ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 1220 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 472, ಕುಂದಾಪುರ, ಬೈಂದೂರು ತಾಲೂಕಿನ 540, ಕಾರ್ಕಳ, ಹೆಬ್ರಿ ತಾಲೂಕಿನ 205 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 1220 ಪ್ರಕರಣಗಳಲ್ಲಿ 250 ಸಿಂಟಮಿಕ್ ಹಾಗೂ 970 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1201 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 81 ವರ್ಷದ ವೃದ್ಧೆ, 53 ವರ್ಷದ ಪುರುಷ, ಕುಂದಾಪುರದ 78 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 706 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7619 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3095 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು, ಕಿರಿಮಂಜೇಶ್ವರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಆಸ್ಪತ್ರೆಗಳ ಸ್ಥಿತಿ, ಬಾಕಿ ಇರುವ ವಾಕ್ಸಿನೇಷನ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ವೈದಾಧಿಕಾರಿಗಳಿಂದ ಪಡೆದುಕೊಂಡದರು. ಈ ವೇಳೆ ಅವರು ಮಾತನಾಡಿ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದ್ದು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರದ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಆದರೆ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲರ್ಯಗಳ ಕೊರತೆ ಹಾಗೂ ಸಿಬ್ಬಂದಿಗಳ ಕೊರತೆಯಿಂದಾಗಿ ಅವರ ಮೇಲೆ ಒತ್ತಡ ಹೆಚ್ಚಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಎದುರಿಸಲು ಸಾಕಷ್ಟು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಬೈಂದೂರು ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದ್ದು ಇದನ್ನು ನಿವಾರಿಸುವ ಜೊತೆಗೆ ಮೂರನೇ ಅಲೆಯನ್ನು ಎದುರಿಸುವ ಸಲುವಾಗಿ ಬೈಂದೂರು ತಾಲೂಕಿಗೆ ಪ್ರತ್ಯೇಕವಾದ ಕೋವಿಡ್ ಆಸ್ಪತ್ರೆಯನ್ನು ಸಿದ್ಧಪಡಿಸಿಕೊಳ್ಳುವ ಅವಶ್ಯಕತೆ ಇದ್ದು, ಜಿಲ್ಲಾಡಳಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 892 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 222, ಕುಂದಾಪುರ, ಬೈಂದೂರು ತಾಲೂಕಿನ 314, ಕಾರ್ಕಳ, ಹೆಬ್ರಿ ತಾಲೂಕಿನ 349 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 892 ಪ್ರಕರಣಗಳಲ್ಲಿ 121 ಸಿಂಟಮಿಕ್ ಹಾಗೂ 771 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 875 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 75 ವರ್ಷದ ವೃದ್ಧ, 65 ವರ್ಷದ ವೃದ್ಧ, 62 ವರ್ಷದ ವೃದ್ಧೆ, 51 ವರ್ಷದ ಮಹಿಳೆ, 55 ವರ್ಷದ ಮಹಿಳೆ, ಕುಂದಾಪುರದ 38 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 730 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7108 ಕೋವಿಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6 ರಿಂ 10ನೇ ತರಗತಿ)ಗಳಿಗೆ ವಾರ್ಷಿಕ ರೂ.10,000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಸಲುವಾಗಿ ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 2020-21ನೇ ಸಾಲಿನಲ್ಲಿ ಮಾಧ್ಯಮಿಕ/ಪ್ರೌಢಶಾಲಾವಿದ್ಯಾರ್ಥಿಯಾಗಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆಗಳು ಎಪ್ರಿಲ್ 1 , 2020 ರಿಂದ ಮಾರ್ಚ್ 31, 2021 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಬಾಗವಹಿಸಿರಬೇಕು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಕರಾವಳಿ ನಿಯಂತ್ರಣ ವಲಯ(CRZ) ಅಧಿಸೂಚನೆಯಂತೆ National Centre for Sustainable Coastal Management (NCSCM), ಚೆನ್ನೈ, ಸಂಸ್ಥೆಯು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ (CZMP) ಕರಡು ನಕಾಶೆಯನ್ನು ತಯಾರಿಸಿರುತ್ತದೆ. ಆದರಂತೆ ಸದರಿ ಕರ್ನಾಟಕ ರಾಜ್ಯ ಕಡಲತೀರ ವಲಯ, ನಿರ್ವಹಣಾ ಯೋಜನ ಕರಡು ನಕಾಶೆಯನ್ನು ಸಾರ್ವಜನಿಕರು ಪರಿಶೀಲಿಸಿ , ತಕರಾರುಗಳು, ಸಲಹೆಗಳು ಮತ್ತು ಅನಿಸಿಕೆಗಳೇನಾದರೂ ಇದ್ದಲ್ಲಿ,, ಪ್ರಾದೇಶಿಕ ನಿರ್ದೇಶಕರು (ಪರಿಸರ) ಉಡುಪಿ ರವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ಕಡಲತೀರ ವಲಯ, ನಿರ್ವಹಣಾ ಯೋಜನೆ ಕುರಿತ ಸರ್ಕಾರದ ಅಧಿಸೂಚನೆಗಳು ಹಾಗೂ ಕರಡು CZMP ನಕಾಶೆಯನ್ನು, ಜಿಲ್ಲೆಯ ಸಂಬಂಧಪಟ್ಟ ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಪಂಚಾಯತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಛೇರಿಯಲ್ಲಿ ವೀಕ್ಷಿಸಬಹುದಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ 14 ರಿಂದ ಮುಂದಿನ ಆದೇಶದವರೆಗೆ 18-44 ವಯೋಮಿತಿಯವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮೇ 14 ರಿಂದ 17 ರ ವರೆಗೆ ಈಗಾಗಲೇ ಲಸಿಕೆ ಪಡೆದುಕೊಳ್ಳಲು ಲಸಿಕೆ ಶೆಡ್ಯೂಲ್ ನಿಗಧಿಪಡಿಸಿಕೊಂಡಿರುವವರಿಗೆ ಸಹ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮುಂದಿನ ಸೂಚನೆವರೆಗೆ ಲಸಿಕಾ ಸ್ಥಳಕ್ಕೆ ಆಗಮಿಸಬಾರದು. 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪ್ರಥಮ ಡೋಸ್ ನೀಡುವುದನ್ನು ಸರ್ಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ 2 ನೇ ಡೋಸ್ ನೀಡುವದನ್ನು ಸಹ ಮೇ 14 ರಿಂದ ಮುಂದಿನ ಸೂಚನೆವರೆಗೆ ಸ್ಥಗಿತಗೊಳಿಸಿದ್ದು, ಲಸಿಕೆ ಲಭ್ಯತೆ ಹಾಗೂ ದಿನಾಂಕದ ಕುರಿತು ಪತ್ರಿಕಾ ಪ್ರಕಟಣೆ ನೀಡಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಡಿಹೆಚ್ಓ ಡಾ.ಸುಧೀರ್ ಚಂದ್ರ ಸೂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವ್ಯಾಪ್ತಿಯ ಕಿರಿಮಂಜೇಶ್ವರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಸಂಘದ ವತಿಯಿಂದ ವೈದ್ಯಕೀಯ ಕಿಟ್ ಹಾಗೂ ಸಲಕರಣೆಗಳನ್ನು ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಎಲ್ಲೆಡೆ ಕೋವಿಡ್ ವ್ಯಾಪವಾಗಿ ಹರಡುತ್ತಿದ್ದು, ಆರೋಗ್ಯ ಸಿಬ್ಬಂದಿಗಳು ಶ್ರಮವಹಿಸಿ ದುಡಿಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭ ನಮ್ಮ ಸಂಘದಿಂದ ಕಳೆದ ವರ್ಷ 2.35 ಲಕ್ಷ ರೂ.ಗಳ ವೈದ್ಯಕೀಯ ಸಲಕರಣೆಗಳನ್ನು ವಿತರಿಸಲಾಗಿದ್ದು, ಈ ವರ್ಷವೂ ಕೂಡ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಪಿಪಿಇ ಕಿಟ್, ವೈದ್ಯರಿಗೆ ಗ್ಲೌಸ್, ಮಾಸ್ಕ್, ಗೌನ್ ಮೊದಲಾದ ಉಪಕರಣಗಳನ್ನು ವಿತರಿಸಲಾಗಿದೆ. ಆರೋಗ್ಯ ಕೇಂದ್ರದ ಸಿಬ್ಬಂದಿಯ ಸಂಚಾರಕ್ಕೆ ಅನುಕೂಲವಾಗುವಂತೆ ಕೋವಿಡ್ ಅಲೆ ತಗ್ಗುವ ತನಕ ಸಂಘದ ವತಿಯಿಂದ ವಾರದಲ್ಲಿ ನಾಲ್ಕು ದಿನಗಳ ಕಾಲ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದರು. ಕಿರಿಮಂಜೇಶ್ವರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯಲ್ಲಿ ಮಂಗಳವಾರ ಆರಂಭವಾದ ಕಡಲ್ಕೊರೆತ ಬುಧವಾರ ಇನ್ನಷ್ಟು ತೀವ್ರ ಗತಿ ಪಡೆದುಕೊಂಡಿದೆ. ಇಲ್ಲಿನ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರ ದಿಕ್ಕಿನ 500 ಮೀಟರ್ ಉದ್ದದ ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳು ಈಗಾಗಲೇ ಎರಡು ಮೀಟರು ಅಗಲದ ಭೂಪ್ರದೇಶವನ್ನು ಕೊರೆದು ಸಮುದ್ರಕ್ಕೆ ಸೇರಿಸಿವೆ. ಪಕ್ಕುಮನೆ ದಿನಕರ ಖಾರ್ವಿಗೆ ಸೇರಿದ ಮೀನುಗಾರಿಕಾ ಶೆಡ್ ಉರುಳಿದ್ದು, ಅದರ ಸಮೀಪದಲ್ಲಿರುವ ಪಕ್ಕುಮನೆ ಚಂದ್ರ ಖಾರ್ವಿ ಅವರ ಶೆಡ್ಅನ್ನು ಉಳಿಸಿಕೊಳ್ಳಲು ಅವರು ಮರಳಿನ ಚೀಲಗಳನ್ನು ಪೇರಿಸುವ ಕೆಲಸ ಮಾಡುತ್ತಿದ್ದಾರೆ. ಕೊರೆತ ನಡೆಯುತ್ತಿರುವ ಸ್ಥಳದಿಂದ 10 ರಿಂದ 15 ಮೀಟರ್ ಅಂತರದಲ್ಲಿ ಮೂರು ತಿಂಗಳ ಹಿಂದೆ ರಾಜ್ಯ ನೀರಾವರಿ ನಿಗಮದ ಲೆಕ್ಕ ಶೀರ್ಷಿಕೆಯ ರೂ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಂಕ್ರೀಟ್ ರಸ್ತೆ, ಅದರಾಚೆಗೆ ಸುಮಾರು 25 ಮೀನುಗಾರರ ಮನೆಗಳಿವೆ. ಕೊರೆತ ಉಲ್ಬಣಿಸಿದರೆ ಇವುಗಳಿಗೆ ಅಪಾಯ ಇದೆ ಎಂದು ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಮೋಹನ ಖಾರ್ವಿ ಆತಂಕ ವ್ಯಕ್ತ ಪಡಿಸಿದ್ದಾರೆ. ►…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಿದ್ದು, ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ, ಮೇ 14 ರಿಂದ 16ರವರೆಗೆ ಮೂರು ದಿನಗಳ ಅವಧಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಅಥವಾ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಮೀನುಗಾರರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ನಂಜಾ ನಾಯ್ಕ್ ಎನ್. ಅಧಿಕಾರ ಸ್ವೀಕರಿಸಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಸಖರಾಯಪಟ್ಟಣದವರಾದ ನಂಜಾ ನಾಯ್ಕ್ ಅವರು ಈ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 6 ತಿಂಗಳು ಪ್ರೊಬೆಷನರಿ ಎಸ್ಐ ಆಗಿ ಸೇವೆ ಸಲ್ಲಿಸಿದ್ದು, ಬಳಿಕ ಪಿಎಸ್ಐ ಆಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ವರ್ಷ ಮತ್ತು ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ. ಪಿಎಸ್ಐ ಭೀಮಾಶಂಕರ ಅವರು ಶಿರಸಿ ಮಾರ್ಕೆಟ್ ಠಾಣೆಗೆ ವರ್ಗಾವಣೆಗೊಂಡ ನಂಜಾ ನಾಯ್ಕ್ ಎನ್. ಅವರು ಗಂಗೊಳ್ಳಿ ಠಾಣೆಯ ಪಿಎಸ್ಐಯಾಗಿ ನಿಯುಕ್ತಿಗೊಂಡಿದ್ದಾರೆ.
