ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಎನ್ನುವುದು ರಂಗಸಜ್ಜಿಕೆಗೆ ಮಾತ್ರ ಸೀಮಿತವಲ್ಲ. ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ ನಾಟಕಗಳಿಂದ ದೊರೆಯುತ್ತದೆ. ಜಗತ್ತಿಗೆ ಭಾರತ ದೇಶ ಪ್ರೇರಣೆಯಾಗಿದೆ. ನಾಟಕಗಳು ಜನಜಾಗ್ರತಿ ಮೂಲಕ ಸಮಾಜದಲ್ಲಿ ಬದಲಾವಣೆ ತಂದಿದೆ. ಕಲೆ ಮತ್ತು ಆಸಕ್ತಿ ಸದಾ ಕ್ರಿಯಾತ್ಮಕ ಚಿಂತನೆ ಮತ್ತು ಸಕರಾತ್ಮಕವಾದ ಪ್ರಗತಿಗೆ ದಾರಿಯಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ಇಲ್ಲಿನ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ವೇದಿಕೆಯಲ್ಲಿ ಆಯೋಜಿಸಲಾದ 8 ದಿನಗಳ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮುದ್ಯೋಡಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಉದ್ಯಮಿ ಇರ್ಷಾದ್ ಸಾಹೇಬ್ ನಾಗೂರು, ಉದ್ಯಮಿ ಬಿಂದುಮನೆ ಕೃಷ್ಣ ಮೊಗವೀರ, ಉದ್ಯಮಿ ಕೃಷ್ಣಯ್ಯ ಮತ್ತೋಡಿ, ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಸಂಖ್ಯೆ 61ರಿಂದ 80ರ ಸಮಗ್ರ ಮತದಾರ ಪಟ್ಟಿಯ ಕಾರ್ಯಗಾರ ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಅಧ್ಯಕ್ಷತೆಯಲ್ಲಿ ನೆರವೇರಿತು. ಪಕ್ಷದ ವತಿಯಿಂದ ನೇಮಕ ಮಾಡಿದ ಬಿ.ಎಲ್ಎ 2 ಇವರ ಮುಂದಿನ ದಿನದಲ್ಲಿ ಪೂರ್ಣ ಪ್ರಮಾಣದ ಕಾರ್ಯಗಾರ ಮುಗಿದ ತಕ್ಷಣ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಎ- 2 ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಹೇಳಿದರು. ಕಾರ್ಯಕ್ರಮದ ಬಗ್ಗೆ ಬಿಎಲ್ ಎ 01 ಇದರ ಸಂಚಾಲಕ ರಾಜೇಶ್ ಶೆಟ್ಟಿ ಶಿರೂರು ಮೂರ್ ಕೈ ಅವರು ಬೂತ್ ಮಟ್ಟದಲ್ಲಿ ಮತದಾರರ ಪರಿಷ್ಕಣಿಯ ಕಾರ್ಯದ ವಿಚಾರಧಾರೆಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆಎಸ್ ಹಾಗೂ ಬಿಎಲ್ಎ 2ನ ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಪೂಜಾರಿ ಬೀಜಾಡಿ ಸರ್ವರನ್ನು ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕರ ಮಧ್ಯೆ ಹೊಡೆದಾಟ ನಡೆದು ಓರ್ವ ಕೊಲೆಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ರವಿವಾರ ತಡರಾತ್ರಿ ಸಂಭವಿಸಿದೆ. ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಕೊಲೆಯಾದವರು. ರವಿವಾರ ರಾತ್ರಿ ಮದ್ಯಪಾನ ಪಾರ್ಟಿ ಮಾಡಿದ್ದ ಯುವಕರ ತಂಡವೊಂದು ಕ್ಷುಲ್ಲಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೀವ್ರ ಹಲ್ಲೆಗೊಳಗಾದ ಸಂತೋಷ್ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಟಿ. ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮುದ್ಯತಾ ಪ್ರಸ್ತುತಿಯಲ್ಲಿ ಡಿಸೆಂಬರ್ 20ರಂದು ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್ನಲ್ಲಿ ನಡೆಯಲಿರುವ ಡಾ.ಸಿ. ಅಶ್ವಥ್ ಸ್ವರ ಸಂಯೋಜನೆಯ ಗೀತೆಗಳ ಪ್ರಸ್ತುತಿ ‘ಕುಂದಾಪುರದಲ್ಲಿ ಸತ್ಯಾವತಾರ’ಕಾರ್ಯಕ್ರಮದ ಪೋಸ್ಟರ್ ಅನಾವರಣ ಕಾರ್ಯಕ್ರಮ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್ನಲ್ಲಿ ನಡೆಯಿತು. ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್, ಉದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುನ್ನುಡಿ ಬರೆಯುವ ಜೊತೆಗೆ ಜನರಿಗೆ ಹೊಸತನ್ನು ಪರಿಚಯಿಸುವಲ್ಲಿಯೂ ಆಸಕ್ತಿ ವಹಿಸುತ್ತಿದೆ. ಈ ಭಾಗದ ಜನರಿಗೆ ರಾಜ್ಯಮಟ್ಟದಲ್ಲಿ ನಡೆಯುವ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯವಾದುದು. ಈ ಮೂಲಕ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹೇಳಿದರು. ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಸಿ.ಅಶ್ವಥ್ ಅವರು ಭಾವಗೀತೆಗಳನ್ನು ಹಾಡಲು ಆರಂಭಿಸಿದ ಬಳಿಕ ಭಾವಗೀತೆಗಳ ಬಗ್ಗೆ ಜನರ ಆಕರ್ಷಣೆ ಜಾಸ್ತಿಯಾಗತೊಡಗಿತು. ಅಶ್ವಥ್ ಅವರ ಸ್ವರದಲ್ಲಿ ಕ್ಲಿಷ್ಟವೆನಿಸುವ ಭಾವಗೀತೆಗಳು ಸುಲಲಿತವಾಗಿ, ಜೀವ ಪಡೆದುಕೊಂಡು ಜನಮನದಲ್ಲಿ ಹಾಸುಹೊಕ್ಕಾಯಿತು. ಅಂಥಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ನೀರಾವರಿ ನಿಗಮದಿಂದ ನಿರ್ವಹಿಸಲ್ಪಡುತ್ತಿರುವ ವರಾಹಿ ನೀರಾವರಿ ಯೋಜನೆಯ ಮೂಲಕ ನಿರ್ಮಾಗೊಂಡು ರೈತರಿಗೆ ವರವಾಗಿರುವ ಸೌಕೂರು ಏತ ನೀರಾವರಿ ಯೋಜನೆ ನೀರು ಹಾಯಿಸುವ ವಿದ್ಯುತ್ ಚಾಲಿತ ಪಂಪುಸೆಟ್ಗಳ ವಿದ್ಯುತ್ ಬಿಲ್ ವರಾಹಿ ನೀರಾವರಿ ಇಲಾಖೆ ಬಾಕಿ ಇಟ್ಟಿರುವ ಕಾರಣ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಪ್ರಕರಣ ಶಾಶ್ವತ ಪರಿಹಾರಗೊಳ್ಳಲು ಸರ್ಕಾರ ಈ ಬಹು ಬೇಡಿಕೆಯ ಯೋಜನೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಬೇಕೆಂದು ಕುಂದಾಪುರ ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಹಿಂದೆ ಬಂಗಾರಪ್ಪನವರು ಮುಖ್ಯಮಂತ್ರಿಯಾಗಿರುವಾಗ ಶಕ್ತಿ ಯೋಜನೆಯ ಮೂಲಕ ರೈತರ ಹತ್ತು ಅಶ್ವಶಕ್ತಿ ತನಕದ ಕೃಷಿ ಪಂಪುಸೆಟ್ ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿದ ಯೋಜನೆ ಇಂದಿಗೂ ರಾಜ್ಯದ ರೈತಾಪಿ ಬಂಧುಗಳಿಗೆ ವರವಾಗಿದೆ. ಇಂದಿನ ಸೌಕೂರು ಏತ ನೀರಾವರಿ ಯೋಜನೆ ಸಮಸ್ಯೆ ಶಾಶ್ವತ ಪರಿಹಾರವಾಗಬೇಕಾದರೆ ಸರ್ಕಾರ ಮೆಸ್ಕಾಂ ಇಲಾಖೆ ಮೂಲಕ ಈ ಯೋಜನೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಬೇಕು. ಇಲ್ಲದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಉಳ್ತೂರಿನ ಕೆ. ಸ್ನೇಹಾ ಕುಂದಾಪುರ ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಯಶಸ್ವಿಯಾಗಿ ಪೂರೈಸಿದ ಈ ಪ್ರದೇಶದ ಎಸ್ಟಿ ಸಮುದಾಯದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕುಂದಾಪುರದ ಕೊರಗ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷ ವಿ. ಗಣೇಶ್ ಮತ್ತು ಜಯಶ್ರೀ ಶಡಗೇರಿ ಅವರ ಹಿರಿಯ ಪುತ್ರಿ ಸ್ನೇಹ, ಸಮರ್ಪಣೆ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಮೂಲಕ ಸ್ಪೂರ್ತಿದಾಯಕ ಮಾರ್ಗವನ್ನು ರೂಪಿಸಿದ್ದಾರೆ. ಅವರು ತಮ್ಮ ಆರಂಭಿಕ ಶಾಲಾ ಶಿಕ್ಷಣವನ್ನು ಅಂಕೋಲಾ ನಿರ್ಮಲ ಹೃದಯ ಶಾಲೆ ಮತ್ತು ಕುಂದಾಪುರದ ಹೋಲಿ ರೋಸರಿ ಶಾಲೆಯಲ್ಲಿ ಪೂರ್ಣಗೊಳಿಸಿದರು, ನಂತರ ಹೆಬ್ರಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ ತೆರಳಿದರು. ಅವರು ಮೂಡಬಿದ್ರಿಯ ಆಳ್ವಾಸ್ನಲ್ಲಿ ತಮ್ಮ ಪದವಿ ಪೂರ್ವ ಶಿಕ್ಷಣವನ್ನು ಪಡೆದರು. ಸ್ನೇಹಾ ಮಂಗಳೂರಿನ ಎಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಎಂಬಿಬಿಎಸ್ ಮುಗಿಸಿದರು ಮತ್ತು ನಂತರ ನವದೆಹಲಿಯ ವೈದ್ಯಕೀಯ ಕಾಲೇಜಿನಲ್ಲಿ ಹೆಚ್ಚಿನ ವೈದ್ಯಕೀಯ ಅಧ್ಯಯನವನ್ನು ಮಾಡಿದರು. ಪಿಎಚ್ಸಿ ಕೋಟಾದಲ್ಲಿ ಒಂದು ವರ್ಷದ ಸೇವೆಯನ್ನು ಪೂರ್ಣಗೊಳಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಇಂದು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದು, ಅವರ ಆರ್ಥಿಕ ಸ್ಥಿತಿ ಉತ್ತಮಗೊಂಡಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕೋಟದ ಮಾಂಗಲ್ಯ ಮಂದಿರದಲ್ಲಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲ್ಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಚಾಲನೆ ನೀಡಿ ಮಾತನಾಡಿದರು. ಮದ್ಯವರ್ಜನ ಶಿಬಿರ, ಮದಗಗಳ ಅಭಿವೃದ್ಧಿ ಮುಂತಾದ ಅನೇಕ ಜನಪರ ಯೋಜನೆಗಳು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಯೋಜನೆಗಳು ಮಹಿಳೆಯರಿಗಾಗಿ ಇದ್ದು, ಅದು ಅವರ ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಕೋಟ ಅಮೃತೇಶ್ವರಿ ದೇವಸ್ಥಾನದ ಅಧ್ಯಕ್ಷ ಆನಂದ ಸಿ. ಕುಂದರ್ ಮಾತನಾಡಿ, ಗಾಂಧಿಜೀಯವರ ರಾಮರಾಜ್ಯದ ಕನಸು ಇಂದು ವೀರೇಂದ್ರ ಹೆಗ್ಗಡೆ ಅವರ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಗುತ್ತಿದೆ. ಯೋಜನೆಯ ಅನೇಕ ತರಬೇತಿ, ಮಾಹಿತಿ ಕಾರ್ಯಕ್ರಮಗಳಿಂದ ಮಹಿಳೆಯರು ತಮ್ಮ ಕಾಲಮೇಲೆ ನಿಲ್ಲುವಂತಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ‘ ಜನತಾ ಶನಯ – 2K25’ ಎಂಬ ವಾರ್ಷಿಕೋತ್ಸವ ಕಾರ್ಯಕ್ರಮವು ಬಹಳ ವಿನೂತನ ಶೈಲಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಚಲನಚಿತ್ರ ನಟ ಹಾಗೂ ರಂಗಭೂಮಿ ಕಲಾವಿದರಾದ ರಘು ಪಾಂಡೇಶ್ವರ ಅವರು ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯದ ಕನಸು ಆರಂಭವಾಗುವುದು ಶಾಲೆಯಲ್ಲಿ ಅಂತಹ ಕನಸು ನನಸಾಗಿಸಲು ವೇದಿಕೆಯಾಗಿ ಇರುವುದು ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆ, ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿದ್ದು ಈ ನಿಟ್ಟಿನಲ್ಲಿ ಪೋಷಕರು, ಶಾಲೆ ಪ್ರತಿ ಮಗುವಿಗೆ ವೈಯಕ್ತಿಕ ಗಮನ ಹರಿಸಿ ಸ್ಥೈರ್ಯ ತುಂಬಬೇಕು ಎಂದು ಬುದ್ಧಿ ಮಾತನ್ನು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳ ಸ್ಥಾನದಲ್ಲಿದ್ದ ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೇಖರ್ ಖಾರ್ವಿ ಅವರು ಮಾತನಾಡಿ, ಮಕ್ಕಳ ಸಂಭ್ರಮಕ್ಕೆ ಪ್ರೋತ್ಸಾಹ ನೀಡುವ ಸಾಧನೆಗೆ ದಾರಿ ಮಾಡಿಕೊಡುವ ಸಮಾರಂಭ ವಾರ್ಷಿಕೋತ್ಸವ ಕಾರ್ಯಕ್ರಮ ಅದು ಈ ಶಾಲೆಯಲ್ಲಿ ನೂರು ಶೇಕಡದಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಹೈದರಾಬಾದ್: ಅಲ್ಲಿ ನಡೆಯುತ್ತಿರುವ ಬಿಸಿಸಿಐ 19 ವರ್ಷದೊಳಗಿನ ವನಿತೆಯರ ಏಕದಿನ ಟೂರ್ನಿಯ ಮೊದಲ ಪಂದ್ಯದಲ್ಲಿ ನಾಯಕಿ, ಕುಂದಾಪುರ ಮೂಲದ ರಚಿತಾ ಹತ್ವಾರ್ ಸಿಡಿಸಿದ ಭರ್ಜರಿ ಶತಕದ ಸಾಹಸದಿಂದ ಕರ್ನಾಟಕ ತಂಡ ವಿದರ್ಭತಂಡವನ್ನು 29 ರನ್ ಗಳಿಂದ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕದ ಪರ ಆರಂಭಿಕ ಆಟಗಾರ್ತಿ ರಚಿತಾ ಹತ್ವಾರ್ ಅವರು 156 ರನ್ (154 ಎಸೆತ, 21 ಬೌಂಡರಿ) ಗಳೊಂದಿಗೆ ನಾಯಕಿಯ ಆಟವನ್ನು ಆಡಿದರು. ಇವರಿಗೆ ಮೂರನೇ ಕ್ರಮಾಂಕದಲ್ಲಿ ಬಂದ ಶ್ರೇಯಾ ಸಿ. ಚೌಹಾಣ್ 57 ರನ್ (69 ಎಸೆತ, 6 ಬೌಂಡರಿ) ಉತ್ತಮ ಸಾಥ್ ನೀಡಿದರು. ನಿಗದಿತ 50 ಓವರ್ಗಳಲ್ಲಿ ಕರ್ನಾಟಕ ತಂಡ 7 ವಿಕೆಟ್ ಕಳೆದುಕೊಂಡು 284 ರನ್ ಪೇರಿಸಿತು. ವಿದರ್ಭ ಪರ ಧನಶ್ರೀ ಗುಜ್ಜರ್46 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಸವಾಲಿನ ಮೊತ್ತವನ್ನು ಬೆನ್ನತ್ತಿದ ವಿದರ್ಭ ತಂಡವು ಕರ್ನಾಟಕದ ಕರಾರುವಕ್ಕಾದ ಬೌಲಿಂಗ್ ನಿಂದಾಗಿ 48.1 ಓವರ್ಗಳಲ್ಲಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 50ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಡಿ.16ರ ಮಂಗಳವಾರ ಅಪರಾಹ್ನ 4.30ಕ್ಕೆ ನಡೆಯಲಿದೆ. ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಸಾಧಕ ಕೋಟತಟ್ಟು ಪಡುಕರೆ ಕೆರ್ಜಿಮನೆ ಚಂದ್ರ ಪೂಜಾರಿಗೆ ಕೃಷಿ ಪುರಸ್ಕಾರ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
