Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಹಾಗೂ ಲಿಶಿಯಸ್ ಸಂಸ್ಥೆಯ ಸಹಯೋಗದಲ್ಲಿ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಮೂಲಕ ಕೊರೋನ ಸಂಕಷ್ಟಗಳಿಗೆ ಸ್ಪಂದಿಸುವ ಆಶಯದೊಂದಿಗೆ ಕರ್ನಾಟಕ ರಾಜ್ಯದ ಕೊಂಕಣಿ ಖಾರ್ವಿ ಸಮಾಜದ ಅರ್ಹ ಬಡ ಕುಟುಂಬಗಳಿಗೆ ಕೊಡಮಾಡಿದ ಅಕ್ಕಿಯ ಮೂಟೆಗಳನ್ನು ಗಂಗೊಳ್ಳಿ ವಲಯದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಖಾರ್ವಿ ಸಮಾಜದ ಹಿರಿಯ ಮುಖಂಡರಾದ ಜಿ.ಪುರುಷೋತ್ತಮ ಆರ್ಕಾಟಿ, ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಸುರೇಂದ್ರ ಖಾರ್ವಿ, ಕಾರ್ಯದರ್ಶಿ ಜಿ. ಎನ್. ಸತೀಶ್ ಖಾರ್ವಿ ಉಪಸ್ಥಿತರಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಕೋ- ಆಪರೇಟಿವ್ ಲಿಮಿಟೆಡ್ನ ಉಪಾಧ್ಯಕ್ಷರಾದ ಎನ್. ವಿಶ್ವನಾಥ್ ಆಚಾರ್ಯ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಫಲಾನುಭವಿಗಳಿಗೆ ದಾನ್ಯ ತುಂಬಿದ ಚೀಲಗಳನ್ನು ವಿತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೀನುಗಾರಿಕಾ ಕ್ಷೇತ್ರದ ಸುಸ್ಥಿರ ಮತ್ತು ಜವಾಬ್ದಾರಿಯುತ ಬೆಳವಣಿಗೆಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ರೂಪಿಸಿದ್ದು, ಪ್ರಸ್ತುತ ಸಾಲಿನಲ್ಲಿ ಈ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬೈಯೋಫ್ಲಾಕ್ ಮತ್ತು ಆರ್.ಎ.ಎಸ್ ಘಟಕ ನಿರ್ಮಾಣ, ಮೀನು ಮರಿ ಪಾಲನೆಗೆ ಉತ್ತೇಜನ, ಅಲಂಕಾರಿಕ ಮೀನು ಉತ್ಪಾದನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ನವೀಕರಣ, ಆಳ ಸಮುದ್ರ ಬೋಟ್ ನಿರ್ಮಾಣ, ಹಿನ್ನೀರು ಕೃಷಿ, ಪಂಜರ ಕೃಷಿ, ಮೀನಿನ ಆಹಾರ ಉತ್ಪಾದನಾ ಘಟಕ, ಮೀನು ಮಾರುಕಟ್ಟೆ ಮಳಿಗೆ ನಿರ್ಮಾಣ, ಮೀನುಗಾರಿಕೆ ಬೋಟುಗಳ ಉನ್ನತೀಕರಣ, ಬೋಟಿನಲ್ಲಿ ಬಯೋ ಟಾಯ್ಲೆಟ್ ನಿರ್ಮಾಣ, ಬೋಟಿನಲ್ಲಿ ಸಂಪರ್ಕ ಸಾಧನ ಅಳವಡಿಕೆ, ನಾಡ ದೋಣಿಗಳಿಗೆ ಸೇಫ್ಟಿ ಕಿಟ್ ಖರೀದಿ, ಆಹಾರ ಸುರಕ್ಷತಾ ಯೋಜನೆ ಹಾಗೂ ಇನ್ನಿತರ ಯೋಜನೆಗಳಿಗೆ ರೈತರು, ಮೀನುಗಾರರು ಮತ್ತು ಸಾರ್ವಜನಿಕರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 10 ರ ವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರ್ಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಜಿಲ್ಲೆಯಾದ್ಯಂತ ಕಾರ್ಯಗತಗೊಳಿಸುವ ಸಲುವಾಗಿ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೇಮಿಸಲಾಗಿದ್ದು, ಬೈಂದೂರು ಹೋಬಳಿಯ ಕೊಲ್ಲೂರು, ಹಳ್ಳಿಹೊಳೆ, ಕಾಲ್ತೂಡು, ಎಳಜಿತ್, ಜಡ್ಕಲ್, ಮುದೂರು, ಗೋಳಿಹೊಳೆ ವ್ಯಾಪ್ತಿಗೆ ಕೊಲ್ಲೂರು ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯಕ್ ಮೊ.ನಂ: 9482134461 ಇವರನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಮೇಲ್ಕಂಡ ನಿಯೋಜಿತ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಯಾವುದೇ ತರಹದ ಲೋಪಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ರಡಿ ಹಾಗೂ ಎಪಿಡೆಮಿಕ್ ಡಿಸೀಸಸ್ ರೆಗ್ಯುಲೇಷನ್ ಕ್ರಮವನ್ನು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಬೈಂದೂರು ಪೊಲೀಸ್ ವೃತ್ತದ ಠಾಣೆಗಳಿಗೆ ಸೋಮವಾರ ಕೊರೋನಾ ರಕ್ಷಣಾ ಕಿಟ್ ವಿತರಿಸಲಾಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಎ. ಕಾಯ್ಕಿಣಿ ಅವರಿಗೆ ಕಿಟ್ ಹಸ್ತಾಂತರಿಸಿದರು. ಈ ಸಂದರ್ಭ ಪ್ರೊಬೇಷನರಿ ಪಿ.ಎಸ್.ಐ ಸುಹಾಸ್, ಸಂಘದ ನಿರ್ದೇಶಕರಾದ ಈಶ್ವರ ಹಕ್ಲತೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಮ್ಯಾನೇಜರ್ ಚಂದ್ರಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ► ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ವೈದ್ಯಕೀಯ ಕಿಟ್ ದೇಣಿಗೆ  – https://kundapraa.com/?p=48148 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 897 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 388, ಕುಂದಾಪುರ, ಬೈಂದೂರು ತಾಲೂಕಿನ 271, ಕಾರ್ಕಳ, ಹೆಬ್ರಿ ತಾಲೂಕಿನ 231 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 897 ಪ್ರಕರಣಗಳಲ್ಲಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 879 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 80 ವರ್ಷದ ವೃದ್ಧ, 65 ವರ್ಷದ ವೃದ್ಧ, 62 ವರ್ಷದ ವೃದ್ಧ, ಕುಂದಾಪುರದ 54 ವರ್ಷದ ಪುರುಷ, 58 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 837 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6860 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 1520 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಂಡ್ಲೂರು, ಶಂಕರನಾರಾಯಣ, ಸಿದ್ದಾಪುರ ಹಾಗೂ ಬೈಂದೂರು ತಾಲೂಕಿನ ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಆಸ್ಪತ್ರೆಗಳಲ್ಲಿ ಕೋವೀಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದರು. ತಾಲೂಕು ವೈದ್ಯಾಧಿಕಾರಿಯಾದ ಡಾ. ನಾಗಭೂಷಣ ಉಡುಪ ಮತ್ತು ಆಯಾ ಅಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಲತಾ ನಾಯಕ್, ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ರೂಪಾ ಪೈ, ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ದೀಕ್ಷಾ ಎನ್, ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಪ್ರವೀಣ್ ಕುಮಾರ್, ವಂಡ್ಸೆ ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಕಾವ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಪುತ್ರನ್, ಸದಸ್ಯರಾದ ಸಂತೋಷ ಶೆಟ್ಟಿ, ಶಂಕರನಾರಾಯಣ ಗ್ರಾಪಂ ಮಾಜಿ ಅಧ್ಯಕ್ಷರಾದ ಸದಾಶಿವ್ ಶೆಟ್ಟಿ, ಸದಸ್ಯರಾದ ಗುರುದತ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ರೋಟರಿ ವಲಯ 1ರ ಎಲ್ಲಾ 8 ರೋಟರಿ ಕಬ್ಲ್‌ಗಳ ವತಿಯಿಂದ ಗ್ರಾಮೀಣ ಜನರ ತುರ್ತು ಆರೋಗ್ಯ ಸೇವೆಗೆ ಪೂರಕವಾಗಿ ಅಗತ್ಯವಿರುವ ಪಲ್ಸ್ ಆಕ್ಸಿ ಮಿಟರ್, ವೈದ್ಯಕೀಯ ಉಪಕರಣಗಳನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯತೆಗೆ ಅನುಗುಣವಾಗಿ ಹಸ್ತಾಂತರಿಸಲಾಯಿತು. ಕುಂದಾಪುರದ ತಾಲೂಕು ಆರೋಗ್ಯ ಕೇಂದ್ರದಲ್ಲಿ ಮಾಜಿ ರೋಟರಿ ಜಿಲ್ಲಾ ಗವರ್ನರ್ ಅಭಿನಂದನೆ ಶೆಟ್ಟಿ ತಾಲೂಕು ವೈದ್ಯಾಧಿಕಾರಿಗಳಾದ ಹಾಗೂ ರೋಟರಿ ವಲಯ 1ರ ಸಹಾಯಕ ಗವರ್ನರ್ ಡಾಕ್ಟರ್ ನಾಗಭೂಷಣ್ ಉಡುಪ  ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಟರಿ ವಲಯ 1ರ ನಿಯುಕ್ತ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ಮತ್ತು ರೋಟರಿ ವಲಯ 1 ರ ಪದಾಧಿಕಾರಿಗಳಾದ ಕೆಕೆ. ಕಾಂಚನ್, ಡಾಕ್ಟರ್ ಸಂದೀಪ್ ಶೆಟ್ಟಿ, ಡಾಕ್ಟರ್ ರಾಜಾರಾಮ್ ಶೆಟ್ಟಿ ಹಾಗೂ ಗಣೇಶ್ ಕಾರ್ಯದರ್ಶಿಗಳು ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಮೇ.16: ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂಗೀತಗಾರ ಫಾಸ್ಕಲ್ ಡಿಸೋಜಾ (53ವ) ನಿಧನರಾದರು. ಕಳೆದ 27 ವರ್ಷಗಳಿಂದ ಕುಂದಾಪುರ ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವಸಲ್ಲಿಸುತ್ತಿದ್ದರು. ಸಂಗೀತಗಾರರಾಗಿ ಗುರುತಿಸಿಕೊಂಡಿದ್ದ ಅವರು ಹಲವಾರು ಗೀತೆಗಳನ್ನು ರಚಿಸಿ ಆಲ್ಬಂ ಹೊರತಂದಿದ್ದರು. ಕೊಂಕಣಿ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿದ್ದರು. ಸುದೀರ್ಘ ಕಾಲ ಕುಂದಾಪುರ ಚರ್ಚಿನಲ್ಲಿ ಭಕ್ತಿಗಾಯನಗಳಿಗೆ ಸಂಗೀತ ನೀಡಿ ಅಮೂಲ್ಯ ಸೇವೆ ನೀಡಿದ್ದರು. ಮೃತರು ಪತ್ನಿ ವಿನೀತಾ, ಪುತ್ರಿ ಪ್ರಮೀತಾ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೌಕ್ತೆ ಚಂಡಮಾರುತದಿಂದಾಗಿ ಕುಂದಾಪುರ & ಬೈಂದೂರು ತಾಲೂಕುಗಳಲ್ಲಿ ಅಪಾರ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಶನಿವಾರ ರಾತ್ರಿಪೂರ್ತಿ ಭಾರಿ ಗಾಳಿ ಮಳೆ ಸುರಿದಿದ್ದರಿಂದ ಹಲವೆಡೆ ಮನೆ ಕೊಟ್ಟಿಗೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ. ರಸ್ತೆ, ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಯಿತು. ಈ ತನಕ ಕುಂದಾಪುರ ತಾಲೂಕಿನ 44 ಮನೆಗಳಿಗೆ ಭಾಗಶಃ ಹಾನಿಯಾಗಿರುಗ ಬಗ್ಗೆ ವರದಿ ದೊರೆತಿದ್ದು ಸುಮಾರು ರೂ, 17,94,000 ನಷ್ಟುವುಂಟಾಗಿದೆ. ಜಾನುವಾರು ಕೊಟ್ಟಿಗೆ, ಅಂಗಡಿ ಕೋಣೆ ಸೇರಿದಂತೆ ಇತರೆ ಕಟ್ಟಡಗಳಿಗೆ ಹಾನಿಯಾಗಿ ಸುಮಾರು 1,43,000 ರೂ. ನಷ್ಟ ಉಂಟಾಗಿದೆ. ಬೈಂದೂರು ತಾಲೂಕಿನ 3 ಮನೆಗೆಳಿಗೆ ಸಂಪೂರ್ಣ ಹಾನಿ, 39 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಒಟ್ಟು ರೂ. 40,95,000 ನಷ್ಟ ಉಂಟಾಗಿದೆ. ಅಂಗಡಿ ಕೋಣೆ, ಅಂಗನವಾಡಿಯ 5 ಆವರಣ ಗೋಡೆ ಸೇರಿ ಒಟ್ಟು ರೂ. 4,55,000 ನಷ್ಟ ಉಂಟಾಗಿದೆ. ತೋಟಗಾರಿಕಾ ಬೆಳೆಯ ಹಾನಿಯಿಂದಾಗಿ ರೂ. 3,25000 ನಷ್ಟ…

Read More

ಕುಂದಾಪ್ರ ಡಾಟ್ ಕಾಮ ಸುದ್ದಿ. ಕುಂದಾಪುರ,ಮೇ.16: ಆನಗಳ್ಳಿ ದೂಪದಕಟ್ಟೆ ಮನೆ ರಘುರಾಮ ಶೆಟ್ಟಿ (91 ವ) ಭಾನುವಾರ ವಯೋಸಹಜ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಉಪ ತಹಶೀಲ್ದಾರರಾಗಿ ನಿವೃತ್ತಿ ಹೊಂದಿದ ಅವರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿತ್ವದಿಂದ ಚಿರಪರಿಚಿತರಾಗಿ ಸಾಮಾಜಿಕ ಹಾಗೂ ಧಾರ್ಮಿಕ ರಂಗದಲ್ಲಿ ತೊಡಗಿಸಿಕೊಂಡಿದ್ದರು. ಬಸ್ರೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಆನಗಳ್ಳಿ ಹಿರಿಯ ನಾಗರಿಕ ಸಂಘದ ಅಧ್ಯಕ್ಷರಾಗಿ, ಆನಗಳ್ಳಿ ಶ್ರೀ ಲಕ್ಷ್ಮೀ ಚನ್ನಕೇಶವ ದೇವಾಲಯದ ಗೌರವಾಧ್ಯಕ್ಷರಾಗಿ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬಸ್ರೂರು ಇದರ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Read More