ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತನ್ನು ಕಾಡಿದ ಕೋವಿಡ್ ಮಹಾಮಾರಿ, ವೈದ್ಯಕೀಯ ಸೌಲಭ್ಯ ಎಷ್ಟಿದ್ದರೂ ಸಾಲದು ಎಂಬ ಸತ್ಯವನ್ನು ಸಾರಿದೆ. ಸರ್ಕಾರದಿಂದ ಮಾತ್ರ ಇದರ ಕೊರತೆ ನೀಗಲು ಅಸಾಧ್ಯವಾಗಿರುವುದರಿಂದ ಜನರ ಕೊಡುಗೆ ಅಮೂಲ್ಯವೆನಿಸಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ನಾವುಂದ-ಮರವಂತೆಯ ‘ನಮ್ಮ ಊರು-ನಮ್ಮ ಆರೋಗ್ಯ’ ಹೆಸರಿನ ವೃತ್ತಿಪರರ ತಂಡ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿತ್ತ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ಆಮ್ಲಜನಕ ಸಿಲಿಂಡರ್ ಅನ್ನು ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ‘ನಮ್ಮ ಊರು-ನಮ್ಮ ಆರೋಗ್ಯ’ ತಂಡದ ಉಪಕ್ರಮವನ್ನು ಶ್ಲಾಘಿಸಿದ ಅವರು ಈ ಮಾದರಿ ಎಲ್ಲರಿಗೆ ಅನುಕರಣೀಯ ಎಂದರು. ‘ನಮ್ಮ ಊರು-ನಮ್ಮ ಆರೋಗ್ಯ’ ತಂಡ, ಗ್ರಾಮ ಪಂಚಾಯಿತಿ ಮತ್ತು ಮರವಂತೆಯ ಸೇವಾ ಸಂಘಟನೆಗಳು ಸಂಯುಕ್ತವಾಗಿ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಕೋರಿ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶಾಸಕರು ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಿಸುವ ಮತ್ತು ಹಗಲು-ರಾತ್ರಿ ಆರೋಗ್ಯ ಸೇವೆ ದೊರಕಿಸುವ ಭರವಸೆಯಿತ್ತರು. ಸ್ವಾಗತಿಸಿ, ತಂಡವನ್ನು ಪರಿಚಯಿಸಿದ ತಂಡದ ಸದಸ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದೊಂದು ವಾರಗಳಿಂದ ಸತತ ಮಳೆಯಾಗುತ್ತಿದ್ದು, ಭಾನುವಾರ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವೆಡೆ ನದಿಗಳು ಉಕ್ಕಿ ಹರಿದಿದ್ದರಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಮಧ್ಯಾಹ್ನದ ವೇಳೆಗೆ ಮಳೆ ಕಡಿಮೆಯಾದ್ದರಿಂದ ನೆರೆಹಾವಳಿ ತಗ್ಗಿತ್ತು. ಶನಿವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿದ್ದುದರಿಂದ ಭಾನುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ಬಿಜಾಡಿ, ಕೋಟೇಶ್ವರ, ಬೈಂದೂರು ತಾಲೂಕಿನ ಉಪ್ಪಿನಕುದ್ರು, ಮರವಂತೆ, ನಾವುಂದ, ಕಿರಿಮಂಜೇಶ್ವರ, ಬಿಜೂರು, ಶಿರೂರು ಗ್ರಾಮಗಳು, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹಲವೆಡೆ ನೆರೆ ನೀರು ನುಗ್ಗಿತ್ತು. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮನೆ ಹಾನಿ, ಮನೆಗಳಿಗೆ ನೆರೆ ನೀರು ನುಗ್ಗಿರುವುದು, ಅಲ್ಲಲ್ಲಿ ಮರ ಉರಳಿರುವುದು ಸೇರಿದಂತೆ ಚಿಕ್ಕಪುಟ್ಟು ನೆರೆಹಾನಿಯಾಗಿದೆ. ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್ ಹಾಗೂ ಕುಂದಾಪುರ ತಹಶೀಲ್ದಾರ್ ಬಿ. ಆನಂದಪ್ಪ ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕ ಮಳೆ ಬಂದರೂ ನೀರು ರಸ್ತೆ ಮೇಲೆ: ಅರ್ಧ ಮಳೆಗಾಲವೇ ಬಂದರೂ ಈತನಕವೂ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿಗಳು ಎಚ್ಚೆತ್ತಂತೆ ಕಾಣುತ್ತಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಸರ್ಕಾರದ ದಿನಾಂಕ 03.07.2021ರ ಆದೇಶದಲ್ಲಿ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು , ಸದರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪೊಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದಿದ್ದರಿಂದ ಸರ್ಕಾರದ ಆದೇಶವನ್ನು ದಿನಾಂಕ 02.08.2021 ರವರೆಗೆ ಮುಂದುವರಿಸಿ ಹೆಚ್ಚುವರಿ ಚಟುವಟಿಕೆಗಳಿಗೆ ಅನುಮತಿಯನ್ನು ನೀಡಿರುತ್ತದೆ. ಆದ್ದರಿಂದ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ದಿನಾಂಕ 19.07.2021 ರಿಂದ ಮುಂದಿನ ಆದೇಶದವರಗೆ ಈ ಕೆಳಗಿನಂತೆ ಆದೇಶ ಹೊರಡಿಸುತ್ತೇನೆ. A) ಜಿಲ್ಲೆಯಾದ್ಯಂತ ಸಂಜೆ 10.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. B) ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ವ್ಯಾಪ್ತಿಯ ಹೊರಗಡೆ ಜಿಲ್ಲೆಯಾದ್ಯಂತ ಅನುಮತಿಸಲಾಗಿದೆ. ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯು.ಬಿ. ಶೆಟ್ಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್ ವತಿಯಿಂದ 10 ಬ್ಯಾರಿಕೇಡ್’ಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಪಿಎಸ್ಐ ಪವನ್ ನಾಯಕ್, ಯುಬಿಎಸ್ ಶಿಕ್ಷಣ ಸಂಸ್ಥೆಗಳ ಸಂಯೋಜಕ ಸುಬ್ರಹ್ಮಣ್ಯ ಜೋಶಿ, ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಧ್ಯಾಯ ಸಂದೇಶ್ ಶೆಟ್ಟಿ, ಸುಬ್ರಹ್ಮಣ್ಯ ಬಾಡ, ಸುಕುಮಾರ್ ಶೆಟ್ಟಿ ಸೂರ್ಕುಂದ, ಹೆನ್ಸಿ ಲೋಬೋ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿಗೊಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯತೆಯನ್ನು ಮನಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ ಹಲವು ವರ್ಷಗಳಿಂದ ಕಾಲೇಜು ತೆರೆಯಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಕಳೆದ ಬಾರಿ ಸಂಸದರಿಂದ ಉತ್ತಮ ಪ್ರತಿಕ್ರಿಯೆ ಬಂದಿತ್ತಾದರೂ ಭರವಸೆ ಈಡೇರಲಿಲ್ಲ. ಶೀಘ್ರವೇ ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯುವಂತೆ ಶಾಸಕರ ಬಳಿ ಎಬಿವಿಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮನವಿಗೆ ಉತ್ತಮವಾಗಿ ಸ್ಪಂದಿಸಿದ ಶಾಸಕರು ಪಿಪಿಪಿ ಮಾಡೆಲ್ ನ ಅಡಿಯಲ್ಲಿ ವೈದ್ಯಕೀಯ ಕಾಲೇಜು ತೆರೆಯಲು ಅವಕಾಶವಿದ್ದು , ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಗೆಯೆ ಸರ್ಕಾರಿ ನರ್ಸಿಂಗ್ ಕಾಲೇಜನ್ನೂ ಉಡುಪಿಯಲ್ಲಿ ತೆರೆಯುವುದಕ್ಕೆ ತಮ್ಮ ಪ್ರಾಮಾಣಿಕ ಪ್ರಯತ್ನಪಡುವುದಾಗಿ ಶಾಸಕರು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತರಾದ ಡಾ. ಶಿವಾನಂದ ನಾಯಕ್ , ನಗರ ಕಾರ್ಯದರ್ಶಿ ಸುಮುಖ ಭಟ್ ಸಹಕಾರ್ಯದರ್ಶಿ ಆಕಾಶ್ ವಿದ್ಯಾರ್ಥಿ ಪ್ರಮುಖರಾದ ವಿಕಾಸ್, ಚಿನ್ಮಯ ಹೆಗ್ಡೆ, ಗಿರೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ:…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಖಂಬದಕೋಣೆ ಗ್ರಾಮದ ಹಳಗೇರಿಯ ಸರ್ವೆ ನಂಬ್ರ 166/ಪಿ1ರಲ್ಲಿ ಸುಮಾರು 53 ಎಕ್ರೆ ದಟ್ಟಾರಣ್ಯ ಪ್ರದೇಶವನ್ನು ಪೊರಂಬೂಕು ಶೀರ್ಷಿಕೆಯಿಂದ ವಿರಹಿತಗೊಳಿಸಿ ಕೈಗಾರಿಕಾ ಉದ್ದೇಶಕ್ಕೆ ಬಳಸಲು ಈಗ ಇರುವ ಅರಣ್ಯ ನಾಶಕ್ಕೆ ಅವಕಾಶ ಕೊಡಬಾರದಾಗಿ ಹಳಗೇರಿ, ತೆಂಕಬೆಟ್ಟು, ಗುಮ್ಮಿತೋಟ, ಖಂಬದಕೋಣೆ, ನಾಗೂರು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆ ಸದಸ್ಯರು ಖಂಬದಕೋಣೆ ಗ್ರಾಪಂ ಎದುರು ಶನಿವಾರ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಪ್ರದೇಶವು 75ರಿಂದ 100ಮೀ ವರೆಗೆ ಎತ್ತರವಿರುವ ಕಿರು ಪರ್ವತವಾಗಿದ್ದು, ದಟ್ಟವಾದ ಅರಣ್ಯವಾಗಿದೆ. ಅನೇಕ ವನ್ಯಪ್ರಾಣಿ, ಪಕ್ಷಿಗಳಿಗೆ ಆಶ್ರಯತಾಣವಾಗಿದೆ. ಕೈಗಾರಿಕೆಗಾಗಿ ಈ ಸ್ಥಳದಲ್ಲಿರುವ ಎಲ್ಲಾ ಮರಗಳನ್ನು ಕಟಾವು ಮಾಡಿದರೆ ಇದರಿಂದ ಅವಲಂಬಿತವಾದ ಕೃಷಿ ಕುಟುಂಬಗಳಿಗೆ ತೊಂದರೆಯಾಗಲಿದೆ. ಅಲ್ಲದೇ ಪ್ರಕೃತಿದತ್ತವಾದ ಈ ಗುಡ್ಡವನ್ನು ಸಮತಟ್ಟು ಮಾಡುವುದರಿಂದ ಭೂಕುಸಿತದಂತಹ ನೈಸರ್ಗಿಕ ವಿಕೋಪದ ಸಾಧ್ಯತೆಗಳಿವೆ. ಈ ಭಾಗದ ಜನರ ಜೀವನಾಡಿಯಾಗಿರುವ ಗುಡ್ಡವು ಈ ಭಾಗದ ಜನರ ದೈನಂದಿನ ಜೀವನಕ್ಕೆ ತುಂಬಾ ಉಪಯುಕ್ತವಾಗಿದೆ. ಜೀವರಕ್ಷಕ ಗುಡ್ಡದ ಅರಣ್ಯ ನಾಶಮಾಡಿ ಕೈಗಾರಿಕಾ ಕೇಂದ್ರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲೇ ಸುಪ್ರಸಿದ್ಧವಾದ ನಮ್ಮ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಉಂಟಾದ ಒತ್ತಡದಿಂದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದ ವೇಳೆಗೆ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಡಾ. ಸುಧಾಕರ್ ಅವರು ಪರಿಪೂರ್ಣವಾಗಿ ಸರ್ಕಾರದ ಅಧೀನದಲ್ಲಿ ಕಾಲೇಜು ಸ್ಥಾಪಿಸುವ ಬದಲಾಗಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಕುರಿತು ಹೇಳಿದ್ದಾರೆ ಆದರೆ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ಎಂದು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ. ಜಿಲ್ಲೆಯ ಜನರ ಬೇಡಿಕೆಯ ಅನುಸಾರವಾಗಿ ಪರಿಪೂರ್ಣವಾದ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಒತ್ತಾಯಿಸುತ್ತೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಮತ್ತು ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜನ್ನು ನಾವು ಸ್ವೀಕರಿಸುವುದಿಲ್ಲ. ಜಿಲ್ಲೆಯ ಜನರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಸೌಪರ್ಣಿಕಾ, ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಅತ್ಯಂತ ಜಾಗರೂಕತೆಯಿಂದ ಯಶಸ್ವಿಯಾಗಿ ನಡೆಸಬೇಕಾದ ಜವಾಬಾರಿ, ಹೊಣೆಗಾರಿಕೆ ಎಲ್ಲಾ ಶಿಕ್ಷಕರ ಮೇಲಿದೆ. ಪರೀಕ್ಷೆ ಸಮಯದಲ್ಲಿ ಕೈಗೊಳ್ಳಬೇಕಾದ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದ ಅವರು ಪರೀಕ್ಷೆ ಸಮಯದಲ್ಲಿ ಮಕ್ಕಳಲ್ಲಿ ಧೈರ್ಯ, ಆತ್ಮವಿಶ್ವಾಸ ತುಂಬಬೇಕು ಎಂದರು. ಪ್ರಶ್ನೆ ಪತ್ರಿಕೆ ವಿತರಣೆ, ಸಂಗ್ರಹ ಹಾಗೂ ಪರೀಕ್ಷೆ ಸಿದ್ಧತೆಗಳ ಬಗ್ಗೆ ಕಾಲೇಜಿನ ಗುಮಾಸ್ತ ಶ್ರೀಧರ ಗಾಣಿಗ ಮಾಹಿತಿ ನೀಡಿದರು. ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಯಶಸ್ಸಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಹಕರಿಸುವಂತೆ ಮನವಿ ಮಾಡಿದರು. ಕೊಠಡಿ ಮೇಲ್ವಿಚಾರಕರು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸನತ್ ಬಳಗಾರ ಕೊಲ್ಲೂರು ಪುನರಾಯ್ಕೆಯಾಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಸನತ್ ಬಳಗಾರ ಕೊಲ್ಲೂರು ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಗರ ಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ.ಉಪ್ಪುಂದದಲ್ಲಿ 130 ಕೋಟಿರೂ.ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾಕರಂದ್ಲಾಜೆ ಹೇಳಿದರು. ಜಿಲ್ಲೆಯಲ್ಲಿಕೋವಿಡ್ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು…
