ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿಘೇಶ್ವರ ಯುವಕ ಮಂಡಲ ಬೆಟ್ಟಾಗರ ಇದರ 2021-2022ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಿಶೋರ್, ಕಾರ್ಯದರ್ಶಿಯಾಗಿ ಸುಶಾಂತ್, ಜೊತೆ ಕಾರ್ಯದರ್ಶಿಯಾಗಿ ಗುರುರಾಜ್, ಕೋಶಾಧಿಕಾರಿಯಾಗಿ ಮನೋಹರ್, ಜಯರಾಮ, ಕ್ರೀಡಾ ಕಾರ್ಯದರ್ಶಿಯಾಗಿ ನಿತೀಶ್, ದಿನೇಶ್ ದೋಣಿಮನೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಾಸು, ಗಿರೀಶ್, ಲೆಕ್ಕ ಪರಿಶೋಧಕರಾಗಿ ವಿಜೇಂದ್ರ ಪೂಜಾರಿ, ಗುರುರಾಜ್, ದಿನೇಶ್, ನಿರ್ದೇಶಕರುಗಳಾಗಿ ಮಹೇಂದ್ರ ಪೂಜಾರಿ, ಪ್ರದೀಪ್ ಪೂಜಾರಿ, ರವಿ ಗೋದಾವರಿ, ಪ್ರವೀಣ್ ಪೂಜಾರಿ, ಗೋಪಾಲ್ ಪೂಜಾರಿ, ನಾರಾಯಣ ಪೂಜಾರಿ, ಅಣ್ಣಪ್ಪ ಮೆಂಡನ್, ಶಿವ ದೋಣಿಮನೆ, ನಾಗೇಂದ್ರ ಕಾಂಚನ್, ಕೃಷ್ಣಾನಂದ್ ಶ್ಯಾನುಭಾಗ ಆಯ್ಕೆಯಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಬದುಕು ಒಂದು ದಂತಕಥೆಯಾಗಿದ್ದು, ಅವರ ಹೊಸತನದ ತುಡಿತ ಅವರ ಬದುಕಿನ ಒಂದು ವೈಶಿಷ್ಟ್ಯ, ಅವರ ಕೈಕೊಳ್ಳುತ್ತಿದ್ದ ಪ್ರವಾಸಗಳಲ್ಲಿ ಸಂಶೋಧಕರರಾಗಿ ಹೊಸತನದ ಅನ್ವೇಷಕರಾಗಿ ಬದುಕಿದವರು. ಕಾರಂತರು ವಿದ್ಯಾರ್ಥಿಗಳಿಗಾಗಿ ಸಮಯವನ್ನು ಕೊಡುತ್ತಿದ್ದು ಶಾಲಾ ಪ್ರವಾಸದಲ್ಲಿ ಅವರ ಅನುಭವನ್ನು ಅವರಲ್ಲಿ ತುಂಬಿ ಜ್ಞಾನಾರ್ಜನೆಯ ಸೂರ್ಯನಂತೆ ಮೂಡುತ್ತಿದ್ದರು. ಕಾರಂತರ ಸಿಡಿಮಿಡಿ ಕಾರಂತರ ಮೌಲ್ಯಗಳ ಒಂದು ಅಂಗವೇ ಸರಿ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ17ನೇ ವರುಷದ ಸಂಭ್ರಮದ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ನುಡಿ ಚೇತನದಲ್ಲಿ ಮಾತನಾಡುತ್ತಿದ್ದರು. ಕಾರಂತರು ಮಾನವೀಯ ಮೌಲ್ಯಗಳಿಗೆ ಬೆಲೆ ಕೊಟ್ಟ ಕವಿ ಹೃದಯಿ, ಸಮಯ ಪಾಲನೆಯಲ್ಲಿ ಅವರಿಗಿದ್ದ ನಿಷ್ಠೆ ನಮಗೆ ಮಾದರಿ, ಯಕ್ಷಗಾನಕ್ಕೆ ಕಾರಂತರು ಜೀವಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.4: ತಾಲೂಕಿನ ಯಳಜಿತ್ ಗ್ರಾಮದ ಗುಳ್ನಾಡಿ ಹಾಡಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ವೀಟ್ ಜುಗಾರಿ ಆಡುತ್ತಿದ್ದ 15 ಮಂದಿಯನ್ನು ಬೈಂದೂರು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಇಸ್ಪೀಟ್ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ತೆರಳಿದ ಪೊಲೀಸರು ಸ್ಥಳವನ್ನು ಸುತ್ತುವರಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ರಾಘವೇಂದ್ರ ಪೂಜಾರಿ, ಮೋಹನ ಕೊಠಾರಿ, ದಯಾನಂದ ಗೌಡ, ಗಣಪತಿ ಗೌಡ , ರಾಘವೇಂದ್ರ ದೇವಾಡಿಗ, ಚಂದ್ರ ನಾಯ್ಕ, ಗಣೇಶ ನಾಯ್ಕ, ರಮೇಶ ನಾಯ್ಕ, ಕರುಣಾಕರ ಕೊಠಾರಿ, ಸಂತೋಷ ಕೊಠಾರಿ, ಮಧು ಬಳೆಗಾರ, ಸುಧಾಕರ ಕೊಠಾರಿ, ದಿನೇಶ ಕೊಠಾರಿ, ಕೃಷ್ಣ ಗೌಡ, ಜಯಾ ಗೌಡ ಎಂಬುವವರನ್ನು ವಶಕ್ಕೆ ಪಡೆದಿದ್ದು, ಜೂಜಾಟಕ್ಕೆ ರೂ.10,400 ನಗದು ಉಪಯೋಗಿಸಿರುವ ಬಗ್ಗೆ ವಿಚಾರಣೆ ತಿಳಿದು ಬಂದಿದೆ. ಕಾರ್ಯಾಚರಣೆಯಲ್ಲಿ ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್, ಪೊಲೀಸ್ ಸಿಬ್ಬಂದಿಗಳಾದ ನಾಗೇಶ್ ಗೌಡ, ಅಶೋಕ್ ರಾಥೋಡ್, ಕಲ್ಲೊಲಪ್ಪ ಭಜಂತ್ರಿ, ಪರಯ್ಯ ಮಟಪತಿ, ಶ್ರೀಧರ ಪಾಟೀಲ್ ಭಾಗವಹಿಸಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳು ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ರಾಜೇಶ್ ಎಂ. ಜಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಯಂಸೇವಕರನ್ನುಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸಹಬಾಳ್ವೆ ಭಾವೈಕ್ಯತೆ ಜಾತ್ಯಾತೀತ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಉಪನ್ಯಾಸಕರಾದ ವೆಂಕಟೇಶಮೂರ್ತಿ ಎನ್.ಸಿ, ಶ್ರೀಪತಿ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಭಾಕರ್ ಪೈ ಮತ್ತು ದೀಕ್ಷಾ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಕ್ಷಿತಾ ಆರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲೆಗಳ ಅಭಿವೃದ್ಧಿ ದೇವಸ್ಥಾನದ ಅಭಿವೃದ್ಧಿಯಷ್ಟೇ ಪುಣ್ಯದ ಕೆಲಸ, ನಾವು ವಿದ್ಯಾರ್ಜನೆಗೈದ ಶಾಲೆಗಳಿಗೆ ನಮ್ಮಿಂದಾದ ನೆರವು ನೀಡಿದಾಗ ಶಾಲೆ ಅಭಿವೃದ್ಧಿ ಜೊತೆಗೆ ಮಕ್ಕಳಿಗೂ ಕಲಿಕೆಗೆ ಸಹಕಾರವಾಗುತ್ತದೆ. ಊರಿನ ಸಂಘಟನೆಗಳು ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಬಗ್ಗೆ ಆಸಕ್ತಿ ವಹಿಸಬೇಕು, ಶಾಲೆಗಳ ಅಭಿವೃದ್ಧಿಯಲ್ಲಿ ಸಂಘಟನೆಯ ಪಾತ್ರ ಬಹು ಮುಖ್ಯವಾಗಿದೆ ಎಂದು ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ವತಿಯಿಂದ ಯಡ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ವಿತರಣೆ ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಶಾಂತ ಪೈ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಂತ ಪೈ ಅವರು ಹಳ್ಳಿ ಕಡೆ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿರುವುದನ್ನು ಕಾಣುತ್ತಿದ್ದೇವೆ, ಅವರಿಗೂ ಗುಣಮಟ್ಟದ ಶಿಕ್ಷಣ ನೀಡಿ ಪ್ರೋತ್ಸಾಹಿಸಿದಾಗ ಅವರು ಸಾಧನೆ ಮಾಡಲು ಸಾಧ್ಯ, ಈ ನಿಟ್ಟಿನಲ್ಲಿ ಯುವವಾಹಿನಿ (ರಿ)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಶಾಖೆಯ 21-22ನೇ ಸಾಲಿನ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಇಲ್ಲಿನ ಹೋಟೆಲ್ ಶೆರೋನ್ನಲ್ಲಿ ನಡೆಯಿತು. ಕುಂದಾಪುರದ ಎಲುಬು ಕೀಲು ತಜ್ಞರಾದ ಡಾ. ಸಂದೀಪ ನಾವಡ ಅವರು ಸಂಸ್ಥೆಯ ಅಧ್ಯಕ್ಷರಾಗಿ, ಮನೋರೋಗ ತಜ್ಞ ಡಾ. ರವೀಂದ್ರ ಮನೋಳಿ ಕಾರ್ಯದರ್ಶಿಯಾಗಿ, ಮಕ್ಕಳ ತಜ್ಞ ಡಾ. ಗಣೇಶ್ ಪ್ರಸಾದ್ ಕಾಮತ್ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪದಗ್ರಹಣ ಅಧಿಕಾರಿ ಡಾ. ಭಾಸ್ಕರಾನಂದ ಕುಮಾರ, ಡಾ. ಕೆ.ಎಸ್ ಕಾರಂತ್, ಡಾ. ಬಿ.ವಿ ಉಡುಪ, ಡಾ. ಶ್ರೀದೇವಿ ಕಟ್ಟೆ ಡಾ. ಪ್ರಮೀಳಾ ನಾಯಕ್ ಡಾ. ರೆನಿ ವಿಲ್ಸನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಪಡೆದ ನಿವೃತ್ತ ಉಪನ್ಯಾಸಕ, ಪತ್ರಕರ್ತ ಎಸ್. ಜನಾರ್ದನ ಅವರನ್ನು ಸುರಭಿ ಬೈಂದೂರು ಸಂಸ್ಥೆಯಿಂದ ಭಾನುವಾರ ಸನ್ಮಾನಿಸಲಾಯಿತು. ಅವರ ಮರವಂತೆಯ ನಿವಾಸದಲ್ಲಿ ಸುರಭಿ ಅಧ್ಯಕ್ಷ ನಾಗರಾಜ್ ಪಿ. ಯಡ್ತರೆ ಹಾಗೂ ಕಾರ್ಯದರ್ಶಿ ಭಾಸ್ಕರ ಬಾಡ ಹಾಗೂ ಪದಾಧಿಕಾರಿಗಳೂಂದಿಗೆ ಸನ್ಮಾನಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಕುಂದಾಪುರ ಹಾಗೂ ಬೈಂದೂರು ವಲಯದ ೭ ಮಂದಿ ಶಿಕ್ಷಕರನ್ನು ರೋಟರಿ ಜಿಲ್ಲೆ 3182, ವಲಯ 1ರ ವತಿಯಿಂದ ರೋಟರಿ ವಲಯದ 8 ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಆತಿಥ್ಯದಲ್ಲಿ ನಡೆದ ವಲಯ ಸಾಕ್ಷರತಾ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರೋಟರಿ ಜಿಲ್ಲಾ ಲೀಟರಸಿ ಚೇರ್ಮನ್ ಕೆ.ಎಸ್. ಸುಬ್ರಮಣ್ಯ ಬಾಸ್ರಿ ಹಾಗೂ ವೈಸ್ ಚೇರ್ಮನ್ ಟಿ. ಬಾಲಚಂದ್ರ ಶೆಟ್ಟಿ ಅವರು ಪ್ರಶಸ್ತಿ ವಿಜೇತ ಶಿಕ್ಷಕರಾದ ಸಂತೋಷ್ ಕುಮಾರ ಶೆಟ್ಟಿ, ಚಂದ್ರ ಎನ್. ಬಿಲ್ಲವ, ಶ್ರೀನಿವಾಸ, ಕೃಷ್ಣಮೂರ್ತಿ ಪಿ., ಸುರೇಶ್ ಶೆಟ್ಟಿ, ಶೇಖರ್ ಗಾಣಿಗ ಮತ್ತು ಗಣೇಶ ಹೇರಳೆ ಅವರನ್ನು ಸನ್ಮಾನಿಸಿ ಗೌರವಿಸಿದರು. ರೋಟರಿ ಗಂಗೊಳ್ಳಿ ಅಧ್ಯಕ್ಷ ರಾಜೇಶ್ ಎಂ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ್ ಶೆಟ್ಟಿ, ತರಬೇತುದಾರ ಸತೀಶ್ ಶೇರುಗಾರ್, ಸಲಹೆಗಾರ ಕೆ. ಕೆ. ಕಾಂಚನ, ವಲಯ ಸೇನಾನಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಬದುಕಿದ ರೀತಿ, ಅವರು ಜೀವಿತಾವಧಿ ನಂತರ ಬಿಟ್ಟು ಹೋದ ಹೆಜ್ಜೆಗುರುತುಗಳು ಮುಂದಿನ ಜನಾಂಗಕ್ಕೆ ದಾರಿ ದೀಪವಾಗಲಿ, ಅವರ ನೆನಪು ಶಾಶ್ವತವಾಗುವ ನಿಟ್ಟಿನಲ್ಲಿ ಕೋಟದ ಕಾರಂತ ಥೀಮ್ ಪಾರ್ಕ್ ಸ್ಥಾಪನೆಯ ಉದ್ದೇಶ ಸಾಕಾರಗೊಳ್ಳುತ್ತಿರುವುದು ಸಂಭ್ರಮದ ವಿಷಯ ಎಂದು ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹಿತ್ಯಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದಲ್ಲಿ ನುಡಿ ಚೇತನದಲ್ಲಿ ಮಾತನಾಡಿದರು. ಕಾರಂತ ಸಮಾಧಿ ನಿರ್ಮಾಣವಾಗಲಿ:ಕಾರಂತರು ನಮ್ಮೊಳಗಿನ ಮಹಾನ್ ಚೈತನ್ಯ ಅವರ ಅಂತ್ಯ ಸಂಸ್ಕಾರವಾದ ಸ್ಥಳದಲ್ಲಿ ಸಮಾಧಿ ನಿರ್ಮಾಣವಾಗಿ ಕಾರಂತ ಅಭಿಮಾನಿ-ಸಾಹಿತ್ಯ ಪ್ರೇಮಿಗಳಿಗೆ ನೋಡುವ ಭಾಗ್ಯ ಸಿಗಲಿ ಎಂದು ಹೇಳಿದರು. ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ಸ್ವಚ್ಚ ಭಾರತ್ ಮಿಷನ್ ಟ್ವಿಟರ್ ಖಾತೆಯಲ್ಲಿ ಗಾಂಧಿ ಜಯಂತಿಯ ದಿನದಂದು ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಪಂನ ಕಸ ವಿಲೇವಾರಿ ಪೋಟೋ ಪ್ರಕಟಗೊಂಡಿರುವುದು ಗಮನ ಸೆಳೆದಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ದೇಶದಲ್ಲಿ ಸ್ವಚ್ಛ ಭಾರತ್ ಮಿಷನ್ ೨೦೨೧ರಲ್ಲಿ ೪೩,೬೧೩ ಗ್ರಾಪಂಗಳು ಪ್ಲಾಸ್ಟಿಕ್ ಮಕ್ತಗ್ರಾಮವಾಗಿದೆ ಎಂದು ಉಲ್ಲೇಕಿಸಿ ಅದರಡಿ ವಂಡ್ಸೆ ಗ್ರಾಮದ ಪೋಟೋ ಅಳವಡಿಸಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ಗಣ್ಯರು ಲೈಕ್ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಎಸ್ಎಲ್ಆರ್ಎಂ ಘಟಕ ಆರಂಬಿಸಿದ್ದ ಹೆಗ್ಗಳಿಕೆ ವಂಡ್ಸೆ ಗ್ರಾಮ ಪಂಚಾಯತಿಯದ್ದಾಗಿದೆ. ವೇಸ್ಟ್ ಮ್ಯಾನೇಜ್ಮೆಂಟ್ನಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಹೊಂದಿದೆ. ಒಣ ಕಸ, ಹಸಿ ಕಸ ಪ್ರತ್ಯೇಕಿಸಿ, ಅದರಿಂದ ಬರುವ ಲಾಭದಲ್ಲಿ ನಡೆಯುತ್ತಿರುವ ಏಕೈಕ ಪೂರ್ಣ ಪ್ರಮಾಣದ ಘಟಕ ನಮ್ಮದು. ದೇಶದ ನಾನಾ ಕಡೆಯ ತಜ್ಞರು ಘಟಕಕ್ಕೆ ಭೇಟಿ ನೀಡಿದ್ದಾರೆ. ಗಾಂಧಿ ಜಯಂತಿಯಂದು ಸ್ವಚ್ಛ ಭಾರತ್ ಟ್ವಿಟರ್ ಖಾತೆಯಲ್ಲಿ ವಂಡ್ಸೆ ಗ್ರಾಪಂನ ಪೋಟೋ…
