Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಕೋವಿಡ್ -19 ಪಾಸಿಟಿವಿಟಿ ದರದ ಆಧಾರದ ಮೇಲೆ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂತೆಗಳನ್ನು ನಡೆಸಲು ಅನುಮತಿ ನೀಡಲಾಗಿರುತ್ತದೆ. ಅದರಂತೆ ವಾರದ ಸಂತೆಗಳನ್ನು ನಡೆಸುವಾಗ ಜನಜಂಗುಳಿ ಹೆಚ್ಚಾಗಿ ಉಂಟಾಗುವುದನ್ನು ನಿಯಂತ್ರಿಸುವ ಸಲುವಾಗಿ ವಿಶಾಲ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ ನೀಡಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ತೀರ ಇಕ್ಕಟ್ಟಿನ ಸ್ಥಳಗಳಲ್ಲಿ ನಡೆಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಸಂತೆಗಳಲ್ಲಿ ಸಾಮಾನು ಖರೀದಿಸಲು ಬರುವ ಜನರು ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ರ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಕೊರೋನಾ ಸೋಂಕು ಹರಡುವಿಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸುವಾಗ ಸಾರ್ವಜನಿಕರ ನಡುವೆ ಸಾಮಾಜಿಕ ಅಂತರ ಹಾಗೂ ಇತರೆ ಕೋವಿಡ್-19 ಸಂಬಂಧಿತ ನಿಯಮಗಳು ಪಾಲನೆಯಾಗುವ ಬಗ್ಗೆ ನೋಡಿಕೊಳ್ಳಲು ನಗರಸಭೆಯ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳ ಮುಖ್ಯಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಯದರ್ಶಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ದರು ನಿವಾಸಿ ರಾಜೇಶ್ ಶೇರಿಗಾರ್(46) ಬುಧವಾರ ಸಂಜೆ ಹೃದಯಾಘಾತದಿಂಧ ಸ್ವಗೃಹದಲ್ಲಿ ನಿಧನರಾದರು. ಅವರು ಕುಂದಾಪುರದ ಕಾವೇರಿ ಮೀನು ಹೋಟೆಲ್ ಹಾಗೂ ಪ್ರೀತಿ ಪುಡ್ ಪ್ರಾಡಕ್ಸ್ ವ್ಯವಹಾರ ನಡೆಸುತ್ತಿದ್ದರು. ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ದುಡಿಯುತ್ತಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ಅವರ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭ ಅವರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆ ನಿರ್ಮಿಸಲು ಅಗತ್ಯವಿರುವ ಸಲಕರಣೆಗಳನ್ನು ಸ್ಥಳೀಯ ಮುಖಂಡರ ಮೂಲಕ‌ ಒದಗಿಸಿಕೊಡುವುದಾಗಿ ತಿಳಿಸಿದರು. ಕಲಾವಿದನಿಗೆ ಆರ್ಥಿಕ ಸಹಾಯ ಮಾಡಿದರು. ಈ ಸಂದರ್ಭ ಬಿಜೆಪಿಯ ಪ್ರಮುಖರು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಾರುಕಟ್ಟೆಯಲ್ಲಿ ದೊರೆಯುವ ಹತ್ತಾರು ಬಗೆಯ ಹಣ್ಣು, ತರಕಾರಿಗಳನ್ನು ನಮ್ಮ ತೋಟದಲ್ಲಿಯೂ ಬೆಳೆಸಬಹುದಲ್ವಾ. ತೆಂಗು, ಹಲಸು, ಗೇರು ಮುಂತಾದ ತೋಟಗಾರಿಕಾ ಬೆಳೆಗಳಿಂದ ಹಿಡಿದು ಕೈದೋಟದಲ್ಲಿ ಅರಳುವ ಸುಂದರ ಹೂವಿನ ಗಿಡಗಳನ್ನು ನಾವೂ ಬೆಳೆಸಬಹುದಲ್ವ. ಹೀಗೊಂದು ಯೋಚನೆ ಸಾಕಷ್ಟು ಭಾರಿ ನಿಮಗೂ ಬಂದಿದೆಯೇ. ಹಾಗಿದ್ದರೆ ನಿಮ್ಮ ಯೋಜನೆಗಳನ್ನು ಸಾಕಾರಗೊಳಿಸಲು ಇದೇ ಸರಿಯಾದ ಸಮಯ. ಬೈಂದೂರು ವತ್ತಿನಣೆ ಬಳಿ ಬರುವ ಕರ್ನಾಟಕ ನರ್ಸರಿಯಲ್ಲಿ ನೂರಾರು ಬಗೆಯ ಫಲ-ಪುಪ್ಪದ ಗಿಡಗಳ ಸಂಗ್ರಹವಿದೆ. ಇಲ್ಲಿ 5,000ಕ್ಕೂ ಅಧಿಕ ಅಪೂರ್ವ ಸಸ್ಯ ಸಂಕುಲವಿದ್ದು ಈ ಪೈಕಿ 400ಕ್ಕೂ ಹೆಚ್ಚು ಪ್ರಭೇದದ ಹಣ್ಣಿನ ಗಿಡಗಳು, ಶುದ್ದ ಕಾಂಡದ ಕಸಿ ಮಾಡಿದ ಗಿಡ, ಹೈಬ್ರೀಡ್ ಗಿಡಗಳು, ಒಳಾಂಗಣ ಹಾಗೂ ಹೊರಾಂಗಣಕ್ಕೆ ಹೊಂದಿಕೊಳ್ಳುವ ಅಲಂಕಾರಿಕ ಹೂವಿನ ಗಿಡಗಳು ನರ್ಸರಿಯಲ್ಲಿವೆ. ಯಾವೆಲ್ಲ ಗಿಡಗಳಿವೆ? ಮೂರು ಕೆ.ಜಿ ತೂಕದ ಹಣ್ಣು ನೀಡುವ ಮಾವಿನ ಗಿಡ, ಒಂದು ಕೆ.ಜಿ ಹಣ್ಣು ನೀಡುವ ಸೀತಾಫಲ ಗಿಡ, ಥಾಯ್ಲೆಂಡ್ ಹಣ್ಣುಗಳು, ಶುಗರ್ ಕಡಿಮೆ ಮಾಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಇಬ್ಬರು ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ವೈದ್ಯರಾದ ಡಾ.ಕಾಶೀನಾಥ ಪೈ ಮತ್ತು ಡಾ. ಕೃಪಾಶ್ರೀ ಅವರನ್ನು ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ರಾಜೇಶ್ ಎಂ.ಜಿ ಸ್ವಾಗತಿಸಿದರು. ರೋಟರಿ ಜಿಲ್ಲೆ ವಲಯ ೧ರ ಜೋನಲ್ ಅಸಿಸ್ಟೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಈ. ನಾಯ್ಕ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 9 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜುಲೈ 13 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯು ಕಠಿಣವಾಗಿದ್ದು, ಮೂರ್ನಾಲ್ಕು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಕೇವಲ ಹೆಸರಿನಲ್ಲಿ ಒಂದೆರಡು ಅಕ್ಷರಗಳು ತಾಂತ್ರಿಕ ಕಾರಣದಿಂದಾಗಿ ಬದಲಾಗಿದ್ದರೆ ಅವರಿಗೆ ಸಿಗಬೇಕಾದ ವಿದ್ಯಾರ್ಥಿವೇತನದಿಂದ ಅವರು ವಂಚಿತರಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರಕಾರವು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವ ಕ್ರಿಯೆಯನ್ನು ಸರಳಗೊಳಿಸಿ ಅಗತ್ಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ಸಿಗದೇ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಅಗಾಧ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಿಂದ ಘೋಷಿಸಲಾದ ಲಾಕ್ ಡೌನ್ ಸಮಸ್ಯೆಯಿಂದಾಗಿ ಆರ್ಥಿಕ ಸಂಕಷ್ಟದಿಂದ ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕೆಲಸ, ಉದ್ಯೋಗದ ಕಡೆಗೆ ಒಲವು ತೋರುತ್ತಿದ್ದಾರೆ. ಇದು ಬಹಳ ಗಂಭೀರವಾದ ಪಿಡುಗಾಗಿ ಸಮಾಜವನ್ನು ಉನ್ನತ ಶಿಕ್ಷಣದಿಂದ ವಂಚಿತ ಸಮಾಜವಾಗಿ ಪರಿವರ್ತಿಸುತ್ತಿದೆ. ಇದನ್ನು ಸರಿದೂಗಿಸಲು ಸರಕಾರ ಕ್ರಿಯಾಶೀಲ ಕ್ರಮಗಳನ್ನು ತಗೆದುಕೊಂಡು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಕೈಗೊಂಡಿರುವ ಸಿದ್ದತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7597 ಬಾಲಕರು , 6787 ಬಾಲಕಿಯರು ಸೇರಿದಂತೆ ಒಟ್ಟು 14384 ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ 88 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ತಲಾ 88 ಮುಖ್ಯ ಅಧೀಕ್ಷಕರು , ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿ ಒಟ್ಟು 2266 ಸಿಬ್ಬಂದಿಗಳನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಿದ್ದು, ಈ ಎಲ್ಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಆರೆಸೆಸ್ಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಪತ್ನಿ ಡಾ. ಕಮಲ ಪ್ರಭಾಕರ್ ಭಟ್ ಅವರು ಭೇಟಿ ನೀಡಿ ವೀಕ್ಷಿಸಿದರು. ಕೆರೆಯ ಮಧ್ಯದ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಮಿನಿ ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಕಾರಂತ ಥೀಮ್ ನಲ್ಲಿ ನಡೆಯುವ ಕಾರ್ಯಕ್ರಮ , ಚಟುವಟಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ನೂತನವಾಗಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯ ರೂಪುರೇಷೆ ಬಗ್ಗೆ ಚರ್ಚಿಸಿದರು. ಥೀಮ್ ಪಾರ್ಕ್ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸದ ವಿಷಯ ಇನ್ನಷ್ಟೂ ಅಭಿವೃದ್ಧಿ ಜೊತೆಗೆ ಚಟುವಟಿಕೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪ್ರತಿಷ್ಠಿತ ಇಂಡಿಯಾ ಟುಡೇ ನಿಯತಕಾಲಿಕೆ ನಡೆಸಿದ ರಾಷ್ಟ್ರಮಟ್ಟದ ಸಮೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿವಿಧ ವಿಭಾಗಗಳು ಜತೆಗೆ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಅತ್ಯುನ್ನತ ಸ್ಥಾನ ಪಡೆದಿವೆ. ಅಖಿಲ ಭಾರತ ಮಟ್ಟದಲ್ಲಿ ಅತ್ಯುತ್ತಮ ಕಾಲೇಜುಗಳನ್ನು ಗುರುತಿಸುವುದಕ್ಕಾಗಿ ಪ್ರತೀವರ್ಷವೂ ಇಂಡಿಯಾ ಟುಡೆ ಸಮೀಕ್ಷೆಯನ್ನು ನಡೆಸುತ್ತಾ ಬಂದಿದ್ದು ಇದು 25ನೇ ವರ್ಷದ ಸಮೀಕ್ಷೆಯಾಗಿದೆ. ಇಂಡಿಯಾ ಟುಡೇ-2021ನ ಈ ಸರ್ವೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿವಿಧ ವಿಭಾಗಗಳು ದೇಶದಲ್ಲಿಯೇ ಅತ್ಯುನ್ನತ ಸಾಧನೆ ಮಾಡಿದ, ಕ್ಷಮತೆ ಹೊಂದಿದ ಕಾಲೇಜುಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಕಲೆ, ವಿಜ್ಞಾನ, ವಾಣಿಜ್ಯ, ವೈದ್ಯಕೀಯ, ಕಾನೂನು, ಸಮೂಹಸಂವಹನ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕಂಪ್ಯೂಟರ್ ಅಪ್ಲಿಕೇಶನ್, ಹೊಟೇಲ್ ಮ್ಯಾನೇಜ್‌ಮೆಂಟ್ ಸೇರಿದಂತೆ ವಿವಿಧ 14 ವಿಭಾಗಗಳಲ್ಲಿ ಸಮೀಕ್ಷೆ ನಡೆಸಿದ್ದು, 112 ವೈವಿಧ್ಯಮಯ ಕಾರ‍್ಯ ಕ್ಷಮತೆಯ ಸೂಚಕಗಳನ್ನು ಗುಣಮಟ್ಟದ ಮಾಪನಕ್ಕಾಗಿ ಪರಿಗಣಿಸಲಾಗಿತ್ತು. ಈ ಸೂಚಕಗಳನ್ನೊಳಗೊಂಡಂತೆ ವಿದ್ಯಾರ್ಥಿ ದಾಖಲಾತಿ ಪ್ರಮಾಣ ಹಾಗೂ ಸಂಸ್ಥೆಯ ಆಡಳಿತ, ಶೈಕ್ಷಣಿಕ ಶ್ರೇಷ್ಠತೆ, ಮೂಲಭೂತ ಸೌಕರ‍್ಯ ನಿರ್ವಹಣೆ,…

Read More