Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಅಮ್ಮೆಂಬಲ ಸುಬ್ಬರಾವ್ ಪೈ ಅವರು 1906ರಲ್ಲಿ ಕೆನರಾ ಬ್ಯಾಂಕ್‌ನ್ನು ಸ್ಥಾಪನೆ ಮಾಡಿ ಲಕ್ಷಾಂತರ ಕುಟುಂಬಗಳಿಗೆ ನೆರವಾದರು. ಸೇವೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ ಕೆನರಾ ಬ್ಯಾಂಕ್ ಇಂದು ದೇಶದಲ್ಲಿ ೩ನೇ ಅತಿ ದೊಡ್ಡ ಬ್ಯಾಂಕ್ ಆಗಿ ಬೆಳೆದು ನಿಂತಿದೆ. ಬ್ಯಾಂಕುಗಳು ಕೇವಲ ಹಣಕಾಸಿನ ಹೃದಯ ಮಾತ್ರವಲ್ಲದೇ, ಮಾನವೀಯ ಹೃದಯದಿಂದಲೂ ಕಾರ್ಯನಿರ್ವಹಿಸಿ, ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಶ್ರಮಿಸಬೇಕೆಂದು ಹೇಳುತ್ತಿದ್ದ ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಬಡವರಿಗಾಗಿ ಬ್ಯಾಂಕ್ ತೆರೆದ ಕರ್ಮಯೋಗಿ ಎಂದು ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ಹೇಳಿದರು. ಕೆನರಾ ಬ್ಯಾಂಕ್‌ನ ಸಂಸ್ಥಾಪಕ ಅಮ್ಮೆಂಬಳ ಸುಬ್ಬ ರಾವ್ ಪೈ ಅವರ ಜನ್ಮ ದಿನಾಚರಣೆ ಅಂಗವಾಗಿ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ, ಗಂಗೊಳ್ಳಿಯ ಉದ್ಯಮಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್.ಬಿ.ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ತಾಂತ್ರಿಕ ಜಿ.ವಸಂತ ಭಟ್ ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ಪುರೋಹಿತರಾದ ಜಿ.ವೇದವ್ಯಾಸ ಆಚಾರ್ಯ, ಜಿ.ರಾಘವೇಂದ್ರ ಆಚಾರ್ಯ ಮತ್ತು ಜಿ.ನಾರಾಯಣ ಆಚಾರ್ಯ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನದಲ್ಲಿ ಸಹಕರಿಸಿದರು. ಭಾಂಡ್ಯ ಶ್ರೀಕಾಂತ ಪೈ ದಂಪತಿ ಯಜಮಾನಿಕೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ.ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ.ಆಚಾರ್ಯ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಜಕರು, ಸಮಾಜಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿದ ಸಂಶೋಧಕ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಅವರನ್ನು ಗಂಗೊಳ್ಳಿ ಜಿ.ಎಸ್.ಬಿ.ಮಹಿಳಾ ಮಂಡಳಿ ವತಿಯಿಂದ ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ.ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ.ಆಚಾರ್ಯ, ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ ನಾಯಕ್, ಎಂ.ರಾಮಕೃಷ್ಣ ಪೈ ಅವರು ಬಿ.ಶ್ರೀಕಾಂತ ಪೈ ಅವರನ್ನು ಗಂಗೊಳ್ಳಿ ಜಿ.ಎಸ್.ಬಿ.ಮಹಿಳಾ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದರು. ಸುರೇಖಾ ಎಸ್.ಪೈ, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶ್ರಮ ವಹಿಸಿ ಶ್ರದ್ಧೆಯಿಂದ ಕೆಲಸ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ತಿಳಿಸಿದರು ಆಳ್ವಾಸ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶಾತಿ ಕಾರ್ಯಕ್ರಮ – ಆಳ್ವಾಸ್ ಆಗಮನ ೨೦೨೧-೨೨ರ ಸರಣಿ ಕಾರ್ಯಕ್ರಮದ ಏಳನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದಿಂದ ಇಂದು ಸಮಾಜದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಶಿಕ್ಷಣದ ನೆಲೆಯಲ್ಲಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಿದೆ. ಜೀವನದಲ್ಲಿ ಸಂಪ್ರದಾಯಿಕ ಶಿಕ್ಷಣದ ಜತೆಗೆ ಜೀವನ ಶಿಕ್ಷಣವನ್ನು ನಮ್ಮ ದಿನ ನಿತ್ಯದ ಅನುಭವದಿಂದ ಕಲಿಯುವುದು ಮುಖ್ಯ. ದುರಾದೃಷ್ಟವಶಾತ್, ಮನುಷ್ಯ ಇಂದು ಬುದ್ದಿವಂತನಾದಂತೆ ಸಂಬಂಧಗಳು ಸಹಕಾರ ಗುಣ, ಅನ್ಯೋನ್ಯತೆಯ ಭಾವಗಳು ನಮ್ಮಲ್ಲಿ ಕ್ಷೀಣಿಸುತ್ತಾ ಸಾಗಿದೆ. ಪ್ರೀತಿ ವಾತ್ಸಲ್ಯ ನಮ್ಮ ನಡುವೆ ಉಳಿದಿಲ್ಲ. ಬುದ್ದಿಯಿಂದ ಹಣವನ್ನು ಸಂಪಾದಿಸಬಹುದೇ ಹೊರತು, ಹಣದಿಂದ ಬುದ್ದಿಯನ್ನು ಸಂಪಾದಿಸಲು ಸಾಧ್ಯವಿಲ್ಲ ಎಂಬ ಸತ್ಯವನ್ನು ನಾವೆಲ್ಲ ಅರಿಯಬೇಕು. ಮನುಷ್ಯತ್ವವನ್ನು ಕಳೆದುಕೊಂಡು ಎಷ್ಟೂ ವಿದ್ಯೆಯನ್ನು ಸಂಪಾದಿಸಿದರೂ ಅಪ್ರಯೋಜಕ ಎಂದರು. ರಾಷ್ಟ್ರೀಯ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಬೆನ್ನಟ್ಟಿ ನಿರಂತರ ಪ್ರಯತ್ನ ನಡೆಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. 38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದು ಸುಲಭದ ಮಾತಲ್ಲ ವಿದ್ಯಾರ್ಥಿಗಳನ್ನು ಈ ಮಟ್ಟಿಗೆ ಸಿದ್ಧಗೊಳಿಸಿದ ಶಿಕ್ಷ ಪ್ರಭಾ ಅಕಾಡೆಮಿ ಮತ್ತು ಸಾಧಕ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಸಿಎಸ್ ರಮ್ಯಾ ರಾವ್ ಹೇಳಿದರು. ಅವರು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ ಸಿಎಸ್ ತರಬೇತಿ ಸಂಸ್ಥೆಯಲ್ಲಿ ಸಿಎಸ್ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನುಡಿದರು. ಇಂದಿನ ದಿನಮಾಸದಲ್ಲಿ ಸಿಎಸ್ ಕೋರ್ಸುಗಳಿಗೆ ಬೇಡಿಕೆ ಜಾಸ್ತಿಯಾಗಿದ್ದು ವಿಶ್ವದಾದ್ಯಂತ ಅವಕಾಶಗಳು ಕೈ ಬೀಸಿ ಕರೆಯುತ್ತಿದೆ ಕುಂದಾಪುರದಂತಹ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ಜೊತೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಇಂತಹ ಸಾಧನೆಗೆ ಪ್ರೇರಕವಾಗಿದೆ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತದ್ದು, ಮುಂದಿನ ಹಂತದ ಪರೀಕ್ಷೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮನುಷ್ಯರಲ್ಲಿ ಜಾತಿ, ಮತ, ಭೇದ ತೊರೆದು ಸಮಾನತೆ ಸಾರುವ ಕನಕದಾಸರ ಚಿಂತನೆ ಮತ್ತು ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು,ಸಾರ್ವಕಾಲಿಕ ಸತ್ಯ ಆಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಅಂದಿನ ಕಾಲದಲ್ಲಿದ್ದ ಜಾತಿ ಭೇದ ಭಾವಗಳ ಕುರಿತು ಕನಸದಾಸರು ತಮ್ಮ ಕೀರ್ತನೆಗಳಲ್ಲಿ ತಿಳಿಸಿದ್ದು, ಇಂದಿಗೂ ಸಮುದಾಯಗಳಲ್ಲಿ ಈ ಅಸಮಾನತೆ ಕಂಡು ಬರುತ್ತಿದ್ದು, ಕನಕದಾಸರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಅಸಮಾನತೆ ತೊಡೆಯಲು ಸಾಧ್ಯವಿದೆ. ಯಾವುದೇ ವ್ಯಕ್ತಿ ಅಹಂಕಾರದಿAದ ಶ್ರೇಷ್ಠನಾಗಲು ಸಾಧ್ಯವಿಲ್ಲ ಎಂಬುದನ್ನು ತಮ್ಮ ರಾಮ ಧಾನ್ಯ ಚರಿತ್ರೆ ಕೃತಿಯ ಮೂಲಕ ಮಾನವಕುಲಕ್ಕೆ ತಿಳಿಸಿದ್ದಾರೆ ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್, ಉಡುಪಿಗೂ ಕನಕದಾಸರಿಗೂ ಅವಿನಾಭಾವ ಸಂಬಧವಿದೆ ಎಂದರು. ಕನಕದಾಸರ ಜೀವನ ಮತ್ತು ವ್ಯಕ್ತಿತ್ವದ ಕುರಿತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಾ ನಾಯಕರ ಸಂಘಟಿತ ಹೋರಾಟದಿಂದ ಕಾಂಗ್ರೆಸ್ ಪಕ್ಷ ಮತ್ತೆ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಸೋಮವಾರ ಇಲ್ಲಿನ ವೈಷ್ಣವಿ ಕಾಂಪ್ಲೆಕ್ಸ್‌ನಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿ ಉದ್ಘಾಟಿಸಿ ಶುಭಹಾರೈಸಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಆರಂಭಿಸಲಾಗಿದ್ದು ಪ್ರತಿ ಕ್ಷೇತ್ರದಲ್ಲಿ ಏಳು ಸಾವಿರ ಸದಸ್ಯರುನ್ನು ನೊಂದಾಯಿಸುವ ಗುರಿ ಹೊಂದಲಾಗಿದೆ ಎಂದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೇರಲು ಎಲ್ಲಾ ಕಾರ್ಯಕರ್ತರ ಬೆಂಬಲ ಬಹುಮುಖ್ಯ. ನೂತನ ಕಛೇರಿ ಆರಂಭದ ಜೊತೆಗೆ ಮುಂಬರುವ ಚುನಾವಣೆಗೆ ಒಗ್ಗಟ್ಟಾಗಿ ಹೋರಾಡಿ ಗೆಲ್ಲುವ ಬಗ್ಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯರುಳಾದ ರಘುರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಲಾಯಿತು. ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ ಅಧ್ಯಾಪಕ ವೃಂದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಭರಿಸಿ ಉಚಿತವಾಗಿ ನೋಟು ಪುಸ್ತಕಗಳನ್ನು ಕೂಡ ವಿತರಿಸಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೈಂದೂರು ತಾಲೂಕಿನ ತ್ರಾಸಿ ವಲಯದ ಗುಜ್ಜಾಡಿ ನಾಗದೇವತೆ ಜ್ಞಾನವಿಕಾಸ ಕೇಂದ್ರದಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ತಾಲೂಕಿನ ಅರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ ಅವರು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ಕಾಯಿಲೆ ಹಾಗೂ ಅದರಿಂದ ರಕ್ಷಣೆ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಮನೆಯ ಸುತ್ತಮುತ್ತಲಿನ ಪ್ರದೇಶ ಮತ್ತು ಮನೆಯನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ಶುಗರ್ ಮತ್ತು ರಕ್ತದೊತ್ತಡ ಪರೀಕ್ಷೆಯನ್ನು ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಶುಭ ಹಾರೈಸಿದರು. ಮರವಂತೆ ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ಅನಿಸ್ಕರಿ ಅರೋಗ್ಯ ತಪಾಸಣೆ ನಡೆಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಧಿಕಾರಿ ಗೀತಾ, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್. ಸೇವಾಪ್ರತಿನಿಧಿ ಮಹಾಲಕ್ಷ್ಮೀ, ಸಂಯೋಜಕಿ ವೀಣಾ, ಆಶಾ ಕಾರ್ಯಕರ್ತೆ ಜ್ಯೋತಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ತರಬೇತುದಾರರಾದ ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು. ಶ್ಯಾಮ್ ಜಿ. ಪೂಜಾರಿ (ಕಟಾ ಬೆಳ್ಳಿ )ರೋನಕ್ ಖಾರ್ವಿ (ಕಟಾ ಕಂಚು ) ಸೆನ್ ಸಾಯಿ. ಟಿ. ಶಶಾಂಕ ಶೆಣೈ (ತರಬೇತುದಾರರು- ಕಟಾ ಚಿನ್ನ )ಸಾನ್ವಿ ಖಾರ್ವಿ (ಕಟಾ ಕಂಚು, ಕುಮಿಟಿ ಕಂಚು )ವೃತಿಕಾ ಖಾರ್ವಿ (ಕಟಾ ಕಂಚು ) ಅಕ್ಷತಾ ಖಾರ್ವಿ (ಕುಮಿಟಿ ಬೆಳ್ಳಿ, ಕಟಾ ಕಂಚು ).ಕೌಶಿಕ್ ಖಾರ್ವಿ (ಕುಮಿಟಿ ಬೆಳ್ಳಿ, ಕಟಾ ಕಂಚು ) ಶ್ರೀ ಶಾನ್ ಖಾರ್ವಿ (ಕಟಾ ಚಿನ್ನ ಕುಮಿಟಿ ಕಂಚು…

Read More