Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 120ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ನಿವೃತ್ತ ಅಧ್ಯಾಪಕ ಸದಾಶಿವ ಐತಾಳ್, ನಿವೃತ್ತ ಪ್ರಾಧ್ಯಾಪಕ ಎಮ್. ರತ್ನಾಕರ ಪೈ, ಶಂಕರ ನಾಗಪ್ಪ ಬಿಲ್ಲವ, ಭಾಗವತ ಸುಬ್ರಹ್ಮಣ್ಯ ನಾವುಡ, ಶಿಕ್ಷಕಿ ಸೌಜನ್ಯ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಅರ್ಥಧಾರಿ ಹೆಚ್. ಶಂಕರ ನಾಗಪ್ಪ ಬಿಲ್ಲವ, ಹೆಮ್ಮಾಡಿ ಹಾಗೂ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಚಂದನ್ ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ಕೊನೆಗೆ ಶಂಕರ ನಾಗಪ್ಪ ಬಿಲ್ಲವರಿಂದ ಯಕ್ಷಗಾನ, ಜಾನಪದ ಏಕಪಾತ್ರಾಭಿನಯ ನಡೆಯಿತು.ಪಾರ್ವತಿಯವರಿಂದ ನಡೆದ ಸಂಗೀತ ಮನಸ್ಸಿಗೆ ಮುದ ನೀಡಿತು. ದೇವಕಿ ಸುರೇಶ್ ಪ್ರಭು ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ಉದಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ದೋಹಾ: ಕತಾರ್‌ನ ಯುಡಿಎಸ್‌ಟಿ ಕ್ರಿಕೆಟ್ ಮೈದಾನದಲ್ಲಿ (UDST Cricket Ground) ಹನ್ನೆರಡನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು (IDY 2026) ಅತ್ಯಂತ ಉತ್ಸಾಹ ಮತ್ತು ಭವ್ಯತೆಯಿಂದ ಆಚರಿಸಲಾಯಿತು. ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ಪ್ರಮುಖ ಸಂಘಟನೆಗಳಾದ ಇಂಡಿಯನ್ ಸ್ಪೋರ್ಟ್ಸ್ ಸೆಂಟರ್ (ISC), ಇಂಡಿಯನ್ ಕಲ್ಚರಲ್ ಸೆಂಟರ್ (ICC), ಇಂಡಿಯನ್ ಕಮ್ಯುನಿಟಿ ಬೆನೆವೊಲೆಂಟ್ ಫೋರಮ್ (ICBF), ಮತ್ತು ಇಂಡಿಯನ್ ಬ್ಯುಸಿನೆಸ್ ಆಂಡ್ ಪ್ರೊಫೆಷನಲ್ಸ್ ಕೌನ್ಸಿಲ್ (IBPC) ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ವಿವಿಧ ಪ್ರವಾಸಿ ಸಮುದಾಯಗಳ ಸಾವಿರಾರು ಯೋಗಾಸಕ್ತರು ಭಾಗವಹಿಸಿದ್ದರು. “ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ” ಎಂಬ ಜಾಗತಿಕ ಧ್ಯೇಯವಾಕ್ಯದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮವು ದೀರ್ಘಾಯುಷ್ಯ, ಚೈತನ್ಯ ಮತ್ತು ಒಟ್ಟಾರೆ ಆರೋಗ್ಯವನ್ನು ವೃದ್ಧಿಸುವಲ್ಲಿ ಯೋಗದ ಪಾತ್ರವನ್ನು ಯಶಸ್ವಿಯಾಗಿ ಎತ್ತಿ ತೋರಿಸಿತು. ಜಾಗತಿಕ ರಾಜತಾಂತ್ರಿಕರು ಮತ್ತು ಕತಾರಿ ಗಣ್ಯರ ಉಪಸ್ಥಿತಿ:ಭಾರತದ ರಾಯಭಾರಿಯಾದ ಗೌರವಾನ್ವಿತ ವಿಪುಲ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಶೋಭೆ ತಂದರು. ಈ ಆಚರಣೆಯಲ್ಲಿ ವಿವಿಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳ ವಿಶ್ವಾಸವನ್ನು ಹೆಚ್ಚಿಸುವ ಕೆಲಸ ಇಲಾಖೆಗಳು ಮಾಡಬೇಕು. ಇವುಗಳ ಜೊತೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ನೀಡುವುದರೊಂದಿಗೆ ಉದ್ಯಮವು ಹೆಚ್ಚು ಅಭಿವೃದ್ಧಿ ಹೊಂದಿ, ಹೆಚ್ಚಿನ ಉದ್ಯೋಗಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 15,000 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಹೆಚ್ಚಿನದಾಗಿ ಗೋಡಂಬಿ ಸಂಸ್ಕರಣಾ ಘಟಕಗಳು, ಮೆರಿನ್ ಪ್ರೋಡಕ್ಟ್, ಸಿದ್ಧ ಆಹಾರ ಘಟಕಗಳು, ಸೇರಿದಂತೆ ಮತ್ತಿತರ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ಇನ್‌ಫ್ರಾಸ್ಟçಕ್ಟರ್ ಸೇರಿದಂತೆ ಕಾರ್ಯನಿರತ ಬಂಡವಾಳಗಳ ಅವಶ್ಯಕತೆ ಇದ್ದಲ್ಲಿ ಅವರುಗಳಿಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ನೀಡಬೇಕು. ಮಾಲೀಕರು ಆರ್ಥಿಕ ನೆರವನ್ನು ಪಡೆಯಲು ಎಂ.ಎಸ್.ಎಂ.ಇ ನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಕಳ ಕರಾವಳಿ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರ ಆಯ್ಕೆಗಾಗಿ, ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಮತ್ತು ತಂತ್ರಜ್ಞರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಪ್ಟ್ರೀಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ, ಡಿಪ್ಲೋಮಾ, ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ (ಸಂಗೀತ, ಧ್ವನಿ-ಬೆಳಕು, ರಂಗಸಜ್ಜಿಕೆ-ಪರಿಕರ) ಪರಿಣತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಆಸಕ್ತ ಕಲಾವಿದರು ಹಾಗೂ ತಂತ್ರಜ್ಞರನ್ನು ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು ಕಲಾವಿದರಿಗೆ ವಯಸ್ಸಿನ ಮಿತಿ 18 ರಿಂದ 32 ವರ್ಷ. ತಂತ್ರಜ್ಞರಿಗೆ ವಯಸ್ಸಿನ ಮಿತಿ ಇರುವುದಿಲ್ಲ. ಆಯ್ಕೆಯಾದ ಕಲಾವಿದರು ರಂಗಾಯಣದ ನಿಯಮ ಮತ್ತು ಷರತ್ತುಗಳಿಗೆ ಬದ್ಧರಾಗಿರಬೇಕು. ತಂತ್ರಜ್ಞರಿಗೆ ರೂ.25,000, ಮೊದಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ಉಸಿರಾಟದ ಕ್ರಮ ಹಾಗೂ ಉತ್ತಮ ಆಹಾರ ಸಂಸ್ಕೃತಿಯ ಕೊರತೆಯಿಂದಾಗಿ ಇಂದಿನ 21 ವರ್ಷದ ಯುವಕರು 80 ವರ್ಷದ ವೃದ್ಧರಂತೆ ಕಾಣುವಂತಾಗಿದೆ. ನಮ್ಮ ಮೂಗು ಮತ್ತು ಬಾಯಿ ಎರಡೂ ಸರಿಯಾಗಿದ್ದರೆ ಆರೋಗ್ಯವು ಸುಸ್ಥಿತಿಯಲ್ಲಿರುತ್ತದೆ ಎಂದು ಯೋಗ ಗುರು ಚೇಂಪಿ ಪ್ರಕಾಶ್ ಭಟ್ ತಿಳಿಸಿದರು. ಅವರು ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಕ್ರೀಡಾ ಸಂಘ ಮತ್ತು ಆರೋಗ್ಯ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ’ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ಯೋಗ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿದರು. ಸೂರ್ಯ ನಮಸ್ಕಾರ ಇದು ಸರ್ವ ದೈಹಿಕ ರೋಗಗಳಿಗೂ ರಾಮಬಾಣವಿದ್ದಂತೆ. ಪ್ರತಿದಿನ 21 ಬಾರಿ ಭ್ರಾಮರೀ ಪ್ರಾಣಾಯಾಮ ಮಾಡುವುದರಿಂದ ನೆನಪಿನ ಶಕ್ತಿ ಅಪಾರವಾಗಿ ಹೆಚ್ಚುತ್ತದೆ ಎಂದರು. ನಾವು ತಟ್ಟುವ ಚಪ್ಪಾಳೆಯು ನಮ್ಮ ಮನಸ್ಸಿನ ಏಕಾಗ್ರತೆಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಇದೇ ವೇಳೆ, ಪ್ರತಿಯೊಬ್ಬ ವಿದ್ಯಾರ್ಥಿಯೂ ದಿನಕ್ಕೆ ಕನಿಷ್ಠ ಅರ್ಧ ಗಂಟೆಯಾದರೂ ಯೋಗಾಭ್ಯಾಸ ಮಾಡಬೇಕು ಎಂದು ಅವರು ಕರೆ ನೀಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಾಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅದ್ದೂರಿ ಆಗಿ ನಡೆಯಿತು. ಯೋಗ ಗುರುಗಳು ಆದ ರವಿ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಣ್ಣ ವಯಸ್ಸಿನಲ್ಲಿಯೇ ಯೋಗ ಕಲಿಕೆ ಮತ್ತು ಅಭ್ಯಾಸ ಅರೋಗ್ಯ ಮತ್ತು ಮನಸ್ಸಿಗೆ ತುಂಬಾ ಹಿತ ಎಂದು ಹೇಳಿದರು. ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದ ಅವರು ಅದರ ಉಪಯೋಗವನ್ನೂ ಹೇಳಿದರು. ಜೆಸಿಐ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಮುಖ್ಯ ಅಥಿತಿಗಳಾಗಿ ಜ್ಞಾನೇಶ್ ಶೆಟ್ಟಿ  ಮುಂತಾದವರು ಮಾತಾನಾಡಿದರು. ಜೆಸಿಐ ಸದಸ್ಯರು ಮತ್ತು ಮಕ್ಕಳು ಯೋಗವನ್ನು ಮಾಡಿದರು.    ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅಶೋಕ್ ಆಚಾರಿ, ಉಪಾಧ್ಯಕ್ಷರಾದ ಗುರು ಪ್ರಸಾದ್ ಶೆಟ್ಟಿ ಮತ್ತು ರಾಘವೇಂದ್ರ ಕುದ್ರುಬೆಟ್ಟು ಹಾಗೂ ಮಂಜುಳ ಶೆಟ್ಟಿ ಮತ್ತು ಆಶಾ ಕುಲಾಲ್ ಮತ್ತು ಜೆಸಿಐ ಸದಸ್ಯರು ಉಪಸ್ಥಿತಿ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ. 2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾಗಿದ್ದು, ಶ್ರಾವ್ಯ ಅವರ ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪರಿಶ್ರಮ, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಈ ಯಶಸ್ಸು ಸಾಕ್ಷಿಯಾಗಿದೆ. ಅವರ ಈ ಗಮನಾರ್ಹ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯ ಹಾಗೂ ಯಶಸ್ವಿ ವೃತ್ತಿಜೀವನಕ್ಕಾಗಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವ ಮೋರ್ಚಾದ ನೇತೃತ್ವದಲ್ಲಿ ವಿಶ್ವಯೋಗ ದಿನಾಚರಣೆಯನ್ನು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ಅನಿತಾ ಆರ್.ಕೆ, ಯುವಮೋರ್ಚಾ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳು,ಪದಾಧಿಕಾರಿಗಳು ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯಮಟ್ಟದ ಯೋಗ ಪಟು ಕಲಾಶ್ರಿ ತನ್ವಿ ಯೋಗ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಯುವ ಮೋರ್ಚಾದ ವತಿಯಿಂದ ಯೋಗ ತರಬೇತುದಾರರಿಗೆ ಸನ್ಮಾನಿಸಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಯೋಗವು ಮನುಷ್ಯರು ದೈಹಿಕ ಮತ್ತು ಮಾನಸಿಕ ಸ್ವಸ್ಥತೆಯನ್ನು ಕಾಯ್ದುಕೊಂಡು ಉತ್ತಮ ಆರೋಗ್ಯವನ್ನು ಹೊಂದಲು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಆಸನಗಳನ್ನು ಅಭ್ಯಸಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ “ಯೋಗವಿದ್ದಲ್ಲಿ ರೋಗವಿಲ್ಲ. ಆರೋಗ್ಯಪೂರ್ಣ ಬದುಕಿಗೆ ಯೋಗ ಅನಿವಾರ್ಯ ಎಂಬಂತಾಗಿದೆ” ಎಂದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಮಾತನಾಡಿ “ಇಂದು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವಲ್ಲಿ ಯೋಗದ ಪಾತ್ರ ಹೆಚ್ಚಿನದ್ದಾಗಿದೆ. ಪ್ರಪಂಚದಲ್ಲಿರುವ ಬಹುತೇಕ ಜನರು ಉತ್ತಮ ಆರೋಗ್ಯವನ್ನು ಹೊಂದಲು ಯೋಗಾಭ್ಯಾಸವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ. ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪ್ರೇರಣಾದಾಯಕ ಸಂದೇಶ ನೀಡಿದರು. “ಇಂದಿನ ಯೋಗಾಭ್ಯಾಸ, ನಾಳಿನ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಆರೋಗ್ಯ, ಸಾಮರಸ್ಯ ಮತ್ತು ಮನಃಶಾಂತಿಯ ಸಂದೇಶವನ್ನು ಸಾರುವ ಯೋಗಾಭ್ಯಾಸದಲ್ಲಿ ಅತ್ಯಂತ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಮುಖರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಶಿಸ್ತುಬದ್ಧವಾಗಿ ಪ್ರದರ್ಶಿಸುವ ಮೂಲಕ…

Read More