ಕುಂದಾಪ್ರ ಡಾಟ್ ಕಾಂ.ಸಿನಿಮಾದೊಳಕ್ಕೆ ದೈವದ ಅಬ್ಬರ, ಗರ್ನಲ್ ಸದ್ದು ಮಾಡಿದ್ರೇ, ಹೊರಗಡೆ ಕನ್ನಡ ಚಿತ್ರರಂಗವೇ ಕಂಪಿಸುವಂತೆ ಸದ್ದು ಮಾಡುತ್ತಿದೆ ‘ಕಾಂತಾರ’. ಕಾಡಿನ ಮಕ್ಕಳಾಗಿ, ಅದರ ಜೊತೆಗೆ ಬೆಸೆದುಕೊಂಡು ಬದುಕುವ ಊರಿನ ಜನ. ಕಾಡಿನ ಒಂದಡಿ ಭೂಮಿಯನ್ನು ಒತ್ತುವರಿ ಆಗದಂತೆ ತಡೆಯಬೇಕೆಂಬ ಅರಣ್ಯಾಧಿಕಾರಿ. ಇದರ ಲಾಲಸೆಯ ಬುದ್ಧಿಯುಳ್ಳ ರಾಜಕಾರಣಿ… ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರೇ ಹೇಳುವಂತೆ ಇದು ‘ಮಾನವ ಮತ್ತು ಪ್ರಕೃತಿ ಸಂಘರ್ಷ’. ಎರಡೂವರೆ ಗಂಟೆಯಲ್ಲಿ ಈ ಎಲ್ಲೆವನ್ನೂ ಹಿಡಿದಿಟ್ಟ, ಕಟ್ಟಿಕೊಟ್ಟ ಪರಿ ಮಾತ್ರ ಬೆರಗುಮೂಡಿಸುತ್ತೆ. ಇದರಲ್ಲಿ ಆಂಗ್ರಿಯಂಗ್ಮ್ಯಾನ್ ಲುಕ್ನಲ್ಲಿರುವ ಶಿವ (ರಿಷಬ್ ಶೆಟ್ಟಿ) ಬಂಡಾಯ ರೂಪಕವಾಗಿ ಕಾಣಿಸಿಕೊಳ್ಳುತ್ತಾನೆ. ಕೊನೆಯಲ್ಲಿ ತನ್ನ ನೈಜ ಅಸ್ತಿತ್ವವನ್ನು ಗ್ರಹಿಸುವ ಮೂಲಕ ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ಯತ್ನಿಸುತ್ತಾನೆ. ಇದು ಹೇಗೆ ಸಫಲವಾಗುತ್ತೇ ಎಂಬುದೇ ಕಥೆ ತಿರುಳು. ಕರಾವಳಿಯ ನೆಲದ ಸಂಪ್ರದಾಯವಾದ ಕಂಬಳ ಮತ್ತು ಭೂತ ಕೋಲ ಜೀವಂತಗೊಳಿಸುವ ದೃಶ್ಯ ವೈಭವ ಕಾಂತಾರದಲ್ಲಿದೆ. ಕರಾವಳಿ ಜನರ ಧಾರ್ಮಿಕ ನಂಬಿಕೆಗಳು ಹಾಗೂ ಭಾವನೆಗಳನ್ನು ಅತ್ಯುತ್ತಮವಾಗಿ ತೋರಿಸುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಜಿ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಇತ್ತೀಚಿಗೆ ಕುಂದಾಪುರದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಹರಾದ ವೀಣಾ ಎಸ್ ಶೆಟ್ಟಿ ಅವರು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿಯವ ಆಶಯದಂತೆ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್ ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಸರಣಿ ರಕ್ತದಾನ ಶಿಬಿರ ಆಯೋಜಿಸಿ ಮೋದಿಜೀಯವರ ಆಶಯವನ್ನು ಈಡೇರಿಸಿರುವುದು ಶ್ಲಾಘನೀಯ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಓಬಿಸಿ ಮೋರ್ಚಾ ಉಡುಪಿ ಜಿಲ್ಲೆ ಅಧ್ಯಕ್ಹರಾದ ಸುರೇಂದ್ರ ಪಣಿಯೂರು ಮಾತನಾಡಿ ಉಡುಪಿ ಜಿಲ್ಲೆಯಾದ್ಯಂತ ಅಭಯಹಸ್ತ ಟ್ರಸ್ಟ್ ಆಯೋಜಿಸುವ ಎಲ್ಲ ರಕ್ತದಾನ ಶಿಬಿರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ಅಧ್ಯಕತೆ ವಹಿಸಿದ ಇಂಡಿಯನ್ ರೆಡ್…
ಕರಾವಳಿ ಎಂದ ತಕ್ಷಣ ಕೇವಲ ನದಿ ಸಮುದ್ರವೆಂಬ ಪ್ರಾಕೃತಿಕ ಸೊಬಗಷ್ಟೇ ಅಲ್ಲ. ಕಾಡು ಬೆಟ್ಟ ಗುಡ್ಡ ಇಲ್ಲಿನ ಕಂಬಳ, ದೈವಾರಾಧನೆ ಇಲ್ಲಿನ ಭಾಷೆ ಇವೆಲ್ಲ ಒಮ್ಮೆ ಕಣ್ಣ ಮುಂದೆ ಹಾದು ಹೋಗುತ್ತದೆ. ದಟ್ಟಾರಣ್ಯದ ನಡುವೆ ಕರಾವಳಿಯ ಜನರ ಸಂಘರ್ಷದ ಬದುಕು, ನಂಬಿಕೆ, ದೈವಾರಾಧನೆ, ಕರಾವಳಿಯ ಸಂಸ್ಕೃತಿಯ ಒಟ್ಟಾರೆ ಚಿತ್ರಣವೇ ‘ಕಾಂತಾರ’ ಒಕ್ಕಲೆಬ್ಬಿಸುವಿಕೆ, ಅರಣ್ಯ ಭೂಮಿ ಒತ್ತುವರಿ, ಕಾಡಿನ ಲೂಟಿ, ಅರಣ್ಯಾಧಿಕಾರಿಗಳೊಂದಿಗೆ ಜನರ ಸಂಘರ್ಷದ ಬದುಕನ್ನು ನಟ, ನಿರ್ದೇಶಕ ರಿಷಭ್ ಶೆಟ್ಟಿ ಅದ್ಬುತವಾಗಿ ಕಟ್ಟಿಕೊಟ್ಟಿದ್ದಾರೆ, ಚಿತ್ರದ ಆರಂಭದಲ್ಲಿ ಕಂಬಳ ವೈಭವ ಕಣ್ಣಿಗೆ ಕಟ್ಟುವಂತೆ ಅದ್ಬುತವಾಗಿ ತೋರಿಸಲಾಗಿದೆ. ಇನ್ನುಳಿದಂತೆ ನಾಯಕಿಯ ಪ್ರೀತಿಯಲ್ಲಿ ಬೀಳುವ ಶಿವ ಹಾಗೂ ಅವರಿಬ್ಬರ ನಡುವೆ ನಡುವೆ ನಡೆಯುವ ಸಲ್ಲಾಪ… ಹಾಗೂ ಮದ್ಯದಲ್ಲಿ ಬರುವ ‘ಸಿಂಗಾರ ಸಿರಿಯ’ ಅದ್ಬುತ ಸಾಹಿತ್ಯ, ಸಂಗೀತದೊಂದಿಗೆ ಕಚಗುಳಿ ಇಡುವ ಹಾಡು ನೋಡುಗರನ್ನ ಮಂತ್ರ ಮುಗ್ದರನ್ನಾಗಿಸುತ್ತದೆ. ಕರಾವಳಿ ಹುಡುಗಿಯಾಗಿ ನಾಯಕಿ ಸಪ್ತಮಿ ಗೌಡ ಸುಂದರವಾಗಿ ಅಭಿನಯಿಸಿದ್ದಾರೆ. ಹಾಗೆಯೇ ಕಾಡಿನಲ್ಲಿ ರಿಷಭ್ ಶೆಟ್ಟರ ಕಾದಾಟದ ಸಾಹಸದ ದೃಶ್ಯಗಳ ಅದ್ಬುತವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಟ್ಟಿ ಕುಸಿತ ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಗೆ ವಹಿಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಿದೆ. ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.ಅಂಗಾರ ಸ್ಪಷ್ಟಪಡಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು ಜೆಟ್ಟಿ ಕುಸಿತ ಪ್ರದೇಶವನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಜೆಟ್ಟಿ ಕುಸಿತವನ್ನು ಲೋಕಾಯುಕ್ತ ತನಿಖೆ ನಡೆಸಬೇಕೆಂಬ ಸ್ಥಳೀಯ ಮೀನುಗಾರರ ಬೇಡಿಕೆ ಇದೆ. ಈ ಬಗ್ಗೆ ಸಭೆ ನಡೆಸಿ ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಕಾಮಗಾರಿ ಗುಣಮಟ್ಟದ ಬಗ್ಗೆ ಗುತ್ತಿಗೆದಾರರು ಗಮನಹರಿಸಬೇಕಿದ್ದು, ಕಳಪೆ ಕಾಮಗಾರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಬಿಲ್ಲು ಮಾಡಲಾಗಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಪಡೆದುಕೊಂಡು ಸೂಕ್ತ ಕಾನೂನು ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಂದಿನಿ ಉತ್ಪನ್ನಗಳಿಗೆ ದೇಶಾದ್ಯಂತ ಉತ್ತಮ ಅಭಿಪ್ರಾಯ ವ್ಯಕ್ತವಾಗಿದ್ದು, ಉತ್ತಮ ಗುಣಮಟ್ಟದ ನಂದಿನಿ ಉತ್ಪನ್ನಗಳು ಗ್ರಾಹಕ ಸ್ನೇಹಿಯಾಗಿ ಸಶಕ್ತ ಮಾರುಕಟ್ಟೆ ಮೂಲಕ ಕೋಟ್ಯಾಂತರ ಜನರನ್ನು ತಲುಪುತ್ತಿದೆ. ಹೈನುಗಾರಿಕೆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸುವುದರ ಜೊತೆಗೆ ತಂತ್ರಜ್ಞಾನ ಹಾಗೂ ವಿಜ್ಞಾನದ ಮೂಲಕ ಹೈನುಗಾರರಿಗೆ ಹೈನುಗಾರಿಕೆಯಲ್ಲಿ ಇನ್ನಷ್ಟು ಉತ್ತೇಜನ ನೀಡಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಹೇಳಿದರು. ಗಂಗೊಳ್ಳಿಯ ಗ್ರಾಮ ಪಂಚಾಯತ್ ಕಾರ್ಯಾಲಯದ ಸಮೀಪ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ ಉತ್ಪನ್ನಗಳ ನೂತನ ಮಳಿಗೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ರೈತರಿಂದ ರೈತರಿಗಾಗಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಹೈನುಗಾರಿಕೆ ಮೂಲಕ ಲಕ್ಷಾಂತರ ಜನರಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಸಹಕರಿಸುತ್ತಿದೆ. ಪ್ರತಿನಿತ್ಯ ೫ ಲಕ್ಷಕ್ಕೂ ಮಿಕ್ಕಿ ಹಾಲು ಉತ್ಪಾದಕರು ಹಾಲನ್ನು ಡೈರಿಗಳಿಗೆ ನೀಡುತ್ತಿದ್ದು, ೧.೩೦…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಇಂಡಿಯಾ ಲಿಟರಸಿ ಮಿಷನ್ ಕೊಡಮಾಡುವ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೊತ್ತಾಡಿ ವಹಿಸಿದ್ದರು. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ, ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಸಂದೀಪ್ ಕುಮಾರ್, ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನು? ಸಿ. ಬಂಗೇರ ಅವರಿಗೆ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡಿ ಗೌರವಿಸಲಾಯಿತು. ಜೋನಲ್ ಲೆಫ್ಟಿನೆಂಟ್ ಪೂರ್ಣಿಮಾ ಭವಾನಿ ಶಂಕರ್ ಶುಭಾಶಂಸನೆಗೈದರು. ರೋಟರಿ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ ಬುಧವಾರ ಸಂಜೆ 5.30 ರ ಹೊತ್ತಿಗೆ ಘಟನೆ ನಡೆದು ನಿರಂತರವಾಗಿ ಕುಸಿದಿದ್ದು 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದೆ ಎನ್ನಲಾಗಿದೆ. ಕಳೆದ 13 ವರ್ಷದ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು ಇದು ಕೂಡ ಕುಸಿತಕ್ಕೊಳಗಾಗಿತ್ತು. ಬಳಿಕ ಶಿವಮೊಗ್ಗ ಸಂಸದ ಹಾಗೂ ಬೈಂದೂರು ಶಾಸಕರ ಮುತುವರ್ಜಿಯಲ್ಲಿ 12 ಕೋಟಿ ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿಗೆ ಮಂಜೂರಾಗಿ 180 ಮೀಟರ್ ಕೆಲಸವೂ ನಡೆದಿತ್ತು. ಮುಂದಿನ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಪ್ರಮ್ ಹಾಲ್ ನಡುವೆಯಿದ್ದ ರಾಡ್ ತುಂಡರಿಸಿ ಹೊಸ ಪಿಲ್ಲರ್ ಹಾಕಿದ್ದು ಎರಡಕ್ಕೂ ಕೊಂಡಿಯಾಗಿದ್ದ ರಾಡು ತುಂಡರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ್ದರಿಂದ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಲವು ಪಿಲ್ಲರ್ ಕುಸಿದಿದೆ. ಈ ಭಾಗದಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ದೇಶದ ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಭಯೋತ್ಪಾದನೆ ದೇಶದ ಭದ್ರತೆ, ಅಂತರಿಕ ಸುರಕ್ಷತ ಹಿನ್ನಲೆಯಲ್ಲಿ PFI ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ, ಕೇಂದ್ರ ಭಾರತೀಯ ಜನತಾ ಪಕ್ಷದ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ರಾಷ್ಟ್ರದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಿಗುತ್ತಿದ್ದ ಈ ಸಂಘಟನೆಗಳನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. 2001 ಸೆಪ್ಟೆಂಬರ್ 27ರಂದು SIMI ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು, 2022 ಸೆಪ್ಟೆಂಬರ್ 27ರಂದು PFI ಸೇರಿದಂತೆ 5 ಮಾಡಲಾಗಿದೆ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ & ಪಿಎಫ್ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಅಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIC), ನ್ಯಾಷನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಟ್ಟಣ ಪಂಚಾಯತ್ ರಚನೆಯಾಗಿ ಒಂದು ವರ್ಷ ಎಂಟು ತಿಂಗಳಾಗಿದೆ. ಈ ಅವಧಿಯಲ್ಲಿ 125 ಕೋಟಿ ಅನುದಾನ ಬಂದಿದೆ. ರಾಜ್ಯದಲ್ಲಿಯೇ ಹೆಚ್ಚು ಅನುದಾನ ಪಡೆದ ಕ್ಷೇತ್ರ ಬೈಂದೂರಾಗಿದೆ. ಈ ಕ್ಷೇತ್ರ ಸಾಕಷ್ಟು ಹಿಂದುಳಿದಿದ್ದು ಅಭಿವೃದ್ದಿಯಾಗುತ್ತಿದೆ. ಅಧಿಕಾರಿಗಳು ಯಾವ ಕೆಲಸ ಆಗಬೇಕು, ಅನುದಾನ ಅವಶ್ಯಕತೆ ಇತ್ಯಾದಿಗಳನ್ನು ನನ್ನ ಗಮನ ತರಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಹೇಳಿದರು. ಅವರು ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸುವ ಕೆಲಸ ಮಾಡಬೇಕು. ಜನರಿಗೆ ವ್ಯವಸ್ಥೆಯ ಬಗ್ಗೆ ಬೇಸರ ಮೂಡದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಜನರ ನೋವನ್ನು ಅರ್ಥ ಮಾಡಿಕೊಂಡು ಸ್ಪಂದಿಸುವ ಕೆಲಸ ಮಾಡಬೇಕು ಎಂದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿಯ ಪ್ರಗತಿಯನ್ನು ವಿಚಾರಿಸಿದ ಶಾಸಕರು ತೀವ್ರ ಅಸಮಾಧಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಸೋಮವಾರ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಸತ್ಯ ಪ್ರಸನ್ನ, ದೊಟ್ಟಯ್ಯ ಪೂಜಾರಿ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ, ಸ್ಥಳೀಯರಾದ ನಾಗರಾಜ ಗಾಣಿಗ ಬಂಕೇಶ್ವರ, ರವೀಂದ್ರ ಶ್ಯಾನುಭೋಗ್ ಹಾಗೂ ಭಕ್ತಾದಿಗಳು ಹಾಜರಿದ್ದರು.
