Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಫೆ.21ರಂದು ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಕೆ. ವೇಣುಗೋಪಾಲ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಪಕ್ಕಲಡ್ಕದ ಅಹಮ್ಮದ್ ಕೆಪಿ ಹಾಗೂ ಫಾತಿಮಾ ದಂಪತಿಯ ಸುಪುತ್ರರಾಗಿ 1947ರಲ್ಲಿ ಜನಿಸಿದ ಅವರು ಬಿ.ಕಾಂ ಪದವೀಧರರು. 1968ರಲ್ಲಿ ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ತನ್ನ ವೃತ್ತಿ ಜೀವನವನ್ನು ಪ್ರಾರಂಭಿಸಿದ ಅವರು ನಂತರ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ಅಧೀಕ್ಷರಾಗಿಯೂ ಭಡ್ತಿ ಪಡೆದು 37 ವರ್ಷಗಳ ತನ್ನ ಸಾರ್ಥಕ ಸೇವೆಯನ್ನು ಮುಗಿಸಿ 2005ರಲ್ಲಿ ನಿವೃತ್ತರು. ಕೃಷಿಯ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಣ್ಣ ಕಥಾ ರಚನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದವರು. ಈಗಾಗಲೇ ‘ಪಾದದಡಿಯ ಸ್ಪರ್ಗ’, ‘ಬಿಳಿಗೋಡೆ’, ‘ಅಲೆಮಾರಿ’, ‘ಭ್ರಮೆ’ ‘ಒಂಟಿತೆಪ್ಪ’, ‘ನೆನಪುಗಳು ಸಾಯುವುದಿಲ್ಲ’,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ..ಕೋಟ: ಗ್ರಾಮಪಂಚಾಯತ್ ಅಭಿವೃದ್ಧಿಯಾಗಬೇಕು ತನ್ಮೂಕ ಜನಸೇವೆ ನಿರಂತರಗೊಳಿಸಿ ಜನಸ್ನೇಹಿ ಆಡಳಿತ ನೀಡುವಂತ್ತಾಗಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಪಾಂಡೇಶ್ವರ ಗ್ರಾಮಪಂಚಾಯತ್‌ನ ಮಹಾತ್ಮಾಗಾಂಧಿ ಸಭಾಂಗಣ, ವಿಕಲಚೇತನ ಕೊಠಡಿ ರೆಕಾರ್ಡ್ ರೂಮ್, ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಂಚಾಯತ್ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಅಂತ್ಯಗೊಳ್ಳುತ್ತಿದ್ದು ಮುಂದಿನ ಚುನಾವಣಾ ಪ್ರಕ್ರಿಯೆ ಮರಿಚಿಕೆಯಾಗದೆ ಜನರ ಅನುಕೂಲತೆಗೆ ಸಹಕಾರಿಯಾಗಲಿ ಎಂದು ಹಾರೈಸಿದರು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ರೇಕಾಡ್೯ ರೂಮ್ ಅನ್ನು ಉದ್ಘಾಟಿಸಿದರು. ಕೆನರಾ ಬ್ಯಾಂಕ್ ವತಿಯಿಂದ ಕೊಡಮಾಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆನರಾ ಬ್ಯಾಂಕ್ ಸಾಸ್ತಾನ ಶಾಖಾ ಪ್ರಭಂಧಕ ಪ್ರಜಿನ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಪಂಚಾಯತ್ ನಲ್ಲಿ ಈ ಹಿಂದೆ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಇನಾಯಿತ್ ಉಲ್ಲಾ ಬೇಗ್, ಲೋಲಾಕ್ಷಿ, ಸತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಾರದಾ ಪೂಜೆಯನ್ನು ಶ್ರದ್ಧಾ – ಭಕ್ತಿಯಿಂದ  ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳು ಅವರವರ ಮನೆಯ ಕೈದೋಟಗಳಲ್ಲಿ ಬೆಳೆದ ಬಣ್ಣ ಬಣ್ಣದ ವಿವಿಧ ಹೂವುಗಳನ್ನು ತಂದು ವಿದ್ಯಾ ದೇವತೆಯಾದ ತಾಯಿ ಶಾರದೆಯನ್ನು ಹೂವುಗಳಿಂದ ಅಲಂಕರಿಸಿದರು. ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಹಾಗೂ ದೇವಿ ಶಾರದೆಯ ಕುರಿತಾಗಿ ಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ, ದೈವಿಕ ವಾತಾವರಣವನ್ನು ಮೂಡಿಸಿದರು. ಶಾಲೆಯ ಸಹ ಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ, ತಾಯಿ ಶಾರದೆಯ ಪೂಜೆಯನ್ನು ನೆರವೇರಿಸುವುದರ ಜೊತೆಗೆ ಮಕ್ಕಳಿಗೆ ತಾಯಿ ಸರಸ್ವತಿಯ ಮಹಿಮೆ ಮತ್ತು ವಿದ್ಯೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸರ್ವಾಂಗೀಣ ಪ್ರಗತಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು. ಶಾಲೆಯಲ್ಲಿ ಈ ರೀತಿಯ ಆಚರಣೆಯು ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ತುಂಬಿ, ಸಾಂಸ್ಕೃತಿಕ ಮೌಲ್ಯಗಳ ಪರಿಚಯವನ್ನು  ಮಾಡಿಸಿ, ಶಿಸ್ತನ್ನು ಬೆಳೆಸಲು ಸಹಾಯ ಮಾಡುತ್ತದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಾಂಧಿ ಮೈದಾನದ ಸಮಗ್ರ ಅಭಿವೃದ್ಧಿ – ವಾಲಿಬಾಲ್ ಕೋರ್ಟ್ ಮತ್ತು ಕಬ್ಬಡಿ ಕೋರ್ಟ್ ಮಾಡುವ ಸಲುವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಕುಂದಾಪುರ ಪುರಸಭಾ ಮುಖ್ಯ ಅಧಿಕಾರಿ ಆನಂದ್ ಜಿ., ಮತ್ತು ಕ್ರೀಡಾಭಿಮಾನಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಮ್‌ಜೆ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಡಿ, ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಆಧಾರಿತ ನವೀನತೆ ಹಾಗೂ ಜಾಗತಿಕ ಸಹಕಾರಗಳತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಗುರುವಾರ ಉದ್ಘಾಟಿಸಲಾಯಿತು. ಈ ಕೇಂದ್ರವನ್ನು ಸಂಶೋಧನೆ ಹಾಗೂ ಸಲಹಾ ವಿಭಾಗದ ಡೀನ್ ಆಗಿರುವ ಡಾ. ಇಂದ್ರ ವಿಜಯ್ ಸಿಂಗ್ ಅವರು ಮುನ್ನಡೆಸುತ್ತಿದ್ದು, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಉನ್ನತ ಸಂಶೋಧನೆ, ನವೀನತೆ ಹಾಗೂ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಮುಖ್ಯ ಅತಿಥಿಯಾಗಿ ತಾಕೇಶಿ ಒಗುರಾ, ಏಶಿಯ ಬಿಸ್ ನೆಸ್ ಹೆಡ್, ಕೆಟಿಸಿ ಹೋಲ್ಡಿಂಗ್ ಜಪಾನ್ ಅವರು ಆಗಮಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಅವರು ಜಪಾನಿನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅಂತರರಾಷ್ಟ್ರೀಯ ವೃತ್ತಿ ಅವಕಾಶಗಳ ಕುರಿತು ಮಾತನಾಡಿ, ಕೃತಕ ಬುದ್ಧಿಮತ್ತೆ ಮತ್ತು ಉನ್ನತ ತಂತ್ರಜ್ಞಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಒಂದಕ್ಕೆ  ಅವಾಚ್ಯವಾಗಿ ಕಮೆಂಟ್ ಮಾಡಿದ ಪ್ರಕಾಶ್‌ ಎಸ್‌(45) ಎಂಬಾತನ ವಿರುದ್ಧ ಸ್ವಯಂ ಪ್ರೇರಿತ  ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಫೆ.04 ಫೇಸ್ ಬುಕ್ ವಾರ್ತಾ ಭಾರತಿ ಪೇಜ್ ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುವ ಮಹಮ್ಮದ್ ರವರ ಸಂದರ್ಶನದ ಕುರಿತು ರಂಜಾನ್ ಕಥೆಯ ಇಂದಿನ ಹೀರೋ ಮಂಗಳೂರಿನ ಮಹಮ್ಮದ್ ಎಂಬ ಪೇಜ್ ನ್ನು ನೋಡುತ್ತಿದ್ದಾಗ, ಸದ್ರಿ ಫೇಜ್ ಗೆ ಪೇಸ್ ಬುಕ್ ನಲ್ಲಿ ಹೆಮ್ಮೆಯ ಕಾರ್ಯಕರ್ತ ಎಂಬುವವರು ಅವಾಚ್ಯವಾಗಿ ಕಮೆಂಟ್ ಮಾಡಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಿ, ಪೋಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ. ಹೆಚ್‌ ಡಿ ಕುಲಕರ್ಣಿ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸ್‌ ಠಾಣಾ  ನಿರೀಕ್ಷಕರಾದ ಜಯರಾಮ್‌ ಡಿ ಗೌಡ ನೇತೃತ್ವದ ಕುಂದಾಪುರ ಠಾಣಾ ಪಿ.ಎಸ್‌.ಐ ನಂಜಾನಾಯ್ಕ್‌ ಎನ್‌ (ಕಾ&ಸು), ಪಿ.ಎಸ್‌.ಐ ಪುಷ್ಪ (ತನಿಖೆ) ಹಾಗೂ ಸಿಬ್ಬಂದಿಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕಿನ ನಿವೃತ್ತ ಮ್ಯಾನೇಜರ್, ಗಂಗೊಳ್ಳಿ ನಿವಾಸಿ ಎಂ. ಭಾಸ್ಕರ ಪೈ (91) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ಕೆನರಾ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಒಟ್ಟು ಸುಮಾರು 40 ವರ್ಷ ಕಾಲ ಸೇವೆ ಸಲ್ಲಿಸಿ ಮತ್ತು ಸುಮಾರು 20 ವರ್ಷ ಕೆನರಾ ಬ್ಯಾಂಕಿನ ಶಾಖಾ ಪ್ರಬಂಧಕರಾಗಿ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮುಳ್ಳಿಕಟ್ಟೆಯಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದ ಅವರು ಕೃಷಿಕರಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಸುಮಾರು ಒಂದು ವರ್ಷಗಳಿಂದ ಗಂಗೊಳ್ಳಿಯಲ್ಲಿ ವಾಸವಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಜನಾನುರಾಗಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹಕಾರಿ ಸಂಸ್ಥೆಗಳ ಗುಣಮಟ್ಟ ಕಾಪಾಡುವಲ್ಲಿ ಸಹಕಾರಿಯ ಆಡಳಿತ ಮಂಡಳಿ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಸಹಕಾರಿ ರಂಗದಲ್ಲಿ ಆಗುತ್ತಿರುವ ಬದಲಾವಣೆಗಳು ಹಾಗೂ ಸಹಕಾರಿ ಕಾಯ್ದೆಗಳಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕು. ಆಡಳಿತ ಮಂಡಳಿ ಸದಸ್ಯರು ತಮ್ಮ ಅಧಿಕಾರ ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಸಹಕಾರಿ ರಂಗವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸಲು ಮತ್ತು ಸಹಕಾರಿ ಸಂಸ್ಥೆಗಳ ಗುಣಮಟ್ಟ, ಸೇವೆಯನ್ನು ಬೆಳೆಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಹೇಳಿದರು. ಅವರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಯೂನಿಯನ್ ಉಡುಪಿ ಇವರ ಸಹಯೋಗದೊಂದಿಗೆ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರಿಗಾಗಿ ತ್ರಾಸಿ ಪ್ರೆಸ್ಟೀಜ್ ಪ್ಯಾಲೇಸ್‌ನ ನಕ್ಷತ್ರ ಮಿನಿ ಹಾಲ್‌ನಲ್ಲಿ ಗುರುವಾರ ನಡೆದ ವಿಷಯಾಧಾರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ,ಫೆ.13: ವರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಡುತ್ತಿದ್ದ ದಂಧೆಯ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಹಳ್ನಾಡಿನ ದೇವಾನಂದ ಶೆಟ್ಟಿ ಹಾಗೂ ಉತ್ತರ ಪ್ರದೇಶ ಮೂಲದ 21 ಮಂದಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಫೆ.12 ರಂದು ಮಧ್ಯಾಹ್ನ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪವಿರುವ ಖಾಲಿ ಜಾಗಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 15 ರಿಂದ 20 ಮಂದಿ ಕಾರ್ಮಿಕರು ನದಿಯಿಂದ ತೆಗೆದ ಮರಳನ್ನು ರಾಶಿ ಹಾಕುತ್ತಿರುವುದು ಕಂಡುಬಂದಿದೆ. ಅಲ್ಲದೆ ಪಕ್ಕದ ಹೊಳೆಯಲ್ಲಿ ಮರಳು ತೆಗೆಯಲು ಬಳಸುತ್ತಿದ್ದ ಮೂರು ಬೋಟ್ಟ್‌ಗಳು ಪತ್ತೆಯಾಗಿವೆ. ಸ್ಥಳದಲ್ಲಿದ್ದ ಕೆಲಸಗಾರರನ್ನು ವಿಚಾರಿಸಿದಾಗ, ಹಳ್ನಾಡಿನ ದೇವಾನಂದ ಶೆಟ್ಟಿ ಎಂಬುವವರು ಮರಳು ತೆಗೆಯಲು ಸೂಚಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ಪ್ರಕಾಶ್ ಎಸ್. ಶೆಟ್ಟಿ (55) ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ. ಅವರು 10 ದಿನಗಳ ಹಿಂದೆ ಹೃದಯ ಸಂಬಂಧಿ ತೊಂದರೆ ಕಾಣಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲುಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಫೆ.12ರಂದು ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More