Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗುತ್ತದೆ. ಮಕ್ಕಳಲ್ಲಿ ಮಾನಸಿಕ, ದೈಹಿಕ, ಆರೋಗ್ಯ ರಕ್ಷಣೆಗೆ ಮತ್ತು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರಲ್ಲಿ ಮನೋಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಶಿಬಿರಗಳು ಸಹಕಾರಿಯಾಗಲಿದೆ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಹೇಳಿದರು. ಬಾಳ್ಕುದ್ರು ಹಂಗಾರಕಟ್ಟೆ ಅಭಿವೃದ್ಧಿ ಸಂಸ್ಥೆ, ಗ್ರಾಮ ಪಂಚಾಯತ್ ಗುಜ್ಜಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಮೂರು ದಿನಗಳ ಮಕ್ಕಳ ಕ್ರಿಯಾತ್ಮಕ ದಸರಾ ಮಜಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಇಂದಿರಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಶ್ರೀಧರ ಗುಜ್ಜಾಡಿ, ಪ್ರಕಾಶ ಎಂ.ಪೂಜಾರಿ, ತುಂಗಾ ಪೂಜಾರಿ, ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಮತ್ತಿತರರು ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಇಂದು ಬೆಳಿಗ್ಗೆ 11ಕ್ಕೆ ಜಗತ್ತಿನಾದ್ಯಂತ 5 ಲಕ್ಷ ಜನರಿಂದ ಏಕಕಾಲದಲ್ಲಿ ಸಾಮೂಹಿಕ ಲಕ್ಷಕಂಠ ಗೀತಗಾಯನ ನಡೆಯಿತು. ಈ ಅಭಿಯಾನದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವೂ ಕೈಜೋಡಿಸಿ, ಇದರ ಯಶಸ್ಸಿನಲ್ಲಿ ಭಾಗಿಯಾಯಿತು. ಪುತ್ತಿಗೆ, ಮಿಜಾರು, ವಿದ್ಯಾಗಿರಿ ಹಾಗೂ ನುಡಿಸಿರಿ ವೇದಿಕೆಯಲ್ಲಿ 5000ಕ್ಕೂ ಅಧಿಕ ವಿದ್ಯಾರ್ಥಿಗಳು ಗೀತಗಾಯನದಲ್ಲಿ ತಮ್ಮ ಕಂಠ ಜೋಡಿಸಿದರು. 4 ಪ್ರತ್ಯೇಕ ಸ್ಥಳಗಳಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಂದ, ಕೆ. ವಿ. ರಮಣ್ ಅವರ ನಿರ್ದೇಶನದಲ್ಲಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳು ಏಕಕಾಲದಲ್ಲಿ ಮೊಳಗಿತು. ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಎಲ್ಲಾ ವಿದ್ಯಾರ್ಥಿಗಳು ಕನ್ನಡ ಬಾವುಟವನ್ನು ಬೀಸುವ ಮೂಲಕ, ತಮ್ಮ ಕನ್ನಡದ ಅಭಿಮಾನವನ್ನು, ಕನ್ನಡ ನಾಡಿನ ಮೇಲಿರುವ ಪ್ರೀತಿಯನ್ನು ತೋರ್ಪಡಿಸಿದರು. ಈ ಸಂದರ್ಭ ಆಳ್ವಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕಾ ಇಲಾಖೆ, ಉಪನಿರ್ದೇಶಕರು, ಬಂದರು ಯೋಜನೆ ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘ, ಹಸಿ ಮೀನು ವ್ಯಾಪಾರಸ್ಥರ ಸಂಘ ಗಂಗೊಳ್ಳಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಹಾಗೂ ವಿವಿಧ ಮೀನುಗಾರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡ ರಾಜ್ಯೋತ್ಸವ ಅಭಿಯಾನ ಅಂಗವಾಗಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಗುರುವಾರ ಜರಗಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ನಾರಾಯಣ ಖಾರ್ವಿ, ಹಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಹಲ್ಲಿನ ಸ್ವಚ್ಛತೆ ಮತ್ತು ಬಾಯಿಯ ಆರೋಗ್ಯ ದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ದಂತ ಸ್ವಚ್ಛತಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮಾರಲ ಡೆಂಟಲ್ ಕ್ಲಿನಿಕ್ ದಂತ ವೈದ್ಯ ಡಾ. ರಾಜಾರಾಂ ಶೆಟ್ಟಿ, ಮಕ್ಕಳಲ್ಲಿ ಹಲ್ಲಿನ, ಬಾಯಿಯ ಆರೋಗ್ಯದ ಮಹತ್ವ ಮತ್ತು ಹಲ್ಲುಜ್ಜುವ ಸರಿಯಾದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ನ ಅಧ್ಯಕ್ಷರಾದ ಶಶಿಧರ್ ಹೆಗ್ಡೆ, ವಿಶೇಷ ಮಕ್ಕಳ ಪಾಲನೆಯಲ್ಲಿ ಫೋಷಕರು ಅತ್ಯಂತ ತಾಳ್ಮೆ ಮತ್ತು ಕಾಳಜಿಯಿಂದ ಬೆಳೆಸಬೇಕು ಎಂದರು ಮತ್ತು ರೋಟರಿ ಕ್ಲಬ್ ಕುಂದಾಪುರ ಇಂತಹ ಕಾರ್ಯಗಳಿಗೆ ಸದಾ ಬೆಂಬಲವನ್ನು ನೀಡಲಿದೆ ಎಂಬ ಭರವಸೆಯನ್ನು ನೀಡಿದರು. ತಲ್ಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಭೀಮವ್ವ ಪಂಚಾಯತ್ ಮೂಲಕ ವಿಶೇಷ ಮಕ್ಕಳಿಗೆ ದೂರೆಯುವ ಸವಲತ್ತುಗಳನ್ನು ದೂರಕಿಸಿ ಕೊಡುವಲ್ಲಿ ವಿಶೇಷ ಪ್ರಯತ್ನವನ್ನು ನಡೆಸುವುದರೊಂದಿಗೆ ಸಂಸ್ಥೆಯ ಚಟುವಟಿಕೆಗಳನ್ನು ಪ್ರಶಂಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಕುಂದಾಪುರದ ವಿವಿಧೆಡೆ ನಡೆಯಿತು. ಕುಂದಾಪುರದ ಮಿನಿವಿಧಾನಸೌಧ, ತಾಲೂಕು ಪಂಚಾಯತ್ ಕಛೇರಿ, ಕೋಡಿ ಸೀವಾಕ್, ಕುಂದಾಪುರ ಬೋರ್ಡ್ ಹೈಸ್ಕೂಲ್, ಪದವಿ ಪೂರ್ವ ಕಾಲೇಜು, ಗಾಂಧಿ ಪಾರ್ಕ್‌ ವಿವಿಧೆಡೆಯಲ್ಲಿ ನಡೆದ ಗೀತ ಗಾಯನದಲ್ಲಿ ಅಧಿಕಾರಿಗಳು, ವಿದಾರ್ಥಿಗಳು ಹಾಗೂ ಸಾರ್ವಜನಿಕರು ಕನ್ನಡ ಗೀತ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. ಕುಂದಾಪುರ ಮಿನಿ ವಿಧಾನಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಾಜು ಕೆ. ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಗಾಯಕ ಗಣೇಶ್ ಗಂಗೊಳ್ಳಿ ಮೊದಲಾದವರು ಗೀತ ಗಾಯನದಲ್ಲಿ ಭಾಗವಹಿಸಿದರು. ಇದನ್ನೂ ಓದಿ:► ಬೈಂದೂರು ತಾಲೂಕಿನಲ್ಲಿ ಸಾಮೂಹಿಕ ಕನ್ನಡ ಗೀತ ಗಾಯನ – https://kundapraa.com/?p=54101 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಪರಂಪರೆ, ಸಂಸ್ಕೃತಿಯ ಹಿರಿಮೆ ಕನ್ನಡ ನಾಡಿನದ್ದಾಗಿದೆ. ನಾಡಿನ ಏಳಿಗೆಗೆ ಪರಿಶ್ರಮ ಪಟ್ಟವರವನ್ನು ಸದಾ ನೆನಪಿಸಬೇಕಿದೆ. ನಾಡು ನುಡಿಯ ಚಿಂತನೆ ಭಾಷೆಯ ಅಭಿಮಾನ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು. ಬೈಂದೂರು ತಾಲೂಕು ದಂಡಾಧಿಕಾರಿ ಶೋಭಾಲಕ್ಷ್ಮೀ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಹೈಸ್ಕೂಲು ವಿದ್ಯಾರ್ಥಿಗಳು, ರತ್ತೂಬಾಯಿ ಜನತಾ ಪ್ರೌಢಶಾಲೆ, ಯುಬಿ ಶೆಟ್ಟಿ ಶಾಲೆಯ ವಿದ್ಯಾರ್ಥಿಗಳು ಸಮೂಹ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. 600ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡರು. ಸಂಗೀತ ನಿರ್ದೇಶಕ ಚಂದ್ರ ಬಂಕೇಶ್ವರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಅಂಗವಾಗಿ 45 ದಿನಗಳ ಕಾಲ ನಿರಂತರ ಸ್ವಯಂ ಸೇವಕರಾಗಿ ಕೆಲಸ ಮಾಡಿದ ಸೇವಾಭಾರತಿ ಕಾರ್ಯಕರ್ತರು, ಕಲಾಕ್ಷೇತ್ರ -ಕುಂದಾಪುರ ಸದಸ್ಯರು ಸೇರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ಸಂಭ್ರಮವನ್ನು ಆಚರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಕಲಾಕ್ಷೇತ್ರ ಅಧ್ಯಕ್ಷ ರಾದ ಬಿ. ಕಿಶೋರ್ ಕುಮಾರ್ ಭಾರತ ಈ ರೀತಿ ಸಾಧನೆಯನ್ನು ಮಾಡಲು ಕೇಂದ್ರ ಸರ್ಕಾರದ ಜೊತೆಗೆ ಸ್ಥಳೀಯವಾಗಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ದಾದಿಯರು, ಹಾಗೂ ಆಶಾ ಕಾರ್ಯಕರ್ತೆಯರ ಶ್ರಮದಿಂದ ಇದು ಸಾಧ್ಯವಾಯಿತು. ನಿಮಗೆಲ್ಲರಿಗೂ ಅಭಿನಂದನೆಗಳು ಎಂದರು. ಆಸ್ಪತ್ರೆಯ ವೈದ್ಯರಾದ ಡಾ. ನಾಗೇಶ್ ಮಾತನಾಡಿ ಭಾರತ ವಿಶ್ವದಲ್ಲೇ 100 ಕೋಟಿ ಲಸಿಕೆ ವಿತರಣೆ ಮಾಡಿ, ಸಾಧನೆ ಮಾಡಿರುವ ಮೊದಲ ದೇಶವಾಗಿದ್ದು, ಇದಕ್ಕೆ ಕಾರಣ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಾರ್ವಜನಿಕ ರ ಬೆಂಬಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖ್ಯಾತ ಯುವ ಪತ್ರಕರ್ತ ಹಾಗೂ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಅವರು ಕರಾವಳಿ-ಇ-ಧ್ವನಿ ಡಿಜಿಟಲ್ ಮಾಧ್ಯಮ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ.ಆರ್.ಸಿ.ಐ.) ಉಡುಪಿ – ಮಣಿಪಾಲ ಘಟಕ ಆಶ್ರಯದಲ್ಲಿ ವಿಶ್ವ ಸಂವಹನಕಾರರ ದಿನಾಚರಣೆ ಅಂಗವಾಗಿ ಕರಾವಳಿ ಇ – ಧ್ವನಿ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹುಟ್ಟುರಾದ ಕಂಜೂರಿನ ದಿ. ಲಕ್ಷ್ಮೀನಾರಾಯಣ ಹಾಗು ಸತ್ಯಭಾಮಾ ದಂಪತಿಗಳ ಪುತ್ರ ಜನಾರ್ದನ್ ಕೊಡವೂರು ಅವರು, ವಿಜಯವಾಣಿ ಪತ್ರಿಕೆಯ ಪ್ರಮುಖ ವರದಿಗಾರರಾಗಿಯೂ ಹಲವು ವರ್ಷದಿಂದ ವೃತ್ತಿಯಲ್ಲಿ ಸೇವೆ ಸಲ್ಲಿದ್ದಾರೆ. 2013ರಲ್ಲಿ ದೊರೆತ ಜಿಲ್ಲಾ ಕನ್ನಡ ರಾಜೋತ್ಸವ ಪ್ರಶಸ್ತಿ, ಉಪಾಧ್ಯಾಯ ಸಮ್ಮಾನ್ ಎಂಬ ರಾಜ್ಯ ಮಟ್ಟದ ಪ್ರಶಸ್ತಿ ಜೊತೆಗೆ ಯಶೋ ಮಾಧ್ಯಮ ಅವಾರ್ಡ್, ಪಲಿಮಾರು ಶ್ರೀಗಳು ಅನುಗ್ರಹಿಸಿ ನೀಡಿದ ಮಾಧ್ಯಮ ರತ್ನ ಪ್ರಶಸ್ತಿಗಳು ಹೀಗೆ ಹತ್ತು ಹಲವು ಅಭಿನಂದನಾ ಪತ್ರಗಳು ಅವರನ್ನು ಅರಸಿಕೊಂಡು ಬಂದಿದೆ. ‘ಕಾಲದೊಂದಿಗೆ ಓಟ’ ಕಂಬಳದ ಯಶಸ್ವಿ ಛಾಯಾಚಿತ್ರ ಪ್ರದರ್ಶನ, ನವರಾತ್ರಿ ನವರಸೋತ್ಸವದ ‘ಆಡಿಸಿದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು. ಮಾತನಾಡುವ ಕಲೆ ನಾಯಕತ್ವದ ಗುಣ, ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ನಾವು ಯಶಸ್ವಿ ಜೀವನ ನಡೆಸಲು ಸಾಧ್ಯ. ಎಳವೆಯಲ್ಲೇ ಬದುಕನ್ನು ಎದುರಿಸುವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ಜೇಸಿಐ ತರಬೇತುದಾರರಾದ ಅಕ್ಷತಾ ಗಿರೀಶ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಂಯುಕ್ತ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾದ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ನ ರಾಜೇಶ್ ಎಂ ಜಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರ್ಯಾಕ್ಟ್ ಅಧ್ಯಕ್ಷರಾದ ಅಮೀಕ್ಷಾ ಡಿ ನಾಯ್ಕ್ ಹಾಗೂ ಕಾರ್ಯದರ್ಶಿ ರಾಮಕೃಷ್ಣ ಶೆಣೈ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಯೋಜನಾಧಿಕಾರಿ ಸುಗುಣ ಆರ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅ.27ರ ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳ ವ್ಯಾಪ್ತಿಯ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4:30ರ ತನಕ ಕೋವಿಡ್ ಪ್ರಥಮ ಹಾಗೂ ಎರಡನೇ ಡೋಸ್ ಲಸಿಕಾಕರಣ ಜರುಗಲಿದೆ. 18 ವರ್ಷ ಮೇಲ್ಪಟ್ಟ ಇದುವರೆಗೂ ಕೋವಿಡ್ ಲಸಿಕೆ ಪಡೆಯದವರು ಲಸಿಕಾ ಕೇಂದ್ರಕ್ಕೆ ಬಂದು ಪ್ರಥಮ ಡೋಸ್ ಲಸಿಕೆ ಪಡೆಯಬಹುದು. ಕೋವಿಶಿಲ್ಡ್ ಮೊದಲ ಡೋಸ್ ಪಡೆದು 84 ದಿನ ಹಾಗೂ ಕೋವಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಮೀರಿದವರು 2ನೇ ಡೋಸ್ ಲಸಿಕೆ ಪಡೆದುಕೊಳ್ಳಬಹುದು. ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಸ್ವ್ಯಾಬ್ ಟೆಸ್ಟ್ ಇರುವುದಿಲ್ಲ. ಪ್ರಥಮ ಡೋಸ್ ಲಸಿಕೆ ಪಡೆದ ದಿನಾಂಕ ನೆನಪಿಲ್ಲದಿರುವವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಕಾರ್ಡಿನೊಂದಿಗೆ ಬಂದು ಪರಿಶೀಲಿಸಿ ಎರಡನೇ ಡೋಸ್ ಪಡೆಯಲು ಅರ್ಹರಿದ್ದರೆ ಪಡೆದುಕೊಳ್ಳಬಹುದು. 2ನೇ ಡೋಸ್ ಪಡೆಯುವ ನಿಗದಿತ ದಿನಾಂಕದಿಂದ ತುಂಬಾ ತಡವಾದಲ್ಲಿ ಕೋವಿಡ್ನಿಂದ ಆಗುವ ತೊಂದರೆ ಹೆಚ್ಚಿರುವುದರಿಂದ ಕೂಡಲೇ ಲಸಿಕೆ ಪಡೆಯುವಂತೆ…

Read More