ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ಗಂಗೊಳ್ಳಿಯ ಸ್ವಗೃಹದಲ್ಲಿ ಬಿ. ಶ್ರೀಕಾಂತ ಪೈ ಅವರನ್ನು ಭೇಟಿ ಮಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಹಾಗೂ ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಹಾಗೂ ರೋಟರಿ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾದ ಉಮೇಸ ಮೇಸ್ತ, ಜನಾರ್ಧನ ಪೂಜಾರಿ, ಪ್ರದೀಪ ಡಿ.ಕೆ., ಬಿ.ಲಕ್ಷ್ಮೀಕಾಂತ ಮಡಿವಾಳ, ವಾಸುದೇವ ಶೇರುಗಾರ್, ನಿಯೋಜಿತ ಅಧ್ಯಕ್ಷೆ ಸುಗುಣಾ ಆರ್.ಕೆ., ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿಯಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್ಲೈನ್ ಪ್ರಕಾರ ಆಗಸ್ಟ್ 12 ರಿಂದ ಆಗಸ್ಟ್ 31ರ ತನಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2570244 ನ್ನು ಸಂಪರ್ಕಿಸಬಹುದಾಗಿದೆಂದು ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿದ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದಾಗಿದ್ದು, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ ಒಟ್ಟು ವೆಚ್ಚದ ಶೇ. 35 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸದಾಗಿ ನಿರ್ಮಾಣ ಮಾಡುವ ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 40 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ದ್ವಿತಿಯ ಹಂತದ ಸಂಸ್ಕರಣೆಗಳನ್ನು ಕೈಗೊಳ್ಳುವ ರೂ. 50 ಲಕ್ಷಕ್ಕಿಂತ ಅಧಿಕ ಬಂಡವಾಳವನ್ನು ತೊಡಗಿಸಿರುವ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 25 ರಂತೆ ಗರಿಷ್ಟ ರೂ. 50 ಲಕ್ಷ ಸಹಾಯಧನ ಕೃಷಿ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿಯಡಿ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಮದ್ಯಮಾವದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದೂವರೆ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಉಸಿರಾಡುತ್ತಿರುವ ಇಲ್ಲಿನ ಹಟ್ಟಿಯಂಗಡಿ ಹನೆಮನೆ ಬಚ್ಚಿ ಎನ್ನುವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದು, ಸಹೃದಯಿ ದಾನಿಗಳ ಸಹಕಾರದ ಅಗತ್ಯವಿದೆ. ಬಚ್ಚಿ ಅವರನ್ನು ಪರಿಶೀಲಿಸಿದ ವೈದ್ಯರು ಶ್ವಾಸಕೋಶದಲ್ಲಿ ನೀರು ನಿಲ್ಲುತ್ತಿದ್ದು, ಸಂಪೂರ್ಣ ವಿಫಲವಾಗಿದ್ದರಿಂದ ಉಸಿರಾಟದ ಸಮಸ್ಯೆ ಉಂಟಾಗಿದೆ. ಉಸಿರಾಟ ಸಮಸ್ಯೆ ಹೃದಯಕ್ಕೆ ಒತ್ತಡ ಹಾಕುತ್ತಿದೆ. ಬ್ರೈನ್ ಟೂಮರ್ ಇದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ನೆರವಿಗೆ ಮನವಿ: ಚಿಕ್ಕ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದು, ಮಗಳ ಕೂಲಿಯೇ ಮನೆಯ ಜೀವನಾಧಾರವಾಗಿದ್ದು, ಬಚ್ಚಿ ಪತಿ ಕೂಡಾ ಅಡಕೆ ಮರದಿಂದ ಬಿದ್ದು ಕಾಲು ಆಪರೇಶನ್ ಆಗಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲ. ಪ್ರಸ್ತುತ ಹೆಚ್ಚಿನ ಚಿಕಿತ್ಸೆ ಕೊಡಿಸಲು ಹಣಕಾಸಿನ ತೊಂದರೆಯಿಂದ ಪ್ರಸಕ್ತ ಬಚ್ಚಿ ಅವರಿಗೆ ಮನೆಯಲ್ಲಿಯೇ ಆರೈಕೆ ಮಾಡಲಾಗುತ್ತಿದೆ, ಮನೆಯಲ್ಲಿಯೇ ಆಕ್ಸಿಜನ್ ನಿರಂತರ 24 ಗಂಟೆ ನೀಡಲು ವೈದ್ಯರು ಕಡ್ಡಾಯ ಸೂಚಿಸಿದ್ದಾರೆ. ಆಕ್ಸಿಜನ್ ಪೂರೈಕೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನುಪಮಾ ಪ್ರಸಾದ್ ಅವರ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಮೂರು ತಲೆಮಾರಿನ ಕಥೆಯನ್ನು ಹೇಳುತ್ತಾ 20ನೇ ಶತಮಾನದ ನಮ್ಮ ಭಾರತದ ಚಿತ್ರಣವನ್ನು ಸೂಕ್ಷ್ಮವಾಗಿ ಬಿತ್ತರಿಸುತ್ತದೆ ಎಂದು ಹಿರಿಯ ಲೇಖಕ ಪ್ರೊ. ಓ.ಎಲ್.ನಾಗಭೂಷಣಸ್ವಾಮಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಹಲವು ಕಾದಂಬರಿಕಾರರ ಕಾದಂಬರಿಗಳಿಗೆ ಹೋಲಿಸಬಹುದು ಆದರೆ ಮೂರು ತಲೆಮಾರಿನ ಸಂಗತಿಗಳನ್ನು ನೈಜತೆಗೆ ಹತ್ತಿರವಾಗಿ ಬಿತ್ತರಿಸುತ್ತದೆ ಎಂಬುದು ಮನಸಿಗೆ ಸ್ಪಷ್ಟವಾಗಿ ಕಾಣುತ್ತದೆ. ಒಂದು ವಿಚಿತ್ರ ಸಂವೇದನೆಯೊಂದಿಗೆ ಕಾದಂಂಬರಿ ಓದಿಸಿಕೊಂಡು ಹೋಗುತ್ತದೆ. ಅಲ್ಲಿನ ಪಾತ್ರಗಳು ಮತ್ತು ಹಲವು ದಷ್ಟಿಕೋನಗಳಲ್ಲಿ ಕಥೆಯನ್ನು ಹೇಳುವ ಶೈಲಿ ಈ ಕಾದಂಬರಿಯಲ್ಲಿದೆ. ಹಾಗೆಯೇ ಈ ಕಾದಂಬರಿಯಲ್ಲಿ ಯಾವ ಪಾತ್ರವು ಮುಖ್ಯವಲ್ಲ. ಆದರೆ ಎಲ್ಲಾ ಪಾತ್ರಗಳು ಅತ್ಯಂತ ಮುಖ್ಯವೆನಿಸುತ್ತದೆ. ಜೀವನದ ಪರಿ ಹಳ್ಳ ನದಿಯಾಗಿ ಸಮುದ್ರ ಸೇರುವ ಪರಿ ಹಾದಿಗುಂಟ ಮನುಷ್ಯನ ಅನೇಕ ಸಂಚಲನಗಳನ್ನು ಹೊರಗೆಡವುತ್ತದೆ. ಗತಕಾಲವನ್ನು ಹೇಳುವುದು ಕಾಲದ ನೀರಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬರಿಗೂ ಜೀವನದಲ್ಲಿ ಶಿಸ್ತು, ತಾಳ್ಮೆ, ಗೌರವ ಅತಿ ಮುಖ್ಯ. ಶಿಸ್ತು ತಾಳ್ಮೆಯಿಂದ ಯಾವುದೇ ಕಾರ್ಯವನ್ನು ಯಶಸ್ವಿಯಾಗಿ ಮಾಡಬಹುದು. ಇಂದಿನ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಬಾಲ್ಯದಲ್ಲಿ ಗುರು ಹಿರಿಯರಿಂದ ಪಡೆದ ಸಂಸ್ಕಾಯುತ ಶಿಕ್ಷಣ ಮುಂದಿನ ನಮ್ಮ ಜೀವನದಲ್ಲಿ ಸಹಾಯಕ್ಕೆ ಬರುತ್ತದೆ. ವಿದ್ಯಾರ್ಥಿ ಜೀವನದ ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನಕ್ಕೇರುವ ಪ್ರಯತ್ನ ಮಾಡಬೇಕು ಎಂದು ಸಂಶೋಧಕ ಬಾಂಡ್ಯ ಶ್ರೀಕಾಂತ ಪೈ ಹೇಳಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಅರ್ಪಿಸಿದ ಬಿ.ಶ್ರೀಕಾಂತ ಅಣ್ಣಪ್ಪ ಪೈ ಅವರನ್ನು ಜಿಎಸ್ವಿಎಸ್ ಅಸೋಸಿಯೇಶನ್ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಪರವಾಗಿ ಗೌರವಿಸಲಾಯಿತು. 2019-20ನೇ ಸಾಲಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮದಲ್ಲಾದ ನಷ್ಟ ಹಾಗೂ ಸಾಲಬಾಧೆಯಿಂದ ಬೇಸತ್ತು ಕಾಳಾವರ ಗ್ರಾಮ ಶಾಲೆ ಬಳಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಗಾಣಿಗ (42) ಎಂಬವರು ಗುರುವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಘವೇಂದ್ರ ಗಾಣಿಗ ಬುಧವಾರ ಪತ್ನಿ ಸುಜಾತಾ ಬಳಿ ಉಡುಪಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಸಂಜೆ ಪತ್ನಿ ಪೋನ್ ಮಾಡಿ ವಿಚಾರಿಸಿದಾಗ ಹೋಟೆಲ್ ಬಾಗಿಲು ಹಾಕಿ ರಿಕ್ಷಾ ಮಾಡಿಕೊಂಡು ಮನೆಗೆ ಹೋಗು, ನಾನು ಬರೋದು ತಡವಾಗುತ್ತದೆ ಎಂದು ಪೋನ್ ಕಟ್ ಮಾಡಿದ್ದರು. ರಾತ್ರಿ ಪತ್ನಿ ಮತ್ತೆ ಪೋನ್ ಮಾಡಿದಾಗ ಮೊಬೈಲ್ ಚಾಲನೆಯಲ್ಲಿ ಇರಲಿಲ್ಲ. ಪತ್ನಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪುಸ್ತಕ ಓದುವ ಹವ್ಯಾಸ ಇರುವವರಲ್ಲಿ ಜ್ಞಾನ ವೃದ್ಧಿಯಾಗುತ್ತದೆ, ಅಲ್ಲದೇ ಸಾಧಕರ ಬದುಕಿನ ಹೆಜ್ಜೆಗಳು ಪುಸ್ತಕಗಳಿಂದ ತಿಳಿದು ನಮ್ಮ ಬದುಕನ್ನು ರೂಪಿಸಿಕೊಳ್ಳಲು ಒಂದು ದಾರಿದೀಪವಾಗುತ್ತದೆ, ಆದಷ್ಟು ಪುಸ್ತಕವನ್ನು ಓದುವ ಹವ್ಯಾಸ ನಾವು ಇಟ್ಟುಕೊಳ್ಳೋಣ ಎಂದು ಕೋಟತಟ್ಟು ಪಂಚಾಯತ್ ನ ಅಧ್ಯಕ್ಷೆ ಅಶ್ವಿನಿ ದಿನೇಶ್ ಹೇಳಿದರು ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನಡೆದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸಾಕಷ್ಟು ಪುಸ್ತಕ ಸಂಗ್ರಹವಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ಈ ಸಂದರ್ಭದಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿಓ ಶೈಲಾ ಎಸ್ ಪೂಜಾರಿ, ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ , ಪಂಚಾಯತ್ ಸಿಬ್ಬಂದಿ ಮಮತಾ, ಸುಜಾತ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ರೆಡ್ಕ್ರಾಸ್ ಬೈಂದೂರು ಘಟಕದ ಆಶ್ರಯದಲ್ಲಿ ಉಪ್ಪುಂದ ಗ್ರಾಮದ ಹಾಡಿಮನೆ ಗೋವಿಂದು ದೇವಾಡಿಗ ಮನೆಯವರಿಗೆ ಗೃಹ ಉಪಯೋಗಿ ವಸ್ತುಗಳಾದ ಟಾರ್ಪಲ್ ಹಾಗೂ ಇತರ ವಸ್ತುಗಳನ್ನು ವಿತರಿಸಲಾಯಿತು. ಹಾಗೆಯೇ ಗ್ರಾಮ ಪಂಚಾಯತಿಗೆ ಆಕ್ಸಿಮೀಟರ್, ಮಾಸ್ಕ್ ವಿತರಿಸಲಾಯಿತು, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೈಂದೂರು ರೆಡ್ಕ್ರಾಸ್ನ ಸಭಾಪತಿ ನಿತಿನ್ ಬಿ. ಶೆಟ್ಟಿ, ಕಾರ್ಯದರ್ಶಿ ಮನೋಹರ ಶೆಟ್ಟಿ, ಖಜಾಂಚಿ ಸಂತೋಷ ಶೆಟ್ಟಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ ಶೆಟ್ಟಿ ಸದಸ್ಯರಾದ ಮಂಜುನಾಥ ದೇವಾಡಿಗ, ನಾಗರಾಜ ಶೇಟ್ ರೆಡ್ಕ್ರಾಸ್ ಸದಸ್ಯರಾದ ಯೂ. ಸಂದೇಶ ಭಟ್ , ಅನಿಲ್.ಡಿ. ಉಪ್ಪುಂದ, ರಮೇಶ ಜೋಗಿ ಹಳಗೇರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ, ಅ12: ಜಿಲ್ಲೆಯಲ್ಲಿ ಗುರುವಾರ ದಾಖಲೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಂಡಿದೆ. ಇಂದು 191 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 96, ಕುಂದಾಪುರ, ಬೈಂದೂರು ತಾಲೂಕಿನ 49, ಕಾರ್ಕಳ, ಹೆಬ್ರಿ ತಾಲೂಕಿನ 45 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 191 ಪ್ರಕರಣಗಳಲ್ಲಿ 95 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 156 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕುಂದಾಪುರ ತಾಲೂಕಿನ 79 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 136 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1259 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 5756 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2,416 ಮಂದಿಗೆ ಮೊದಲನೇ ಡೋಸ್, 2,185 ಮಂದಿಗೆ ಎರಡನೇ ಡೋಸ್…
