ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದೂ ಧರ್ಮೀಯರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಿದ್ದಾರೆ ಎಂಬ ಆರೋಪದಡಿ ನ್ಯಾಯಾಂಗ ಬಂಧಿತರಾಗಿದ್ದ ಕುಂದಾಪುರ ಹಳ್ಳಾಡಿ- ಹರ್ಕಾಡಿ ನಿವಾಸಿಗಳಾದ ಜ್ಯೋತಿ ಪ್ರಕಾಶ್, ರವಿ ಮನೋಹರ್, ಪ್ರಕಾಶ್ ಕುಂದರ್ ಅವರಿಗೆ ಪ್ರಥಮ ದರ್ಜೆ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಬ್ರಹ್ಮಾವರ ಸ್ಯಾಬರಕಟ್ಟೆ ನಿವಾಸಿ ಆನಂದ (36) ಅವರು ಆರೋಪಿಗಳು ಎರಡು ಧರ್ಮಗಳ ನಡುವೆ ದ್ವೇಷವನ್ನುಂಟು ಮಾಡುವ ಉದ್ದೇಶದಿಂದ ಮತಾಂತರ ಮಾಡಲು ಪ್ರಯತ್ನಪಟ್ಟಿದ್ದರು ಎಂದು ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ವಕೀಲರು ರಾಜಕೀಯ ದುರುದ್ದೇಶದಿಂದ ಆರೋಪಿಗಳ ಮೇಲೆ ಸುಳ್ಳು ದೂರು ದಾಖಲಾಗಿದೆ ಎಂದು ವಾದ ಮಂಡಿಸಿದ್ದರು. ಆರೋಪಿಗಳ ಪರ ಉಡುಪಿ ಯುವ ನ್ಯಾಯವಾದಿಗಳಾದ ಅಸದುಲ್ಲಾ ಕಟಪಾಡಿ, ಪ್ರದೀಪ್ ಪಿ.ಜೆ ಮತ್ತು ಆದಿತ್ಯ ಬೈಲೂರು ವಾದಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಮಳೆ ಭತ್ತ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ವಾರದ ಮೊದಲು ಅಚಾನಕ್ ಉಂಟಾಗಿದ್ದ ಬಿರುಗಾಳಿ ಅಬ್ಬರಕ್ಕೆ ತಲ್ಲಣಗೊಂಡಿದ್ದ ರೈತರು ಇದೀಗ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಫಸಲು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಉತ್ತಮ ಮುಂಗಾರು ಹಿನ್ನಲೆಯಲ್ಲಿ ಈ ಭಾರಿ ಉತ್ತಮ ಫಸಲಿದೆ. ಕರಾವಳಿಯಲ್ಲಿ ಕಟಾವಿಗೆ ರೈತರು ಅಣಿಯಾಗುತ್ತಿರುವಾಗಲೇ ಮಳೆ ಆರಂಭಗೊಡಿದೆ. ಮಲೆನಾಡು ಪ್ರಾಂತ್ಯದಲ್ಲಿಯೂ ರೈತರು ಮನೆಯಂಗಳ ಸಜ್ಚುಗೊಳಿಸುವ ತಯಾರಿಯಲ್ಲಿದ್ದಾರೆ. 14 ಸಾವಿರ ಹೆಕ್ಟೇರ್ ಭತ್ತ ಕೃಷಿ:ಕುಂದಾಪುರ ತಾಲೂಕಿನಲ್ಲಿ 202-21ನೇ ಸಾಲಿನಲ್ಲಿ 14 ಸಾವಿರ ಹೆಕ್ಟೇರ್ ಭತ್ತ ಕೃಷಿಯಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 500 ಹೆಕ್ಟೇರ್ ಹೆಚ್ಚುವರಿ ಮುಂಘಾರು ಕೃಷಿ ಆಗಿದೆ. ವರಾಹಿ ನೀರಿನ ಲಭ್ಯತೆ ಹಿನ್ನಲೆಯಲ್ಲಿ ಮಲೆನಡು, ನಡುಬಯಲು ಭಾಗದಲ್ಲಿಯೂ ಹಡಿಲು ಬಿದ್ದ ಭೂಮಿಯಲ್ಲೂ ಭತ್ತ ಚಿಗುರಿದೆ. ಹದವಾದ ಮಳೇಯ ದೆಸೆಯಿಂದ ಸಸಿಗಳು ದಷ್ಟಪುಷ್ಟವಾಗಿ ಬೆಳೆದು ನಿಂತಿದ್ದು ತೆನೆಯ ಗೊಂಚಲು ಸಮೃದ್ದತೆಯಿಂದ ಕೂಡಿದೆ. ಬೆಳೆದು ನಿಂತ ಪೈರು ಮಳೆ ನೀರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ತರುಣ ಕಲಾವೃಂದ ರಿ. ಇದರ ನೂತನ ಅಧ್ಯಕ್ಷರಾಗಿ ರವೀಂದ್ರ ಜಿ. (ರಾಮಕೃಪಾ) ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಕೊ.ಶಿವಾನಂದ ಕಾರಂತ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಕಲಾವೃಂದದ ಸದಸ್ಯರು ಶುಭಾಶಯ ಕೋರಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತುಮಕೂರಿನ ಅಡಿಕೆ ವ್ಯಾಪಾರಿ ವಿವೇಕ್ ಮತ್ತು ಅವರ ತಾಯಿ ಭಾಗ್ಯ ನಿಗೂಢ ನಾಪತ್ತೆಯಾಗಿದ್ದಾರೆ. ಕಾರು ಚಾಲಕ ಜಾಫರ್ ಖಾನ್ ಎಂಬವರೊಂದಿಗೆ ತುಮಕೂರು ಚಿಕ್ಕನಾಯಕನ ಹಳ್ಳಿಯಿಂದ ಮಂಗಳೂರಿಗೆ ಹೊರಟಿದ್ದ ಇವರು ತ್ರಾಸಿಯಲ್ಲಿ ಕಾಣೆಯಾಗಿದ್ದಾರೆ. ವಿವೇಕ್ ಅವರ ತಂದೆ ವರ್ಷದ ಹಿಂದೆ ತಾಯಿ ಜೊತೆ ಬೊಲೆರೊ ಜೀಪ್ನಲ್ಲಿ ಹೊರಟು ಆದಿಚುಂಚನಗಿರಿ ದೇವಳದಲ್ಲಿ ಪೂಜೆ ಸಲ್ಲಿಸಿ ನಂತರ ಮಂಗಳೂರಿಗೆ ಹೋಗಲಿದೆ ಎಂದು ತಿಳಿಸಿ ಕಾರು ಚಾಲಕ ಜಾಫರ್ಗೆ ತಿಳಿಸಿ ಹೊರಟಿದ್ದು, ತ್ರಾಸಿಯಿಂದ ಸುಮಾರು 15 ಕಿಮೀ ಹಿಂದೆ ನಿದ್ರೆ ಬರುತ್ತಿದ್ದ ಕಾರಣ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದರು ಬೆಳಿಗ್ಗೆ 6 ಗಂಟೆಗೆ ಚಾಲಕ ಎದ್ದು ನೋಡುವಾಗ ವಿವೇಕ್ ಮತ್ತು ಅವರ ತಾಯಿ ಕಾಣದಾಗಿದ್ದು, ಮೊಬೈಲ್ ಸ್ವೀಚ್ ಆಪ್ ಆಗಿದೆ. ಅಡಿಕೆ ವ್ಯಾಪಾರಸ್ಥರಾಗಿದ್ದು, ವ್ಯವಹಾರದಲ್ಲಿ ನಷ್ಟ ಉಂಟಾಗಿ ಹಣದ ಅಡಚಣೆಯಿಂದ ಎಲ್ಲಿಗೋ ಹೋಗಿರಬಹುದೆಂದು ಜಾಫರ್ ಖಾನ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೈಂದೂರು ಪೇಟೆಯ ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶಿರೂರು ಗ್ರಾಮದ ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬೈಂದೂರು ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದು ಮಂಗಳೂರು ಬಿಜೈ ನ್ಯೂರೋಡ್ ನಿವಾಸಿ ಮನೋಜ್ ಆರ್ ಸಾಲಿಯಾನ್ ( 45) ಎಂದು ಗುರುತಿಸಲಾಗಿದೆ. ಅವರು ಭಟ್ಕಳದ ಶಿರಾಲಿ ಎಂಬಲ್ಲಿರುವ ನೆಟ್ಕಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಶಿರೂರು ಸಮೀಪದ ಲಾಡ್ಜ್ವೊಂದರಲ್ಲಿ ಉಳಿದುಕೊಂಡಿದ್ದ ಎಂ.ಆರ್ ಬಾಬು ಎಂಬವರು ಲಾಡ್ಜ್ಗೆ ಹೋಗಲು ಮೆಟ್ಟಿಲು ಏರುವಾಗ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ ಪರಿಣಾಮ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಎರಡು ಪ್ರಕರಣ ಬೈಂದೂರು ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಣಿ ಹೆಚ್. ಎಂ.ಟಿ ರಸ್ತೆಯ ಅಂಗನವಾಡಿ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್, ಬಸ್ರೂರು ವಲಯದ ಮೇಲ್ವಿಚಾರಕಿ ಸುಜಯ ಅವರು ಕಟ್ಟಡಕ್ಡೆ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭ ಕೋಣಿ ಗ್ರಾಮ ಪಂಚಾಯತ್ ಅದ್ಯಕ್ಷೆ ವಸಂತಿ, ಸದಸ್ಯರಾದ ದಿವಾಕರ ಶೆಟ್ಟಿ,ರಾಘವೇಂದ್ರ ಶೆಟ್ಟಿ, ಸೌಮ್ಯ, ಅಂಗನವಾಡಿ ಶಿಕ್ಷಕಿ ಗುಲಾಬಿ, ಸಹಾಯಕಿ ವೆರೊನಿಕಾ, ಊರಿನ ಪ್ರಮುಖರಾದ ನಾರಾಯಣ ಆಚಾರ್ ಕೋಣಿ, ರಾಜೇಶ್ ಮಯ್ಯ, ಬಾಲವಿಕಾಸನ ಸಮಿತಿಯ ಗಿರೀಶ್ ಪೂಜಾರಿ, ಗಜೇಂದ್ರ ಆಚಾರ್ ಕೋಣಿ, ಕಟ್ಟಡದ ಗುತ್ತಿಗೆದಾರರಾದ ಮುರುಳಿ ಗಾಣಿಗ ಕೋಟೇಶ್ವರ ಹಾಗೂ ಎಚ್.ಎಂ.ಟಿ.ಪ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಮಕ್ಕಳಿಗೆ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಕುಂದಾಪ್ರ ಡಾಟ್ ಕಾಂ ಸುದ್ದಿ. ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅನ್ನಾಹಾರ ಆರಂಭಿಸಿದ ಮಗು ಮುಂದೆ ಯಾವುದೇ ರೀತಿಯ ಅನಾರೋಗ್ಯದಿಂದ ಬಳಲುವುದಿಲ್ಲ ಎಂಬುದು ನಂಬಿಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದಲ್ಲಿ ಅ.07ರಿಂದ ಆರಂಭಗೊಂಡ ನವರಾತ್ರಿ ಉತ್ಸವ ಒಂಭತ್ತು ದಿನಗಳ ಕಾಲ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು. ಗುರುವಾರ ಮಹಾನವಮಿಯಂದು ಮಧ್ಯಾಹ್ನ ಶತಚಂಡಿಕಾ ಯಾಗ, ರಾತ್ರಿ ೮ಕ್ಕೆ ಪುಷ್ಪರಥೋತ್ಸವ ಜರುಗಿತು. ಈ ಬಾರಿ ಕೋವಿಡ್ ಮಾರ್ಗಸೂಚಿಯಂತೆ ಗುರುವಾರ ಸಂಜೆ ಆರರ ನಂತರ ಭಕ್ತಾದಿಗಳಿಗೆ ದೇವಳದ ಪ್ರವೇಶ ನಿರ್ಭಂದಿಸಲಾಗಿತ್ತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ದೇವಳದ ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು, ಕ್ಷೇತ್ರ ಪುರೋಹಿತರು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಮಾತ್ರ ರಥೋತ್ಸವದಲ್ಲಿ ಭಾಗಿಯಾದರು. ಆಯುಧ ಪೂಜೆ: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವರ ಆಯುಧಗಳನ್ನಿಡುವ ಉಗ್ರಾಣದಲ್ಲಿ ಆಯುಧ ಪೂಜೆ, ಶ್ರೀ ಶಾರದಾ ಪೂಜೆ ಹಾಗೂ ಅನ್ನಪ್ರಸಾದ (ಅಡುಗೆಮನೆ)ಯಲ್ಲಿ ವಿಶೇಷವಾಗಿ ಪಲ್ಲಪೂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ,ಕುಂದಾಪುರ: ಶಂಕರನಾರಾಯಣ ವಲಯದ ಹೆಂಗವಳ್ಳಿ ಗ್ರಾಮ ದೊಡ್ಡಬೆಳಾರು ಪ್ರದೇಶದಲ್ಲಿ ಹೆಣ್ಣು ಕಾಡುಕೋಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿ ಗವಂಜಿ ಶಾಹಿದ್ ಬಿನ್ ಗವಂಜಿ ಮಹಮ್ಮದ್ (31) ಎಂಬಾತನನ್ನು ಕುಂದಾಪುರ ಡಿಎಫ್ಓ ಆಶಿಸ್ ರೆಡ್ಡಿ ಮಾರ್ಗದರ್ಶನದಲ್ಲಿ ಶಂಕರನಾರಾಯಣ ಹಾಗೂ ಕುಂದಾಪುರ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಶಂಕರನಾರಾಯಣ ವಲಯದ ವಲಯ ಅರಣ್ಯಾಧಿಕಾರಿ ಚಿದಾನಂದ, ಉಪ ವಲಯ ಅರಣ್ಯಾಧಿಕಾರಿಗಳಾದ ಕೀರ್ತನ್ ಶೆಟ್ಟಿ, ಮಂಜುನಾಥ ನಾಯಕ್, ಅಭಿನಂದನ್ ಹೆಗಡೆ ಅರಣ್ಯ ರಕ್ಷಕರಾದ ರವಿ, ಪ್ರಶಾಂತ್, ರವೀಂದ್ರ ಅರಣ್ಯ ವೀಕ್ಷಕರಾದ ಶಿವಣ್ಣ ಆರ್. ವೇಷಗಾರ್, ಚಂದ್ರು ಎರೇಶಿಮೆ ಮತ್ತು ವಾಹನ ಚಾಲಕ ರವಿ ಭಾಗವಹಿಸಿದ್ದರು. ಇದನ್ನೂ ಓದಿ:► ಕಡವೆ ಕೊಂದು ಸಾಗಿಸುತ್ತಿದ್ದ ಇಬ್ಬರ ಬಂಧನ -…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯುವ ದಸರಾ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಕೆಡಿಎಫ್ ಕರಾಟೆ & ಫಿಟ್ನೆಸ್ ಅಕಾಡೆಮಿ ಕುಂದಾಪುರ ವಿದ್ಯಾರ್ಥಿಗಳು ಕ್ರಮವಾಗಿ 4 ಚಿನ್ನ 3 ಬೆಳ್ಳಿ ಹಾಗೂ 5 ಕಂಚಿನ ಪದಕ ಪಡೆದುಕೊಂಡಿದ್ದಾರೆ. ಚಿನ್ನದ ಪದಕ ಪಡೆದುಕೊಂಡ ವಿದ್ಯಾರ್ಥಿಗಳಾದ ನವಮಿ ಎಸ್ ಶೆಟ್ಟಿ, ಶ್ರೀಪ್ರಿಯ ಕೆಎಸ್, ಸುಜನ್, ಮಹಮ್ಮದ್ ಅನೀಸ್. ಬೆಳ್ಳಿ ಪದಕ ಗಳಿಸಿದ ವಿದ್ಯಾರ್ಥಿಗಳಾದ ನೋಹ ಮೆಂಡೊನ್ಸಾ, ಆಯುಷ್ ಪುತ್ರನ್, ಸಾಯಿ ವಿಘ್ನೇಶ್ ಹಾಗೇಯೇ ದಕ್ಷ ಕುಮಾರ್ ಶೇರಿಗಾರ್, ಸಚಿನ್, ವಿವೇಕ್ ರಾಮ್ ರಾಯ್ ಪ್ರಭು, ಅರ್ಜುನ್ ಎಸ್ ಶೆಟ್ಟಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಪ್ರೀತೇಶ್, ವಿಶ್ವನಾಥ್ ಉಪ್ಪುಂದ, ಕಿರಣ್ ಕುಂದಾಪುರ, ಸಂದೀಪ್ ವಿ ಕಿರಣ್, ಸಿಹಾನ್ ಶೇಕ್ ಮತ್ತು ಮೊಹಮ್ಮದ್ ಅಫಜಲ್ ಇವರಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದುಕೊಂಡಿದ್ದಾರೆ.
