ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಕೊಲ್ಲೂರು ನದಿಯಲ್ಲಿ ಮೋಜು ಮಸ್ತಿಗೆ ತೆರಳಿದ್ದು, ಪ್ರವಾಸಿಗರ ಬೋಟ್ ಮಗುಚಿ, ನೀರು ಪಾಲಾದ ಇಬ್ಬರನ್ನು ಎನ್.ಡಿ.ಆರ್.ಎಫ್ ತಂಡವು ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದೆ. ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಂತಹ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು ದೋಣಿ ವಿಹಾರಕ್ಕೆ ನಿರ್ಬಂಧವಿರುವುದಾಗಿ ತಿಳಿಸಿದರೂ ಅದನ್ನು ಲೆಕ್ಕಿಸದೇ ಪ್ರಕ್ಷಬ್ಧ ವಾತಾವರಣವಿದ್ದರೂ ನದಿಗೆ ತೆರಳಿದಾಗ ಭಾರೀ ಗಾಳಿಗೆ ಅವರುಗಳು ಸಂಚರಿಸುತ್ತಿದ್ದ ಬೋಟ್ ಮಗುಚಿ ಅದರಲ್ಲಿದ್ದ ನಾಲ್ವರು ನೀರಿನಲ್ಲಿ ಮುಳುಗಿ, ಒಬ್ಬ ಈಜಿ ದಡ ಸೇರಿದರೆ, ಮತ್ತೊಬ್ಬ ಈಜು ಹೊಡೆದು ಸುಸ್ತಾಗಿ ಮುಳುಗುವ ಹಂತದಲ್ಲಿದ್ದಾಗ ಅಲ್ಲಿನ ಸ್ಥಳೀಯ ಜನರು ಹಗ್ಗದ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ದಡಕ್ಕೆ ತಲುಪುವಂತೆ ಮಾಡಿದರು. ಸರಿಯಾಗಿ ಈಜು ಬಾರದೆ ಮುಳುಗುವ ಹಂತದಲ್ಲಿದ್ದ ಮತ್ತೊಬ್ಬನನ್ನು ಸ್ಥಳೀಯ ನಾಗರಿಕರು ನೀರಿನಿಂದ ಎಳೆದು ತಂದು ದಡ ಸೇರಿಸಿ ರಕ್ಷಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 40 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್ಸೈಟ್ https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್ಲೈನ್ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸದಾ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿರುವ ಪಂಚವರ್ಣದ ಕಾರ್ಯ ವೈಖರಿ ಇಡೀ ಮನುಕುಲಕ್ಕೆ ಮಾದರಿಯಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಹೇಳಿದರು. ಅವರು ತೆಕ್ಕಟ್ಟೆ ಗಣಪತಿ ಶ್ರೀಯಾನ್ ಮನೆಯಂಗಳದಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ 270ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನದ ಸಮಾರೋಪದಲ್ಲಿ ಮಾತನಾಡಿದರು. ಸಂಘಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯಕ್ರಮಗಳನ್ನು ನೀಡುತ್ತವೆ ಆದರೆ ಪಂಚವರ್ಣ ಸಂಘಟನೆ ಒಂದು ಹೆಜ್ಜೆ ಮುಂದೆ ಇರಿಸಿ ನಿರಂತರ ಆರು ವರ್ಷಗಳಿಗೂ ಅಧಿಕವಾಗಿ ಪ್ರಕೃತಿಯನ್ನು ಆರಾಧಿಸುವ ಉಳಿಸುವ ಕಾಯಕ ನಿಜಕ್ಕೂ ಶ್ಲಾಘನೀಯ ಇಂತಹ ಸಂಘಟನೆ ಗ್ರಾಮ ಗ್ರಾಮದಲ್ಲಿ ಹುಟ್ಟಿಕೊಳ್ಳಲಿ ಎಂದು ಹಾರೈಸಿದರು. ಇದೇ ವೇಳೆ ಸಹಾಯಕ ಆಯುಕ್ತೆ ರಶ್ಮಿ ಗಿಡವನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದರು. ಪೂರ್ವಾಹ್ನ ಏಳು ರಿಂದ ಹಲವು ಮನೆಗಳಿಗೆ ತೆರಳಿ ಗಿಡ ನೆಟ್ಟು ಅದರ ಮಹತ್ವ ತಿಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ‘ಕ್ರಿಯೇಟಿವ್ ಗುರುದೇವೋಭವ’ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ‘ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಇನ್ನಷ್ಟು ಮಹತ್ತರವಾಗಿದೆ. ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಸಂಸ್ಕಾರ, ಶಿಸ್ತು ಹಾಗೂ ಮಾನವೀಯತೆ ಬೆಳೆಸುವುದು ಶಿಕ್ಷಕರ ಮಹತ್ತರ ಜವಾಬ್ದಾರಿ’ ಎಂದು ನುಡಿದರು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಲಾಯಿ ಬಾಕ್ಯಾರು, ತೆಳ್ಳಾರುವಿನ ಶಿಕ್ಷಕ ಕೆ. ಯೋಗೀಶ್ ಕಿಣಿ ಅವರು ಮಾತನಾಡಿ ‘ಇಂದಿನ ಪೀಳಿಗೆಗೆ ಶಿಕ್ಷಕರು ಕೇವಲ ಪಾಠ ಬೋಧಕರು ಮಾತ್ರವಲ್ಲ, ಬಾಳಿನ ದಾರಿ ತೋರಿಸುವ ದೀಪಸ್ತಂಭರೂ ಆಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನನ್ಯ’ ಎಂದು ಹೇಳಿದರು. ‘ಅಮ್ಮನ ನೆರವು ‘ ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ಇಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರನಾರಾಯಣ ಬಿಲ್ಲವ (ಸಿ.ಎನ್. ಬಿಲ್ಲವ) ಶಿರೂರು ಅವರು ಕರ್ನಾಟಕ ರಾಜ್ಯ ಸರಕಾರವು ಡಾ. ಸರ್ವೆಪಲ್ಲಿ ರಾಧಕೃಷ್ಣನ್ ಅವರ ಹೆಸರಿನಲ್ಲಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 20 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಸಿ.ಎನ್. ಬಿಲ್ಲವ ಅವರು ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಶಿಕ್ಷಕರಾಗಿದ್ದಾರೆ. ಸಿ.ಎನ್. ಬಿಲ್ಲವ ಅವರು 60ಕ್ಕೂ ಹೆಚ್ಚು ಇಲಾಖಾ ತರಬೇತಿ ಪಡೆದಿದ್ದು ಜಿಲ್ಲಾ, ರಾಜ್ಯ ಮಟ್ಟದ ತರಬೇತಿಯ ಜೊತೆಗೆ ಸ್ಕಟ್, ಮಾಹಿತಿ ಸಿಂಧು, ಯೋಗ ಮುಂತಾದ ತರಬೇತಿಯನ್ನು ಪಡೆದಿದ್ದಾರೆ. ಶಿಕ್ಷಕ ವೃತ್ತಿಯೊಂದಿಗೆ ಚಿತ್ರಕಲೆ, ಕೇ ಆರ್ಟ್ಸ್, ಕ್ರಾಫ್ಟ್, ಮರಳು ಶಿಲ್ಪ,ಕಲಿಕಾ ಮಾದರಿ ತಯಾರಿ, ಕಥೆ, ಕವನ, ನಾಟಕ ರಚನೆ, ಪತ್ರಿಕೆ ಸಂಪಾದಕತ್ವ, ಸಿಮೆಂಟ್ ಕಲಾಕೃತಿ ತಯಾರಿ, ಗಾರ್ಡನ್/ತೋಟಗಾರಿಕೆ ಜೊತೆಗೆ ಯೋಗ, ನಾಟಕ ಮತ್ತು ಯಕ್ಷಗಾನದ ಗೀಳು, ಶಿಕ್ಷಕ ವೃತ್ತಿಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ದೈಹಿಕ ಶಿಕ್ಷಕ ಉಪನ್ಯಾಸಕರಾದ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿ ಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರದ ಆಶ್ರಯದಲ್ಲಿ ಸೇವಾ ಸಂಗಮದ ಪುಟಾಣಿಗಳಿಂದ 41ನೇ ವರ್ಷದ ಶ್ರೀಕೃಷ್ಣ – ರಾಧೆಯರ ಬಾಲ ಲೀಲೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಕಾರ್ಯವಾಹ ಪ್ರಶಾಂತ್ ಅವರು ಮಾತನಾಡಿ, ಶ್ರೀ ಕೃಷ್ಣನ ವೇಷಧಾರಣೆ ಮಾತ್ರದೊಂದಿಗೆ ಶ್ರೀ ಕೃಷ್ಣನ ಆದರ್ಶಗಳನ್ನು ಪಾಲಿಸಲಾಗುವುದಿಲ್ಲ ಜೊತೆಯಲ್ಲಿ ಶ್ರೀ ಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ತೊಡಗಿಸಿಕೊಂಡಾಗ ಮಾತ್ರ ಸದ್ವಿನಿಯೋಗವಾಗುವುದೆಂದು ನೆರೆದ ಸಮಸ್ತ ಪಾಲಕವೃಂದಕ್ಕೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸೇವಾ ಸಂಗಮದ ಅಧ್ಯಕ್ಷ ಮಂಜುನಾಥ ಶೆಟ್ಟಿ ಅವರು ಮಾತನಾಡಿ, 4 ದಶಕಗಳನ್ನು ಪೂರೈಸಿ 5ನೇ ದಶಕದಲ್ಲಿ ಮುನ್ನಡೆಯುತ್ತಿರುವ ಬೈಂದೂರು ಸೇವಾ ಸಂಗಮದ ಕಾರ್ಯವೈಖರಿ ಮತ್ತು ಪಾಲಕರ ಪ್ರೋತ್ಸಾಹ ಹಾಗೂ ಊರಿನ ಸಮಸ್ತ ಜನತೆಯ ಸಹಕಾರವನ್ನು ಸ್ಮರಿಸುತ್ತ ಮುಂದೆಯೂ ಕೂಡ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಶ್ರಮಿಸುತ್ತಿರುವ ಈ ಸಂಸ್ಥೆಯ ಬೆಳವಣಿಗೆಯಲ್ಲಿ ಸಹಕರಿಸಬೇಕೆಂದು ಕರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೈಸ್ತ ಭಾಂದವರು ತಮ್ಮ ಚರ್ಚುಗಳಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ತೆನೆ ಹಬ್ಬ ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, ಬೈಂದೂರು ಸೇರಿದಂತೆ 11 ಚರ್ಚ್ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ನೆರವೇರಿದವು. ಕುಂದಾಪುರದಲ್ಲಿ ರೋಜಾರಿ ಅಮ್ಮನವರ ಇಗರ್ಜಿಯಲ್ಲಿ ಮಾತೆ ಮೇರಿಯ ಮೊಂತಿ ಫೆಸ್ತ್ ಹುಟ್ಟು ಹಬ್ಬವನ್ನು ಬಹಳ ಶ್ರದ್ದಾಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು. ಚಿಕ್ಕ ಮಕ್ಕಳು ಬಾಲಾ ಮೇರಿ ಮಾತೆಗೆ ಪುಷ್ಪಗಳನ್ನು ಅರ್ಪಿಸುವ ಮೂಲಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು. ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ತೆನೆ ಹಬ್ಬ ಮೊಂತಿ ಫೆಸ್ತ್ ನ್ನು ಉಡುಪಿಯ ರೆ. ಫಾ. ಅಶ್ವಿನ್ ಆರಾನ್ಹಾ , ಚರ್ಚಿನ ಧರ್ಮಗುರು ರೆ.ಫಾ. ವಿನ್ಸೆಂಟ್ ಕುವೆಲ್ಲೊ ಮತ್ತು ಬ್ರದರ್ ಪ್ರಥ್ವಿ ರೊಡ್ರಿಗಸ್ ರವರ ನೇತೃತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿನ ಅಸ್ಪೃಶ್ಯತೆ ಪಿಡುಗಿಗೆ ತಮ್ಮದೇ ನಿಲುವಿನಲ್ಲಿ ಸಮಾಧಾನಕರ ಉಪಾಯಗಳನ್ನು ಕಂಡುಕೊಂಡು, ಜೀವನವನ್ನು ಸಮಾಜದಲ್ಲಿ ಸಮಾನತೆಗಾಗಿ ಮುಡಿ-ಪಾಗಿಟ್ಟವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಇಲ್ಲಿನ ತಾಲ್ಲೂಕು ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುವ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಮಾನವರಲ್ಲಿ ಇರುವುದು ಒಂದೇ ಕುಲ, ಒಂದೇ ಜಾತಿ, ಒಂದೇ ದೇವರು ಎನ್ನುವ ಸಂದೇಶ ನೀಡಿದವರು. ವಿದ್ಯೆಯಿಂದ ಬಲಯುತರಾಗಬೇಕು, ಸಮಾನತೆ ನಮ್ಮ ಉಸಿರಾಗಿರಬೇಕು ಎಂದು ಹೇಳಿದ್ದ ಅವರು, ಕೇರಳದಿಂದ ಆರಂಭ ಮಾಡಿದ್ದ ಸಾಮಾಜಿಕ ಬದಲಾವಣೆ, ದೇಶಾದ್ಯಂತ ವಿಸ್ತರಿಸಿದ್ದರು. ವಿಶ್ವ ಮಾನವತ್ವದ ಗುರು, ಶಾಂತಿ ಪಥದ ನಡಿಗೆ ಹೇಳಿಕೊಟ್ಟಿದ್ದ ಅವರು ಬದುಕಿದ, ಪ್ರತಿಪಾದಿಸಿದ ದಾರಿಯಲ್ಲಿ ನಾವು ಸುಧಾರಣೆಗಳನ್ನು ನಡೆಯೋಣ ಎಂದರು. ಪುರಸಭೆ ಅಧ್ಯಕ್ಷ ಮೋಹನ್ದಾಸ್ ಶೆಣೈ, ಕಂದಾಯ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್, ತಹಶೀಲ್ದಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಂದೇಶ ನೀಡಿ ಜಾತಿ ಮತ ಮೇಲು ಕೀಳುಗಳ ಭೇದ ಮರೆಸಿ, ದನಿಯಿಲ್ಲದವರ ದನಿಯಾಗಿ, ಶಕ್ತಿ ಇಲ್ಲದವರಿಗೆ ಆತ್ಮವಿಶ್ವಾಸದ ಶಕ್ತಿ ನೀಡಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರೇಪಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಜೀವನ ಎಲ್ಲರಿಗೂ ಮಾದರಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು ಅವರು ಮಣಿಪುರ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ಮಣಿಪುರ ಇವರ ಸಹಕಾರದೊಂದಿಗೆ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಾತ್ಮಾಗಾಂಧಿ ಮತ್ತು ರವೀಂದ್ರ ನಾಥ್ ಟಾಗೋರರಂತಹ ವ್ಯಕ್ತಿಗಳು ಗುರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸಮಾನತೆಯ ಸಮಾಜ ರೂಪಿಸುವಲ್ಲಿ ಮಾರ್ಗದರ್ಶನ ಪಡೆದಿದ್ದು, ನಾವೂ ಕೂಡಾ ಅವರ ಆದರ್ಶ ಮತ್ತು ಸಿದ್ಧಾಂತಗಳನ್ನು ಪಾಲನೆ ಮಾಡುವ ಮೂಲಕ ಅವರ ಕನಸನ್ನು…
