Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಹೈಯರ್ ಪ್ರೈಮರಿ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳು ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಸಮಾರಂಭ ಶನಿವಾರ ಜರುಗಿತು. ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಎನ್. ಮದ್ದೋಡಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ ಸಂಸತ್ತಿನ ಮಹತ್ವ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯವದ ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ನಾಯಕತ್ವದ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದರು. ಪಿಯುಸಿ ಪ್ರಾಂಶುಪಾಲರಾದ ರೂಬೆಲ್ ಐರಾವಲಿ, ವಿದ್ಯಾರ್ಥಿ ನಾಯಕ ಕುಮಾರ ನಿಶಾಂತ್ ಕಿಣಿ, ವಿದ್ಯಾರ್ಥಿ ನಾಯಕಿ ಕುಮಾರಿ ಅಂಕಿತಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪೋಷಕ ಪ್ರತಿನಿಧಿಗಳಾದ ಸೋಮಸುಂದರ್, ನಿರ್ಮಲಾ ಡಯಾಸ್, ಪಠ್ಯೇತರ ಚಟುವಟಿಕೆಗಳ ಸಂಯೋಜಕರಾದ ಜಯಶ್ರೀ ಸುರೇಶ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜ್ಞಾನ್‌ದೇವ್ ಉಪಾಧ್ಯಾಯ-583, ಸವಿನಾ-581, ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-575, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್‌ಎಸ್-564, ಸುಮಿತ್ ಪಾಟೀಲ್-564, ಪನ್ನಗಾ ಕಲ್ಕೂರ್-562, ಮತ್ತು ಶಶಾಂಕ್ ಜಿ-560 ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಒಟ್ಟು 70 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡ 97.14% ಫಲಿತಾಂಶ ಪಡೆದು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ. ಈ ಸಾಧನೆಗೆ ವಿದ್ಯಾರ್ಥಿಗಳನ್ನು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ 593 (ಶೇ.99) ಅಂಕ ಪಡೆದು ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ್ದಾಳೆ. ಪಿಸಿಎಂನಲ್ಲಿ ಶೇ.99.75 ಅಂಕ ಗಳಿಸಿದ್ದಾಳೆ. ಬೆಂಗಳೂರು ಕುಮಾರನ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾನ್ವಿ ಶೆಟ್ಟಿ, ಮೂಲತಃ ಶಂಕರನಾರಾಯಣದ ದೊಣಗೇರಿ ದೊಡ್ಡಮನೆಯವಳಾಗಿದ್ದು, ವಿನಯ ಶೆಟ್ಟಿ ಪಡುಬೆಟ್ಟು ಬೀಡು ಹಾಗೂ ಪ್ರೀತಿ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ವಿವಿಧ ಸಂಗೀತ ಸ್ವರ್ಧೆಯ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಸಾನ್ವಿ ಉತ್ತಮ ಹಾಡುಗಾರ್ತಿಯಾಗಿ ಗುರುತಿಸಿಕೊಂಡಿದ್ದು, ಇದೀಗ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಶೈಕ್ಷಣಿಕವಾಗಿಯೂ ಸಾಧನೆ ಮಾಡಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ರ ಫಲಿತಾಂಶವನ್ನು ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದರೆ, ಪ್ರಗತಿ ಪೂಜಾರಿ 590 ಅಂಕ ಪಡೆದು 9ನೇ ಸ್ಥಾನಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಗುರುರಾಜ್ 588 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ಸ್ಥಾನ ಪಡೆದಿರುತ್ತಾನೆ ಹಾಗೂ ಪ್ರಥ್ವಿ ಎಂ. 586 ಅಂಕ ಪಡೆದು ರಾಜ್ಯಕ್ಕೆ 11ನೇ ಸ್ಥಾನ ಪಡೆದಿದ್ದಾರೆ. ಪರೀಕ್ಷೆಯನ್ನು ಬರೆದಿದ್ದ 388 ವಿದ್ಯಾರ್ಥಿಗಳ ಪೈಕಿ 179 ಮಂದಿ ವಿಶೇಷ ಶ್ರೇಣಿ ಹಾಗೂ 155 ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಹಲವು ರ‍್ಯಾಂಕ್ ಪಡೆಯುವುದರ ಮೂಲಕ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೈತ್ರೇಯಿ (594) ರಾಜ್ಯಕ್ಕೆ ಐದನೇ ರ‍್ಯಾಂಕ್, ಮನಿಷ್ ಆರ್. ಹೆಬ್ಬಾರ್ (592) ಏಳನೇ ರ‍್ಯಾಂಕ್, ಪ್ರಾಚಿ ಎನ್ (590) 9ನೇ ರ‍್ಯಾಂಕ್, ಕಾರ್ತಿಕ್ ಐತಾಳ್ (589) ಹತ್ತನೇ ರ‍್ಯಾಂಕ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ (592) ಐದನೇ ರ‍್ಯಾಂಕ್ ಹಾಗೂ ಶ್ರೀಶ (591) 6ನೇ ರ‍್ಯಾಂಕ್, ಕೃತಿಕಾ (590) 7 ನೇ ರ‍್ಯಾಂಕ್, ಅದಿತಿ, ಶ್ರದ್ಧಾ ಸಾಲಿಯಾನ್ (589) ಎಂಟನೇ ರ‍್ಯಾಂಕ್, ದೇವಾಡಿಗ ಅಂಜಲಿ ಚಂದ್ರ, ರಕ್ಷಿತಾ ಆನಂದ ಪೂಜಾರಿ (588) ಒಂಭತ್ತನೇ ರ‍್ಯಾಂಕ್ ಗಳಿಸುವುದರ ಮೂಲಕ 12 ವಿದ್ಯಾರ್ಥಿಗಳು ರಾಜ್ಯದ ಅಗ್ರ ಸ್ಥಾನಿಯರಲ್ಲಿ ಸ್ಥಾನ ಪಡೆದಿರುವುದು ಪ್ರಶಂಸನೀಯ. ವಾಣಿಜ್ಯ ವಿಭಾಗದಲ್ಲಿ 216 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 120 ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, ಎರಡನೇ ಸ್ಥಾನವನ್ನು ಉಡುಪಿ (86.38%), ಮೂರು ಹಾಗೂ ಕೊನೆಯ ಸ್ಥಾನವನ್ನು ಕ್ರಮವಾಗಿ ವಿಜಯಪುರ (77.14%) ಹಾಗೂ ಚಿತ್ರದುರ್ಗ (49.31%) ಪಡೆದುಕೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್ಸೈಟ್ ಮೂಲಕ ವೀಕ್ಷಿಸಬಹುದು. 81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ ಹಾಗೂ ರಿಪೀಟರ್ಸ್ 61,838ರಲ್ಲಿ 14,403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ. ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 4,22,966 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ವಿಜ್ಞಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.18: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು. ಅವರು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು. ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಠವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂಧ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ . ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು . ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನೀತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ನೀತಾ, ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ. ಕರಾಟೆ ಶಿಕ್ಷಕರಾದ ವಿಜಯ ಶೆಟ್ಟಿ ತರಬೇತಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಎ., ಸಿ.ಎಸ್. ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು. ನಿರಂತರ ಪರಿಶ್ರಮ ಮತ್ತು ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ., ಸಿ.ಎಸ್. ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ.ಸಿ.ಎ.ಐ. ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ. ಕೋತಾ ಎಸ್. ಶ್ರೀನಿವಾಸ ಹೇಳಿದರು. ಅವರು ಐ.ಸಿ.ಎ.ಐ. ಉಡುಪಿ ಶಾಖೆಯ ಎಸ್.ಐ.ಆರ್.ಸಿ. ಹಾಗೂ ಕಾಲೇಜಿನ ವಾಣಿಜ್ಯ ವಿಭಾಗ ಆಯೋಜಿಸಿದ್ದ ಮೆಗಾ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ ಸುಬೇದಾರ್ ಮೇಜರ್ ಲೆಪ್ಟಿನೆಂಟ್ ಗಣೇಶ್ ಅಡಿಗರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಜೀವನದಲ್ಲಿ ಸಾಧಿಸುವ ಛಲ ಮತ್ತು ಗುರಿಯೆಡೆಗಿನ ನಿರಂತರತೆಯನ್ನು ಯುವ ಸಮುದಾಯ ಕಾಯ್ದುಕೊಳ್ಳಬೇಕು. ಭಾರತೀಯ ಸೇನೆಗೆ ನಮ್ಮ ಕರಾವಳಿ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ದೇಶ ಸೇವೆಗೆ ಸನ್ನದ್ಧರಾಗಬೇಕೆಂದು ಹೇಳಿದರು. ಸಿ.ಎ. ಲೋಕೇಶ್ ಶೆಟ್ಟಿ ಸ್ವಾಗತದ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.17: ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ, ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ಹಾಲ್ ನಲ್ಲಿ ನಡೆದ, ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಆಯವ್ಯಯದಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸರ್ಕಾರ ಘೋಷಿಸಿ, ಸಾಕಷ್ಟು ಅನುದಾನವನ್ನು ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ ನೀಡಿದೆ , ಗೋಶಾಲೆಯು ಆಧುನಿಕ ಶೈಲಿಯಲ್ಲಿ, ವೈಜ್ಞಾನಿಕ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಲಭ್ಯವಾಗುವ ಹಾಗೆ ನೀಲಿನಕ್ಷೆಯನ್ನು ತಯಾರಿಸಿ, ಗೋಶಾಲೆಯನ್ನು ನಿರ್ಮಿಸಿ, ಶೀಘ್ರದಲ್ಲಿಯೇ ಪ್ರಾರಂಭಿಸಬೇಕೆAದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ಸರ್ವೇ ನಂ.79/2 ರಲ್ಲಿ 13.24 ಎಕ್ರೆ ಜಮೀನನ್ನು ಹಾಗೂ ಕುಂದಾಪುರದ ಗೋಳಿಹೊಳೆ ಗ್ರಾಮದ ಸರ್ವೆ ನಂ.279 ರಲ್ಲಿ 9.85 ಎಕ್ರೆ ಜಮೀನನ್ನು ಸರ್ಕಾರಿ ಗೋಶಾಲೆ ನಿರ್ಮಿಸಲು…

Read More