ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ವಲಯದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜರಗಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕರಾಗಿ ಗುರುತಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯಗುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯ ನೀಡುತ್ತಿದೆ. ಜನರು ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿರಬೇಕು ಎಂದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಕುಂದಾಪುರ ತಾಲೂಕು ಆಸ್ಪತ್ರೆಯ…
Author: ನ್ಯೂಸ್ ಬ್ಯೂರೋ
ಕುಂದಾಪುರದಲ್ಲಿ ಹುಲಿವೇಷದ ಉಳಿವು | ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಚಿಂತನ – ಮಂಥನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಈ ಭಾರಿ ನಟ, ನಿರ್ದೇಶಕ ಡಾ. ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಸಾಲಿನಲ್ಲಿ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ, ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯನ್ನು ಈ ತನಕ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ…
ರಿಷಬ್ ಅವರಿಗೆ ಸ್ವರ್ಣಕಮಲ ಸುಮ್ನೆ ಬಂದಿಲ್ಲ | ಕಾಂತಾರ ಕಟ್ಟಿದ ರೀತಿಯೇ ಅದ್ಭುತ – ನಟ ಯೋಗೀಶ್ ಬಂಕೇಶ್ವರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಯಕ್ಕೆ ಸರಿಯಾಗಿ ಉತ್ತಮ ಹಾಗೂ ಹಿತಮಿತವಾದ ಆಹಾರ ಸೇವನೆ, ಸರಿಯಾದ ಪ್ರಮಾಣದ ನಿದ್ರೆ, ಜ್ಞಾನವನ್ನು ವೃದ್ಧಿಸುವ ಬ್ರಹ್ಮಚರ್ಯೆ ಇವುಗಳು ಆರೋಗ್ಯದ ಆಧಾರಸ್ಥಂಭಗಳು. ಪ್ರತಿಯೊಬ್ಬರೂ ಮೊದಲು ತಮ್ಮ ಕುಟುಂಬ, ಸಮಾಜದ ಸಂಬಂಧಗಳು ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರಥಮ ಆದ್ಯತೆ ಕೊಟ್ಟಾಗ ಮಾತ್ರ ಪರಿಪೂರ್ಣ ಆರೋಗ್ಯವಂತನಾಗಲು ಸಾಧ್ಯವಾಗುತ್ತದೆ ಎಂದು ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಅಧೀಕ್ಷಕ ಡಾ. ನಾಗರಾಜ್ ಹೇಳಿದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ನಾವುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂದಿರದಲ್ಲಿ ಗುರುವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ತಜ್ಞ ವೈದ್ಯರಿಂದ ನಡೆದ ಉಚಿತ ಆಯುರ್ವೇದ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಆಧ್ಯಾತ್ಮಿಕ ವ್ಯಾದಿ, ಆದಿಭೌತಿಕ ವ್ಯಾಧಿ ಹಾಗೂ ಆದಿದೈವಿಕ ವ್ಯಾದಿಗಳೇ ತಾಪತ್ರಯಗಳು. ನಮಗೆ ನಮ್ಮ ಜೀವನದ ಕಲ್ಪನೆಯೊಂದಿಗೆ ದೈವಬಲವೂ ಬೇಕು. ಪ್ರಕೃತಿಯನ್ನು ಗೌರವಿಸುವುದು ಜಲವನ್ನು ರಕ್ಷಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.21: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರಗಿದ ಉಡುಪಿ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭ ತಂಡದ ವ್ಯವಸ್ಥಾಪಕ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ, ಪೂರ್ಣಿಮಾ ನಾಯಕ್, ಕಿರಣ್ ವಕ್ವಾಡಿ, ಅರುಣ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಶಂಕರ್ ನಾಯ್ಕ್, ಸುಕೇಶ್ ಮತ್ತು ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಪಡುವರಿ ನಿವಾಸಿ ಜಗದೀಶ ಪಟವಾಲ್ (62) ಯಡ್ತರೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಬೈಕಿನಲ್ಲಿ ಪತ್ನಿ ಆಶಾ ಅವರೊಂದಿಗೆ ಬಿಜೂರು ಕಡೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯಡ್ತರೆ ಜಂಕ್ಷನ್ ಬಳಿ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದ ಪರಿಣಾಮ ಜಗದೀಶ ಪಟವಾಲ್ ಹಾಗೂ ಅವರ ಪತ್ನಿ ರೋಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಈರ್ವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಜಗದೀಶ ಪಟವಾಲ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರನ ಕಾಲಿಗೆ ಗಾಯಗಳಾಗಿದೆ. ಜಗದೀಶ ಪಟವಾಲ್ ಅವರು ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷರಾಗಿ, ಶ್ರೀ ಮೂಕಾಂಬಿಕಾ ರೈಲ್ವೆ ಹೋರಾಟ ಸಲಹಾ ಸಮಿತಿ ಸ್ಥಾಪಕ ಸದಸ್ಯ ಹಾಗೂ ಕಾರ್ಯದರ್ಶಿಯಾಗಿ ಮೂಕಾಂಬಿಕಾ ರೈಲ್ವೆ ನಿಲ್ದಾಣ ಅಭಿವೃದ್ದಿಪಡಿಸಲು ಸಮಿತಿಯೊಂದಿಗೆ ಶ್ರಮವಹಿಸಿದ್ದರು. ಬೈಂದೂರು ನಾಗರಿಕ ವೇದಿಕೆ ಮೂಲಕ ತಾಲೂಕು ರಚನಾ ಸಮಿತಿಯೊಂದಿಗೆ ಹೋರಾಟಕ್ಕೆ ಕೈ ಜೋಡಿಸಿದ್ದರು. ಜಗದೀಶ ಪಟವಾಲ್ ಅವರು ಪತ್ನಿ, ಓರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.21: ವರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಮಾನಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಮಾನಿ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದ್ದು, ದಿನಾಂಕ: 18.09.2022 ರಂದು ಬೆಳಗ್ಗೆ 6:30 ರ ಸಮಯಕ್ಕೆ ಜಲಾಶಯದ ಮಟ್ಟವು 590.10 ಮೀಟರ್ ತಲುಪಿದ್ದು, ಒಳಹರಿವು 1565 ಕ್ಯೂಸೆಕ್ಸ್ಗಳಷ್ಟು ಇರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಈ ಮೂಲಕ ಎಚ್ಚರಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಸೆ.21: ಜಾಗದ ತಕರಾರಿಗೆ ಸಂಬಂಧಿಸಿ ತನ್ನ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ಸಿದ್ದಾಪುರ ಗ್ರಾಮದ ಸುದರ್ಶನ್ ಶೆಟ್ಟಿ ಎಂಬವರು ನಾಲ್ವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂದಾಪುರದ ಸಿದ್ದಾಪುರ ಗ್ರಾಮದ ಬಾಳೆಬೇರು ನಿವಾಸಿ ಸುದರ್ಶನ್ ಶೆಟ್ಟಿ ಅವರಿಗೆ ಪ್ರಕರಣದ ಆರೋಪಿಗಳಾದ ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ಶ್ರೀಧರ ಶೆಟ್ಟಿ ಮಂಗನಸಾಲು, ಬಿ. ಪ್ರಕಾಶ್ಚಂದ್ರ ಶೆಟ್ಟಿ ಇವರೊಂದಿಗೆ ಸಿದ್ದಾಪುರ ಗ್ರಾಮದಲ್ಲಿ ಜಾಗದ ವಿಚಾರದಲ್ಲಿ ತಕರಾರು ಇದ್ದು, ಈ ಜಾಗದ ತಕರಾರು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುತ್ತದೆ, ಅಲ್ಲದೆ ನ್ಯಾಯಾಲಯವು ಕುಂದಾಪುರ ತಾಲೂಕು ತಹಶೀಲ್ದಾರರಿಗೆ ತಕರಾರು ಇರುವ ಜಾಗವನ್ನು ಸೆ.21 ರಂದು ಸರ್ವೇ ಮಾಡಿ ವರದಿ ನೀಡುವಂತೆ ಆದೇಶ ಮಾಡಿದೆ. ಈ ಜಾಗದ ತಕರಾರಿನ ಬಗ್ಗೆ ಸುಧರ್ಶನ್ ಶೆಟ್ಟಿ ರವರು ಹೆಚ್ಚಾಗಿ ಓಡಾಡುತ್ತಿದ್ದರು. ಇದರಿಂದ ತಮ್ಮಗೆ ತೊಂದರೆ ಆಗಬಹುದು ಎಂದು ಆರೋಪಿಗಳು, ಸೆ.18 ರಂದು ಸುದರ್ಶನ್ ಶೆಟ್ಟಿ ಅವರು ತಮ್ಮ ಸ್ಕೂಟಿಯಲ್ಲಿ ಬಾಳೆಬೇರು ಎಂಬಲ್ಲಿ ಮನೆಯ ಸಮೀಪ ನಿಲ್ಲಿಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಬೈಂದೂರು ಸೇನೇಶ್ವರ ದೇವಾಲಯದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಮಂಗಳವಾರ ಸುಮಾರು 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದರು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬೈಂದೂರು ಅರಣ್ಯ ಸಿಬ್ಬಂದಿಗಳು ಹಾವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಡಲು ಕೊಂಡೊಯ್ದಿದ್ದಾರೆ. ಸ್ಥಳೀಯರು ಹಾವನ್ನು ಸೆರೆಹಿಡಿಯುವಲ್ಲಿ ಸಹಕರಿಸಿದ್ದಾರೆ.
