ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2020- 21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಇಲ್ಲಿನ ಕೋಡಿ ಬ್ಯಾರೀಸ್ ಪಿಯು ಕಾಲೇಜಿನ 20ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣಗೊಂಡಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಗೊಂಡ ವಿರ್ದ್ಯಾರ್ಥಿಗಳಾದ ಅಮೃತ -98% ಶಮೀಮ್ – 97% ಪ್ರಿಯಾ – 95% ಅಕ್ಷತ – 94% ಸಫ್ನಾಝ್ – 94% ರಕ್ಷಿತಾ – 94%
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಸಿಂಚನ ಟ್ರಸ್ಟ್ ರಿ., ಬೆಂಗಳೂರು ಇದರ ಹನ್ನೆರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಯಕ್ಷಗಾನ ಸಾಹಿತ್ಯಾಸಕ್ತರಿಗಾಗಿ ವಿಶಿಷ್ಟವಾದ ಸ್ಪರ್ಧೆ ಎರ್ಪಡಿಸಲಾಗಿದೆ. ಛಂದೋಬದ್ಧ ಪ್ರಸಂಗಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಈ ಸ್ಪರ್ಧೆಯ ಮೊದಲ ಬಹುಮಾನವು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಎರಡನೇ ಬಹುಮಾನವು 5 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಸಂಗ ರಚನಾ ಸ್ಪರ್ಧೆಯ ನಿಯಮಗಳು: ಪ್ರಸಂಗವು ಪೌರಾಣಿಕ ಪ್ರಸಂಗವಾಗಿರಬೇಕು. ಕಥೆಯ ಎಳೆಯು ಯಾವುದಾದರೂ ಪುರಾಣಗಳಲ್ಲಿ ದಾಖಲಾಗಿರಬೇಕು. ಸ್ಥಳ ಪುರಾಣ ಹಾಗೂ ಕ್ಷೇತ್ರ ಮಹಾತ್ಮೆಯ ಕಥೆಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಕಥೆಯ ಬಗ್ಗೆ ಹಾಗೂ ಬಳಸಿದ ಮೂಲದ ಬಗ್ಗೆ ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ ತಿಳಿಸಬೇಕು ಹಾಗೂ ಕಡ್ಡಾಯವಾಗಿ ಕೊನೆಗೆ ಅದೇ ಕಥೆಯ ಪ್ರಸಂಗವನ್ನು ಸ್ಪರ್ಧೆಗೆ ಕಳುಹಿಸಿಕೊಡಬೇಕು. ಈಗಾಗಲೇ ಪ್ರಕಟನೆ/ಪ್ರದರ್ಶನಗೊಂಡ ಕೃತಿಗಳನ್ನು ಬಳಸುವಂತಿಲ್ಲ. ಸ್ಪರ್ಧೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಪ್ರಸಂಗ ರಚನೆಗೆ 4 ತಿಂಗಳುಗಳ ಕಾಲಾವಕಾಶ ನೀಡಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಛೇರಿಗೆ ನುಗ್ಗಿ ಫೈನಾನ್ಸ್ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ ಕಾಳವಾರ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಯಡಾಡಿ ಮತ್ಯಾಡಿ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಜೇಂದ್ರ ಶೆಟ್ಟಿ ಕಾಳಾವರದಲ್ಲಿ ಅನೂಪ್ ಎಂಬುವವರೊಂದಿಗೆ ಪಾಲುದಾರಿಕೆಯಲ್ಲಿ ಡ್ರೀಮ್ ಫೈನಾನ್ಸ್ ವ್ಯವಹಾರ ನಡೆಸಿಕೊಂಡಿದ್ದರು. ಶುಕ್ರವಾರ ರಾತ್ರಿ ಮನೆಗೆ ಬಂದಿರಲಿಲ್ಲ. ಆತನಿಗೆ ಫೋನ್ ಮಾಡಿದಾಗ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತರಿಗೆ ಫೊನ್ ಮಾಡಿ ರಾತ್ರಿ ಕಾಳಾವರಕ್ಕೆ ಬಂದು ಫೈನಾನ್ಸ್’ನಲ್ಲಿ ನೋಡುವಾಗ ಫೈನಾನ್ಸ್’ನ ರೂಮಿನಲ್ಲಿ ಅಜೇಂದ್ರ ಶೆಟ್ಟಿಯು ಕುಳಿತಲ್ಲಿಯೇ ವಾಲಿಕೊಂಡು ಬಿದ್ದಿದ್ದು, ಆತನ ಕೆನ್ನೆಯ ಬಳಿ ಕಡಿದ ಗಾಯವಾಗಿ ರಕ್ತ ಹರಿಯುತ್ತಿತ್ತು. ಕೂಡಲೇ ಕೋಟೇಶ್ವರ ಎನ್.ಆರ್ ಆಚಾರ್ಯ ಆಸ್ವತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಅಜೇಂದ್ರನನ್ನು ಪರೀಕ್ಷಿಸಿದಾಗ ಮೃತಪಟ್ಟಿದ್ದರು. ಕಳೆದ ಐದು ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಫೈನಾನ್ಸ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವ್ಯವಹಾರ ವಿಚಾರದಲ್ಲಿ ನಡೆದಿರಬಹುದೆಂದು ಅಂದಾಜಿಸಲಾಗಿದೆ. ನಿಖರ ಕಾರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಪುಸ್ತಕಕ್ಕೆ ತುಮಕೂರಿನ ಪ್ರತಿಷ್ಠಿತ ಸಂಸ್ಥೆ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ. ವೈವಿಧ್ಯಮಯವಾದ ಪ್ರೇರಣಾತ್ಮಕ ಅಂಕಣ ಬರಹಗಳನ್ನು ಒಳಗೊಂಡಿರುವ ಈ ಕೃತಿ ಓದುಗ ವಲಯದಲ್ಲಿ ಬಹಳಷ್ಟು ಜನಪ್ರಿಯತೆ ಪಡೆದಿದೆ. ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕ ತುಮಕೂರು ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಡಾ. ಶಿವರಾಜ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ, ಜಿಲ್ಲಾ ಕಚೇರಿಯ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ, ಯುವ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಾವಣೆಯಾಗಿರುವ ಯುವಕ, ಯುವತಿ ಮಂಡಳಿಗಳು, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. 2020-21 ನೇ ಸಾಲಿನಲ್ಲಿ ಗ್ರಾಮ, ಪಟ್ಟಣ ಹಾಗೂ ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ (ಮಾಹಿತಿಯು 2020 ಏಪ್ರಿಲ್ 01 ರಿಂದ ಪ್ರಸಕ್ತ ಸಾಲಿನ ಮಾರ್ಚ್ 31ರ ಒಳಗಿರಬೇಕು), ಯುವ ಮಂಡಳಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಲ್ಲ್ಫ್ರೆಡ್ ಡಿ ಸೋಜ, ಜಿಲ್ಲಾ ಯುವಜನ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ದೂ.ಸಂಖ್ಯೆ: ಉಡುಪಿ: 0820-2574992 ಅನ್ನು ಸಂಪರ್ಕಿಸುವಂತೆ ನೆಹರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಯುಜಿಡಿ ಕಾಮಗಾರಿ ವೆಟ್ವೆಲ್ ನಿರ್ಮಿಸಲು ನಿರುಪಯುಕ್ತ ಹೊಳೆ ಬದಿ ಖರೀದಿಸಿರುವ ಸರ್ಕಾರವು ದುಪ್ಪಟ್ಟು ಹಣ ಪಾವತಿಸಿದೆ. ಜಾಗದ ನಷ್ಟ ಪರಿಹಾರ ಎಂದು ತೋರಿಸಿ ಒಟ್ಟು 95 ಲಕ್ಷ ಜಾಗದ ಮಾಲೀಕರಿಗೆ ಸಂದಾಯ ಮಾಡಿರುವ ಹಿಂದೆ ಅಕ್ರಮ ನಡೆದಿರುವ ಶಂಕೆ ಇದೆ ಎಂದು ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ಆರೋಪಿಸಿದ್ದಾರೆ. ಪುರಸಭೆ ಸದಸ್ಯರ ಗಮನಕ್ಕೆ ತರದೇ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯ ಮಾಡಿರುವ ಹಿಂದಿನ ಮರ್ಮವೇನು? ಈ ಕುರಿತು ಸಮಗ್ರ ತನಿಖೆ ನಡೆಸಬೇಕು, ಸಾರ್ವಜನಿಕರ ತೆರಿಗೆ ಹಣ ಈ ರೀತಿಯಾಗಿ ಫೋಲಾಗಬಾರದು ಎಂದು ಧ್ವನಿ ಎತ್ತಿದ್ದರೂ ಯಾಕೆ? ಕೋವಿಡ್ ಸಂದರ್ಭದಲ್ಲಿ ತರಾತುರಿಯಲ್ಲಿ ಜಾಗ ಖರೀದಿ ಮಾಡಿ ಪುರಸಭೆ ಸದ್ಯಸರ ಗಮಕ್ಕೆ ತರದೇ, ರಿಜಿಸ್ಟರ್ ಮಾಡಿದರ ಹಿಂದಿನ ಗುಟ್ಟೇನು? ಕೇವಲ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯಾಗಿದೆ ಅನ್ನುವುದರ ಬಗ್ಗೆ ಆಡಳಿತ ಪಕ್ಷದ ಸದಸ್ಯ ಗಿರೀಶ್ ದೇವಾಡಿಗ ಹಾಗೂ ಸ್ವಪಕ್ಷದವರು ಧ್ವನಿ ಎತ್ತಿದ್ದು ಶ್ಲಾಘನೀಯ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ, ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ , ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾದಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿಶಾಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ , ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು , ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವಾ ಮನೋಭಾವನೆಯಿಂದ ಲಭಿಸುವ ಯಶಸ್ಸು ಶಾಸ್ವತವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 116 ವರ್ಷಗಳಿಂದ ವಿಶ್ವದಾದ್ಯಂತ ಸೇವಾಕಾರ್ಯದಲ್ಲಿ ತೊಡಗಿರುವ ರೋಟರಿಯಲ್ಲಿ ಸದಸ್ಯರಾಗಿ ಕಾರ್ಯೊನ್ಮುಖರಾದರೆ ಸಮಾಜಕ್ಕೆ ಉತ್ತಮ ಸೇವೆ ನೀಡಲು ಸಹಕಾರಿಯಾಗುವುದು. ಹಾಗೆಯೇ ಕಷ್ಟದಲ್ಲಿರುವವರನ್ನು ಗುರುತಿಸಿ ತಕ್ಷಣ ಅಂತವರನ್ನು ಸ್ಪಂದಿಸಿ ಸ್ವಲ್ಪ ಮಟ್ಟಿನ ಪರಿಹಾರ ನೀಡಿದರೆ ಸೇವೆಯಲ್ಲಿ ಸಾರ್ಥಕತೆ ಕಾಣಬಹುದು ಎಂದು ರೋಟರಿ ವಲಯ ಒಂದರ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು, ಯಡ್ತರೆ ಬಂಟರ ಭವನದಲ್ಲಿ ನಡೆದ 2021-22ನೇ ಸಾಲಿನ ಬೈಂದೂರು ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು. ಪ್ರತಿಯೊಂದಲ್ಲಿಯೂ ಸಮಯಪ್ರಜ್ಞೆ ಮತ್ತು ಶಿಸ್ತಿನ ಸೇವಾ ಕಾರ್ಯಾಚರಣೆ ಮೂಲಕ ಸಾಗುತ್ತಿರುವ ರೋಟರಿಯು ಜನರ ನಂಬಿಕೆಗೆ ಪಾತ್ರವಾಗಿದೆ. ಸೇವಾಕಾಂಕ್ಷಿ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಕ್ರೂಢಿಕರಿಸಿ ಅವರಲ್ಲಿ ಶ್ರೇಷ್ಠ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸಂಸ್ಥೆಯ ಪಾತ್ರ ದೊಡ್ಡದಿದೆ ಎಂದ ಅವರು, ಪ್ರಾಮಾಣಿಕವಾಗಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನ ಗುರುತಿಸುತ್ತಾರೆ. ಒಬ್ಬರಿಂದಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಕೇಳಲ್ಲ. ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆಯೂ ತಿರುಗಾಡಲು ಹೋಗಲ್ಲ. ನಾನಿನ್ನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಸಂಪುಟ ರಚನೆಯ ಕಸರತ್ತು ಜೋರಾಗಿದ್ದು ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾತ್ರ ನೇರ ನುಡಿಯ ಮೂಲಕ ನಾಯಕರಿಗೆ ಬಿಸಿಮುಟ್ಟಿಸಿದ್ದಾರೆ. ನಾನೆಂದೂ ರಾಜಕೀಯದಲ್ಲಿ ಲಾಬಿ, ಜಾತಿವಾದಿತನ ನಾನು ಮಾಡಿಲ್ಲ, ಮಾಡುವುದು ಇಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ. ಈವರೆಗೆ…
ಹೆಚ್ಚಿನವರು ಊಟ ಮಾಡಿದ ನಂತರ ಸಿಹಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಹೋಟೆಲ್ನಲ್ಲಿ ಅಥವಾ ಹೊರಗೆ ಎಲ್ಲಾದರೂ ತಿಂದರೆ, ಅಂತಿಮವಾಗಿ ಐಸ್ ಕ್ರೀಮ್, ಸಿಹಿತಿಂಡಿಗಳು ಅಥವಾ ಯಾವುದೇ ಪುಡ್ಡಿಂಗ್ ನಂತಹ ಸಿಹಿತಿಂಡಿಗಳನ್ನು ನೀಡಲಾಗುತ್ತದೆ. ಆದರೆ ಊಟ ಮಾಡಿದ ನಂತರವೇ ಸಿಹಿ ತಿಂಡಿಗಳನ್ನು ಏಕೆ ತಿನ್ನಲಾಗುತ್ತದೆ ಎಂದು ಯಾರಾದರೂ ಯೋಚಿಸಿದ್ದಾರೆಯೇ? ಈ ಬಗ್ಗೆ ಇಂದು ಒಂದಷ್ಟು ಮಾಹಿತಿ ಇಲ್ಲಿದೆ. ನಮ್ಮ ಹಿರಿಯರು ಹಿಂದಿನಿಂದಲೂ ಮೊದಲಿಗೆ ಖಾರ ತಿನ್ನಬೇಕು, ಊಟದ ಕೊನೆಗೆ ಸಿಹಿಯನ್ನು ತಿನ್ನಬೇಕು, ಎಂದು ಪಾಯಸ ಮತ್ತಿತರ ಸಿಹಿ ಭಕ್ಷ್ಯಗಳನ್ನು ಮಾಡುತ್ತಾರೆ. ಯಾಕೆ ಕೊನೆಗೆ ಸಿಹಿ ಸೇವಿಸಬೇಕು ತಿಳಿಯೋಣ. ವಾಸ್ತವವಾಗಿ, ಸಿಹಿ ವಸ್ತುಗಳು ಕಾರ್ಬೋಹೈಡ್ರೆಟ್ಗಳಿಂದ ಸಮೃದ್ಧವಾಗಿರುತ್ತವೆ, ಇದು ಜೀರ್ಣಾಂಗ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಆದ್ದರಿಂದ ಊಟ ತಿಂದ ನಂತರ ಸ್ವಲ್ಪ ಸಿಹಿ ತಿನ್ನಬೇಕು. ಸಿಹಿ ತಿಂದ ನಂತರ ಸೆರೊಟೋನಿನ್ ಹಾರ್ಮೋನ್ ಮಟ್ಟ ಹೆಚ್ಚುತ್ತದೆ. ಇದು ಮನಸ್ಸನ್ನು ಸಂತೋಷಪಡಿಸುತ್ತದೆ. ಆದ್ದರಿಂದ ಮನಸ್ಸು ಅಸಂತುಷ್ಟವಾಗಿದ್ದರೆ, ಸ್ವಲ್ಪ ಸಿಹಿ ತಿನ್ನಬೇಕು. ಅನೇಕ ಜನರು ಹೈಪೋಗ್ಲೈಸೀಮಿಯಾ ಅಂದರೆ ಕಡಿಮೆ ಸಕ್ಕರೆಯಿಂದ ಬಳಲುತ್ತಿದ್ದಾರೆ.…
