ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಭಟ್ಕಳ ತಾಲೂಕಿನ ಜಾಲಿಯ ಮಂಜುನಾಥ ನಾಯ್ಕ್ (44) ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಉಪ್ಪುಂದ ಕರ್ಕಿಕಳಿ ನಿವಾಸಿ ಕಿರಣ್ (21) ಗಂಭೀರ ಗಾಯಗೊಂಡಿದ್ದಾನೆ. ಘಟನೆಯ ವಿವರ:ಟೆಂಪೋ ಟ್ರ್ಯಾಕ್ಸ್ ಮೂಲಕ ಧರ್ಮಸ್ಥಳಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ಭಟ್ಕಳ ಜಾಲಿಯ ತಂಡವೊಂದು ರಾಹುತನಕಟ್ಟೆ ಬಳಿ ವಾಹನ ನಿಲ್ಲಿಸಿದ್ದು, ಅವರಲ್ಲಿ ಮಂಜುನಾಥ್ ನಾಯ್ಕ್ ಎಂಬುವವರು ರಾಷ್ಟ್ರೀಯ ಹೆದ್ದಾರಿಯ ಎದುರು ಬದಿ ಇದ್ದ ಮೀನಿನ ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಬೈಂದೂರು ಕಡೆಯಿಂದ ಬುಲೆಟ್ ಬೈಕಿನಲ್ಲಿ ಬಂದ ಯುವಕ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಫಘಾತದ ರಭಸಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಯು ಬದಿಗೆ ಎಸೆಯಲ್ಪಟ್ಟು ಅಲ್ಲಿಯೇ ಮೃತಟ್ಟಿದ್ದಾರೆ. ಬುಲೆಟ್ ಬೈಕ್ ಸವಾರ ಡಿವೈಡರ್ ಬದಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕೊಂಡೊಯ್ಯಲಾಗಿದೆ. ಬೈಂದೂರು ಪೊಲೀಸ್ ಪಿಎಸೈ ಪವನ್ ನಾಯಕ್ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ಪರವಾಗಿ ಶ್ರೀ ಮಹಾಕಾಳಿ ದೇವಳದ ಅಧ್ಯಕ್ಷರಾದ ಜಯಾನಂದ ಖಾರ್ವಿ ಮುಂದಾಳತ್ವದಲ್ಲಿ ಇಲ್ಲಿನ ಕೋಡಿ ಕಿನಾರೆಯಲ್ಲಿ ಸಾಂಪ್ರದಾಯಿಕ ಸಮುದ್ರ ಪೂಜೆ ಇತ್ತೀಚೆಗೆ ಜರುಗಿತು. ದೇವಳದ ಪ್ರದಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಜರುಗಿದ ಧಾರ್ಮಿಕ ಪೂಜಾ ಕಾರ್ಯದಲ್ಲಿ ಉಪಾಧ್ಯಕ್ಷರಾದ ಪಿ.ಗಣಪತಿ ಖಾರ್ವಿ ಮದ್ದುಗುಡ್ಡೆ, ಮುಕ್ತೇಸರಾದ ಆನಂದ ನಾಯ್ಕ್ , ಸಲಹೆಗಾರರಾದ ಪ್ರಕಾಶ್.ಆರ್ ಖಾರ್ವಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ನಾಮದೇವ ಖಾರ್ವಿ ಸಹಿತ ಆಡಳಿತ ಮಂಡಳಿಯ ಸದಸ್ಯರು, ಸಾರ್ವಜನಿಕರು ಹಾಜರಿದ್ದರು. ಕಾರ್ಯಕ್ರಮದ ಸಂಯೋಜನೆಯನ್ನು ಆಡಳಿತ ಮಂಡಳಿಯ ಸದಸ್ಯರಾದ ಸುನಿಲ್ ಖಾರ್ವಿ ತಲ್ಲೂರು ನೆರವೇರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಆಡಳಿತ ಮಂಡಳಿಯ ಸದಸ್ಯರಾದ ಆರ್. ಕೆ. ಬಿಲ್ಲವ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಗುರುಗಳು ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಸತ್ಯವನ್ನು ಜಗತ್ತಿಗೆ ಸಾರಿದ ಇವರು ಜಗತ್ತಿನ ಶ್ರೇಷ್ಠ ಚಿಂತಕರಾಗಿದ್ದರು. ಮಾನವ ಜನಾಂಗಕ್ಕೆ ಸಾರ್ವಕಾಲಿಕ ಸತ್ಯವನ್ನು ಸಾರಿದ ವಿಶ್ವ ಮಾನವರಾಗಿದ್ದರು ಎಂದು ಹೇಳಿದರು. ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ನಾಖುದಾ ವೆಲ್ಫೇರ್ ಅಸೋಸಿಯೇಷನ್ ಶಿರೂರು ಇವರ ಸಹಯೋಗದಲ್ಲಿ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇಲ್ಲಿನ ಶಿರೂರಿನ ಮದ್ರಸಾ ಮಿಫ್ತಾ ಉಲ್ ಉಲೂಮ್ ಸಭಾಂಗಣದಲ್ಲಿ ನಡೆಯಿತು. ಬೈಂದೂರು ತಾಲೂಕಿನ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ 19 ವಿಧ್ಯಾರ್ಥಿಗಳನ್ನು ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿಸಲ್ಪಟ್ಟ ಪಿಯುಸಿ ವಿಧ್ಯಾರ್ಥಿಗಳು:ಮುಹಮ್ಮದ್ ಸಮಾನ್ ಶೇಖ್ಜಿ, ಶಿರೂರು (98%) ಮುಹಮ್ಮದ್ ಉವೇಝ್ ಕೆ. ಹಳಗೇರಿ (97%) ಹಮ್ದಾನ್ ಕಾರಾನಿ ಶಿರೂರು (97%) ಅಲ್ ರಿಫಾ (96%) ಮುಹಮ್ಮದ್ ಸುಲೈಮ್ ತಾರಾಪತಿ, ಬೈಂದೂರು (94.5%) ಬಿ.ಬಿ. ನಮೀರಾ, ಶಿರೂರು (94%) ಕಾಪ್ಸಿ ಮುಹಮ್ಮದ್ ಇರ್ಬಾಝ್, ಶಿರೂರು (93%) ಮಫೂಝಾ, (90.3%) ಗಂಗೊಳ್ಳಿ ಮುಹಮ್ಮದ್ ಫಾಹಿಕ್ (90%) ಶಮೀಮ್ ಬಾನು (89.3%) ಸನ್ಮಾನಿಸಲ್ಪಟ್ಟ ಎಸ್ಎಸ್ಎಲ್ಸಿ ವಿಧ್ಯಾರ್ಥಿಗಳು:ರಮೀನ್ ಕಾರಾನಿ, ಶಿರೂರು (98.2%) ನಮೀರಾ ಸಾನಿಯಾ, (96.2%) ಚೌ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಆಶಾ ಕಾರ್ಯಕರ್ತರಿಗೆ ಕ್ಷಯ ರೋಗದ ಬಗ್ಗೆ ತರಬೇತಿ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ತರಬೇತಿಯನ್ನು ನೀಡಿದರು. ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕನ್ನು ವಿತರಿಸಲಾಯಿತು. ರೋಟರಿ ಕ್ಲಬ್ನ ಸದಸ್ಯರಾದ ಜನಾರ್ಧನ ಪೂಜಾರಿ, ಬಿ. ಲಕ್ಷ್ಮೀಕಾಂತ ಮಡಿವಾಳ, ಪ್ರೇಮಾ ಸಿ. ಪೂಜಾರಿ, ಚಂದ್ರಕಲಾ, ಗೋಪಾಲ ಪೂಜಾರಿ, ಪ್ರೀತಿ ಫೆರ್ನಾಂಡಿಸ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ.ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಶಾಲಾ ಪೂರ್ವ ವಿದ್ಯಾರ್ಥಿ ವಂಡ್ಸೆ ಕಟ್ಟೆಮನೆ ಸುಧಾಕರ ಶೆಟ್ಟಿಯವರ ಕೊಡುಗೆಯಾಗಿ ಅಂದಾಜು ರೂ.8 ಲಕ್ಷ ಮೊತ್ತದಲ್ಲಿ 5 ಕೆವಿ ಸಾಮರ್ಥ್ಯದ ಸೋಲಾರ್ ಅಳವಡಿಕೆಯಾಗಿದ್ದು, ಶಾಲಾ ಬಳಕೆಗೆ ಹಸ್ತಾಂತರಿಸಲಾಯಿತು. ಶಾಲಾ ಬೇಡಿಕೆಗಳಲ್ಲಿ ಒಂದಾದ ಸೋಲಾರ್ ವ್ಯವಸ್ಥೆಯು ಅತೀ ಅಗತ್ಯವಾಗಿದ್ದು ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಬಹಳ ಉಪಯುಕ್ತವಾಗಿದೆ. ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್, ಪ್ರಾಜೆಕ್ಟರ್ ಇದ್ದು ಸೋಲಾರ್ ಅಳವಡಿಕೆ ಹೆಚ್ಚು ಅನುಕೂಲವಾಗಿದೆ. ಶಾಲೆಯ ಬಳಕೆಯಾಗಿ ಉಳಿಕೆ ವಿದ್ಯುತ್ನ್ನು ಮೆಸ್ಕಾಂ ನೀಡುವ ಯೋಜನೆಯೂ ಕೂಡಾ ಇದರೊಂದಿಗೆ ಜೋಡಿಸಿಕೊಳ್ಳಲಾಗಿದೆ. ಶಾಲೆಗೆ ಉಪಯೂಕ್ತವಾದ ಸೌರ ವಿದ್ಯುತ್ ಘಟಕವನ್ನು ಒದಗಿಸಿದ ದಾನಿಗಳಾದ ವಂಡ್ಸೆ ಕಟ್ಟೆಮನೆ ಸುಧಾಕರ್ ಶೆಟ್ಟಿಯವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಮಂಜರು, ಕಾರ್ಯದರ್ಶಿ ಉದಯಕುಮಾರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ ಕೃತಜ್ಞತೆ ಸಲ್ಲಿಸಿದರು. ಶತಮಾನೋತ್ಸವ ಆಚರಿಸಿಕೊಂಡಿರುವ ಈ ಶಾಲೆಯಲ್ಲಿ 2016ರಲ್ಲಿ 89 ವಿದ್ಯಾರ್ಥಿಗಳಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ಶಾಲೆಗಳಲ್ಲಿರುವ ಸೌಲಭ್ಯ ಒದಗಿಸುವ ಉದ್ದೇಶದಿಂದ ಶಾಲಾ ಹಳೆ ವಿದ್ಯಾರ್ಥಿ ಸಂಘ ಬಸ್ ಕೊಡುಗೆ ನೀಡಿತು. ಕೋವಿಡ್ ಕಾರಣದಿಂದ ಹಿಂದಿನ ವರ್ಷ ತರಗತಿಗಳು ನಡೆಯದ್ದರಿಂದ ಬಸ್ ನಿರ್ವಹಣೆಗೆ ಹಣದ ಕೊರತೆ ಕಾಡುತ್ತಿದೆ ಎಂದು ಸಂಘದ ಅಧ್ಯಕ್ಷ ರವಿ ಮಡಿವಾಳ ಹೇಳಿದರು. ಮರವಂತೆ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದ ಬೆಂಬಲದಿಂದ ಶಾಲೆಯಲ್ಲಿ ವಿದ್ಯಾರ್ಥಿ ಸಂಖ್ಯೆ ವೃದ್ಧಿಸಿದೆ. ಹಳೆ ವಿದ್ಯಾರ್ಥಿಗಳು ಸಂಘದ ಆಜೀವ ಸದಸ್ಯರಾಗುವ ಮತ್ತು ಸಾಧ್ಯ ಇರುವವರು ದೇಣಿಗೆ ನೀಡುವ ಮೂಲಕ ಸಂಘಕ್ಕೆ ಆರ್ಥಿಕ ಬಲ ತುಂಬಬೇಕು ಎಂದು ವಿನಂತಿಸಿದರು. ಹಿಂದಿನ ಸಾಲಿನ ಏಳನೇ ತರಗತಿಯಲ್ಲಿ ಶ್ರೇಷ್ಠ ಅಂಕ ಪಡೆದು ಉತ್ತೀರ್ಣರಾದ ಮಕ್ಕಳಿಗೆ ಬಿ. ರಾಮಕೃಷ್ಣ ಮಾಲೂರು ಪ್ರವರ್ತಿಸಿದ ವಿದ್ಯಾರ್ಥಿವೇತನ ವಿತರಣೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ನಡೆಸಿದ ನಮ್ಮೂರ ಪ್ರತಿಭಾನ್ವೇಷಣೆ ಸ್ಪರ್ಧೆಯಲ್ಲಿ ವಿಜೇತರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರರಿಗೆ ಕಂಟಕವಾಗಿ ಪರಿಣಮಿಸುತ್ತಿರುವ ಗಂಗೊಳ್ಳಿಯ ಅಳಿವೆಬಾಗಿಲಿನಲ್ಲಿ ಹೂಳೆತ್ತುವಂತೆ ಆಗ್ರಹಿಸಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ ನೇತೃತ್ವದಲ್ಲಿ ಗಂಗೊಳ್ಳಿ ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಮೀನುಗಾರಿಕ ಋತು ಪ್ರಾರಂಭವಾಗಿದ್ದು, ಗಂಗೊಳ್ಳಿ ಅಳಿವೆಬಾಗಿನಲ್ಲಿ ಹೂಳೆತ್ತುವ ಕಾಮಗಾರಿಗೆ ಈವರೆಗೆ ಚಾಲನೆ ದೊರೆತಿಲ್ಲ. ಅಳಿವೆ ಪ್ರದೇಶದಲ್ಲಿ ಹೂಳು ತುಂಬಿಕೊಂಡಿದ್ದು, ಸಮುದ್ರದ ಅಲೆಗಳ ರಭಸ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಯನ್ನು ಮುಗಿಸಿ ಅಳಿವೆಬಾಗಿಲಿನ ಸಮೀಪ ತಲುಪಿದಾಗ ಮೀನುಗಾರರ ದೋಣಿ, ಬೋಟ್ ಸಂಕಷ್ಟದ ಸ್ಥಿತಿಗೆ ತುತ್ತಾಗುವ ಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಇದ್ದು ಇದರಿಂದಾಗಿ ಮೀನುಗಾರರು ಪ್ರಾಣಾಪಾಯಕ್ಕೆ ತುತ್ತಾಗುವ ಸಾಧ್ಯತೆಯಿದೆ. ಅಳಿವೆ ಪ್ರದೇಶದ ಸಮಸ್ಯೆಯಿಂದ ಮೀನುಗಾರರರು ಆತಂಕಕ್ಕೆ ಒಳಗಾಗಿದ್ದು, ಈ ಸಂಬಂಧ ಮೀನುಗಾರರ ಅನೇಕ ಮನವಿಗಳಿಗೆ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ. ಆದುದರಿಂದ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಮೀನುಗಾರರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರನ್ನು ತಲುಪುವ ಆಶಯದ ಬೂತ್ ಅಧ್ಯಕ್ಷರ ಮನೆಗೆ ನಾಮ ಫಲಕ ಅಂಟಿಸುವ ಕಾರ್ಯಕ್ರಮಕ್ಕೆ ವಂಡ್ಸೆ ಜಿ.ಪಂ ವ್ಯಾಪ್ತಿಯ ಕಕುಂಜೆ ಗ್ರಾಮದ ನಾಲ್ಕು ಬೂತ್ಗಳಲ್ಲಿ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಂಟಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದನ್ನು ಪ್ರತಿ ಬೂತ್ನ ಜನರಿಗೆ ತಲುಪಿಸುವ ಕಾರ್ಯಗಳು ಪ್ರತಿ ಬೂತ್ ಅಧ್ಯಕ್ಷರ ತಂಡದಿಂದ ಆಗಬೇಕು. ಈ ಮೂಲಕ ಯೋಜನೆಗಳು ಅರ್ಹ ಜನರನ್ನು ತಲುಪಬೇಕು. ಎಲ್ಲಾ ಬೂತ್ ಮಟ್ಟದ ಕಾರ್ಯಕರ್ತರೇ ನಮಗೆ ಶಕ್ತಿ. ಪ್ರಧಾನಿ ಮೋದಿಯವರ ನುಡಿಯಂತೆ ‘ಬೂತ್ ಗೆದ್ದರೆ ದೇಶ ಗೆಲ್ಲುತ್ತೇವೆ’ ಎನ್ನುವಂತೆ ಬೂತ್ ಸಶಕ್ತವಾಗಬೇಕು. ಎಲ್ಲಾ ಚುನಾವಣೆಗಳಲ್ಲೂ ಬೂತ್ ಕಾರ್ಯಕರ್ತರ ಪಾತ್ರ ಮಹತ್ವದ್ದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಬಂಟರ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಲ್ಲಿನ ಬಂಟರ ಸಮುದಾಯ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೋಳೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ್ ಶೆಟ್ಟಿ ಮೂರೂರು, ಗೌರವಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಜೊತೆ ಕಾರ್ಯದರ್ಶಿಯಾಗಿ ದೀಪಕ್ ಶೆಟ್ಟಿ ಶಿರೂರು, ಪ್ರತಾಪ್ ಶೆಟ್ಟಿ ಹಳಗೇರಿ, ಖಜಾಂಚಿ ರವೀಂದ್ರ ಶೆಟ್ಟಿ ಉಪ್ಪುಂದ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಕುದ್ರುಕೊಡು, ಪ್ರದೀಪ್ ಶೆಟ್ಟಿ ಸೂರ್ಕುಂದ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿರಾಜ್ ಶೆಟ್ಟಿ ಉಳ್ಳೂರು ಆಯ್ಕೆಯಾಗಿದ್ದಾರೆ. ತಾಲೂಕಿನ ವಿವಿಧ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಅಧ್ಯಕ್ಷ ವಿಶ್ವನಾಥ ಶೆಟ್ಟಿ ಗಂಟಿಹೋಳೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ತಿಳಿಸಿದ್ದಾರೆ.
