ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 22ರಿಂದ 29 ತನಕ ನಡೆಯಲಿರುವ ಪೂರ್ವಭಾವಿಯಾಗಿ, ಚಪ್ಪರ ಮುಹೂರ್ತ ಕಾರ್ಯಕ್ರಮ ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಜರುಗಿತು. ಕಾರ್ಯಕ್ರಮದಲ್ಲಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮಂಜಯ್ಯ ಪೂಜಾರಿ ಏಳಜಿತ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಮುತ್ತಯ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ .ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು. ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರು ಬಾಡದ ನಿವೃತ್ತ ಮುಖ್ಯೋಪಧ್ಯಾಯರಾದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರರಾದ ರಾಘವೇಂದ್ರ ಅವರು ಪ್ರಸ್ತುತ ಮಡದಿ ಶ್ರೀನೇತ್ರಾ ಹಾಗೂ ಇಬ್ಬರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ. ಇದನ್ನೂ ಓದಿ ► ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ ► ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಲೋಕಾಯುಕ್ತ ಇನ್ಸ್ಪೆಕ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಸಿಕೆಯಿಂದ ಮಾತ್ರ ಕೊರೊನಾ ಮಣಿಸಲು ಸಾಧ್ಯವಾಗುವುದರಿಂದ ಎಲ್ಲರೂ ತಮ್ಮ ಸರತಿ ಬಂದಾಗ ತಪ್ಪದೆ ಲಸಿಕೆ ತೆಗೆದುಕೊಳ್ಳಬೇಕು ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಶೇ 25 ಮೀಸಲು ನಿಧಿಯ ಸೌಲಭ್ಯ ವಿತರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಎರಡನೆ ಬಾರಿ ಕಾಣಿಸಿಕೊಂಡಿರುವುದರಿಂದ ಎಲ್ಲರೂ ಸರ್ಕಾರ ವಿಧಿಸಿದ ನಿರ್ಬಂಧಗಳನ್ನು ತಪ್ಪದೆ ಪಾಲಿಸಬೇಕು. ಲಸಿಕೆ ಪಡೆದವರು ಸಂಪೂರ್ಣ ಸುರಕ್ಷತಾ ಭಾವ ತಾಳಬಾರದು. ಎಲ್ಲರಂತೆ ಅವರೂ ಕೊರೊನಾ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದರು. ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ರೂ ೫ಲಕ್ಷಕ್ಕಿಂತ ಅಧಿಕ ಮೀಸಲು ನಿಧಿಯಿಂದ ಆಯ್ದ ಅರ್ಹ ಫಲಾನುಭವಿಗಳಿಗೆ ಲ್ಯಾಪ್ಟಾಪ್, ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ವೆಚ್ಚ, ಹೊಲಿಗೆ ಯಂತ್ರ. ಗಾಲಿಕುರ್ಚಿ, ಕ್ರೀಡಾ ಉಪಕರಣ, ಕುಲಕಸುಬು ಬೆಂಬಲ ಸಹಾಯಧನ, ಮೂಲಭೂತ ಸೌಲಭ್ಯ ವಿತರಿಸಲಾಯಿತು. ಉಪಾಧ್ಯಕ್ಷ ಲೋಕೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೆಳೆಯರ ಬಳಗ ಶ್ರೀ ಆನಗಳ್ಳಿ ಇದರ ವಾರ್ಷಿಕೋತ್ಸವ ಸಮಾರಂಭವು ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಕೊರೊನ ವಾರಿಯರ್ಸ್ ಆದ ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್, ಆಶಾ ಕಾರ್ಯಕರ್ತರಾದ ನಾಗರತ್ನ, ಫಿಲೋಮಿನ ಡಿ’ಸೋಜಾ, ಪೊಲೀಸ್ ಇಲಾಖೆಯ ರೊನಾಲ್ಡ್ ಡಿ’ಸೋಜಾ, ರಕ್ತದಾನಿ ಸತೀಶ್ ಸಾಲಿಯಾನ್ ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ರವಿ ಬಿ ನಾಯ್ಕ್ ಆನಗಳ್ಳಿ, ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸುರೇಶ ಆರ್ ನಾಯ್ಕ್, ಸಂಸ್ಥೆಯ ಹಿರಿಯರಾದ ಮಂಜುನಾಥ್ ಹೆಬ್ಬಾರ್, ರಾಮಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಹಕಾರಿ ಸಂಘಗಳ ಮೈಸೂರು ವಿಭಾಗದ ಜಂಟಿ ನಿಬಂಧಕರಾದ ಪ್ರಕಾಶ ರಾವ್ ಭೇಟಿ ನೀಡಿದರು. ಸಂಘದ ವ್ಯವಹಾರಗಳನ್ನು ಪರಿಶೀಲಿಸಿ ಸಂಘದ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ., ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತ್ನಲ್ಲಿ 2020-21ನೇ ಸಾಲಿನ ವರ್ಗ 1ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.25ರ ಅನುದಾನದಲ್ಲಿ ವಿದ್ಯಾರ್ಥಿ ವೇತನ ವೈದ್ಯಕೀಯ ವೆಚ್ಚ ಮತ್ತು ಪುಸ್ತಕ ಇಡುವ ಕಪಾಟು ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಗೀತಾ ಉಪಾಧ್ಯಕ್ಷರಾದ ಶೇಖರ ಖಾರ್ವಿ, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಂತಹ ಅಭ್ಯಾಸಗಳನ್ನು ರೂಢಿಸಿಕೊಂಡಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಹೇಳಿದರು. ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚರೋಪಥಿ ಪುಣೆ ಹಾಗೂ ಮಿಜಾರಿನ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ & ಯೋಗಿಕ್ ಸೈನ್ಸ್ಸ್ ಹಾಗೂ ಆಸ್ಪತ್ರೆಯ ಸಹಯೋಗದಲ್ಲಿ ಆನಂದಮಯ ಆರೋಗ್ಯಧಾಮದಲ್ಲಿ ಬೃಹತ್ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಜೀವನಶೈಲಿಯ ಹಿನ್ನಲೆಯಿಂದ ಜನರು ಆರೋಗ್ಯದ ಕಡೆ ಗಮನಹರಿಸದೆ ಅನಾರೋಗ್ಯಕ್ಕೆ ತುತ್ತಾಗುತಿದ್ದಾರೆ. ಇವುಗಳಿಂದ ದೂರವಿರಬೇಕಾದರೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗದಂತಹ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವುಗಳನ್ನು ಕೇವಲ ಒಂದು ದಿನಕ್ಕೆ ಸೀಮಿತ ಗೊಳಿಸಿದರೆ ಯಾವುದೇ ಪ್ರಯೋಜನವಿಲ್ಲ, ನಿರಂತರವಾಗಿ ಈ ಅಭ್ಯಾಸಗಳನ್ನು ರೂಢಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ ಈ ಪ್ರಕೃತಿ ಚಿಕಿತ್ಸೆಗಳು ಜನ ಸಾಮಾನ್ಯರಿಗೆ ತಲುಪುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಕಾಲೇಜಿನ ನ್ಯಾಚುರೋಪಥಿ ಮತ್ತು ಯೋಗಿಕ ಸೈನ್ಸ್ ಪ್ರಾಂಶುಪಾಲೆ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವರ್ಣರಂಜಿತ ವೇಷ, ಸಂಗೀತ, ನೃತ್ಯ, ಅಭಿನಯ, ಮಾತು ಮೇಳೈಸಿ ಪ್ರದರ್ಶನಗೊಳ್ಳುವ ಯಕ್ಷಗಾನ ಪರಿಪೂರ್ಣ ಕಲೆ. ಇದರಲ್ಲಿ ತೊಡಗುವವರಿಗೆ ದೈಹಿಕ, ಬೌದ್ಧಿಕ, ಆಂಗಿಕ ದೃಢತೆ ಮೈಗೂಡುತ್ತದೆ ಎಂದು ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಹೇಳಿದರು. ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ, ಸಂಘ ಸಾಧನಾ ಸಮಾಜ ಸೇವಾ ವೇದಿಕೆ ಸಹಭಾಗಿತ್ವದಲ್ಲಿ ನಡೆಸುವ ಯಕ್ಷಗಾನ ತರಬೇತಿ ಶಿಬಿರವನ್ನು ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಕ್ಷಗಾನ ಕಲಿಯುವುದರಿಂದ ಕಲೆ ಕರಗತ ಮಾಡಿಕೊಳ್ಳುವುದರೊಂದಿಗೆ ಧೈರ್ಯ, ಮಾತಿನ ಕಲೆ, ಏಕಾಗ್ರತೆ ಸಾಧಿಸುತ್ತಾರೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ರವಿ ಮಡಿವಾಳ ಸ್ವಾಗತಿಸಿದರು. ನಿರೂಪಿಸಿದ ಕರುಣಾಕರ ಆಚಾರ್ ವಂದಿಸಿದರು. ಕಲಾವಿದ ಉದಯ ಕಡಬಾಳ್, ಭಾಗವತ-ಗುರು ದೇವರಾಜ ದಾಸ್, ಉದಯ ಪೂಜಾರಿ, ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಇದ್ದರು.
