Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಮೀಪದ ಬಸ್ರೂರು ಸಂತ ಫಿಲಿಪ್ ನೇರಿ ಚರ್ಚ್ ಸಭಾ ಭವನದಲ್ಲಿ ಕುಂದಾಪುರ ವಲಯ ಸಮಿತಿ ಹಾಗೂ ಶೆವೊಟ್ ಪ್ರತಿಷ್ಠಾನದ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಲ್ಯಾಟಿನ್ ಕೆಥೊಲಿಕ್, ಸೀರೊ ಮಲಬಾರ್ ಕೆಥೊಲಿಕ್, ಸಿಎಸ್ಐ, ಅರ್ಥೊಡೆಕ್ಸ್, ಸೀರಿಯನ್ ಸಮಾಜ ಬಾಂಧವರು ಭಾಗವಹಿಸಿದ್ದರು. ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನ ಧರ್ಮಗುರು ಚಾರ್ಲ್ಸ್ ನೊರೋನ್ಹಾ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಸಿಎಸ್ಐ ಸಭೆಯ ಮಾಜಿ ವಲಯಾಧ್ಯಕ್ಷ ಸ್ಟೀವನ್ ಸರ್ವೋತ್ತಮ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಜಯಪ್ರಕಾಶ್ ಶೆಟ್ಟಿ, ಬಸ್ರೂರು ಸರ್ಕಾರಿ ಉರ್ದು ಶಾಲೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಕ್ರಿಸ್ಮಸ್ ಸಂದೇಶ ನೀಡಿದರು. ಕುಂದಾಪುರ ವಲಯ ವ್ಯಾಪ್ತಿಯ 7 ಕುಟುಂಬಗಳಿಗೆ ವೈದ್ಯಕೀಯ ಹಾಗೂ ಮನೆ ಕಟ್ಟಲು ನೆರವನ್ನು ಹಸ್ತಾಂತರಿಸಲಾಯಿತು ಕುಂದಾಪುರ ಕೆಥೊಲಿಕ್ ಸಭಾ ವಲಯ ಅಧ್ಯಕ್ಷೆ ಮೇಬಲ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಕೃಪಾ ಚರ್ಚ್ ನ ಉಸ್ತುವಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪ್ರ ಕನ್ನಡದ ಪ್ರಥಮ ನಿಘಂಟು ಎಂದೆನಿಸಿಕೊಂಡಿರುವ ಪಂಜು ಗಂಗೊಳ್ಳಿ ಅವರು ಸಂಪಾದಿಸಿರುವ ಕುಂದಾಪ್ರ ಕನ್ನಡ ನಿಘಂಟು ಈಗ ಪ್ರಕಟಣಾಪೂರವ ಖರೀದಿಗೆ ಲಭ್ಯವಿದೆ. 700ಕ್ಕೂ ಮಿಕ್ಕಿ ಪುಟಗಳ, 10,000ಕ್ಕೂ ಮಿಕ್ಕಿ ಶಬ್ದಗಳು ಹಾಗೂ 1700ಕ್ಕೂ ಮಿಕ್ಕಿ ನುಡಿಗಟ್ಟುಗಳನ್ನು ಹೊಂದಿರುವ ಈ ನಿಘಂಟನ್ನು ಮಾರುಕಟ್ಟೆ ಬೆಲೆಗಿಂತ ರೂ. 200 ರಿಯಾಯಿತಿಯಲ್ಲಿ ಅಂಚೆ ವೆಚ್ಚ ಸಹಿತ ರೂ.400 ಪಾವತಿಸಿ ನಿಘಂಟು ಖರೀದಿಸಬಹುದಾಗಿದೆ. ಪ್ರೊಡಿಜಿ ಪ್ರಿಂಟಿಂಗ್ ಪ್ರಕಟಿಸುತ್ತಿರುವ ಪುಸ್ತಕದ ಪ್ರಕಟಣಾಪೂರ್ವ ಮಾರಾಟವನ್ನು ಎಕ್ಸ್ಕ್ಲೂಸಿವ್ ಆಗಿ “ಬುಕ್ ಬ್ರಹ್ಮ”ತಂಡ ನಿಭಾಯಿಸಲಿದ್ದು, ಅದು ಪ್ರಕಟಣಾಪೂರ್ವ ಖರೀದಿಗೆ ಸಿಂಗಲ್ ಪಾಯಿಂಟ್ ವಿಂಡೊ ಆಗಿ ಕಾರ್ಯ ನಿರ್ವಹಿಸಲಿದೆ. ಪುಸ್ತಕ ಖರೀದಿಸಲು ಆಸಕ್ತರು ಅವರ ದೂರವಾಣಿ ಸಂಖ್ಯೆ: 8495024253 ಗೆ ಪೇಟಿಎಂ/ಗೂಗಲ್ ಪೇ/ಫೋನ್ ಪೇ ಮೂಲಕ ಪಾವತಿ ಮಾಡಿ, ಪಾವತಿ ಮಾಡಿದ ವಿವರ ಮತ್ತು ವಿಳಾಸವನ್ನು ಕಳುಹಿಸಿಕೊಟ್ಟರೆ, ಅವರು ಜನವರಿ 26ಕ್ಕೆ ಪುಸ್ತಕ ಬಿಡುಗಡೆಯ ದಿನದಂದೇ ಪುಸ್ತಕವನ್ನು ನಿಮಗೆ ತಲುಪಿಸಲು ವ್ಯವಸ್ಥೆ ಮಾಡುತ್ತಾರೆ. ಇದನ್ನೂ ಓದಿ: ►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪಂಚಗಂಗಾವಳಿ ನದಿ ತೀರದ ಪಂಜರ ಮೀನು ಕೃಷಿ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ಜಲ ತಜ್ಞರ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಕಳೆದ ಕೆಲವು ದಿನಗಳಿಂದ ಕುಂದಾಪುರದ ಪಂಚಗಂಗಾವಳಿ ನದಿ ಪ್ರದೇಶದಲ್ಲಿ ನಿಗೂಢವಾಗಿ ಸಾಯುತ್ತಿರುವ ಪಂಜರ ಕೃಷಿಯಲ್ಲಿನ ಮೀನುಗಳ ಕುರಿತು ತಜ್ಞರು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ನಿಯಮಾವಳಿಗಳ ಅಡಿಯಲ್ಲಿ ಪರಿಹಾರ ನೀಡಲು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಈ ಭಾಗದಲ್ಲಿ ಅಂದಾಜು 115 ಪಂಜರಗಳಲ್ಲಿ ಮೀನು ಕೃಷಿ ನಡೆಯುತ್ತಿದೆ. ಇಲ್ಲಿನ ಮೀನುಗಳು ಸಾವನ್ನಪ್ಪುತ್ತಿರುವುದರಿಂದ ಕೃಷಿಕರು ಅಪಾರ ಪ್ರಮಾಣದ ನಷ್ಟವನ್ನು ಅನುಭವಿಸುತ್ತಿದ್ದಾರೆ. ನಿರ್ದಿಷ್ಟ ಕಾರಣ ಪತ್ತೆಯಾಗಿಲ್ಲ. ನೀರಿನಲ್ಲಿನ ಲವಣಾಂಶಗಳ ಏರುಪೇರು. ಪಂಜರದೊಳಗೆ ಉಸಿರಾಟ ಸಮಸ್ಯೆ. ನೀರನ್ನು ಕಲುಷಿತಗೊಳಿಸುತ್ತಿರುವ ಕೊಳಚೆ ನೀರು ಹಾಗೂ ಕಳೆದ ಕೆಲವು ದಿನಗಳಿಂದ ಸಮುದ್ರ ನೀರಿನಲ್ಲಿ…

Read More

ಕುಂದಾಪ್ರ ಡಾಟ್ ಸುದ್ದಿ. ಬೈಂದೂರು: ಶ್ರೀ ಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಾವುಂದ ಇದರ ಎಂಟನೇ ವಾರ್ಷಿಕ ಮಹಾಸಭೆಯು ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು. ಸಹಕಾರಿಯ ಅಧ್ಯಕ್ಷ ಡಾ. ಎನ್. ಕೆ ಬಿಲ್ಲವ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್-19 ಕಾರಣದಿಂದಾಗಿ ಸಾಲ ವಸೂಲಾತಿಯಲ್ಲಿ ಗುರಿ ಸಾಧನೆಯಾಗದಿದ್ದರೂ ಸದಸ್ಯರ ಹೊರಬಾಕಿ ಸಾಲ ಮತ್ತು ಠೇವಣಿ ಸಂಗ್ರಹಣೆ ಹೆಚ್ಚಳವಾಗಿದ್ದು 2019-20ರ ಲೆಕ್ಕಪರಿಶೋಧನಾ ವರದಿಯಲ್ಲಿ ಎ ಶ್ರೇಣಿಯ ಗೌರವವನ್ನು ಪಡೆದಿರುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಾಲಗಾರ ಸದಸ್ಯರು ವಾಯ್ದೆಗೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಹಕಾರಿಯ ಏಳಿಗೆಗೆ ಸಹಕರಿಸಬೇಕೆಂದು ಹಾಗೂ ಸಂಘದ ಏಳಿಗೆಗಾಗಿ ಪ್ರತಿಯೊಬ್ಬ ಸದಸ್ಯರು ನಮ್ಮೊಂದಿಗೆ ಕೈ ಜೋಡಿಸಬೇಕು ಎಂದರು. ಸಹಕಾರಿಯ ಕಾರ್ಯದರ್ಶಿ ಪೂಜಾ ಟಿ ವಾರ್ಷಿಕ ವರದಿ ಓದಿದರು, ನಂತರ 2020-21ನೇ ಸಾಲಿನ ಅಂದಾಜು ಆಯ – ವ್ಯಯ, ಅನುಪಾಲನಾ ವರದಿಗೆ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು. ಸಹಕಾರಿಯ ಲಾಭಾಂಶಗಳನ್ನು ಉಪವಿಧಿಗನುಸಾರವಾಗಿ ವಿಂಗಡಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಶೇಖರ ಎಮ್ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸೋಮವಾರ ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ಡಿಡಿಯುಕೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಾನೂನಿನ ಬಗೆಗೆ ಅರಿವು ಹಾಗೂ ಅಪರಾಧ ಜರುಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಯುವಶಕ್ತಿ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು. ಡಿಡಿಯುಕೆ ವಿದ್ಯಾರ್ಥಿಗಳು  ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ  ನಡೆಸಿದರು. ಕಾರ್ಯಕ್ರಮದಲ್ಲಿ ಬೈಂದೂರು ಪಿಎಸ್ಐ ಸಂಗೀತಾ, ಎ.ಎಸ್.ಐ ವಿವೇಕ್ ಹಾಗೂ ಶಿಕ್ಷಕರು ವೃಂದದವರು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‌ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: http://disabilityaffairs.gov.in/content, https://scholarships.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಶಂಕರ ಕಲಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ.81.23 ಕೋಟಿ ವ್ಯವಹಾರ ನಡೆಸಿ, ರೂ 32.01ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ, ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 28 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ, ಸಂಘದ ಕಾರ್ಯ ಕ್ಷೇತ್ರದಲ್ಲಿ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ನಿರ್ದೇಶಕರಾದ ಹೆಚ್. ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಶೇಷು ಪೂಜಾರಿ, ಸುರೇಶ ಪೂಜಾರಿ, ಸಂತೋಷ, ಶಾರದಾ, ಲಕ್ಷ್ಮೀ ಉಪಸ್ಥಿತರಿದ್ದರು. ಮುಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರುಗಳಿಗೆ ‘ತಂಡದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಯಿತು. ಪಾನ್ ಇಂಡಿಯಾ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಬಿ. ಆರ್. ಕೆ. ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಕರು ಕಲಿಕೆಯಲ್ಲಿ ನಿರಂತರತೆ, ಹೊಸತನ, ಹುರಿದುಂಬಿಸುವ ಮನೋಭಾವ, ಅಗಾಧವಾದ ಜ್ಞಾನ, ಮಾತನಾಡುವ ಕೌಶಲ್ಯವನ್ನು ತಮ್ಮಲ್ಲಿ ಅಳವಡಿಸಿಕೊಂಡಾಗ ಸಮರ್ಥ ಶಿಕ್ಷಕನಾಗಬಹುದು ಹಾಗೆಯೇ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಹಿಂಜರಿಕೆ ಸಲ್ಲದು ಎಂದು ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಿತ್ರಾ ಕಾರಂತ್ ಮಾತನಾಡಿ ಶಿಕ್ಷಕರಾದವರು ತಮ್ಮಲ್ಲಿರುವ ಅಪಾರವಾದ ಜ್ಞಾನದಿಂದ, ಶಿಷ್ಯವಾತ್ಸಲ್ಯದಿಂದ ವಿದ್ಯಾರ್ಥಿಗಳನ್ನು ತಮ್ಮತ್ತ ಸೆಳೆಯಬೇಕೇ ವಿನಹ ವಿದ್ಯಾರ್ಥಿಗಳನ್ನು ದಂಡಿಸುವುದರಿಂದ ಅಲ್ಲ, ಶಿಕ್ಷಕ ದಂಡಾಧಿಕಾರಿಯಾಗಬಾರದು ದೀಪದಾರಿಯಾಗಬೇಕು ಎಂದು ತಿಳಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಕೆ. ರಾಧಾಕೃಷ್ಣ ಶೆಣೈಯವರು ವಹಿಸಿದರು. ಶ್ರೀ ವೆಂಕಟರಮಣ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೀಪೋತ್ಸವವು ಕೋಟ ಚಂದ್ರಶೇಖರ ಸೋಮಯಾಜಿ ಅವರ ಮಾರ್ಗದರ್ಶನದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು. ದುರ್ಗಾಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ ಮದ್ದುಗುಡ್ಡೆಯವರಿಂದ ಭಜನೆ, ರಾತ್ರಿ ರಂಗಪೂಜೆ ಸೇವೆಗಳು ಅಚ್ಚು ಕಟ್ಟಾಗಿ ನಡೆಯಿತು. ಭದ್ರತಾ ವ್ಯವಸ್ಥೆಗೆ ಸೈರನ್ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ದೇವಳದ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಸೀತಾರಾಮ ಹೇರಿಕುದ್ರು, ಅಧ್ಯಕ್ಷರಾದ ಪ್ರಕಾಶ್ ಕೆ. ಬಿ, ಚಂದ್ರಶೇಖರ್, ಜನಾರ್ಧನ, ರತ್ನಾಕರ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಲಾಕ್ಷೇತ್ರದಲ್ಲಿ ನಡೆದ 7ನೇ ವರ್ಷದ ರಾಜ್ಯಮಟ್ಟದ ಕಾರ್ಟೂನ್ ಹಬ್ಬಕ್ಕೆ ಬಾಲಿವುಡ್ ನಟ ಸೋನು ಸೂದ್ ವರ್ಚುವಲ್ ಆಗಿ ಚಾಲನೆ ನೀಡಿದರು. ಬಳಿಕ ಅವರು ಗೋ ಕೊರೊನಾ ಗೋ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕೊರೊನಾ ಮುಕ್ತವಾಗಲು ಎಲ್ಲರೂ ಒಟ್ಟಾಗಬೇಕು. ಕೊರೊನಾ ನಿರ್ಮೂಲನವಾಗಬೇಕು ಕೊರೊನಾ ಕುರಿತಾದ ಕಾರ್ಟೂನ್‌ಗಳಿಸಿರುವ ಸತೀಶ್ ಆಚಾರ್ಯ ಅವರ ಪುಸ್ತಕ ಬಿಡುಗಡೆ ಮಾಡಲು ಸಂತಸವಾಗುತ್ತಿದೆ ಎಂದು ಹೇಳಿದರು. ಸಹಾಯಕ ಕಮಿಷನರ್ ಕೆ. ರಾಜು ಅವರು ಮಾಸ್ಕ್ ಧರಿಸಿ ಕಿರುನಗೆ ಸೂಸುವ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿ, ಕಾರ್ಟೂನ್‌ಗಳಿಂದ ದೊರೆಯುವ ಸಂದೇಶ ಅದ್ಭುತವಾದದ್ದು ಈ ಬಾರಿ ಕೊರೊನಾ ಕೇಂದ್ರಿತವಾಗಿ ಕಾರ್ಟೂನ್ ಹಬ್ಬ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಭಯ ಕಡಿಮೆಯಾಗಲು. ನಿಯಂತ್ರಣದಲ್ಲಿರಲು ಸುಶಿಕ್ಷಿತ ಜನರೇ ಕಾರಣ. ಆದ್ದರಿಂದ ಉಡುಪಿ ಜಿಲ್ಲೆಯ ಸಮಸ್ತ ನಾಗರಿಕರೇ ಕೊರೊನಾ ಯೋದರು ಎಂದರು. ಕೋವಿಡ್ ಕೇರ್ ಆಸ್ಪತ್ರೆಯ ನೋಡಲ್ ವೈದ್ಯಾಧಿಕಾರಿ ಡಾ. ನಾಗೇಶ್, ಪಾರಿಜಾತ ಹೋಟೆಲ್ ಮಾಲಕ ಗಣೇಶ್…

Read More