Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಶ್ರೀ ಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಆಯ್ಕೆ ಪಕ್ರಿಯೆ ಇತ್ತಿಚೆಗೆ ನಡೆಯಿತು. ಅಧ್ಯಕ್ಷರಾಗಿ ಕೆ. ಬಸವರಾಜ್ ರಾಯಪ್ನಾಡಿ ಮತ್ತು ಉಪಾಧ್ಯಕ್ಷರಾಗಿ ವೆಂಕಟೇಶ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಶಿವರಾಮ ಶೆಟ್ಟಿ ವಂಡ್ಸೆ, ಉದಯ ಕೆ. ನಾಯ್ಕ ವಂಡ್ಸೆ, ಉದಯ ಕೆ. ನಾಯ್ಕ ವಂಡ್ಸೆ, ರವೀಂದ್ರ ಎಸ್. ಬಂಗೇರ ಕುಂದಾಪುರ, ಶಂಕರ್ ಗಾಣಿಗ ಹೋಸಾಡು, ಜಲಜ ಪೂಜಾರಿ ಮಾವಿನಕಟ್ಟೆ, ಶಶಿಕಲಾ ಎಸ್. ವಂಡ್ಸೆ, ಚಂದ್ರ ರಾಯಪ್ನಾಡಿ, ದಿವಾಕರ ವಂಡ್ಸೆ, ದೇವು ಮೆಂಡನ್ ರಾಯಪ್ನಾಡಿ, ನಾಗರಾಜ ಪುತ್ರನ್ ಅಂಬ್ಲಾಡಿ, ಹರೀಶ್ ನಾಯ್ಕ್ ವಂಡ್ಸೆ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಹಕಾರಿ ಕಾನೂನು ಸಲಹೆಗಾರರಾದ ಉಮೇಶ್ ಶೆಟ್ಟಿ, ಸತ್ಯನಿಧಿ ಸಂಗ್ರಾಹಕ ಗುರುರಾಜ ಗಾಣಿಗ ಉಪಸ್ಥಿತರಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಆರ್. ಸಂತೋಷ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ಅಭಿಷೇಕ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಮುಂಚೂಣಿ ಸಂಗೀತ ನಿರ್ದೇಶಕ, ಕುಂದಾಪುರ ತಾಲೂಕಿನ ರವಿ ಬಸ್ರೂರು ಬಾಲಿವುಡ್‌ಗೆ ಲಗ್ಗೆಯಿಟ್ಟಿದ್ದು, ಸಲ್ಮಾನ್ ಖಾನ್ ಅವರು ಅಭಿಮಾನದ ಮಾತನಾಡಿದ್ದಾರೆ. ಬಾಲಿವುಡ್ ಕಿಂಗ್ ಸಲ್ಮಾನ್ ಖಾನ್ ನಿರ್ಮಾಣದ ಅಂತಿಮ್ ಸಿನಿಮಾನದ ಹಿನ್ನಲೆ ಸಂಗೀತ ಹಾಗೂ ಚಿತ್ರದ ಹಾಡುಗಳಿಗೆ ಸಂಗೀತ ನೀಡುವ ಮೂಲಕ ರವಿ ಬಸ್ರೂರು ಅವರು ಬಾಲಿವುಡ್‌ನಲ್ಲಿ ಸದ್ದು ಮಾಡಿದ್ದಾರೆ. ಕನ್ನಡದ ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ರವಿ ಬಸ್ರೂರು ಅವರಿಗೆ ‘ಉಗ್ರಂ’ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. ‘ಕೆಜಿಎಫ್’ ಸಿನಿಮಾ ದೇಶದ್ಯಾಂತ ಸಿನಿಮಾ ದಿಗ್ಗಜರು ಇವರತ್ತ ನೋಡುವಂತೆ ಮಾಡಿತ್ತು. ಪ್ರಸ್ತುತ ಶ್ರೀಮುರುಳಿ ಅಭಿನಯದ ‘ಮದಗಜ’ ಸಿನಿಮಾ ಪೂರ್ಣಗೊಳಿಸಿದ್ದಾರೆ. ಕಡಲ್ ಹೆಸರಿನ ಚಲನಚಿತ್ರವೊಂದನ್ನು ಸ್ವಂತ ಬ್ಯಾನರ್‌ನಡಿ ನಿರ್ಮಿಸುತ್ತಿದ್ದಾರೆ. ದಕ್ಷಿಣ ಭಾರತದ ಬಹುತೇಕ ಭಾಷೆಗಳಿಗೆ ಸಂಗೀತ ಸಂಯೋಜನೆ ಮಾಡಿರುವ ರವಿ ಬಸ್ರೂರು ಹುಟ್ಟೂರು ಬಸ್ರೂರಿನಲ್ಲಿ ಅತ್ಯಾಧುನಿಕ ಸ್ಟುಡಿಯೊ ನಿರ್ಮಿಸಿಕೊಂಡಿದ್ದು, ಸಿನಿಮಾ ದಿಗ್ಗಜರು ಬಸ್ರೂರಿನತ್ತ ಕಣ್ಣು ಹಾಯಿಸುವಂತೆ ಮಾಡಿದ್ದಾರೆ. ಇತ್ತಿಚೆಗೆ ಮುಂಬಯಿಯಲ್ಲಿ ನಡೆದ ಚಿತ್ರದ ಟ್ರೇಲರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠ ಗಾಯನ ಕಾರ್ಯಕ್ರಮದಡಿ ,ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಸೇರಿದಂತೆ, ಕನ್ನಡದ ಶ್ರೇಷ್ಠತೆಯನ್ನು ಸಾರುವ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು, ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡುವ ಮೂಲಕ ಜಿಲ್ಲೆಯಾದ್ಯಂತ ಕನ್ನಡದ ಕಂಪನ್ನು ಹರಡಲಾಯಿತು. ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣದಲ್ಲಿ ಸುಮಾರು 750 ಕ್ಕೂ ಅಧಿಕ ಮಂದಿಯಿಂದ ಕನ್ನಡ ಗೀತೆಗಳ ಗಾಯನ ನಡೆಯಿತು, ಪ್ರಬಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಣಿಪಾಲ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮಕ್ಕಾಗಿ ಬಹುತೇಕ ಪುರುಷ ಸಿಬ್ಬಂದಿಗಳು ಬಿಳಿ ಬಣ್ಣದ ಶರ್ಟ್ ಗಳು ಮತ್ತು ಮಹಿಳಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು ಎಂದು ಕವಿ ಕುವೆಂಪು ಕನ್ನಡದ ಭಾಷೆಯ ಮಹತ್ವವನ್ನು ಸಾರಿದ್ದಾರೆ. ಕನ್ನಡಿಗರಾದ ನಾವುಗಳು ಕನ್ನಡ ಭಾಷೆಯ ಉಳಿವು ಮತ್ತು ಬೆಳೆಸುವುದಕ್ಕೆ ಪಣ ತೊಟ್ಟು ಕನ್ನಡವನ್ನು ಪ್ರಪಂಚ ಉದ್ದಗಲಕ್ಕೂ ಪಸರಿಸುವ ಕೆಲಸವಾಗಬೇಕು, ಕನ್ನಡ ನಮ್ಮ ದಿನ ನಿತ್ಯ ಮಾತನಾಡುವ ಭಾಷೆಯಾಗಿರದೇ ನಮ್ಮ ಎಲ್ಲಾ ಕಾಯಕದಲ್ಲೂ ಬಳಸಿಕೊಳ್ಳಬೇಕು, ಕನ್ನಡವೇ ಕನ್ನಡಿಗರ ಜೀವನಾಡಿಯಾಗಿದೆ ಎಂದು ಮಹಾತ್ಮ ಗಾಂಧಿ ಫ್ರೌಡಶಾಲೆಯ ಮುಖ್ಯೋಪಾಧ್ಯಯರಾದ ಸತೀಶ್ ನಾಯ್ಕ ಅವರು ಹೇಳಿದರು. ಅವರು ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆ , ಶ್ರೀವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ ಇವರ ಸಹಯೋಗದಲ್ಲಿ ನಡೆದ ಮಾತಾಡ್ ಮಾತಾಡ್ ಕನ್ನಡ – ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರವನ್ನು ಶ್ರೀ ವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಹಾಗೂ ಕನ್ನಡ ನಾಡು ನುಡಿಯ ರಕ್ಷಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ.ಆರ್.ಸಿ.ಐ.) ಉಡುಪಿ- ಮಣಿಪಾಲ ಘಟಕ ಆಶ್ರಯದಲ್ಲಿ ನಡೆಯುವ ವಿಶ್ವ ಸಂವಹನಕಾರರ ದಿನಾಚರಣೆಯಲ್ಲಿ ಅಂದು ಸಂಜೆ 6ರಿಂದ ಕರಾವಳಿ ಜಂಕ್ಷನ್ ಬಳಿಯ ಹೋಟೆಲ್ ಮಣಿಪಾಲ ಇನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು ಎಂದು ಪಿ.ಆರ್.ಸಿ.ಐ. ಉಡುಪಿ- ಮಣಿಪಾಲ ಘಟಕ ಅಧ್ಯಕ್ಷ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿದ್ದಾರೆ. ಮಾಧ್ಯಮ ಜಾಣ ಪ್ರಶಸ್ತಿ: ಮಾಧ್ಯಮ ಕ್ಷೇತ್ರದ ಹಿರಿಯರೂ ಜಾನಪದ ವಿದ್ವಾಂಸರೂ ಆಗಿರುವ ಕೆ. ಎಲ್. ಕುಂಡಂತಾಯ, ಕಾರ್ಕಳದ ಕೃಷಿ ಬಿಂಬ ಪತ್ರಿಕೆ ಸಂಪಾದಕ ರಾಧಾಕೃಷ್ಣ ತೋಡಿಕಾನ ಮತ್ತು ಕುಂದಾಪುರದ ಕುಂದಪ್ರಭ ಪತ್ರಿಕೆ ಸಂಪಾದಕ ಯು. ಸುರೇಂದ್ರ ಶೆಣೈ ಅವರಿಗೆ ಮರವಂತೆ ರಾಮಕೃಷ್ಣ ಹೆಬ್ಬಾರ್ ಸ್ಮಾರಕ ಮಾಧ್ಯಮ ಜಾಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಾಧಕರಿಗೆ ಗೌರವ: ಇದೇ ಸಂದರ್ಭದಲ್ಲಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯಾಧ್ಯಕ್ಷ, ಕರಾವಳಿ ಎಕ್ಸ್ಪ್ರೆಸ್ ಡಾಟ್ ಕಾಮ್ ಪ್ರವರ್ತಕ ಜನಾರ್ದನ ಕೊಡವೂರು ಅವರಿಗೆ ಕರಾವಳಿ-ಇ-ಧ್ವನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಲ್ವಾಡಿ ಮೆಹರಾಜ್ ಜುಮ್ಮ ಮಸೀದಿಯ 2021-2022 ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಜಿ.ಟಿ.ಉಸ್ಮಾನ್ ಅವಿರೋಧ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಸಂತೆಮಕ್ಕಿ ಪಕೀರ್ ಸಾಹೇಬ್, ಉಪಾಧ್ಯಕ್ಷರಾಗಿ ಜಿ.ಪಿ.ಮೊಹಮ್ಮದ, ಹಾಜಿ.ಹಮೀದ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಆಲಿ ಅಕ್ಬರ್, ಜೊತೆ ಕಾರ್ಯದರ್ಶಿಯಾಗಿ ಪಳ್ಳಿ ಉಸ್ಮಾನ್, ಕೋಶಾಧಿಕಾರಿಯಾಗಿ ಜಿ.ಕೆ. ಹಂಝ, ಗೌರವ ಸದಸ್ಯರಾಗಿ ಪಕೀರ್ ಹಸನಬ್ಬ, ಹೆಚ್.ಎಂ.ಹಂಝ, ಎಸ್.ಎಸ್.ಹನೀಫ್, ಜಿ.ಹೆಚ್. ಇಬ್ರಾಹಿಂ, ಜಿ.ಹೆಚ್. ಅಬ್ದುಲ್ಲ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ರಜ್ಞಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಒಡೆತನದ ಪ್ರಜ್ಞಾ ಸಾಗರ್ ಮಲ್ಟಿಕ್ಯುಸೀನ್ ರೆಸ್ಟೋರೆಂಟ್ ಗುರುವಾರ ಶುಭಾರಂಭಗೊಂಡಿತು. ಹೊಸ್ಮಾರು ಶ್ರೀ ಕ್ಷೇತ್ರ ಬಲ್ಯೊಟ್ಟುನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ನೂತನ ರೆಸ್ಟೋರೆಂಟ್ ಲೋಕಾರ್ಪಣೆಗೊಳಿಸಿದರು. ಉಪ್ಪುಂದ ಶನಿಮಂದಿರದ ವಿಜಯ ಪಾತ್ರಿಯವರು ಕ್ಯಾಶ್ ಕೌಂಟರ್ ಉದ್ಘಾಟಿಸಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯಧ್ಯಾಕ್ಷರಾದ ತಿಮ್ಮೇಗೌಡ ಬಿ.ಕೆ. ಹಾಗೂ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷರಾದ ವೇದಕುಮಾರ್ ಕಿಚನ್ ಉದ್ಘಾಟಿಸಿದರು. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಎಸಿ ರೆಸ್ಟೊರೆಂಟ್ ಉದ್ಘಾಟಿಸಿದರು. ಈ ಸಂದರ್ಭ ಪ್ರಜ್ಞಾ ಸಾಗರ್ ಹೋಟೆಲ್ & ರೆಸಾರ್ಟ್ಸ್ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ, ನಿರ್ದೇಶಕ ಮಾಲತಿ ಗೋವಿಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರ ಧಾರವಾಡ ಹಾಗೂ ಉಪ್ಪುಂದದ ನಿವಾಸದ ಮೇಲೆ ಗುರುವಾರ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಸಂಜೆಯ ತನಕ ದಾಖಲೆಗಳ ಪರಿಶೀಲಿಸಿರುವ ಬಗ್ಗೆ ತಿಳಿದುಬಂದಿದೆ. ಮಂಗಳೂರಿನಿಂದ ಕಾರಿನಲ್ಲಿ ಬಂದ 9 ಮಂದಿ ಅಧಿಕಾರಿಗಳ ತಂಡ, ಯು.ಬಿ. ಶೆಟ್ಟಿ ಅವರ ಉಪ್ಪುಂದದ ನಿವಾಸಕ್ಕೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದೆ. ಯು.ಬಿ. ಶೆಟ್ಟಿ ಅವರು ಸದ್ಯ ಧಾರವಾಡದಲ್ಲಿದ್ದು ಅಲ್ಲಿ ಅವರ ನಿವಾಸ ಹಾಗೂ ಅವರ ಸಹೋದರ, ಉದ್ಯಮಿ ಸೀತಾರಾಮ ಶೆಟ್ಟಿ ಅವರ ನಿವಾಸದಲ್ಲಿ ಸಂಜೆಯತನಕ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಉಪ್ಪುಂದ ಮೂಲದವರಾದ ಯು.ಬಿ ಶೆಟ್ಟಿ ಅವರ ಧಾರವಾಡದಲ್ಲಿ ಉದ್ಯಮಿಯಾಗಿದ್ದು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಆಪ್ತರ ಮೇಲೆ ನಡೆಯುತ್ತಿರುವ ದಾಳಿಯ ಮುಂದುವರಿದ ಭಾಗ, ರಾಜಕೀಯ ಪ್ರೇರಿತ ದಾಳಿ ಎನ್ನಲಾಗುತ್ತಿದೆ. ಯು.ಬಿ ಶೆಟ್ಟಿ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಎಂ.ಎಲ್.ಸಿ ಸೀಟಿಗಾಗಿ ಉಮೇದುವಾರಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗುತ್ತದೆ. ಮಕ್ಕಳಲ್ಲಿ ಮಾನಸಿಕ, ದೈಹಿಕ, ಆರೋಗ್ಯ ರಕ್ಷಣೆಗೆ ಮತ್ತು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರಲ್ಲಿ ಮನೋಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಶಿಬಿರಗಳು ಸಹಕಾರಿಯಾಗಲಿದೆ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಹೇಳಿದರು. ಬಾಳ್ಕುದ್ರು ಹಂಗಾರಕಟ್ಟೆ ಅಭಿವೃದ್ಧಿ ಸಂಸ್ಥೆ, ಗ್ರಾಮ ಪಂಚಾಯತ್ ಗುಜ್ಜಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಮೂರು ದಿನಗಳ ಮಕ್ಕಳ ಕ್ರಿಯಾತ್ಮಕ ದಸರಾ ಮಜಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಇಂದಿರಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಶ್ರೀಧರ ಗುಜ್ಜಾಡಿ, ಪ್ರಕಾಶ ಎಂ.ಪೂಜಾರಿ, ತುಂಗಾ ಪೂಜಾರಿ, ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಮತ್ತಿತರರು ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಇಂದು ಬೆಳಿಗ್ಗೆ 11ಕ್ಕೆ ಜಗತ್ತಿನಾದ್ಯಂತ 5 ಲಕ್ಷ ಜನರಿಂದ ಏಕಕಾಲದಲ್ಲಿ ಸಾಮೂಹಿಕ ಲಕ್ಷಕಂಠ ಗೀತಗಾಯನ ನಡೆಯಿತು. ಈ ಅಭಿಯಾನದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವೂ ಕೈಜೋಡಿಸಿ, ಇದರ ಯಶಸ್ಸಿನಲ್ಲಿ ಭಾಗಿಯಾಯಿತು. ಪುತ್ತಿಗೆ, ಮಿಜಾರು, ವಿದ್ಯಾಗಿರಿ ಹಾಗೂ ನುಡಿಸಿರಿ ವೇದಿಕೆಯಲ್ಲಿ 5000ಕ್ಕೂ ಅಧಿಕ ವಿದ್ಯಾರ್ಥಿಗಳು ಗೀತಗಾಯನದಲ್ಲಿ ತಮ್ಮ ಕಂಠ ಜೋಡಿಸಿದರು. 4 ಪ್ರತ್ಯೇಕ ಸ್ಥಳಗಳಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಂದ, ಕೆ. ವಿ. ರಮಣ್ ಅವರ ನಿರ್ದೇಶನದಲ್ಲಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳು ಏಕಕಾಲದಲ್ಲಿ ಮೊಳಗಿತು. ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಎಲ್ಲಾ ವಿದ್ಯಾರ್ಥಿಗಳು ಕನ್ನಡ ಬಾವುಟವನ್ನು ಬೀಸುವ ಮೂಲಕ, ತಮ್ಮ ಕನ್ನಡದ ಅಭಿಮಾನವನ್ನು, ಕನ್ನಡ ನಾಡಿನ ಮೇಲಿರುವ ಪ್ರೀತಿಯನ್ನು ತೋರ್ಪಡಿಸಿದರು. ಈ ಸಂದರ್ಭ ಆಳ್ವಾಸ್…

Read More