Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಜಾರಿಮಾಡಿರುವ ಪರಿಷ್ಕೃತ ಮಾರ್ಗಸೂಚಿ ಉಡುಪಿ ಜಿಲ್ಲಾದ್ಯಂತ ಮೇ.10ರ ಬೆಳಿಗ್ಗೆ 6 ರಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ತನಕ ಜಾರಿಯಲ್ಲಿರಲಿದ್ದು ಸಿ.ಆರ್.ಪಿ.ಸಿ ಸೆಕ್ಷನ್ 144(3) ಅನ್ವಯ ಮುಂದಿನ ಆದೇಶದ ತನಕ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.  ಜಿಲ್ಲಾಧಿಕಾರಿ ಪ್ರಕಟಿಸಿರುವ ಆದೇಶ ಈ ಕೆಳಗಿನಂತಿದೆ ನಿರ್ಬಂಧಿಸಲಾದ ಚಟುವಟಿಕೆಗಳು A. ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್‌ ಗಳು ಟ್ಯಾಕ್ಸಿಗಳ (including cabs by aggregators) ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್‌ ಗಳನ್ನೇ ಪಾಸ್‌ ಗಳಂತೆ ಬಳಸಿಕೊಳ್ಳಬಹುದಾಗಿದೆ. B. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ ಅನುಮತಿಸಿರುವಂತೆ ಸಂಚರಿಸುವ ಟ್ಯಾಕ್ಸಿ (ಆಟೋರಿಕ್ಷಾಗಳೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 1047 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 10 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 645, ಕುಂದಾಪುರ, ಬೈಂದೂರು ತಾಲೂಕಿನ 347, ಕಾರ್ಕಳ, ಹೆಬ್ರಿ ತಾಲೂಕಿನ 45 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 1047 ಪ್ರಕರಣಗಳಲ್ಲಿ 237 ಸಿಂಟಮಿಕ್ ಹಾಗೂ 810 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 27 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 1020 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ► ಜಿಲ್ಲಾದ್ಯಂತ ಮೇ.10ರಿಂದ ಜಾರಿಯಾಗಲಿರುವ ಲಾಕ್‌ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಉಡುಪಿ ಜಿಲ್ಲಾಧಿಕಾರಿ – https://kundapraa.com/?p=48059 . ಇಂದು ಉಡುಪಿಯ 75 ವರ್ಷದ ವೃದ್ಧೆ, 79 ವರ್ಷದ ವೃದ್ಧೆ, 78 ವರ್ಷದ ವೃದ್ದ, 73 ವರ್ಷದ ವೃದ್ಧೆ ಹಾಗೂ 68 ವರ್ಷದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಘಟಕದ ವತಿಯಿಂದ ‘ಹಸಿದವರಿಗೆ ಊಟ’ ಕಾರ್ಯಕ್ರಮದಡಿಯಲ್ಲಿ ಲಾಕ್‌ಡೌನ್‌ನಿಂದ ತೊಂದರೆಗೆ ಸಿಲುಕಿರುವ ಜನರಿಗೆ ಮಧ್ಯಾಹ್ನದ ಊಟ ವಿತರಿಸಲಾಗುತ್ತಿದೆ. ಕುಂದಾಪುರ ಪರಿಸರದ ಸುಮಾರು 150ರಿಂದ 200 ಮಂದಿಗೆ ನಿತ್ಯವೂ ಊಟ ವಿತರಿಸಲಾಗುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿನಿತ್ಯವೂ ಸ್ಥಳೀಯ ಬಾಣಸಿಗರ ಮನೆಯಲ್ಲಿ ಅಡುಗೆ ತಯಾರಿಸಿ ಮಧ್ಯಾಹ್ನದ ಹೊತ್ತಿಗೆ ಕುಂದಾಪುರ ಪರಿಸರದಲ್ಲಿ ತಿರುಗಾಡಿ ಊಟ ವಿತರಿಸಲಾಗುತ್ತಿದೆ. ಸಂಸ್ಥೆಯ ಪದಾಧಿಕಾರಿಗಳು ಹಾಗೂ ದಾನಿಗಳ ಆರ್ಥಿಕ ನೆರವಿನೊಂದಿಗೆ ಕುಂದಾಪುರ ಜೆಸಿಐ ಸಿಟಿ ಈ ಯೋಜನೆ ಹಮ್ಮಿಕೊಂಡಿದ್ದು, ಹೋಟೆಲ್ ಇಲ್ಲದೇ ಊಟವೂ ಸಿಗದ ಕೂಲಿ ಕಾರ್ಮಿಕರು, ಲಾರಿ ಚಾಲಕರು, ನಿರ್ಗತಿಕರು ಹಾಗೂ ಆಸ್ಪತ್ರೆಯ ರೋಗಿಗಳಿಗೆ ನೆರವಾಗಿದೆ. ನಿತ್ಯ ಮಧ್ಯಾಹ್ನದ ಊಟ ವಿತರಿಸುವ ವೇಳೆ ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ವಿಜಯ್ ಭಂಡಾರಿ, ವಲಯಾಧಿಕಾರಿ ಪ್ರಶಾಂತ್ ಹವಾಲ್ದಾರ್, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವ ಅಧ್ಯಕ್ಷ ರಾಘವೇಂದ್ರ ಚರಣ್ ನಾವಡ, ಕಾರ್ಯದರ್ಶಿ ಗುರುರಾಜ್ ಕೊತ್ವಾಲ್ ಸೇರಿದಂತೆ ಜೆಸಿಐನ ವಿವಿಧ ಸದಸ್ಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಳ್ವೆ ಜುಮ್ಮಾ ಮಸೀದಿ ಸಮೀಪದಲ್ಲಿ  ರಾತ್ರಿ 10.30ರ ಸುಮಾರಿಗೆ ಸ್ಕೂಟಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಇಬ್ಬರು ಯುವಕರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತರಾಗಿದ್ದಾರೆ. ಇನ್ನೊಬ್ಬ ಯುವಕ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ವೆ ನಿವಾಸಿ ನಾಗರಾಜ್(17) ನಾಲ್ಕೂರು ಗ್ರಾಮದ ಮೂದ್ದೂರು ನಿವಾಸಿ ಪ್ರಜ್ವಲ್(21) ಮೃತಪಟ್ಟವರು ತೀರ್ಥಹಳ್ಳಿ ಮೂಲದ ಹಿಲಿಯಾಣ ನಿವಾಸಿ ವಿನಯ(20)  ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಡಿವೈಎಸ್‌ಪಿ ಶ್ರೀಕಾಂತ ಕೆ., ಶಂಕರನಾರಾಯಣ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಇಲಾಖಾ ವೆಬ್ಸೈಟ್ https://www.sw.kar.nic.in/ ನಲ್ಲಿ ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ. ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ.ಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ನಾರಾಯಣಗುರು ಯುವಕ ಮಂಡಲದ ಪದಾಧಿಕಾರಿಗಳು ಲಾಕ್ ಡೌನ್’ನಲ್ಲಿ ಕುಂದಾಪುರ ಪರಿಸರದಲ್ಲಿ ಹಸಿದವರಿಗೆ, ವಿಕಲ ಚೇತನರಿಗೆ, ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ಸುಮಾರು 250 ಮಂದಿಗೆ ಊಟ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವಕ ಮಂಡಲ ರಿ. ಅಧ್ಯಕ್ಷ ಶ್ರೀನಾಥ್ ಕಡ್ಗಿಮನೆ, ಕಾರ್ಯದರ್ಶಿ ವಿಜಯ್ ಪೂಜಾರಿ, ಕಿರಣ್ ಪೂಜಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 977 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 383, ಕುಂದಾಪುರ, ಬೈಂದೂರು ತಾಲೂಕಿನ 280, ಕಾರ್ಕಳ, ಹೆಬ್ರಿ ತಾಲೂಕಿನ 310 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 977 ಪ್ರಕರಣಗಳಲ್ಲಿ 186 ಸಿಂಟಮಿಕ್ ಹಾಗೂ 791 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 29 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 948 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 85 ವರ್ಷದ ವೃದ್ದ, 87 ವರ್ಷದ ವೃದ್ಧೆ, 72 ವರ್ಷದ ವೃದ್ದ, ಕಾರ್ಕಳದ 81 ವರ್ಷದ ವೃದ್ಧೆ, ಉಡುಪಿಯ 64 ವರ್ಷದ ಮಹಿಳೆ, 60 ವರ್ಷದ ಮಹಿಳೆ ಹಾಗೂ 58 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು, ಮೇ.7: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗಿದ್ದು, ಸಚಿವರು, ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಮೇ 10 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಮಾಡುವ ನಿರ್ಧಾರವನ್ನು ಪ್ರಕಟಿಸಿದರು. ಈ ಲಾಕ್‌ಡೌನ್ ಹೇಗಿರುತ್ತೆ? ಲಾಕ್ಡೌನ್ ಸಮಯದಲ್ಲಿ ಪಾಸ್ ಇದ್ದವರಿಗೆ ಮಾತ್ರ ಸಂಚರಿಸಲು ಅನುಮತಿ ನೀಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಮಾರ್ಗಸೂಚಿ ಹೊರಡಿಸಲಿದೆ. ಅವಶ್ಯಕ, ತುರ್ತು ಸೇವೆ, ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ದಿನಸಿ, ಹಾಲು, ತರಕಾರಿ ಖರೀದಿಗೆ ಮಾತ್ರ ಸಮಯ ನಿಗದಿ ಮಾಡಿ ಅನುಮತಿ ನೀಡಲಾಗುತ್ತದೆ. ಅಂತರ್ ಜಿಲ್ಲಾ, ಅಂತಾರಾಜ್ಯ ಸಂಚಾರ ಸಂಪೂರ್ಣ ಬಂದ್ ಆಗಲಿದ್ದು, ಕೋವಿಡ್ ಸಂಬಂಧಿತ ಸರ್ಕಾರಿ ಇಲಾಖೆ, ಕಚೇರಿ-ಸಂಸ್ಥೆಗಳು ಬಿಟ್ಟು ಉಳಿದ ಎಲ್ಲಾ ಕಚೇರಿಗಳು ಬಂದ್ ಆಗಲಿದೆ. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಹೊಟೇಲ್, ರೆಸ್ಟೋರೆಂಟ್ ಗಳಿಂದ…

Read More

ತಂತ್ರಜ್ಞಾನವು ನಮ್ಮ ಜೀವನವನ್ನು ಸರಳಗೊಳಿಸಿರುವುದೇನೋ ನಿಜ. ಆದರೆ ಅಷ್ಟೇ ಅನಾನುಕೂಲಗಳು ಇವೆ. ಕಂಪ್ಯೂಟರ್, ಮೊಬೈಲ್ ಎಲ್ಲವೂ ಇಂದಿನ ಆಧುನಿಕ ಕಚೇರಿ ಕೆಲಸದಲ್ಲಿ ಅಗತ್ಯ. ದಿನಕ್ಕೆ ಎಂಟು- ಒಂಬತ್ತು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಕಂಪ್ಯೂಟರ್ ನೋಡುತ್ತೀರಿ. ಜೊತೆಗೆ ಯಾವುದಾದ್ರೂ ಇಂಪಾರ್ಟೆಂಟ್ ಮೆಸೇಜ್ ಬಂತಾ ಅಂತ ಮೊಬೈಲ್ ನೋಡುವುದು ಇದ್ದದ್ದೇ. ಇದೆಲ್ಲದರಿಂದ ಕಣ್ಣು ಉರಿಯಲು ಶುರುವಾಗಬಹುದು, ನೀರು ಬರಬಹುದು, ತಲೆನೋವು ಉಂಟಾಗಬಹುದು. ಒಂದು ಬದಿ ಮೈಗ್ರೇನ್ ಅಂತೂ ಕಚೇರಿ ಕೆಲಸದ ಒತ್ತಡಕ್ಕೇ ಸಂಬಂಧಪಟ್ಟದ್ದು. ಇದೆಲ್ಲದರ ಮೂಲ ಇರೋದು ನೀವು ಕಣ್ಣಿನ ಮೇಲೆ ಹೆಚ್ಚು ಒತ್ತಡ ಹಾಕೋದರಿಂದ. ಇನ್ನು ಕಂಪ್ಯೂಟರ್ ಹೊರಸೂಸುವ ವಿಕಿರಣಗಳು ತ್ವಚೆಯ ಮೇಲೆ ಕೂಡ ಪರಿಣಾಮ ಬೀರಲಿದ್ದು, ಅದರಿಂದ ರಕ್ಷಣೆ ಪಡೆಯುವುದು ಮುಖ್ಯ./ಕುಂದಾಪ್ರ ಡಾಟ್ ಕಾಂ/ ಆಗಾಗ, ಸಾಕೆನಿಸುವಷ್ಟು ನೀರು ಕುಡಿಯವುದು ಕಣ್ಣುಗಳು ಒಣಗದಂತೆ ಕಾಪಾಡಿಕೊಳ್ಳಲು ತುಂಬಾ ಮುಖ್ಯ. ಕಣ್ಣು ಒಣಗಿದಂತೆನಿಸಿದರೆ, ನೀರು ಚಿಮುಕಿಸುವುದು, ಮುಚ್ಚಿ ತೆರೆಯುವುದು, ಹಸಿರನ್ನು ದಿಟ್ಟಿಸುವುದು ಮಾಡುತ್ತಿರಿ. ಪ್ರತಿ ಮುಕ್ಕಾಲು ಗಂಟೆಗೊಮ್ಮೆ ಬ್ರೇಕ್ ಕೊಡಿ. ವಾಕ್ ಮಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ಕಡಲಾಮೆಯ ಆಪ್ತಸಖ’ ಎಂಬ ಹೆಗ್ಗಳಿಕೆ ಪಡೆದಿರುವ ಸಹಸ್ರಾರು ಕಡಲಾಮೆಗಳ ಸಂರಕ್ಷಕ ಮರವಂತೆ ದಾಸಿ ವೆಂಕಟ ಖಾರ್ವಿ(86) ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ಕಡಲಾಮೆಗಳ ಬಗೆಗಿನ ವಾತ್ಸಲ್ಯದಿಂದಾಗಿ ಸ್ವಯಂಪ್ರೇರಿತರಾಗಿ ಜೀವಿತದುದ್ದಕ್ಕೂ ಅವುಗಳ ರಕ್ಷಣೆ ಮಾಡಿಕೊಂಡು ಬಂದಿದ್ದರು. ಕಳೆದ ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು. ಗಾಳಿಯ ಅಬ್ಬರ‍್ಕಕೆ ಮನೆಯೂ ಬಿದ್ದುಹೋಗಿತ್ತು. ಪುಟ್ಟ ಗುಡಿಸಲಿನಲ್ಲಿ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದರು. ಹೊಟ್ಟೆಪಾಡಿಗಾಗಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ಇವರು ಕಡಲಾಮೆ ಸಂರಕ್ಷಣೆ ಪ್ರವೃತ್ತಿಯನ್ನಾಗಿಸಿಕೊಂಡವರು. ಕಡಲಾಮೆ ಮೊಟ್ಟೆ ಮರಿಗಳ ರಕ್ಷಣೆಗೆಂದೇ ಜೀವನ ಸೆವೆಸಿರುವ ಇವರದ್ದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ಸೇವೆ. ಕಡಲತೀರದುದ್ದಕ್ಕೂ ಮೀನುಗಾರಿಕೆಯ ಕಸುಬಿನ ಬಳಿಕ ಪ್ರತಿದಿನ ಓಡಾಡುತ್ತಾ 45 ಸಾವಿರಕ್ಕೂ ಅಧಿಕ ಕಡಲಾಮೆ ಮೊಟ್ಟೆ ರಕ್ಷಿಸಿದ್ದಾರೆ. ನೂರಕ್ಕೂ ಹೆಚ್ಚು ಗಾಯಾಳು ಕಡಲಾಮೆಗಳ ಆರೈಕೆ ಮಾಡಿ ಕಡಲಿಗೆ ಮರಳಿಸಿದ್ದಾರೆ ಬಾಲ್ಯದಿಂದಲೂ ಕಡಲಾಮೆಗಳ ರಕ್ಷಣೆ ಮಾಡಿಕೊಂಡು ಬರುತ್ತಿದ್ದರು. ಕರಾವಳಿಯಲ್ಲಿ ಕಡಲಾಮೆ ಸಂರಕ್ಷಣೆಯಲ್ಲಿ ಮುಂಚೂಣಿಯ ಪಾತ್ರ ವಹಿಸಿದವರು. ಅನಾಥ ಶವಗಳ ಸಂಸ್ಕಾರ ಕಾರ್ಯದಲ್ಲಿಯೂ ತೊಡಗಿಸಿಕೊಂಡಿದ್ದರು.…

Read More