Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಆ.18: ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದ ತಾಲೂಕಿನ ಬಿಜಾಡಿಯ ಹರೀಶ್ ಬಂಗೇರ ಬಿಡುಗಡೆಗೊಂಡು ಬೆಂಗಳೂರಿಗೆ ಮರಳಿದ್ದಾರೆ. ದಮಾಮ್ ವಿಮಾನ ನಿಲ್ದಾನದ ಮೂಲಕ ಹೊರಟಿದ್ದು ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣ ತಲುಪದ ಅವರನ್ನು ಪತ್ನಿ, ಮಗಳು ಹಾಗೂ ಅವರ ಬಿಡುಗಡೆಗಾಗಿ ನಿರಂತರವಾಗಿ ಶ್ರಮಿಸಿದ ಲೊಕೇಶ್ ಅಂಕದಕಟ್ಟೆ ಅವರ ತಂಡ ಬರಮಾಡಿಕೊಂಡಿತು. ಬೆಂಗಳೂರಿನಲ್ಲಿ ಸಂಜೆ ಬಿಜಾಡಿಗೆ ಬರುವ ಸಾಧ್ಯತೆ ಇದೆ. ಹರೀಶ್ ಬಂಗೇರ ಅವರ ಬಿಡುಗಡೆಗೆ ಲೋಕೇಶ್ ಅಂಕದಕಟ್ಟೆ ಹಾಗೂ ವಿವಿಧ ಸಂಘಟನೆಗಳು ಶ್ರಮಿಸಿದ್ದವು. ಆನೆಗುಡ್ಡೆಯ ತನಕ ಪಾದಯಾತ್ರೆಯನ್ನು ಮಾಡಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಡಾ. ರವೀಂದ್ರ ಶ್ಯಾನುಭೋಗ್, ಸುಕೇಶ್ ಶೆಟ್ಟಿ ವಾಲ್ತೂರು, ಗೌತಮ್ ಶೆಟ್ಟಿ, ಹಿರಿಯ ಪೊಲೀಸ್ ಅಧಿಕಾರಿ ಕಮಲಪಂಥ್ ಸೇರಿದಂತೆ ಹಲವರು ಶ್ರಮಿಸಿದ್ದು, ಅಂತಿಮವಾಗಿ ಹರೀಶ್ ಬಂಗೇರ ನಿರಪರಾಧಿ ಎಂದು ಸಾಬೀತಾಗಿ ಸೌದಿ ಜೈಲನಿಂದ ಬಿಡುಗಡೆಗೊಂಡಿದ್ದಾರೆ. ಸೌದಿಯ ದೊರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10000 ರಿಂದ 12000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ಸ್ಥಳಾಂತರಿಸಬೇಕು. ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಂ ಐಸೋಲೇಶನ್ ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್ಡೌನ್ ಮಾಡಿ, ಸುತ್ತ ಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ. ಸೋಂಕಿತರು ಮತ್ತು ಅವರ ಸಂಪರ್ಕಿತರು ತಮ್ಮ ಮನೆಯ ವ್ಯಾಪ್ತಿಯನ್ನು ಬಿಟ್ಟು ಅನಾವಶ್ಯಕ ಸುತ್ತಾಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿರುವ ತಾಲೂಕಿನ ಬಿಜಾಡಿಯ ಹರೀಶ್ ಬಂಗೇರ ಬಿಡುಗಡೆಯ ಪ್ರಯತ್ನ ಯಶಸ್ವಿಯಾಗಿದ್ದು, ಆ.18ರಂದು ತಾಯ್ನಾಡಿಗೆ ಹಿಂತಿರುಗಲಿದ್ದಾರೆ. ಇಂದು ದಮಾಮ್ ವಿಮಾನ ನಿಲ್ದಾನದ ಮೂಲಕ ಹೊರಟಿದ್ದು ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಬಗ್ಗೆ ರಿಯಾದ್ನ ರಾಯಭಾರಿ ಕಛೇರಿಯಿಂದ ಮಾಹಿತಿ ಬಂದಿರುವುದಾಗಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಎರಡು ದಿನಗಳ ಹಿಂದೆ ತಿಳಿಸಿದರು. ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ವ್ ಹಾಕಿದ್ದ ಆರೋಪದ ಮೇಲೆ ಹರೀಶ್ ಬಂಗೇರರನ್ನು 2019ರ ಡಿಸೆಂಬರ್ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಹರೀಶ್ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಉಡುಪಿ ಪೊಲೀಸರು ಮೂಡುಬಿದಿರೆಯ ಅಬ್ದುಲ್ ಹುಯೇಸ್ ಮತ್ತು ಅಬ್ದುಲ್ ತುವೇಸ್ ಎಂಬವರನ್ನು ಬಂಧಿಸಿದ್ದು, ಅವರು ಹರೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.17: ರಾಜ್ಯ ವಿಜ್ಞಾನ ಪರಿಷತ್ ಆಶ್ರಯದಲ್ಲಿ 10-12 ವರ್ಷದ ವಯೋಮಿತಿಯ ವಿದ್ಯಾರ್ಥಿಗಳಿಗಾಗಿ ನಡೆಸಲಾದ ವಿಜ್ಞಾನ ಪ್ರಬಂಧ ಸ್ವರ್ಧೆಯಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅವರು ಇಂದು ಬೆಂಗಳೂರಿನ ವಿಜ್ಞಾನ ಭವನದ ಪ್ರೊ.ಎಂ.ಎ.ಸೇತುರಾವ್ ಸಭಾಂಗಣದಲ್ಲಿ ನಡೆದ 8ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ಸ್ವೀಕರಿಸಿದರು. ಸುಸ್ಥಿರ ಜೀವನಕ್ಕಾಗಿ ವಿಜ್ಞಾನ ಎಂಬ ವಿಷಯದಲ್ಲಿ ಮರವಂತೆ ಶಾಲೆಯ ವಿದ್ಯಾರ್ಥಿಗಳು ಸ್ಥಳೀಯ ಗ್ರಾಮೀಣ ಭಾಗದ ಗುಡಿ ಕೈಗಾರಿಗಳಲ್ಲಿ ಕರಕುಶಲ ವಸ್ತುಗಳ ತಯಾರಿಕೆ ಕುರಿತು ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿದ್ದು, ಜಿಲ್ಲಾ, ರಾಜ್ಯದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಪದ್ಮವಿಭೂಷಣ ಪ್ರಶಸ್ತಿ ವಿಜೇತ ವಿಜ್ಞಾನಿ ಡಾ. ಅತ್ರಿ ಅವರಿಂದ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅಭಿನಂದನಾ ಪತ್ರ ಹಾಗೂ ನೆನಪಿನ ಕಾಣಿಕೆ ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿನಿಗೆ ಮಾರ್ಗದರ್ಶಕಿಯಾಗಿದ್ದ ವಿಜ್ಞಾನ ಶಿಕ್ಷಕಿ ಚೈತ್ರಾ ಶೆಟ್ಟಿ, ರಾಷ್ಟ್ರೀಯ ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನಾ೯ಟಕ ರಾಜ್ಯ ಸರಕಾರಿ ಹಾಸ್ಟೇಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನಾ೯ಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವಗ೯ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ ಪೂಜಾರಿ ಅವರಿಗೆ ಸಾಮೂಹಿಕವಾಗಿ ಮನವಿ ಸಲ್ಲಿಸಲಾಯಿತು. ಕಳೆದ ಹತ್ತು ತಿಂಗಳ ಸಂಬಳ ಬಾಕಿ ಪಾವತಿಸಬೇಕು. ಕೆಲಸದ ಭದ್ರತೆ, ಹೊರಗುತ್ತಿಗೆ ಪದ್ಧತಿ ರದ್ಧು ಮಾಡಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಹೊರಗುತ್ತಿಗೆ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ವೆಂಕಟೇಶ್ ಕೋಣಿ, ಜಿಲ್ಲಾಮುಖಂಡರಾದ ಹರೀಶ್ ಬೈಂದೂರು , ಲತಾ.ಯು. ನಾಗರಾಜ ಬೈಂದೂರು, ಕಲ್ಪನಾ ಉಡುಪಿ, ಶಾರದಾ ಪಡುವರಿ, ರೇಣುಕಾ ಯಡ್ತರೆ ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸರಕಾರದ ಮಹಿಳಾ ಸಬಲೀಕರಣ ಯೋಜನೆಯ ಭಾಗವಾದ ‘ಸಂಜೀವಿನಿ’ ಇದರ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕೃತ ‘ಫಾಲಾಕ್ಷ’ ಸಂಘವು ಪಂಚಾಯತ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಸ್ವ ಉದ್ಯೋಗ ಹಾಗೂ ಇನ್ನಿತರೆ ಯೋಜನೆಗಳ ಲಾಭವನ್ನು ಪಡೆಯಲು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಆಸಕ್ತ ಮಹಿಳೆಯರಿಗೆ ಸೂಚಿಸಲಾಗಿದೆ. ಈ ಸಂದರ್ಭ ಈಶ್ವರ ದೇವಾಡಿಗ, ಸುಬ್ಬಣ್ಣ ಶೆಟ್ಟಿ, ಅನಂದ ಪೂಜಾರಿ ಹಾಗೂ ಪಿ.ಡಿ.ಓ ರಾಜೇಶ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಸಂಶೋಧಕ ಬಿ.ಶ್ರೀಕಾಂತ ಪೈ ಮುಂಬೈ ಅವರು ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೋಟದಲ್ಲಿರುವ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿದರು. ಬ್ಲ್ಯಾಕ್ ಫಂಗಸ್ ಔಷಧ ಸಂಶೋಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಬಿ. ಶ್ರೀಕಾಂತ ಪೈ ಅವರನ್ನು ಅಭಿನಂದಿಸಿ ಗೌರವಿಸಿದರು. ಸರಕಾರದಿಂದ ಏನಾದರು ನೆರವು ಬೇಕಾದಲ್ಲಿ ಅದನ್ನು ಒದಗಿಸಿಕೊಡುವ ಭರವಸೆ ನೀಡಿ ಶುಭ ಹಾರೈಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಸಚಿವ ಆಪ್ತ ಸಹಾಯಕ ಹರೀಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ 2000 ರೂ. ಪರಿಹಾರ ಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆಗಸ್ಟ್ 31 ರೊಳಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಅರ್ಜಿ ಸಲ್ಲಿಸಿ ಪರಿಹಾರ ಮೊತ್ತ ಬಾರದಿರುವವರು ಅರ್ಜಿ ಸಲ್ಲಿಸಬಹುದಾಗಿದೆ ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿಯಲ್ಲಿ ಹಲವಾರು ಆರ್ಥಿಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹರು ನಿಗಮದ ವೆಬ್‌ಸೈಟ್: https://lidkar.online ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಕಚೇರಿ ಅಥವಾ ಮೊಬೈಲ್ ಸಂಖ್ಯೆ: 6362891017 ನ್ನು ಸಂಪರ್ಕಿಸಬಹುದೆಂದು ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿ ನಿವಾಸಿ ಸಂತೋಷ ಖಾರ್ವಿ ಎಂಬುವರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನು ದೊರೆತಿದೆ. ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಈ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸುಮಾರು 5 ಅಡಿ ಎತ್ತರವಿರುವ 25 ಕೆ.ಜಿ ತೂಕ ಕೊಳಸ ಹೆಸರಿನ ಈ ಮೀನಿಗೆ ಮಾರುಕಟ್ಟೆಯಲ್ಲಿ 7 ಸಾವಿರ ರೂ. ಇದೆ. ಬೃಹತ್ ಗಾತ್ರದ ಮೀನನ್ನು ನೋಡಲು ಮೀನುಗಾರರು ಮುಗಿ ಬಿದ್ದಿದ್ದರು.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆಗೆ ಪ್ರಾಧಾನ್ಯತೆ ದೊರಕಿಸಿಕೊಡುವ ಉದ್ದೇಶದಿಂದ ಅಕಾಡೆಮಿ ಸ್ಥಾಪಿಸುವ ಚಿಂತನೆ ನಮ್ಮ ಮುಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಸೋಮವಾರ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸಬೇಕೆಂಬ ಮನವಿಯನ್ನು ಈ‌ ಹಿಂದೆಯೂ ಬೇರೆ ಬೇರೆ ಸಂದರ್ಭದಲ್ಲಿ ಮಾಡಿದ್ದೆವು. ಈಗ ಆ ಬಗ್ಗೆ ಸಾಧ್ಯಸಾಧ್ಯತೆಗಳನ್ನು‌ ನೋಡಿಕೊಂಡು ಅಕಾಡೆಮಿ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದರು. ಈ ಸಂದರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ ► ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಮನವಿ – https://kundapraa.com/?p=51024 .

Read More