ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಜೂ.30: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಎಂಬಲ್ಲಿ ನಡೆದಿದೆ. ಶಂಕರನಾರಾಯಣ ಸರಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಮಾನಸ ಕುಲಾಲ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬಳಿಕ ಮರು ಪರೀಕ್ಷೆ ಬರೆದಿದ್ದಳು. ಆದರೆ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದರಿಂದ ಮನನೊಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಶಾಲೆ ಬಳಿಯ ನಿವಾಸಿ ಬಾಬಣ್ಣ ಕುಲಾಲ ಅವರಿಗೆ ಅಪಘಾತವಾಗಿ ದುಡಿಯಲು ಕೂಡ ಆಗುತ್ತಿರಲಿಲ್ಲ. ತಾಯಿ ಅಕ್ಷರ ದಾಸೋಹ ಕೆಲಸ ಮಾಡಿ ಸಂಸಾರ ನಡೆಸುತ್ತಿದ್ದರು. ಮಾನಸ ಅವರ ವಿದ್ಯಾಭ್ಯಾಸಕ್ಕೆ ಒಬ್ಬರು ದಾನಿಗಳು ಸಹಾಯ ಮಾಡುತಿದ್ದರು ಎನ್ನಲಾಗಿದೆ. ಅವರಿಗೆ ಇಬ್ಬರು ಮಕ್ಕಳಿದ್ದು ಒಬ್ಬ ಪುತ್ರ ಕೆಲವು ವರ್ಷದ ಹಿಂದೆ ಬೈನ್ ಟ್ಯೂಮ್ಮರ್ ನಿಂದ ಮೃತ ಪಟ್ಟಿದ್ದಾನೆ. ಇದೀಗ ಮಗಳ ಸಾವಿನಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಅತಿಯಾಗುವುದರಿಂದ, ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ದಿನಾಂಕ: 01.07.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದಕ್ಕೂ ಮೊದಲು ಶಾಲಾ ಮುಖ್ಯಸ್ಥರಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಲೂ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು. ಬಳಿಕ ಅಧಿಕೃತವಾಗಿ ಜುಲೈ 1ರಂದು ರಜೆ ಘೊಷಿಸಿದ್ದಾರೆ. ಆದರೆ ನಾಳೆ ಇರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿಯಂತೆಯೇ ನಡೆಯುತ್ತವೆ ಎಂದು ತಿಳಿದುಬಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಗೋಪಾಡಿಯ ಮೀನುಗಾರ ಗೋಪಾಲರ ಮನೆ ಸಂಪೂರ್ಣವಾಗಿ ಅಜೀರ್ಣಾವಸ್ಥೆಯಲ್ಲಿರುವುದನ್ನು ಗಮನಿಸಿ ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ನೂತನವಾಗಿ ಮನೆಯನ್ನು ಕಟ್ಟಿಸಿ ಅವರಿಗೆ ಹಸ್ತಾಂತರಿಸಲಾಯಿತು. ನೂತನ ಮನೆಯನ್ನು ಮಾಜಿ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ ಉದ್ಘಾಟಿಸಿದರು. ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ವೈ, ಮಖ್ಯ ಅತಿಥಿಯಾಗಿ ಆಗಮಿಸಿದ್ದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಮಹೇಂದ್ರ ಶೆಟ್ಟಿ ಮನೆ ಹಸ್ತಾಂತರಿಸಿದರು. ಇನ್ನರ್ ವೀಲ್ ಕ್ಲಬ್ನ ಶಾಂತಾ ಕಾಂಚನ್ ಉಪಸ್ಥಿತರಿದ್ದರು. ರೋಟರಿ ಸದಸ್ಯರು “ಆಶ್ರಯ” ಯೋಜನೆಯಡಿ ನೂತನ ಮನೆ ಪಡೆದ ಕುಟುಂಬಕ್ಕೆ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಾರ್ಥ ಎಜುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111ನೇ ಜನುಮದಿನದ ಸಂಭ್ರಮದ ಅಂಗವಾಗಿ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020ಯನ್ನು ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಪ್ರದಾನಿಸಲಾಯಿತು. ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಶಾಸಕ ರೇಣುಕಾಚಾರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಡಾ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಸ್ವಂತ ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡವರು. ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ, ಪ್ರಗ್ಯ್ನಾ ಸಾಗರ್, ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಮೊದಲಾದ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದೇಶದ ಪ್ರತಿಷ್ಠಿತ ಬಹುಆಯಾಮಗಳ ಸಂಶೋಧನೆಯಲ್ಲಿ ತೊಡಗಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ನಡುವೆ ನೂತನ ಒಡಂಬಡಿಕೆಗೆ ಸಹಿ ಹಾಕಲಾಯಿತು. ಆಳ್ವಾಸ್ ಸಂಸ್ಥೆಯ ಪರವಾಗಿ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾದ ಡಾ. ಶೈಲೇಶ್ ನಾಯಕ್, ಎನ್ಐಎಎಸ್ ಇಸ್ರೋ ಚೇರ್ ಪ್ರೊಫೆಸರ್ ಡಾ. ಪಿ.ಜಿ.ದಿವಾಕರ್ ಮತ್ತು ಎನ್ಐಎಎಸ್ ಆಡಳಿತ ಮುಖ್ಯಸ್ಥರು ಪಿ. ಶ್ರೀನಿವಾಸ್ ಐತಾಳ್ ಸಮ್ಮುಖದಲ್ಲಿ ಬೆಂಗಳೂರಿನ ಎನ್ಐಎಎಸ್ ಕೇಂದ್ರ ಕಚೇರಿಯಲ್ಲಿ ಒಡಂಬಡಿಕೆಯ ಒಪ್ಪಂದಕ್ಕೆ ಬರಲಾಯಿತು. ಐದು ವರ್ಷಗಳ ಈ ಒಪ್ಪಂದವು, ವಿವಿಧ ಆಯಾಮಗಳಲ್ಲಿ ಎರಡು ಸಂಸ್ಥೆಗಳ ನಡುವೆ ಪರಸ್ಪರ ಸಹಕಾರವನ್ನು ಒದಗಿಸಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪಾಂಡಿತ್ಯವನ್ನು ಉತ್ತೇಜಿಸಲು ಎರಡೂ ಸಂಸ್ಥೆಗಳ ನಡುವೆ ಸಹಯೋಗ ಮತ್ತು ತಾಂತ್ರಿಕ ವಿನಿಮಯ ಮಾಡುವುದು, ಎನ್ಐಎಎಸ್ ಹಾಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಜಂಟಿಯಾಗಿ ಸಂಶೋಧನೆಯಲ್ಲಿ ತೊಡಗಿಕೊಳ್ಳುವುದು, ಶಿಕ್ಷಣ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುತ್ತೂರಿನಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ 17 ರ ವಯೋಮಾನದ ಬಾಲಕಿಯರ ಚೆಸ್ ಚಾಂಪಿಯನ್ಶಿಪ್ನಲ್ಲಿ ದ್ವೀತಿಯ ಸ್ಥಾನ ಪಡೆದ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿನಿ ಮಾನಸ ಕೋಟೇಶ್ವರ, ಜುಲೈನಲ್ಲಿ ಒಡಿಶಾದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ► ರಾಜ್ಯ ಮಟ್ಟದ ಚೆಸ್ ಪಂದ್ಯಾಟ: ಮೂವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ – https://kundapraa.com/?p=60216 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹೆರಂಜಾಲಿನ ಪ್ರಗತಿಪರ ಕೃಷಿಕರಾದ ಗಣಪ ದೇವಾಡಿಗ ಅವರ ಕೃಷಿಭೂಮಿಯಲ್ಲಿ ಸ್ವಯಂ ಪ್ರೇರಿತರಾಗಿ ತುಂತುರು ಮಳೆಯಲ್ಲಿ ಭತ್ತದ ಪೈರುಗಳನ್ನು ನಾಟಿಮಾಡಿ ಕೃಷಿ ಕಾಯಕದ ಅನುಭವ ಪಡೆದುಕೊಂಡರು. ಕೃಷಿಭೂಮಿಯ ಮಾಲಕರಿಂದ ಭತ್ತದ ನೇಜಿ ಹಾಗೂ ಕೃಷಿ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಆರ್ ಕೆ ಬಿಲ್ಲವ, ಶಿಕ್ಷಕಿಯರಾದ ರೋಸಮ್ಮ, ಗಾಯತ್ರಿ , ಪ್ರೀತಮ್ ಶೆಟ್ಟಿ, ಅನಿತಾ ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ, ಕತಾರ್: ದೋಹಾ ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ, ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗೌರವ ಅತಿಥಿಗಳಾದ ದೋಹಾ, ಕತಾರ್ ಸಂಸ್ಕೃತಿ ಮತ್ತು ಕಲಾ ಇಲಾಖೆಯ ಸಾಂಸ್ಕೃತಿಕ ಸಮಾಲೋಚಕ ಜಮಾಲ್ ಫಯೇಜ್ ಅವರು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಕತಾರ್ನಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ನ ಕನ್ನಡಿಗ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಸಮುದಾಯದಲ್ಲಿ ಹೆಸರುವಾಸಿಯಾಗಿದ್ದಾರೆ. ಕೋವಿಡ್ -19 ರ ಸವಾಲಿನ ಸಮಯದಲ್ಲಿ ಭಾರತೀಯ ಸಮುದಾಯಗಳನ್ನು ತಾಯ್ನಾಡಿಗೆ ಮರುಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಕಾರ್ಯದ ಜೊತೆಗೆ, ಅವರು ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕೆಲಸ ಮಾಡುವ ಇತರ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತಮ್ಮ ಸಾಂಸ್ಕೃತಿಕ ಸೇವೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾ ಮಟ್ಟದ ’ಸ್ವಚ್ಛ್ ವಿದ್ಯಾಲಯ ಪುರಸ್ಕಾರ 2021-22’ ಪ್ರಶಸ್ತಿಗೆ ಭಾಜನವಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪ್ರಶಸ್ತಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತೀ ಕ್ಷೇತ್ರದಲ್ಲೂ ಜ್ಞಾನ ವೃದ್ಧಿಯನ್ನು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರೂ ಸಹ ಸರಿಯಾದ ಮಾರ್ಗದರ್ಶನ ನೀಡುತ್ತಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳಾದ ಸುಧಾಕರ ಶೆಟ್ಟಿ, ಡಾ. ಜಯಕರ ಶೆಟ್ಟಿ, ಡಾ. ಕುಸುಮಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಜಯರಾಜ್ ಹೆಗ್ಡೆ, ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
