನ್ನು ಹೊಂದಲಿ ಎಂದು ಹಾರೈಸಿದರು. ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್. ಶುಭಾಶಂಸನೆಗೈದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಜಿಲ್ಲಾ ಪಂಚಾಯಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಕಾಣಬೇಕಾದರೆ ವಿದ್ಯಾರ್ಥಿಗಳಾದ ನೀವು ಪ್ರಾಮಾಣಿಕವಾಗಿ, ಸ್ಪರ್ಧೆಯಿಂದ, ಕಠಿಣ ಪರಿಶ್ರಮದಿಂದ ಓದಿನ ಕಡೆಗೆ ಗಮನ ಹರಿಸಬೇಕು. ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕವನ್ನು ಪಡೆದು ರಾಜ್ಯ ಮಟ್ಟದಲ್ಲಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಉಪಪ್ರಾಂಶುಪಾಲಾದ ಮಮತಾ ರೈ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ ಶಾನುಭಾಗ್ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಸುಜಯ್ ಉಪ್ಪೂರ್ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕರಾದ ಅಶೋಕ್ ಹಾಗೂ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಚ್ಚಟ್ಟು ಕಳೀನಜೆಡ್ಡು ಎಂಬಲ್ಲಿ ನಡೆದಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಮೃತಪಟ್ಟಿದ್ದಾರೆ. ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದ ವೇಳೆಗೆ ಮಚ್ಚಟ್ಟು ಕಳೀನಜೆಡ್ಡು ಹೊಳೆಗೆ ತೆರಳಿ ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆನ್ನಲಾಗಿದೆ. ಇದನ್ನು ಗಮನಿಸಿದ ವ್ಯಕ್ತಿಯೊರ್ವರು ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿದರು. ಸ್ಥಳೀಯರು ರಕ್ಷಿಸಲು ಮುಂದಾದರೂ‌ ಫಲಕಾರಿಯಾಗದೇ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಮಾಸೆಬೈಲು ಠಾಣಾ ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ 27ನೇಯ ವಾರ್ಷಿಕ ಅಧಿವೇಶನದಲ್ಲಿ ನಿವೃತ್ತ ಮುಖ್ಯೋಪಾದ್ಯಾಯ ಮತ್ತು ಹಿರಿಯ ಕಲಾವಿದ ಬಿಜೂರು ವಿಶ್ವೇಶ್ವರ ಅಡಿಗರು ರಚಿಸಿದ ಐದು ನಾಟಕಗಳು ಎನ್ನುವ ಪುಸ್ತಕವನ್ನು ಹಿರಿಯ ಸಾಹಿತಿ ಯು. ರಮೇಶ ವೈದ್ಯ ಬಿಡುಗಡೆಗೊಳಿಸಿದರು. ಬಳಿಕ ಅವರು ಮಾತನಾಡಿ, ಅಡಿಗರ ಐದು ನಾಟಕಗಳು ಈ ಕೃತಿಯು ಭಾರತೀಯ ಸಂಸ್ಕೃತಿಯ ಆಳವಾದ ಹೂರಣವನ್ನು ತೆರೆದಿಡುವಲ್ಲಿ ಸಫಲವಾಗಿದೆ, ಸತ್ಯಂ-ಶಿವಂ-ಸುಂದರಂ ಎಂಬ ನಿಜ ಸತ್ಯ ಧರ್ಮದ ಪಂಚಾಗದ ಮೇಲೆ ನಿಂತಿದೆ ಹಾಗೂ ಇದೆಲ್ಲವನ್ನು ಮೀರಿದ ಹೃದಯದ ಭಾಷೆಯ ಸೆಲೆ ಇರುವುದೇ ಧಯೆಯ ಸಿಂಚನದಲ್ಲಿ ಇವೆಲ್ಲಕ್ಕೂ ಮುಕುಟ ಪ್ರಾಯವಾಗಿ ಜೀವನ ಹೇಗಿದ್ದರೆ ಚೆನ್ನ ಎಂದು ಜಿಜ್ನಾಸೆಯು ಜವಬ್ದಾರಿಯುತವಾಗಿ ಮುಂದಿನ ಜನಾಂಗಕ್ಕೆ ಅದರಲ್ಲೂ ಯುವ ಜನಾಂಗಕ್ಕೆ ಮನದಟ್ಟು ಮಾಡುವ ಬದ್ಧತೆಯಿರುವುದೆ ಐದು ನಾಟಕಗಳ ಕೃತಿಯ ವಿಶೇಷವಾಗಿದೆಯೆಂದು ಹೇಳಿದರು. ಐದು ನಾಟಕಗಳ ಕೃತಿಯ ಲೇಖಕರಾದ ಬಿ. ವಿಶ್ವೇಶ್ವರ ಅಡಿಗರು ಮಾತನಾಡಿ ಯುವಸಮುದಾಯಕ್ಕೆ ಸಾಹಿತ್ಯ ಸಂಸ್ಕೃತಿ ಜೊತೆಯಲ್ಲಿ ಕಲಾಪ್ರಾಕಾರಗಳನ್ನು ಪರಿಚಯಿಸಲು…

Read More