ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಾದ್ಯಂತ ಕಳೆದ ಮೂರು ದಿನದಿಂದ ಸುರಿಯತ್ತಿದ್ದ ಮಳೆಗೆ ತಾಲೂಕಿನ ನದಿಗಳ ನೀರು ಏರುತ್ತಿದ್ದು, ಅಲ್ಲಲ್ಲಿ ಮನೆ, ದೇವಸ್ಥಾನಗಳ ಮೇಲೆ ಮರಬಿದ್ದು ನಷ್ಟ ಸಂಭವಿಸಿದೆ. ಬಸ್ರೂರಿನ ಮಂಕಿ ಗಣಪಯ್ಯ ಗಾಣಿಗ ಎಂಬುವರ ಮನೆ ಮೇಲೆ ಮರ ಉರುಳಿ ಸಾವಿರ ನಷ್ಟ ಸಂಭವಿಸಿದ್ದು, ಮನೆಯಲಿದ್ದ ಗಣಪಯ್ಯ ಗಾಣಿಗ, ವಾರಿಜಾ ಎಂಬವರಿಗೆ ತಲೆಗೆ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಕ್ಕಟ್ಟೆ ಗ್ರಾಮದಲ್ಲಿ ಇರುವ ದೇವಸ್ಥಾನದ ವಿಶ್ರಾಂತಿ ಕೊಠಡಿ ಮೇಲ್ಮಾಡು ಹಾರಿ ಹೋಗಿದ್ದು, ಘಟ್ಟದಲ್ಲಿ ಮಳೆ ಹೆಚ್ಚಿದ್ದು, ತಾಲೂಕಿನಲ್ಲಿ ಹರಿವ ಸೌಪರ್ಣಿಕಾ, ಚಕ್ರಾ, ವರಾಹಿ, ಕುಬ್ಜ, ಖೇಟಕಿ ನದಿಗಳ ನೀರಿನ ಹರವು ಕೂಡಾ ಹೆಚ್ಚಿದೆ. ನದಿಯಲ್ಲಿ ನೀರು ಹೆಚ್ಚಿದ್ದರಿಂದ ಸಾಲ್ಬುಡ, ಹಡವು, ಬಡಾಕೆರೆ, ಕಟ್ಟು, ಉಪ್ಪಿನಕುದ್ರು ತಗ್ಗು ಪ್ರದೇಶದಕ್ಕೆ ನೆರೆ ಭೀತಿ ಎದುರಾಗಿದೆ. ಮಳೆ ಚುರುಕುಗೊಂಡಿದ್ದರಿಂದ ಯಾಡಾಡಿ ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಮರ ಬಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ವಿದ್ಯುತ್ ಸಂಪರ್ಕ ವ್ಯತ್ಯಯವಾಯಿತು. ಸ್ಥಳೀಯರು ಮರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾರ್ವಿ ಸಮಾಜದಲ್ಲಿ ಯಾವುದೇ ಸಂಘರ್ಷ ನಡೆದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ, ಸಮಾಜದ ಜನರ ನಡುವೆ ಯಾವುದೇ ಗೊಂದಲಗಳಿಲ್ಲ. ವೈಯಕ್ತಿಕ ಸಮಸ್ಯೆ ಹಿನ್ನೆಲೆಯಲ್ಲಿ ಇಡೀ ಸಮಾಜದ ದೂಷಣೆ ಮಾಡುವುದು ಸರಿಯಲ್ಲ ಎಂದು ಖಾರ್ವಿಕೇರಿ ಮಹಾಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಯಾನಂದ ಖಾರ್ವಿ ಹಾಗೂ ವಿದ್ಯಾರಂಗ ಮಿತ್ರ ಮಂಡಳಿ ಅಧ್ಯಕ್ಷ ಅರುಣ್ ಖಾರ್ವಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕುಂದಾಪುರ ವಿದ್ಯಾರಂಗ ಮಿತ್ರ ಮಂಡಳಿಯಲ್ಲಿ ಆಯೋಜಿಸಿದ್ದ ಸಮಾಜದ ಮುಖಂಡರ ಸಭೆ ಬಳಿಕ ನಂತರ ಮಾತನಾಡಿ, ಸತೀಶ್ ಖಾರ್ವಿ ಕಜಕಿಸ್ಥಾನದಲ್ಲಿ ನಡೆದ ಭಾರ ಎತ್ತುವ ಸ್ಪರ್ಧೆಗೆ ಹಣಕಾಸಿನ ನೆರವು ಕೇಳಿದ್ದರು. ಆ ಸಂದರ್ಭದಲ್ಲಿ ವಿದ್ಯಾರಂಗ ಮಿತ್ರಮಂಡಳಿಯ ಸುವರ್ಣ ಮಹೋತ್ಸವ ಕಟ್ಟಡ ನಿರ್ಮಾಣಕ್ಕಾಗಿ ಮುಂದಾಗಿದ್ದೆವು. ಅಲ್ಲದೆ ದಾನಿಗಳಿಂದ ವಂತಿಗೆ ಮಾಡುತ್ತಿದ್ದು ಹಣಕಾಸಿನ ಅಡಚಣೆ ಇದ್ದಿದ್ದರಿಂದ ಸತೀಶ್ ಅವರಿಗೆ ನೆರವು ನೀಡಲಾಗಲಿಲ್ಲ. ಕಜಕಿಸ್ಥಾನದಲ್ಲಿ ಗೆದ್ದು ಬಂದಾಗ ಅವರನ್ನು ಕುಂದಾಪುರದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡಿದ್ದಲ್ಲದೆ ವಿದ್ಯಾರಂಗದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿತ್ತು ಎಂದರು. ಸನ್ಮಾನ ಸ್ವೀಕರಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಪ್ರಾಯೋಜಿತ ಸ್ವಸಹಾಯ ಸಂಘಗಳ ವಲಯ ಮಟ್ಟದ ಲಾಭಾಂಶ ವಿತರಣೆ ಕಾರ್ಯಕ್ರಮ ಶಿರೂರಿನಲ್ಲಿ ನಡೆಯಿತು. ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶಶಿರೇಖಾ ಪಿ. ಸಂಘಕ್ಕೆ ಲಾಭಾಂಶದ ಚೆಕ್ ವಿತರಣೆ ಮಾಡಿ, ಯೋಜನೆಯು ನೀಡಿದ ಲಾಭಾಂಶ ನಿಮ್ಮ ಕಷ್ಟಕ್ಕೆ ಬಳಸಿಕೊಳ್ಳಿ ಸಂಘದ ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆಸಿ ಲಾಭ ಪಡೆಯುವಂತೆ ಸಲಹೆ ನೀಡಿದರು. ಸ್ವಸಹಾಯ ಸಂಘದ ಸದಸ್ಯರಿಗೆ ರಾಜ್ಯದಲ್ಲಿ ಒಟ್ಟು 620 ಕೋಟಿ ರೂ. ಲಾಭಾಂಶ ವಿತರಿಸುತ್ತಿದ್ದು ಉಡುಪಿ ಜಿಲ್ಲೆಯಲ್ಲಿ 44 ಕೋಟಿ, ಬೈಂದೂರು ತಾಲೂಕಿನಲ್ಲಿ 8.67 ಕೋಟಿ, ಬೈಂದೂರು ವಲಯದಲ್ಲಿ 60 ಲಕ್ಷ ವಿತರಣೆ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ಜನಜಾಗೃತಿ ಸದಸ್ಯರಾದ ವಾಸು ಮೇಸ್ತ, ಶಿರೂರು ಒಕ್ಕೂಟದ ಜೊತೆ ಕಾರ್ಯದರ್ಶಿ ಗೋವಿಂದ ಪೂಜಾರಿ , ವಲಯದ ಮೇಲ್ವಿಚಾರಕರಾದ ರಾಮಚಂದ್ರ ಎಸ್, ಸೇವಾ ಪ್ರತಿನಿಧಿಗಳಾದ ರೇವತಿ ,…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ:ತನ್ನ ಮಗಳ 6ನೇ ವರ್ಷದ ಹುಟ್ಟುಹಬ್ಬದಂದು ಸಂಭ್ರಮಿಸಬೇಕೆಂಬ ತವಕದಲ್ಲಿದ್ದ ತಾಯಿ ಶವವಾಗಿ ಮಗಳ ಹುಟ್ಟಿದ ದಿನವೇ ಚಿತೆಯಲ್ಲಿ ಭಸ್ಮವಾಗಿ ಹೋಗಿದ್ದಾರೆ. ಬ್ರಹ್ಮಾವರ ಸಮೀಪದ ಕುಮ್ರಗೋಡುವಿನ ವಿಲನ್ ರೆಸಿಡೆಸ್ಸಿಯಲ್ಲಿ ಸೋಮವಾರ ವಿಶಾಲ ಗಾಣಿಗ (35) ಎಂಬವರ ಕೊಲೆಯಾಗಿದ್ದು ಬುಧವಾರ ಉಪ್ಪುಂದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಹಗಲಲ್ಲೇ ನಡೆದ ಈ ಕೊಲೆಯ ಬಗ್ಗೆ ಬ್ರಹ್ಮಾವರ ಪೋಲೀಸರು 3 ದಿನಗಳಿಂದ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಪ್ರಕರಣದ ಜಾಡು ಹಿಡಿದು ಹೊರಟವರಿಗೆ ಈತನಕ ನಿಖರ ಸುಳಿವು ದೊರೆಯದಿರುವುದು ಪ್ರಕರಣವನ್ನು ಕಗ್ಗಂಟಾಗಿಸಿದೆ. ವಿಶಾಲ ಗಾಣಿಗ ಕುಮ್ರಗೋಡು ಸಮೀಪದ ವಿಲನ್ ರೆಸಿಡೆಸ್ಸಿಯ 3ನೇ ಮಹಡಿಯ 21ನೇ ಸಂಖ್ಯೆಯ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು. ಸೋಮವಾರ ತನ್ನ ತಂದೆ ತಾಯಿ 6 ವರ್ಷದ ಮಗುವಿನೊಂದಿಗೆ ಆಟೋವೊಂದರಲ್ಲಿ ಗಂಗೊಳ್ಳಿ ಸಮೀಪದ ನಾಯಕವಾಡಿಯ ಮನೆಗೆ ತೆರಳಿದ್ದು ಅಲ್ಲಿ ತಂದೆ, ಮಗುವನ್ನು ಬಿಟ್ಟು ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಅದೇ ಆಟೋದಲ್ಲಿ ಹಿಂದಕ್ಕೆ ಬಂದಿದ್ದಳು. ಸಾಲಿಗ್ರಾಮ ಸಮೀಪ ಬರುವಾಗ ಗಂಡನಿಗೆ ಮೆಸೇಜ್ ಮಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ ಉಪ್ಪುಂದ ಪುನರಾಯ್ಕೆಯಾಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮನ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಶೇಖರ್ ಪೂಜಾರಿ ಉಪ್ಪುಂದ ಅವರನ್ನು ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತರು ವಿಶ್ವ ಗುರುಗಳು ಅವರ ಜೀವನವೇ ಎಲ್ಲಾರಿಗೂ ಮಾದರಿಯಾಗಿದ್ದು, ಸಮಾಜಕ್ಕೆ ನೀಡಿದ ಕೊಡುಗೆಯನ್ನು ಅಮೂಲ್ಯವಾಗಿದ್ದು ಇಂದಿನ ಯುವಕರು ಕಾರಂತರ ಬದುಕನ್ನು ಅನುಸರಿಸಿ ಅವರಂತೆ ಬದುಕನ್ನು ರೂಪಿಸಿಕೊಳ್ಳಲು ಪ್ರಯತ್ನಿಸಿ ಸಮಾಜಕ್ಕೆ ತನ್ನಿಂದಾದ ನೆರವು ನೀಡಬೇಕು ಎಂದು ಮುಜರಾಯಿ ಇಲಾಖೆಯ ಉಪ ಆಯುಕ್ತ ಕೆ. ಜಯಪ್ರಕಾಶ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಕಿರು ಸಂಭಾಗಣ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಥೀಮ್ ಪಾರ್ಕ್ನಲ್ಲಿ ನಡೆಯುವ ಚಟುವಟಿಕೆ, ಕಾರ್ಯಕ್ರಮಗಳು ಮಾದರಿಯಾಗಿದ್ದು ಇನ್ನಷ್ಟೂ ಅಭಿವೃದ್ಧಿ ಜೊತೆಗೆ ನಿರಂತರ ಸಾಹಿತ್ಯದ ಕಂಪು ಹರಡಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊಲ್ಲೂರು ವ್ಯವಸ್ಥಾಪನ ಸಮಿತಿ ಸದಸ್ಯ ಕೆ.ಪಿ ಶೇಖರ್, ಅಮೃತೇಶ್ವರಿ ವ್ಯವಸ್ಥಾಪನ ಸಮಿತಿ ಸದಸ್ಯ ಸುಂದರ್ ಕೆ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಸಹಾಯಕಿ ಸುಜಾತ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಂಕಣ ರೈಲ್ವೆ ವಿಭಾಗೀಯ ಅಧಿಕಾರಿ ಬಿ ಬಿ ನಿಕ್ಕಮ್ ಮತ್ತು ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯಿಂದ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಕುಂದು ಕೊರತೆ ಬಗ್ಗೆ ಚರ್ಚೆ ನಡೆಸಿ ಪರಿಶೀಲಿಸಲಾಯಿತು. ಕುಂದಾಪುರದಲ್ಲಿ ಪ್ರಯಾಣಿಕರ ಗಣಕಿಕ್ರತ ಸೀಟು ಕಾದಿರಿಸುವಿಕೆ (PRSS ), ನಿಲ್ದಾಣದ ದುರಸ್ತಿ ಕಾರ್ಯ, ವಿಸ್ಟಾಡೋಮ್ ಪ್ರವಾಸಿ ರೈಲು ಕಾರವಾರದ ವರೆಗೂ ವಿಸ್ತರಣೆಗೆ ನಿಲ್ದಾಣ ದಲ್ಲಿ ಹೈ ಮಾಸ್ಕ್ ದೀಪದ ಅಳವಡಿಕೆ, ನೇತ್ರಾವತಿ ನಿಲುಗಡೆ ಮತ್ತು ಬೆಂಗಳೂರು ಕಾರವಾರ ಹಗಲು ರೈಲು ಪುನಃ ಆರಂಭದ ಬಗ್ಗೆ ಚರ್ಚಿಸಲಾಯಿತು. ಸಮಿತಿ ಅಧ್ಯಕ್ಷ ಗಣೇಶ ಪುತ್ರನ್ ಪ್ರಯಾಣಿಕರ ಕುಂದು ಕೊರತೆ ಬಗ್ಗೆ ವಿವರಸಿದರು. ಹೈ ಮಾಸ್ಕ್ ದೀಪವನ್ನು ಕೂಡಲೇ ಅಳವಡಿಸಲು ನಿಕ್ಕಮ್ ಸ್ಥಳದಲ್ಲೆ ನಿರ್ಣಯ ಕೈಗೊಂಡರು. ಉಳಿದ ವಿಷಯ ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವದು ಎಂದು ಸಮಿತಿಗೆ ಭರವಸೆ ನೀಡಿದರು. ಕುಂದಾಪುರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್, ತಾಂತ್ರಿಕ ಸಲಹೆಗಾರ ಗೌತಮ್ ಶೆಟ್ಟಿ, ಕೋಶಾಧಿಕಾರಿ ಉದಯ ಭಂಡಾರ್ಕರ ಗೌರವ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ, ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿರುವ, 21ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 22 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ yuvaspandana.udupi@gmail.com ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಅಥವಾ ಯುವ ಸ್ಪಂದನ ಕೇಂದ್ರ, ದೂರವಾಣಿ ಸಂಖ್ಯೆ 0820-2533933 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಲಾಯಿತು. ವಲಯ 1ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ಅವರು ಗಂಗೊಳ್ಳಿ ರೋಟರಿ ವತಿಯಿಂದ ಕೊಡ ಮಾಡಿದ ಮಾಸ್ಕ್ಗಳನ್ನು ಎಸ್.ವಿ.ಶಾಲೆಗಳ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಅವರಿಗೆ ಹಸ್ತಾಂತರಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನಾರಾಯಣ ಇ. ನಾಯ್ಕ, ವಲಯ ಸೇನಾನಿ ಕೆ. ರಾಮನಾಥ ನಾಯಕ ಹಾಗೂ ಕ್ಲಬ್ನ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.18ರ ವರೆಗೆ ಮಳೆಯ ಪ್ರಮಾಣ ಹೆಚ್ಚಾಗಳಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ ಜು.18 ರ ವರೆಗೆ ಸಾಕಷ್ಟು ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತವಾಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಗೆ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಗಳಿಗೆ, ಬೀಚ್ ಗಳಿಗೆ ಹೋಗುವುದು, ಈಜಾಡುವುದು ಮಾಡಬಾರದು. ಸಮುದ್ರದಲ್ಲಿ ನೀರಿನ ಒರೆತ ಹೆಚ್ಚಾಗಿರುವುದರಿಂದ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಜಿಲ್ಲೆಗೆ ಬರುವ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲಸಗಳಿಗೆ ಹೊರಗೆ ತೆರಳುವವರಿಗೆ ಹಾಗೂ ಮೀನುಗಾರಿಕೆಗೆ ತೆರಳುವವರಿಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡರು.
