ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.02: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ . ಹಾಗೂ ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?ಪಬ್ ಗಳಿಗೆ ಅನುಮತಿ ಇರುವುದಿಲ್ಲಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ. ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದುಳಿದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖೆಗಳ ಅಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಇಲ್ಲಿ ಬುಧವಾರ ಅವರು ಅಧಿಕಾರಿಗಳ ಸಭೆಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದರು. ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚುರುಕು ಮುಟ್ಟಿಸಿದರು. ಮುಂದುವರಿದು ಮಾತನಾಡಿ ಜವುಳಿ ಪಾರ್ಕ್, ಪೀಠೋಪಕರಣ ತಯಾರಿ ಸಂಕೀರ್ಣ, ಕ್ರೀಡಾ ಸಂಕೀರ್ಣ, ನ್ಯಾಯಾಲಯ, ಕ್ರೀಡಾಂಗಣ, ವಸತಿ ಶಾಲೆಗಳೀಗೆ ಜಮೀಣು ಗುರುತಿಸಬೇಕು. ಮೂಕಾಂಬಿಕಾ ವನ್ಯಪ್ರಾಣಿ ಸಂರಕ್ಷಣಾ ತಾಣ, ಮರಿನಾ, ಬೀಚ್ವಾಕ್, ಉದ್ಯಾನ, ವಿಶ್ರಾಂತಿ ತಾಣ ನಿರ್ಮಾಣ ಯೋಜನೆಗಳು ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ವೈದ್ಯಕೀಯ ಕಾಲೇಜಿಗೆ ಹಣ ಹೂಡಲು ಒಬ್ಬರು ಮುಂದಾಗಿದ್ದು, ಅದಕ್ಕೂ ಸ್ಥಳ ಮೀಸಲಿಡಲು ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅಗತ್ಯ ಎನಿಸಿದರೆ, ಹಣ ಮಂಜೂರು ಮಾಡಲಾಗುವುದು ಎಂದರು. ಕಂದಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆಎಸ್ಐಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್ನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಹಿಂದೂಳಿದ ಮತ್ತು ಸಮಾಜ ಕಲಾಖ್ಯ ಕಲ್ಯಾಣಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಐ.ಐ.ಡಿ.ಸಿ) ನಿರ್ದೇಶಕ ಸಿ. ಆರ್. ಗಾಯತ್ರಿದೇವಿ, ಕರ್ನಾಟಕ ಬಾಲ ಭವನ ಬೆಂಗಳೂರು ಇದರ ನಿರ್ದೇಶಕರಾದ ಪದ್ಮಿನಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಜಿಡ್ಡು, ಜಿಪಂ ಮಾಜಿ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ, ರಾಜ್ಯ ಯೋಜನಾ ಆಯೋಗ ಮಂಡಳಿಯ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್ ಮೊದಲಾದವರು ಉಪಸ್ಥಿತರಿದ್ದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಿ. ವೈ. ರಾಘವೇಂದ್ರ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ರಜತಾದ್ರಿಯ ಇಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹೆಚ್ಚಿನ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀಸಲಿಡಲಾಯಿತು ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ, ಆದರೆ ಕೋವಿಡ್ ನಿಂದ ಜಿಲ್ಲೆಯಲ್ಲಿ ಹೆಚ್ಚು ಸಾವುಗಳು ಸಂಭವಿಸದAತೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿAದ, ಸೋಂಕು ಹೆಚಿದ್ದರೂ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು. ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃಧ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ,ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದ್ರ ಫೌಂಡೇಶನ್, ಚಂಡೀಗಢ ಆಯೋಜಿಸಿದ್ದ ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆಯಲ್ಲಿ ಚೇತನ್ ಕುಮಾರ್ ಹಳ್ಳಿಹೊಳೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿರುವ ಚೇತನ್, ದೃಶ್ಯ ಕಲಾ ವಿಭಾಗದ ಅಂತಿಮ ವರ್ಷದ ಬಿ.ವಿ.ಎ ಪದವಿ ವ್ಯಾಸಂಗ ನಡೆಸುತ್ತಿದ್ದಾರೆ. ಚೇತನ್ ಲಾಕ್ ಡೌನ್ ಅವಧಿಯನ್ನು ಸದುಪಯೋಗ ಪಡಿಸಿಕೊಂಡು ಹಲವು ಕಲಾಕೃತಿಗಳನ್ನು ರಚಿಸಿ ಮೆಚ್ಚುಗೆಗಳಿಸಿದ್ದರು. ಇವರು ಹಳ್ಳಿಹೊಳೆಯ ಚಂದ್ರಶೇಖರ್ ನಾಯಕ್ ಮತ್ತು ರತ್ನಾ ದಂಪತಿಗಳ ಪುತ್ರರಾಗಿದ್ದಾರೆ. ಇದನ್ನೂ ಓದಿ:► ಕಮಲಶಿಲೆ ಪಾರೆಯಲ್ಲಿ ಗಮನಸೆಳೆಯುತ್ತಿರುವ ಕಡವೆ ಕಲಾಕೃತಿ – https://kundapraa.com/?p=46245 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್.ಕೆ.ಪಿ.ಎ) ಕುಂದಾಪುರ ವಲಯದ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಬೈಂದೂರು ಆಯ್ಕೆ ಆಗಿದ್ದಾರೆ. ವಲಯದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕರ್ ಮೆಂಡನ್, ಕೋಶಾಧಿಕಾರಿಯಾಗಿ ವಿಠ್ಠಲ್ ನಾಗೂರು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ದೇವಾಡಿಗ ಉಪ್ಪುಂದ, ಪ್ರಕಾಶ್ ಹೆಗ್ಡೆ ಅಮಾಸೆಬೈಲು, ಚಂದ್ರಕಾಂತ್ (ಚನ್ನ ), ರಾಘು ಭಟ್ ವಂಡ್ಸೆ ಹಾಗೂ ಸಲಹಾ ಸಮಿತಿ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನ ಮಠ ಆಯ್ಕೆಯಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಲಾದ ‘ ಭಾರತ ಬಿಟ್ಟು ತೊಲಗಿ ಆಂದೋಲನ’ ಎಂಬ ವಿಷಯವಾಗಿ ನಿವೃತ್ತ ಪ್ರಾಂಶುಪಾಲರಾದ ಡಾ ದಿನೇಶ್ ಹೆಗ್ಡೆ ಉಪನ್ಯಾಸ ನೀಡಿದರು. ಭಾರತ ಬ್ರೀಟಿಷರ ಆಡಳಿತಕ್ಕೆ ಒಳಪಟ್ಟನಂತರ ನಡೆದ ಸ್ವಾತಂತ್ರ್ಯ ಹೋರಾಟದ ಹೆಜ್ಜೆಗಳನ್ನು ಸೂಕ್ಷ್ಮವಾಗಿ ಗುರುತಿಸಿದರು. ಸಾತಂತ್ರ್ಯ ಸಂಗ್ರಾಮದ ಚಳುವಳಿಯಲ್ಲಿ ‘ ಭಾರತ ಬಿಟ್ಟು ತೊಲಗಿ ಆಂಧೋಲನ’ ಅತ್ಯಂತ ಪ್ರಮುಖವಾದುದು ಮಾತ್ರವಲ್ಲ, ಅದು ಕೊನೆಯ ಘಟ್ಟವಾಗಿ ಪರಿಣಮಿಸಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಬಂಗಾಳ ವಿಭಜನೆ, ಅದರಿಂದ ಭಾರತೀಯರಮೇಲೆ ಆದ ಪರಿಣಾಮ ಮತ್ತು ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿ, ಸ್ವಾತಂತ್ರ್ಯಚಳುವಳಿಯಲ್ಲಿ ಭಾಗವಹಿಸಿದ ಪ್ರಾರಂಭದ ದಿನಗಳು ಹೇಗಿದ್ದವು ಎಂಬುದನ್ನು ತಿಳಿಸಿದರು. 1909 ರ ಮೋರ್ಲೆ ಮಿಂಟೋ ಸುಧಾರಣೆಗಳು, 1935 ರ ಗವರ್ನಮೆಂಟ್ ಆಫ್ ಇಂಡಿಯಾ ಕಾಯ್ದೆ , ಹಾಗೂ ಇಂತಹ ಹಲವಾರು ಕಾಯ್ದೆಗಳನ್ನು ಜಾರಿಗೊಳಿಸಿ, ಇವುಗಳೊಂದಿಗೆ ಶಿಕ್ಷಣದಲ್ಲಿ ಹಲವಾರು ಬದಲಾವಣೆಗಳನ್ನು ಮಾಡುವದರ ಮೂಲಕ ಭಾರತೀಯರ ಮನವೊಲಿಸುವ ಪ್ರಯತ್ನಗಳು ನಡೆದುದರ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ ಅವಧಿಯ ಸೇವೆಯನ್ನು ಹಳೆ ಪಿಂಚಣಿಗೆ ಪರಿಗಣಿಸುವ ನಿಟ್ಟಿನಲ್ಲಿ ವಿಶೇಷ ವಿಧೇಯಕ ತಿದ್ದುಪಡಿಗೆ ಶಿಫಾರಸು ಮಾಡುವಂತೆ ಸಚಿವರನ್ನು ವಿನಂತಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜೆಓಸಿ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಹೆರಂಜಾಲು ಶ್ರೀಧರ ಗಾಣಿಗ, ದುರ್ಪಜೆ ಸುರೇಶ್ ಭಟ್, ಮುಂಡ್ಲಿ ಗುಣಪಾಲ ಜೈನ್ ಅವರು ಸಚಿವರನ್ನು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಿದರು. ಸಂಘದ ಕಾರ್ಯದರ್ಶಿ ದಿನಕರ್ ಪ್ರತಿನಿಧಿಗಳಾದ ನಿತ್ಯಾನಂದ ಬಿ ಶೆಟ್ಟಿ, ಶರ್ಮಿಳಾ ರಾವ್ ಪೂರ್ಣಿಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ನಿವಾಸಿ, ಉದ್ಯಮಿ ಮಂಜುನಾಥ ಶೇರುಗಾರ್ (63) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೈಂದೂರು ಬಾಡದ ಮಗಳ ಮನೆಗೆ ಬಂದಿದ್ದ ಮಂಜುನಾಥ್ ಅವರು ಮರಳಿ ಕೊಲ್ಲೂರಿಗೆ ತೆರಳುವ ಸಂದರ್ಭ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಬೈಂದೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೌಕರರಾಗಿದ್ದ ಅವರು ಸ್ವಯಂ ನಿವೃತ್ತಿ ಹೊಂದಿ ದೇವಸ್ಥಾನದ ಸಮೀಪ ವಿಧಾತ್ರಿ ಲಾಡ್ಜ್ ನಡೆಸುತ್ತಿದ್ದರು. ಅವರು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಸದಸ್ಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿ ಮಣಿಪಾಲದ ಎಂಐಟಿಯ ಪ್ರೊಫೆಸರ್ ಪ್ರೊ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಕರುಣಾಕರ ಕೋಟೆಗಾರ್ ಅವರು ಎಂಐಟಿ ಮಣಿಪಾಲದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿದ್ದು, ಕಳೆದು 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಜುಲೈ 2020ರಂದು ನೇಮಗೊಂಡಿದ್ದರು. ಅವರು ಇತ್ತಿಚಿಗೆ ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ಸರಣಿ ವೀಡಿಯೋವನ್ನು ಮಂಗಳೂರು ವಿಶ್ವವಿದ್ಯಾನಿಲಯ ವೆಬ್ಸೈಟ್ ಮೂಲಕ ಬಿಡುಗಡೆಗೊಳಿಸಿದ್ದರು. ಕುಂದಾಪ್ರ ಡಾಟ್ ಕಾಂ ಮೂಲಕವೂ ವೀಡಿಯೋ ಸರಣಿ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವೀಡಿಯೋ ಸರಣಿ ಮಾಡಿದ್ದರು. ಇದನ್ನೂ ಓದಿ:► ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ಡಾ. ಕರುಣಾಕರ ಕೊಟೇಗಾರ್ ನೇಮಕ – https://kundapraa.com/?p=39338 .
