Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಆಳ್ವಾಸ್ ಪದವಿ ಪೂರ್ವ ಕಾಲೇಜು ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. 600ಕ್ಕೆ 600 ಅಂಕ ಗಳಿಸಿದ ದ.ಕ ಜಿಲ್ಲೆಯ 445 ವಿದ್ಯಾರ್ಥಿಗಳಲ್ಲಿ 190 ವಿದ್ಯಾರ್ಥಿಗಳು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು. ಇವರಲ್ಲಿ 13 ವಿದ್ಯಾರ್ಥಿಗಳು ಆಳ್ವಾಸ್ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳೆಂಬುದು ಗಮನಾರ್ಹವಾಗಿದೆ. ಪರೀಕ್ಷೆಗೆ ಹಾಜರಾದ 2510 ವಿದ್ಯಾರ್ಥಿಗಳಲ್ಲಿ 1637 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ 19 ವಿಷಯವಾರು ಫಲಿತಾಂಶದಲ್ಲಿ ಒಟ್ಟು 3016 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ಗಣಿತ ಹಾಗೂ ಇಂಗ್ಲೀಷ್ ನಲ್ಲಿ ಕ್ರಮವಾಗಿ 542 ಮತ್ತು 514 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಬಯೋಲಜಿ, ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ, ಅಕೌಂಟೆನ್ಸಿಯಲ್ಲಿ ಕ್ರಮವಾಗಿ 403,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಜಿ. ಆಯ್ಕೆಯಾಗಿದ್ದಾರೆ. ಗುರುರಾಜ್ ಬಿ. (ಉಪಾಧ್ಯಕ್ಷರು), ಶ್ರೀಕಾಂತ ಎಸ್. (ಕಾರ್ಯದರ್ಶಿ), ಅಶ್ವಥ್ ಕುಮಾರ್ ಬಿ. (ಜತೆ ಕಾರ್ಯದರ್ಶಿ), ಕರುಣಾಕರ ಮರವಂತೆ (ಖಜಾಂಚಿ), ಸಂಜೀವ ಜಿ.ಟಿ. (ಮೊಕ್ತೇಸರ), ಶಿವ ಜಿ.ಟಿ., ಶ್ರೀಕಾಂತ ಎನ್., ಕುಮಾರ ಜಿ.ಟಿ. (ಅರ್ಚಕರು), ಶಶಿಧರ ಜಿ.ಟಿ., ಪಾಂಡು ಎನ್., ಸಂದೇಶ ಜಿ.ಟಿ., ಲಕ್ಷ್ಮಣ, ಚಂದ್ರ, ಸುರೇಶ ಡಿ., ನರಸಿಂಹ ಜಿ.ಎಂ., ಅಣ್ಣಯ್ಯ ಜಿ.ಎಂ., ಶ್ರೀನಿವಾಸ ಬಿ., ಸುಂದರ ಬಿ., ಶ್ರೀನಿವಾಸ ಎಂ.ಜಿ. (ಕಾರ್ಯಕಾರಿ ಸಮಿತಿ ಸದಸ್ಯರು) ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಸನ್ನಾ ಪೈ 600ರಲ್ಲಿ 600 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ್ದಾರೆ. ಇಂಗ್ಲೀಷ್-100, ಸಂಸ್ಕೃತ-100, ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಜೀವಶಾಸ್ತ್ರದಲ್ಲಿ-100ಅಂಕಗಳೊಂದಿಗೆ ಒಟ್ಟು600 ಅಂಕಗಳಿಸಿ ಕಾಲೇಜಿಗೆ ಹಾಗೂ ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೂಡ ಈಕೆ ಶಾಲೆಗೆ ಮತ್ತು ಗಂಗೊಳ್ಳಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2020-2021ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಕುಂದಾಪುರ ಆರ್. ಎನ್. ಶೆಟ್ಟಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಸ್ತುತಿ (ಪಿಸಿಎಂಬಿ), ರಾಜೇಶ್ವರಿ ಶೆಟ್ಟಿ ಆರ್. (ಪಿ.ಸಿ.ಎಂ.ಸಿ), ಶರಣ್ಯ (ಪಿಸಿಎಂಎಸ್), ವಾಣಿಜ್ಯ ವಿಭಾಗ ಧನ್ಯ ಕೆ (ಬಿಇಬಿಎ) ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು 478 ವಿದ್ಯಾರ್ಥಿಗಳಲ್ಲಿ 206 ವಿಶಿಷ್ಠ ಶ್ರೇಣಿ ಹಾಗೂ 255 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಾಕೃತಿಕ ವಿಕೋಪದಿಂದ ಯಾವುದೇ ಮಾನವ ಮತ್ತು ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ರಾಜ್ಯದಲ್ಲಿ ಅಧಿಕವಾಗಿ ಮಳೆಯಾಗುತ್ತಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದರು. ಮುಂಗಾರು ಮಳೆಯ ವಿಕೋಪ ಸಂದರ್ಭದಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಯಾವುದೇ ಜೀವ ಹಾನಿಯಾದಗಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ರಾಜ್ಯದಲ್ಲಿ 4 ಎನ್.ಡಿ.ಆರ್.ಎಫ್, ಮತ್ತು ಎಸ್.ಡಿ.ಆರ್.ಎಫ್ ತಂಡಗಳು ವಿಕೋಪ ನಿರ್ವಹಣೆಗೆ ನೆರವು ನೀಡಲು ಸಿದ್ಧವಾಗಿದ್ದು, ಅಗತ್ಯವಿದ್ದಲ್ಲಿ ಕೂಡಲೇ ನೆರವು ಪಡೆಯಿರಿ ಎಂದ ಸಿಎಂ ಯಡಿಯೂರಪ್ಪ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಕೋಪ ತಡೆಗೆ ಅಗತ್ಯವಿರುವ ಸುರಕ್ಷತಾ ಉಪಕರಣಗಳನ್ನು ಹಾಗೂ ಕಾಳಜಿ ಕೇಂದ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 24*7 ಕಂಟ್ರೋಲ್ ರೂಂ ಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣದಲ್ಲಿ ಸ್ಪಂದಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ. 218 ವಿದ್ಯಾರ್ಥಿಗಳ ಪೈಕಿ 129 ವಿಜ್ಞಾನ ವಿಭಾಗ ಹಾಗೂ 89 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿದ್ದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು 600ರಲ್ಲಿಲ 600 ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕರ್ನಾಟಕ ಸರಕಾರ 18 ವರ್ಷ ಮೇಲ್ಪಟ್ಟವರಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 – 44 ವರ್ಷದವರಿಗೆ ಆದ್ಯತೆ ಮೇರೆಗೆ ಬೃಹತ್ ಲಸಿಕಾ ಅಭಿಯಾನದಲ್ಲಿ 2832 ಜನರಿಗೆ ಲಸಿಕೆ ವಿತರಿಸಲಾಯಿತು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, “ಸೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ಜನರಿಗೆ ಉಚಿತ ಲಸಿಕೆ, ಕೊರೊನಾ ಪರೀಕ್ಷೆ ಹಾಗೂ ಸಮಾಲೋಚನೆ ನಡೆಸಲಾಗಿತ್ತು. ತಾಲೂಕಿನಲ್ಲಿ ತ್ವರಿತ ಗತಿಯಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಆರಂಭದಲ್ಲಿ ಲಸಿಕೆಯ ಬಗ್ಗೆ ಜನರಲ್ಲಿದ್ದ ಗೊಂದಲದಿಂದ ಹೆಚ್ಚಿನ ಜನರು ಲಸಿಕೆ ಪಡೆಯಲು ಹಿಂಜರಿದಿದ್ದರೂ, ಇದೀಗ ವ್ಯವಸ್ಥಿತವಾಗಿ ಕೊರೋನಾ ಎದುರಿಸಲು ಜನರು ಸಜ್ಜಾಗಿದ್ದಾರೆ. ಈ ಬಾರಿ ಲಸಿಕೆ ಸಿಗದವರಿಗೆ ಮುಂದಿನ ದಿನಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಲಿತ ಯುವಕ ನಾಗರಾಜ್ ಮೇಲ್ಪಂಕ್ತಿ ಶಿರೂರು ಇವರ ಮೇಲೆ ನಡೆದ ಮಾರಣಾಂತಿಕವಾಗಿ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮತ್ತು ಶಿರೂರು ಮೇಲ್ಪಂಕ್ತಿ ಹಾಗೂ ಮೈದಿನ್ ಪುರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ದಲಿತರ ಮತ್ತು ಅಮಾಯಕರ ಮೇಲಿನ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ರೀತಿಯ ಕಾನೂನು ಕ್ರಮ ಕೈಗೊಳ್ಳುವಂತೆ ಬೈಂದೂರು ಠಾಣಾಧಿಕಾರಿಗಳಿಗೆ ತಾಲೂಕು ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಯ ತಾಲ್ಲೂಕು ಸಂಚಾಲಕರಾದ ರಾಮ ಎಂ ಮಯ್ಯಾಡಿ, ಶಿರೂರು ಗ್ರಾಮ ಶಾಖೆಯ ಸಂಚಾಲಕರಾದ ರಮೇಶ್ ಶಿರೂರು, ಕೆರ್ಗಾಲು ಗ್ರಾಮ ಶಾಖೆಯ ಸಂಚಾಲಕರಾದ ದುರ್ಗಾ ನಂದನವನ, ಬೈಂದೂರು ತಾಲೂಕು ಸಂಘಟನಾ ಸಂಚಾಲಕರಾದ ರಾಘವೇಂದ್ರ ಎನ್ .ಜಿ, ರಾಘವೇಂದ್ರ ಶಿರೂರು ರಾಜೇಶ್ ಕುಮಾರ್ ಕೆರ್ಗಾಲ್ ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ್ಗೆ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ರಾಷ್ಟ್ರೀಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್ಲಾಕ್ ರಸ್ತೆ ನಿರ್ಮಿಸಲು ಅಗತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಕ್ರೀದ್ ಪ್ರಯುಕ್ತ  ತಾಲೂಕು ವ್ಯಾಪ್ತಿಯಲ್ಲಿ ಗೋ ಕಳ್ಳತನ ನಡೆಯುತ್ತಿದ್ದು ಗಸ್ತು ಹೆಚ್ಚಿಸುವ ಹಾಗೂ ಚೆಕ್ ಪೋಸ್ಟ್ ಹೆಚ್ಚಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ ಪೋಲಿಸ್ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭ ಬೈಂದೂರು ತಾಲೂಕು ಬಜರಂಗದಳ ಸಂಚಾಲಕರಾದ ಸುಧಾಕರ್ ನೆಲ್ಯಾಡಿ, ಮಹೇಶ್ ಖಾರ್ವಿ, ಸುರಕ್ಷಾ ಪ್ರಮುಖ್, ಸುಕೇಶ್ ಬೈಂದೂರು , ಗಿರೀಶ್ ಶಿರೂರು, ಯೋಗೇಶ್ ಶಿರೂರು ಉಪಸ್ಥಿತರಿದ್ದರು.

Read More